AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah

Amit Shah

ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್‌ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್‌ ಷಾ, ಮೂಲತಃ ಗುಜರಾತ್‌ನವರು. ಅಹಮದಾಬಾದ್‌ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್‌ ಷಾ. ಗುಜರಾತ್‌ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್‌ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್‌ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್‌ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್‌ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.

ಇನ್ನೂ ಹೆಚ್ಚು ಓದಿ

ಭಾರತದ ನಿಷೇಧಿತ ಉಗ್ರ ಸಂಘಟನೆಯ ಪಟ್ಟಿಗೆ ಸೇರಿದ ಪಾಕಿಸ್ತಾನದ ಶಹಜಾದ್ ಭಟ್ಟಿ ನೆಟ್‌ವರ್ಕ್; ಸರ್ಕಾರ ಘೋಷಣೆ

ಕೇಂದ್ರ ಗೃಹ ಸಚಿವಾಲಯವು 'ಶಹಜಾದ್ ಭಟ್ಟಿ ನೆಟ್‌ವರ್ಕ್' (SBN) ಅನ್ನು ಗಂಭೀರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಎಂದು ಅಧಿಕೃತವಾಗಿ ಘೋಷಿಸಿದೆ. ಈ ಸಂಘಟನೆಯು ಗಡಿಯಾಚೆಯಿಂದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಮಾದಕ ದ್ರವ್ಯಗಳನ್ನು ಅಕ್ರಮವಾಗಿ ಸಾಗಿಸುವುದು ಹಾಗೂ ಸ್ಥಳೀಯ ಯುವಕರು ಮತ್ತು ಸಣ್ಣ ಅಪರಾಧಿಗಳನ್ನು ಉಗ್ರ ಕೃತ್ಯಗಳಿಗೆ ಪ್ರಚೋದಿಸುವ ಕೃತ್ಯಗಳಲ್ಲಿ ತೊಡಗಿಸಿಕೊಂಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ಪ್ರಧಾನಿ ಮೋದಿ ಸಾರ್ವಜನಿಕ ಸೇವೆಗೆ 25ರ ಮೈಲಿಗಲ್ಲು: ಸೆ.17 ರಿಂದ ಅ.17ರವರೆಗೆ ‘ಸೇವಾ ಸಂಕಲ್ಪ’ ಅಭಿಯಾನ

ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ರಾಜಕೀಯ ಜೀವನದ ಅಂಗವಾಗಿ, ಎನ್​​ಡಿಎ ಮೈತ್ರಿಕೂಟ ಸೆ.17ರಿಂದ ಒಂದು ತಿಂಗಳ 'ಸೇವಾ ಸಂಕಲ್ಪ' ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದಡಿ ದೇಶಾದ್ಯಂತ ಸರ್ಕಾರಿ ಯೋಜನೆಗಳ ಜಾಗೃತಿ, ರಕ್ತದಾನ, ಸ್ವಚ್ಛತೆ, ಸಂವಾದ, ಯಾತ್ರೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಹಂಚಿಕೊಂಡಿದ್ದಾರೆ.

ದೆಹಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಬೇಸ್ಮೆಂಟ್ ಮಾರ್ಪಾಡು ದುರ್ಘಟನೆಗೆ ಕಾರಣವಾ?

ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ 5 ಅಂತಸ್ತಿನ ಬಾಯ್ಸ್ ಪಿಜಿ ಹಾಸ್ಟೆಲ್ ಕಟ್ಟಡ ಕುಸಿತವಾಗಿದೆ. ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸಂತಾಪ ಸೂಚಿಸಿದ್ದಾರೆ. ಇನ್ನು, ಈ ಕಟ್ಟಡಕ್ಕೆ ಬೇಸ್ಮೆಂಟ್ ರಚನೆಯ ಮಾರ್ಪಾಡು ಮಾಡಲಾಗುತ್ತಿತ್ತು. ಇದರಿಂದ ಫೌಂಡೇಶನ್​ಗೆ ಹಾನಿಯಾಗಿ ಕಟ್ಟಡ ಕುಸಿದಿರುವ ಶಂಕೆ ಇದೆ.

ನೇಪಾಳ ಪ್ರವಾಹದಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗಾಗಿ ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ

ನೇಪಾಳದ ಭೀಕರ ಪ್ರವಾಹದಲ್ಲಿ ಸಾವಿನ ಸಂಖ್ಯೆ 584ಕ್ಕೆ ಏರಿದ್ದು, 3,742 ಜನರನ್ನು ರಕ್ಷಿಸಲಾಗಿದೆ, ಆದರೆ 2,500ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 400ಕ್ಕೂ ಹೆಚ್ಚು ಭಾರತೀಯರೂ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ನೆರವು ಕೋರಿದ್ದಾರೆ. ಭಾರತ ಈಗಾಗಲೇ ಪರಿಹಾರ ಸಾಮಗ್ರಿಗಳು ಮತ್ತು ವೈದ್ಯಕೀಯ ನೆರವು ನೀಡುತ್ತಿದೆ.

ಭಾರತ-ಬಾಂಗ್ಲಾದೇಶ ಗಡಿ ಭದ್ರಪಡಿಸದೆ ಪಶ್ಚಿಮ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ

ಸಿಲಿಗುರಿಯಲ್ಲಿರುವ ಶಸಸ್ತ್ರ ಸೀಮಾ ಬಲ್ (SSB) ಫ್ರಂಟಿಯರ್ ಪ್ರಧಾನ ಕಚೇರಿಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅಮಿತ್ ಶಾ, "ಬಿಎಸ್‌ಎಫ್ (BSF) ಮೂಲಕ ಗಡಿ ಬೇಲಿಗಳನ್ನು ನಿರ್ಮಿಸಲು ಭೂಮಿ ನೀಡುವಂತೆ ಮಮತಾ ಬ್ಯಾನರ್ಜಿ ಅವರಿಗೆ ನಾನು ಮಾಡಿದ ಮನವಿಗಳು ವ್ಯರ್ಥವಾದವು. ಗಡಿ ಭದ್ರತೆಯನ್ನು ಬಲಪಡಿಸಲು ನಾನು 2014ರಿಂದ 1,129 ಎಕರೆ ಜಮೀನು ನೀಡುವಂತೆ ಕೇಳುತ್ತಿದ್ದೆ. ರಾಜ್ಯದಲ್ಲಿ ಅಧಿಕಾರಿ ನೇತೃತ್ವದ ಸರ್ಕಾರ ರಚನೆಯಾದ ನಂತರವಷ್ಟೇ ನಮಗೆ ಆ ಜಮೀನು ಸಿಕ್ಕಿದೆ" ಎಂದು ತಿಳಿಸಿದ್ದಾರೆ.

ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ಸರ್ಕಾರ ನಿರ್ಧಾರ; ಅಮಿತ್ ಶಾ ಘೋಷಣೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನೂತನ ಪೀಠವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ನಿರ್ಧಾರವು ಲಡಾಖ್‌ನ ಸುದೂರ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರು ಕಾನೂನು ಸೇವೆಗಳನ್ನು ಪಡೆಯಲು ತಗುಲುತ್ತಿದ್ದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದ್ದು, ನ್ಯಾಯಾಂಗ ವ್ಯವಸ್ಥೆಯ ಪ್ರವೇಶವನ್ನು ಸುಲಭಗೊಳಿಸಲಿದೆ ಎಂದು ಅವರು ತಿಳಿಸಿದ್ದಾರೆ. ಲಡಾಖ್‌ನಂತಹ ಭೌಗೋಳಿಕವಾಗಿ ಸವಾಲಿನ ಹಾಗೂ ದುರ್ಗಮ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನ್ಯಾಯ ಸಮ್ಮತ ಸೇವೆಗಳು ಸುಲಭವಾಗಿ ದೊರೆಯುವಂತೆ ಮಾಡುವುದು ಕೇಂದ್ರ ಸರ್ಕಾರದ ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ.

1937 ರಂತೆ ಇಂದಿಗೂ ಒಡೆದು ಆಳುವ ನೀತಿ: ವಂದೇ ಮಾತರಂ ಗೀತೆಗೆ ಕಾಂಗ್ರೆಸ್ ಅಪಮಾನ ಮಾಡಿದೆ ಎಂದ ಅಮಿತ್ ಶಾ

Vande Mataram: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದಿರುವ ಕಾಂಗ್ರೆಸ್ ನಿಲುವನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು 'ದೇಶವಿರೋಧಿ' ಹಾಗೂ ಕೇವಲ 'ಮತ ಬ್ಯಾಂಕ್ ರಾಜಕೀಯ' ಎಂದು ಆರೋಪಿಸಿದ್ದಾರೆ. 1937ರಲ್ಲಿದ್ದಂತೆ ಕಾಂಗ್ರೆಸ್ ಮತ್ತೊಮ್ಮೆ ದೇಶ ವಿಭಜನೆಗೆ ದಾರಿ ಮಾಡಿಕೊಡುತ್ತಿದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುತ್ತಿದೆ ಎಂದು ಶಾ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ನೇತೃತ್ವದ ಪಕ್ಷದ ನಿರ್ಧಾರವನ್ನು ಸಚಿವರು ಕಟುವಾಗಿ ಟೀಕಿಸಿದರು.

13,000 ಕೋಟಿ ಡ್ರಗ್ಸ್ ಪ್ರಕರಣದ ಕಿಂಗ್‌ಪಿನ್ ವೀರೇಂದ್ರ ಸಿಂಗ್ ಭಾರತಕ್ಕೆ ಹಸ್ತಾಂತರ

ಮಾದಕ ದ್ರವ್ಯಗಳ ಸಿಂಡಿಕೇಟ್​ನ ಪ್ರಮುಖ ನಾಯಕ ವೀರೇಂದ್ರ ಬಸೋಯಾ ಅವರನ್ನು ದುಬೈನಿಂದ ಭಾರತಕ್ಕೆ ಮರಳಿ ಕರೆತರಲಾಯಿತು. ಅವರು ಆಗಮಿಸಿದ ಬಳಿಕ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೋದಿ ಸರ್ಕಾರವು ವಿದೇಶಗಳಲ್ಲಿ ಅಡಗಿರುವ ಮಾದಕವಸ್ತು ಕಳ್ಳಸಾಗಣೆದಾರರನ್ನು ನಿರಂತರವಾಗಿ ಪತ್ತೆಹಚ್ಚುತ್ತಿದೆ ಮತ್ತು ಕಠಿಣ ನಿಲುವನ್ನು ತೆಗೆದುಕೊಳ್ಳುತ್ತಿದೆ. ಮಾದಕ ದ್ರವ್ಯಗಳ ವಿರುದ್ಧದ ಶೂನ್ಯ ಸಹಿಷ್ಣುತೆ ನೀತಿಯಲ್ಲಿ ಹೊಸ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎನ್‌ಸಿಬಿ ಮಾದಕ ದ್ರವ್ಯಗಳ ಕಿಂಗ್‌ಪಿನ್ ಮತ್ತು ಪರಾರಿಯಾಗಿರುವ ವೀರೇಂದ್ರ ಸಿಂಗ್ ಬಸೋಯಾ ಅವರನ್ನು ಯುಎಇಯಿಂದ ಯಶಸ್ವಿಯಾಗಿ ಮರಳಿ ಕರೆತಂದಿದೆ.

‘ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ’; ರಾಹುಲ್ ಗಾಂಧಿ ವ್ಯಂಗ್ಯ

ಅಮಿತ್ ಶಾ ಅವರ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷಗಳಿಗೆ ಗೃಹ ಸಚಿವರಿಂದ ಉಪದೇಶ ಅಥವಾ ಉಪನ್ಯಾಸ ಕೇಳುವ ಆಸಕ್ತಿಯಿಲ್ಲ. ಅದರ ಬದಲಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಉತ್ತರಗಳು ಬೇಕಾಗಿವೆ ಎಂದು ಹೇಳಿದ್ದಾರೆ. "ಅಮಿತ್ ಶಾ ಅವರು ನಮಗೆ ಉಪನ್ಯಾಸ ನೀಡುವುದರಲ್ಲಿ ವಿಪಕ್ಷಗಳಿಗೆ ಯಾವುದೇ ಆಸಕ್ತಿಯಿಲ್ಲ ಎಂಬುದನ್ನು ನಾವು ಸ್ಪಷ್ಟವಾಗಿ ಹೇಳುತ್ತಿದ್ದೇವೆ" ಎಂದು ರಾಹುಲ್ ಗಾಂಧಿ ತಿಳಿಸಿದರು.

‘ನಾಳೆ ಮಧ್ಯಾಹ್ನ 3 ಗಂಟೆಯವರೆಗೂ ಚರ್ಚೆಗೆ ಸಿದ್ಧ’; ವಿಪಕ್ಷಗಳಿಗೆ ಗೃಹ ಸಚಿವ ಅಮಿತ್ ಶಾ ತಿರುಗೇಟು

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನ ಕಲಾಪದಲ್ಲಿ 24 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸುವುದಾಗಿ ವಿರೋಧ ಪಕ್ಷಗಳಿಗೆ ಆಫರ್ ನೀಡಿದ್ದು, ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಚರ್ಚೆಯಲ್ಲಿ ಭಾಗವಹಿಸಲು ಇಂದು ಮಧ್ಯಾಹ್ನ 3 ಗಂಟೆಯಿಂದ ಗುರುವಾರ ಮಧ್ಯಾಹ್ನ 3 ಗಂಟೆಯವರೆಗೆ ತಾವು ಸದನದಲ್ಲಿಯೇ ಉಪಸ್ಥಿತರಿರುವುದಾಗಿ ಅಮಿತ್ ಶಾ ಹೇಳಿದ್ದಾರೆ. ವಿಪಕ್ಷಗಳು ಎತ್ತುವ ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಲು ರಾತ್ರಿಯಿಡೀ ಚರ್ಚೆ ಮುಂದುವರಿಸಲು ತಾವು ಸಿದ್ಧರಾಗಿರುವುದಾಗಿ ಅವರು ತಿಳಿಸಿದರು. ಸಂಸತ್ತಿನಲ್ಲಿ ವಿವರವಾದ ಚರ್ಚೆಯಲ್ಲಿ ಭಾಗವಹಿಸಬೇಕೋ ಅಥವಾ ಕಲಾಪಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಬೇಕೋ ಎಂಬುದನ್ನು ವಿರೋಧ ಪಕ್ಷಗಳೇ ಈಗ ನಿರ್ಧರಿಸಬೇಕು ಎಂದು ಅಮಿತ್ ಶಾ ಹೇಳಿದರು.

‘ಜಂತರ್ ಮಂತರ್‌ನಲ್ಲಿ ಯಾವ ಗುಂಡಿನ ದಾಳಿಯೂ ನಡೆದಿಲ್ಲ’; ರಾಹುಲ್ ಗಾಂಧಿಗೆ ಸಚಿವ ಜೆ.ಪಿ. ನಡ್ಡಾ ತಿರುಗೇಟು

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳಿಗೆ ಸೋಮವಾರ ತಿರುಗೇಟು ನೀಡಿರುವ ಕೇಂದ್ರ ಸಚಿವ ಜೆ.ಪಿ. ನಡ್ಡಾ, 'ಜಂತರ್ ಮಂತರ್‌ನಲ್ಲಿ ಯಾವುದೇ ಗುಂಡಿನ ದಾಳಿ ನಡೆದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. 'ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಸಾರ್ವಜನಿಕರನ್ನು ಹಾಗೂ ದೇಶವನ್ನು ದಾರಿ ತಪ್ಪಿಸುತ್ತಿದ್ದಾರೆ' ಎಂದು ಜೆ.ಪಿ ನಡ್ಡಾ ಆರೋಪಿಸಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್‌ಗಳಿಂದ ದಾಳಿ ನಡೆಸಲು ಯಾರು ಆದೇಶ ನೀಡಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಹುಲ್ ಗಾಂಧಿ ಪ್ರಶ್ನಿಸಿದ ಬೆನ್ನಲ್ಲೇ ಜೆಪಿ ನಡ್ಡಾ ಈ ಪ್ರತಿಕ್ರಿಯೆ ನೀಡಿದ್ದಾರೆ.

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿರುವಣ್ಣಾಮಲೈನಲ್ಲಿರುವ ಪ್ರಸಿದ್ಧ ಅರುಣಾಚಲೇಶ್ವರ ದೇವಸ್ಥಾನದಲ್ಲಿ ಶಿವನ ದರ್ಶನ ಪಡೆದರು. ದೇವಸ್ಥಾನಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರನ್ನು ದೇವಾಲಯ ಆಡಳಿತ ಮಂಡಳಿ ಸ್ವಾಗತಿಸಿತು. ನಂತರ ಅವರು ಅರುಣಾಚಲೇಶ್ವರ ಮತ್ತು ಉನ್ನಮುಲೈ ಅಮ್ಮನ್ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ