
Amit Shah
ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್ ಷಾ, ಮೂಲತಃ ಗುಜರಾತ್ನವರು. ಅಹಮದಾಬಾದ್ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್ ಷಾ. ಗುಜರಾತ್ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.
ಅಮಿತ್ ಶಾ ಭೇಟಿ ಬಳಿಕ ಯಡಿಯೂರಪ್ಪ, ವಿಜಯೇಂದ್ರ ಚಟುವಟಿಕೆಗಳಲ್ಲಿ ಬದಲಾವಣೆ! ಕಾರಣ ಇಲ್ಲಿದೆ
ಇನ್ನು ಮುಂದೆ ಪ್ರತಿದಿನ ಬಿಜೆಪಿ ರಾಜ್ಯ ಕಚೇರಿಗೆ ಬರುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶನಿವಾರ ಕೂಡ ಜಗನ್ನಾಥ ಭವನಕ್ಕೆ ಬಂದು ಹೋಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಚಟುವಟಿಕೆಗಳಲ್ಲಿ ಬದಲಾವಣೆ ಕಾಣಿಸಿಕೊಂಡಿದೆ.
- Kiran Haniyadka
- Updated on: Jun 21, 2025
- 4:59 pm
ಬೆಂಗಳೂರಿಗೆ ಬಂದ ಅಮಿತ್ ಶಾ: ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆಯಲ್ಲಿ ಭಾಗಿ
ಬೆಂಗಳೂರು ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಆಗಮಿಸಿದ್ದು ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸ್ವಾಗತಿಸಿದರು. ಇಂದು ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಲ್ಲಿ ಶಾ ಭಾಗವಹಿಸಲಿದ್ದಾರೆ. ಆ ಬಳಿಕ ರಾಜ್ಯ ನಾಯಕರನ್ನು ಭೇಟಿಯಾಗುವ ನಿರೀಕ್ಷೆ ಇದೆ.
- Kiran Haniyadka
- Updated on: Jun 20, 2025
- 8:52 am
ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆ ಪಡಬೇಕಾಗುತ್ತದೆ; ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ಅವರು ರೂಪಿಸಿರುವ "ಪಂಚ ಪ್ರಾಣ"ವನ್ನು ವಿವರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಮೋದಿ ರೂಪಿಸಿದ 5 ಪ್ರತಿಜ್ಞೆಗಳು ದೇಶದ 130 ಕೋಟಿ ಜನರ ಸಂಕಲ್ಪವಾಗಿದೆ ಎಂದು ಹೇಳಿದರು. ಸ್ಥಳೀಯ ಭಾರತೀಯ ಭಾಷೆಗಳು ದೇಶದ ಗುರುತಿನ ಕೇಂದ್ರವಾಗಿವೆ. ವಿದೇಶಿ ಭಾಷೆಗಳಿಗಿಂತ ಭಾರತೀಯ ಭಾಷೆಗಳು ಆದ್ಯತೆಯನ್ನು ಪಡೆಯಬೇಕು. ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ ಎಂದು ಭಾಷಾ ಚರ್ಚೆಯ ನಡುವೆ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.
- Sushma Chakre
- Updated on: Jun 19, 2025
- 6:52 pm
ಜೂನ್ 19ರಂದು ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ
ಗುರುವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಆ ಮೂಲಕ ಜೂನ್ 20 ರಂದು ಬೆಂಗಳೂರಿನ ಬಿಜಿಎಸ್ ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅಂದು ಮಧ್ಯಾಹ್ನ ದೆಹಲಿಗೆ ವಾಪಸ್ ತೆರಳಲಿದ್ದಾರೆ.
- Kiran Haniyadka
- Updated on: Jun 18, 2025
- 10:12 am
Caste Census: ಭಾರತದಲ್ಲಿ ಜನಗಣತಿ ಜೊತೆ ಜಾತಿಗಣತಿಯೂ ನಡೆಯಲಿದೆ; ಅಮಿತ್ ಶಾ
2027ರಲ್ಲಿ ಪ್ರಾರಂಭವಾಗಲಿರುವ ಜಾತಿ ಜನಗಣತಿಗೆ ಕೇಂದ್ರ ಸರ್ಕಾರ ಇಂದು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಇದು ಭಾರತದ 16ನೇ ಜನಗಣತಿಯಾಗಲಿದೆ. ಲಡಾಖ್ನಂತಹ ಹಿಮಭರಿತ ಪ್ರದೇಶಗಳಲ್ಲಿ ಜನಗಣತಿ ಪ್ರಕ್ರಿಯೆಗಳು ಅಕ್ಟೋಬರ್ 1, 2026ರಂದು ಪ್ರಾರಂಭವಾಗಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ದೇಶದ ಉಳಿದ ಭಾಗಗಳಲ್ಲಿ ಮಾರ್ಚ್ 1, 2027ರಂದು ಪ್ರಾರಂಭವಾಗಲಿದೆ.
- Web contact
- Updated on: Jun 16, 2025
- 9:48 pm
ದೇಶದ 16ನೇ ಜನಗಣತಿಗೆ ಇಂದು ಗೆಜೆಟ್ ನೋಟಿಫಿಕೇಶನ್, ಅಧಿಕಾರಿಗಳೊಂದಿಗೆ ಅಮಿತ್ ಶಾ ಚರ್ಚೆ
ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರು, ಉಡುಪಿ ಮತ್ತು ಇತರ ಕರಾವಳಿ ಹಾಗೂ ಮಲೆನಾಡ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾಡಳಿತಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿವೆ. ಈ ಜಿಲ್ಲೆಗಳಲ್ಲಿ ಬೆಳಗಿನಿಂದಲೇ ಮಳೆ ಸುರಿಯಲಾರಂಭಿಸಿದೆ.
- Arun Belly
- Updated on: Jun 16, 2025
- 12:26 pm
Air India Plane Crash: ಡಿಎನ್ಎ ಪರೀಕ್ಷೆ ಬಳಿಕ ಸಾವಿನ ಸಂಖ್ಯೆ ಘೋಷಣೆ; ಏರ್ ಇಂಡಿಯಾ ಅಪಘಾತದ ಬಗ್ಗೆ ಅಮಿತ್ ಶಾ ಹೇಳಿಕೆ
Amit Shah: ಏರ್ ಇಂಡಿಯಾ ವಿಮಾನ ಪತನವಾದ ಸುದ್ದಿ ತಿಳಿಯುತ್ತಿದ್ದಂತೆ ದೆಹಲಿಯಿಂದ ಅಹಮದಾಬಾದ್ಗೆ ತೆರಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಮಾನ ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ. ವಿಮಾನ ದುರಂತದಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುದರ ಖಚಿತ ಮಾಹಿತಿ ಡಿಎನ್ಎ ಪರೀಕ್ಷೆಯ ಬಳಿಕವೇ ಗೊತ್ತಾಗಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
- Sushma Chakre
- Updated on: Jun 12, 2025
- 10:38 pm
ಅಹಮದಾಬಾದ್ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್ಗೆ ಹೊರಟಾಗ ಈ ಘಟನೆ ಸಂಭವಿಸಿದೆ. ಈ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
- Sushma Chakre
- Updated on: Jun 12, 2025
- 7:57 pm
ಪಾಕಿಸ್ತಾನಕ್ಕೆ ಬಿಎಸ್ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷಗಳೇ ಬೇಕು; ಅಮಿತ್ ಶಾ
“ಭಾರತದ ಗಡಿಗಳಲ್ಲಿ ಯಾವುದೇ ರೀತಿಯ ದಾಳಿ ನಡೆದಾಗಲೆಲ್ಲಾ ಮೊದಲು ಅದರ ಹೊರೆಯನ್ನು ಹೊರುವವರು ನಮ್ಮ ಬಿಎಸ್ಎಫ್ ಜವಾನರು. ಆದರೆ ಅವರು ಎಂದಿಗೂ ಗಡಿ ಎಲ್ಲಿದೆ ಎಂದು ಪರಿಗಣಿಸಲು ವಿರಾಮ ತೆಗೆದುಕೊಳ್ಳುವುದಿಲ್ಲ" ಎಂದು ಅಮಿತ್ ಶಾ ಹೇಳಿದರು. ಇದೇ ವೇಳೆ ಕೇಂದ್ರ ಗೃಹ ಸಚಿವರು ಸರ್ಕಾರ ಮತ್ತು ಭಾರತದ ನಾಗರಿಕರ ಪರವಾಗಿ ಬಿಎಸ್ಎಫ್ ಸೈನಿಕರಿಗೆ ಕೃತಜ್ಞತೆ ಸಲ್ಲಿಸಿದರು.
- Sushma Chakre
- Updated on: May 30, 2025
- 4:07 pm
ಭಾರತೀಯ ಸೇನೆಯಿಂದ ಪಾಕಿಸ್ತಾನದೊಳಗೆ 100 ಕಿಮೀ ದೂರದವರೆಗೆ ಉಗ್ರರ ಶಿಬಿರಗಳ ಧ್ವಂಸ; ಆಪರೇಷನ್ ಸಿಂಧೂರ್ ಬಗ್ಗೆ ಅಮಿತ್ ಶಾ
ಭಾರತ ತನ್ನ ಮೇಲೆ ಅಷ್ಟು ಬೇಗ ದಾಳಿ ಮಾಡಬಹುದೆಂದು ಪಾಕಿಸ್ತಾನ ಊಹಿಸಿರಲಿಲ್ಲ. ನಾವು ತೆಗೆದುಕೊಂಡ ನಿರ್ಧಾರದಿಂದ ಜಗತ್ತು ಆಶ್ಚರ್ಯಚಕಿತವಾಗಿದೆ, ಪಾಕಿಸ್ತಾನ ಭಯಭೀತವಾಗಿದೆ. ಪರಮಾಣು ಬಾಂಬ್ಗಳಿಂದ ಭಾರತವನ್ನು ಹೆದರಿಸಬಹುದು ಎಂದು ಪಾಕಿಸ್ತಾನ ಅಂದುಕೊಂಡಿತ್ತು. ಆದರೆ, ಈಗ ಪಾಕಿಸ್ತಾನವೇ ಮುಂದಾಗಿ ಕದನವಿರಾಮಕ್ಕೆ ಬೇಡಿಕೊಂಡಿದೆ ಎಂದು ಗೃಹ ಸಚಿವ ಅಮಿತ್ ಶಾ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ.
- Sushma Chakre
- Updated on: May 17, 2025
- 8:41 pm