AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup

Asia Cup

ಏಷ್ಯಾ ಖಂಡದ ವಿಶ್ವಕಪ್ ಎಂತಲೇ ಪ್ರಸಿದ್ಧವಾಗಿರುವ ಏಷ್ಯಾಕಪ್, ಏಷ್ಯಾದ ಅತಿದೊಡ್ಡ ಕ್ರಿಕೆಟ್ ಪಂದ್ಯಾವಳಿಯಾಗಿದ್ದು, ಇದನ್ನು 1984 ರಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಾರಂಭಿಸಿತು. 2016 ರಿಂದ, ಈ ಟೂರ್ನಿಯನ್ನು ಐಸಿಸಿಯ ಪ್ರಮುಖ ಪಂದ್ಯಾವಳಿಗಳ ಸ್ವರೂಪಕ್ಕೆ ಅನುಗುಣವಾಗಿ ಅಂದರೆ ಏಕದಿನ ಸ್ವರೂಪ ಅಥವಾ ಟಿ20 ಸ್ವರೂಪದಲ್ಲಿ ನಡೆಸಲಾಗುತ್ತಿದೆ. ಇಲ್ಲಿಯವರೆಗೆ, ಭಾರತ, ಶ್ರೀಲಂಕಾ ಮತ್ತು ಪಾಕಿಸ್ತಾನ ಏಷ್ಯಾಕಪ್‌ನಲ್ಲಿ ಪ್ರಾಬಲ್ಯ ಸಾಧಿಸಿವೆ. ಈ ಟೂರ್ನಿಯಲ್ಲಿ ಭಾರತ ಅತಿ ಹೆಚ್ಚು ಅಂದರೆ 8 ಬಾರಿ (1984, 1988, 1991, 1995, 2010, 2016, 2018, 2023) ಪ್ರಶಸ್ತಿಯನ್ನು ಗೆದ್ದಿದ್ದರೆ, ಶ್ರೀಲಂಕಾ 6 ಬಾರಿ (1986, 1997, 2004, 2008, 2014, 2022) ಚಾಂಪಿಯನ್ ಆಗಿದೆ. ಉಳಿದಂತೆ ಪಾಕಿಸ್ತಾನ ಕೂಡ 2 ಬಾರಿ (2000, 2012) ಟ್ರೋಫಿಯನ್ನು ಗೆದ್ದಿದೆ. ಬಾಂಗ್ಲಾದೇಶ ಕೂಡ 3 ಬಾರಿ ಫೈನಲ್ ತಲುಪಿದೆಯಾದರೂ ಇಲ್ಲಿಯವರೆಗೆ ಪ್ರಶಸ್ತಿಯನ್ನು ಗೆಲ್ಲುವಲ್ಲಿ ವಿಫಲವಾಗಿದೆ.

ಇನ್ನೂ ಹೆಚ್ಚು ಓದಿ

ವುಮೆನ್ಸ್ ಏಷ್ಯಾಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ

ಎಂಟು ತಂಡಗಳೊಂದಿಗೆ ಶುರುವಾದ ಮಹಿಳಾ ಏಷ್ಯಾ ಕಪ್ ಟೂರ್ನಿ ಇದೀಗ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್ ಹಂತದ ಪಂದ್ಯಗಳು ಮುಗಿದ್ದು, ಸೆಮಿಫೈನಲ್ ಪಂದ್ಯಗಳು ಸೆಪ್ಟೆಂಬರ್ 10 ಮತ್ತು 11 ರಂದು ದುಬೈನಲ್ಲಿ ಜರುಗಲಿವೆ. ಭಾರತ, ಬಾಂಗ್ಲಾದೇಶ್, ಶ್ರೀಲಂಕಾ ಮತ್ತು ಪಾಕಿಸ್ತಾನ್ ತಂಡಗಳ ನಡುವೆ ನಡೆಯಲಿರುವ ಈ ಮಹತ್ವದ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

ಏಷ್ಯಾಕಪ್‌ನಲ್ಲಿ ಭಾರತ- ಪಾಕಿಸ್ತಾನ್ ನಡುವೆ ಮತ್ತೊಂದು ಪಂದ್ಯ

ಮಹಿಳಾ ಟಿ20 ಏಷ್ಯಾಕಪ್ 2026ರ ಗುಂಪು ಹಂತದಲ್ಲಿ ಭಾರತ ವನಿತೆಯರ ತಂಡ ಪಾಕಿಸ್ತಾನವನ್ನು ಸೋಲಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಪಾಕಿಸ್ತಾನವು ಹಾಂಗ್ ಕಾಂಗ್ ವಿರುದ್ಧ ಗೆದ್ದರೆ, ಅದು ಸೆಮಿಫೈನಲ್‌ಗೆ ಮುನ್ನಡೆಯುತ್ತದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗುವುದಿಲ್ಲ. ಆದರೆ, ಎರಡೂ ತಂಡಗಳು ತಮ್ಮ ಸೆಮಿಫೈನಲ್ ಪಂದ್ಯಗಳನ್ನು ಗೆದ್ದರೆ, ಸೆಪ್ಟೆಂಬರ್ 13ರಂದು ದುಬೈನಲ್ಲಿ ನಡೆಯುವ ಫೈನಲ್‌ನಲ್ಲಿ ಮುಖಾಮುಖಿಯಾಗುವ ಸಾಧ್ಯತೆ ಇದೆ.

ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ಸೆಮಿಫೈನಲ್ ಎದುರಾಳಿ ಯಾರು?

2026ರ ಏಷ್ಯಾಕಪ್‌ನಲ್ಲಿ ಭಾರತ ಮಹಿಳಾ ತಂಡ ಗುಂಪು ಎ ಯಿಂದ ಅಜೇಯವಾಗಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಸೆಪ್ಟೆಂಬರ್ 10ರಿಂದ ಆರಂಭವಾಗುವ ಸೆಮಿಫೈನಲ್‌ನಲ್ಲಿ ಭಾರತ ಬಿ ಗುಂಪಿನ ಎರಡನೇ ಸ್ಥಾನಿ ತಂಡವನ್ನು ಎದುರಿಸಲಿದೆ. ಬಾಂಗ್ಲಾದೇಶ ಮತ್ತು ಯುಎಇ ನಡುವಿನ ಪಂದ್ಯವು ಭಾರತದ ಎದುರಾಳಿಯನ್ನು ನಿರ್ಧರಿಸುತ್ತದೆ. ಶ್ರೀಲಂಕಾ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದು, ಇನ್ನೊಂದು ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಎದುರಿಸುವ ನಿರೀಕ್ಷೆಯಿದೆ.

ಭಾರತದ ಆಟಗಾರ್ತಿ ಕ್ರಾಂತಿ ಗೌಡ್ ಜೊತೆ ಅನುಚಿತವಾಗಿ ವರ್ತಿಸಿದ ಪಾಕ್ ಫ್ಯಾನ್ಸ್

2026ರ ಏಷ್ಯಾಕಪ್ ಭಾರತ-ಪಾಕ್ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಕೇವಲ 55 ರನ್‌ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತು. ಈ ವೇಳೆ ಗ್ಯಾಲರಿಯಲ್ಲಿದ್ದ ಪಾಕಿಸ್ತಾನಿ ಅಭಿಮಾನಿಗಳು ಭಾರತದ ಆಟಗಾರ್ತಿ ಕ್ರಾಂತಿ ಗೌಡ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಅಸಭ್ಯ ಕಾಮೆಂಟ್ ಮಾಡಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು, ಕ್ರಾಂತಿ ಗೌಡಗೆ ಅವಮಾನ ಮಾಡಿದ ಪಾಕ್ ಅಭಿಮಾನಿಗಳ ವಿರುದ್ಧ ಭಾರತೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮದೇ ಅತ್ಯುತ್ತಮ ತಂಡ: ಪಾಕಿಸ್ತಾನ್ ಮಾಜಿ ಆಟಗಾರ!

ಮಹಿಳಾ ಏಷ್ಯಾ ಕಪ್ 2026ರ ಗ್ರೂಪ್-ಎ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು 18.1 ಓವರ್‌ಗಳಲ್ಲಿ ಕೇವಲ 55 ರನ್‌ಗಳಿಗೆ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 8.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿ, 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಅದ್ಭುತ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

ಹೀನಾಯ ಅತ್ಯಂತ ಹೀನಾಯ ದಾಖಲೆಗಳನ್ನು ಬರೆದ ಪಾಕಿಸ್ತಾನ್!

ಭಾರತ ಮತ್ತು ಪಾಕಿಸ್ತಾನ್ ನಡುವಿನ ಕ್ರಿಕೆಟ್ ಸಮರ ಎಂದರೆ ಅಲ್ಲಿ ಹೈ-ವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸುವುದು ಸಹಜ. ಆದರೆ ಮಹಿಳಾ ಏಷ್ಯಾಕಪ್ 2026ರ ಟೂರ್ನಿಯಲ್ಲಿ ಭಾರಿ ಹೈಪ್ ಸೃಷ್ಟಿಸಿದ್ದ ಭಾರತ-ಪಾಕ್ ಪಂದ್ಯವು ಸಂಪೂರ್ಣವಾಗಿ ಏಕಪಕ್ಷೀಯವಾಗಿ ಅಂತ್ಯಗೊಂಡಿದೆ. ಈ ಒನ್-ಸೈಡ್ ಗೇಮ್‌ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿ ಇತಿಹಾಸ ನಿರ್ಮಿಸಿದರೆ, ಪಾಕ್ ಪಡೆ ಅತ್ಯಂತ ಹೀನಾಯ ದಾಖಲೆಗಳನ್ನು ಬರೆದು ಭಾರೀ ಮುಖಭಂಗ ಅನುಭವಿಸಿದೆ.

ಕೇವಲ 52 ಎಸೆತಗಳಲ್ಲಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ

2026ರ ಮಹಿಳಾ ಏಷ್ಯಾಕಪ್‌ನ ಒಂಬತ್ತನೇ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಲೀಗ್ ಹಂತದಲ್ಲಿ ಸತತ ಮೂರನೇ ಜಯ ಸಾಧಿಸಿ ಅಜೇಯವಾಗಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಪಾಕಿಸ್ತಾನ ಕೇವಲ 55 ರನ್‌ಗಳಿಗೆ ಆಲೌಟ್ ಆಗಿತ್ತು, ಈ ಗುರಿಯನ್ನು ಭಾರತ ಕೇವಲ 3 ವಿಕೆಟ್ ಕಳೆದುಕೊಂಡು 8.2 ಓವರ್‌ಗಳಲ್ಲಿ ಸುಲಭವಾಗಿ ಬೆನ್ನಟ್ಟಿತು.

ಟಿ20 ಇತಿಹಾಸದಲ್ಲೇ ಅತ್ಯಂತ ಕಡಿಮೆ ಮೊತ್ತಕ್ಕೆ ಪಾಕಿಸ್ತಾನ ಆಲೌಟ್

ದುಬೈನಲ್ಲಿ ನಡೆದ ಮಹಿಳಾ ಟಿ20 ಏಷ್ಯಾಕಪ್‌ನ 9ನೇ ಪಂದ್ಯದಲ್ಲಿ ಭಾರತದ ಸ್ಪಿನ್ ಬೌಲಿಂಗ್ ಪರಾಕ್ರಮಕ್ಕೆ ಪಾಕಿಸ್ತಾನ ಮಹಿಳಾ ತಂಡ ಕೇವಲ 55 ರನ್‌ಗಳಿಗೆ ಆಲೌಟ್ ಆಯಿತು. ಶ್ರೀಚರಣಿ, ಪ್ರೇಮಾ ರಾವತ್ ತಲಾ 3 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ 2 ವಿಕೆಟ್ ಉರುಳಿಸಿ ಪಾಕಿಸ್ತಾನದ ಬ್ಯಾಟಿಂಗ್ ಬೆನ್ನನ್ನು ಮುರಿದರು. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಈ ಭರ್ಜರಿ ಪ್ರದರ್ಶನವು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

35 ರನ್​​ಗಳಿಗೆ 6 ವಿಕೆಟ್..! ಭಾರತದ ಬೌಲಿಂಗ್​ಗೆ​ ಪಾಕಿಸ್ತಾನ ವಿಲವಿಲ

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಿವೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕಿಸ್ತಾನಕ್ಕೆ ಭಾರತದ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಜೀವದಾನಗಳ ನಂತರವೂ ಪಾಕಿಸ್ತಾನದ ಆರಂಭಿಕ ಜೊತೆಯಾಟ ಮುರಿದು ಬೀಳುತ್ತಿದ್ದಂತೆ, ಭಾರತೀಯ ಬೌಲರ್‌ಗಳು ಸತತ ವಿಕೆಟ್ ಪಡೆದು ಪಾಕ್ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

2 ಕ್ಯಾಚ್ ಬಿಟ್ಟ ಪ್ರತೀಕಾ; ಕ್ಲೀನ್ ಬೌಲ್ಡ್ ಮಾಡಿ ಗೇಟ್ ಔಟ್ ಎಂದ ಶಫಾಲಿ..! ವಿಡಿಯೋ

ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಏಷ್ಯಾಕಪ್ T20 ಪಂದ್ಯದಲ್ಲಿ, ಪಾಕ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲೇ ಭಾರತ ಮುನೀಬಾ ಅಲಿಯ ಎರಡು ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿತು. ಆದರೂ, ಶಫಾಲಿ ವರ್ಮಾ ಪ್ರಮುಖ ವಿಕೆಟ್ ಪಡೆದು ತಂಡಕ್ಕೆ ಮರಳಿ ಆಸರೆಯಾದರು. ಮುನೀಬಾ ಅಲಿ 13 ರನ್ ಗಳಿಸಿ ಔಟಾದರು. ಶಫಾಲಿಯವರ ಆಕ್ರಮಣಕಾರಿ ಸಂಭ್ರಮಾಚರಣೆ ಐಸಿಸಿ ನಿಯಮ ಉಲ್ಲಂಘನೆಯಾಗಿರುವ ಸಾಧ್ಯತೆ ಇದೆ.

ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

ಮಹಿಳಾ ಏಷ್ಯಾಕಪ್ 2026ರಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ದುಬೈನಲ್ಲಿ ನಡೆಯುವ ಈ ಪಂದ್ಯದಲ್ಲಿ ಭಾರತ ಸೆಮಿಫೈನಲ್ ಸ್ಥಾನ ಖಚಿತಪಡಿಸಿದ್ದು, ಪಾಕಿಸ್ತಾನ ಗೆಲ್ಲಲೇಬೇಕಿದೆ. ಉಭಯ ತಂಡಗಳ ಮುಖಾಮುಖಿ ದಾಖಲೆಯಲ್ಲಿ ಭಾರತವೇ ಮೇಲುಗೈ ಸಾಧಿಸಿದ್ದು, ಟಾಸ್ ಗೆದ್ದ ಪಾಕ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇದು ಟೀಂ ಇಂಡಿಯಾಗೆ ಸವಾಲಾಗಿ ಪರಿಣಮಿಸಲಿದೆ.

14 ಬೌಂಡರಿ, 7 ಸಿಕ್ಸರ್; ಸಿಡಿಲಬ್ಬರದ ಶತಕ ಬಾರಿಸಿದ ಸ್ಮೃತಿ ಮಂಧಾನ

ದುಬೈನಲ್ಲಿ ನಡೆಯುತ್ತಿರುವ 2026ರ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಸ್ಮೃತಿ ಮಂಧಾನ ಅವರ ಸ್ಫೋಟಕ ಶತಕದ ನೆರವಿನಿಂದ ಭಾರತ ತಂಡ ಹಾಂಗ್ ಕಾಂಗ್-ಚೀನಾ ವಿರುದ್ಧ ಬೃಹತ್ ಮೊತ್ತ ಕಲೆಹಾಕಿದೆ. ಮಂಧಾನ 124 ರನ್ ಗಳಿಸಿ ಮಿಂಚಿದರು, ಇದು ಅವರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನ ಎರಡನೇ ಶತಕವಾಗಿದೆ.

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!