AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Elections

Assembly Elections

ಸಾರ್ವತ್ರಿಕ ಚುನಾವಣೆ ಎಂದು ಕರೆಯಲ್ಪಡುವ ವಿಧಾನಸಭಾ ಚುನಾವಣೆಗಳು ಭಾರತದಲ್ಲಿ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಆಗಿದೆ. ಆಯಾ ರಾಜ್ಯದ ವಿಧಾನಸಭೆ ಚುನಾವಣೆಗಳು ಐದು ವರ್ಷಕ್ಕೊಮ್ಮೆ ನಡೆಯುತ್ತವೆ. ವಿಶೇಷ ಸಮದರ್ಭಗಳಲ್ಲಿ ಮಾತ್ರಾ ಅದಕ್ಕೂ ಮುಂಚೆ ನೆಡಯಬಹುದು. ಆಯಾ ರಾಜ್ಯಗಳಲ್ಲಿ ಇಂತಿಷ್ಟು ವಿಧಾನಸಭಾ ಕ್ಷೇತ್ರಗಳಿದ್ದು, ಆಯಾ ಕ್ಷೇತ್ರಗಳಲ್ಲಿ ಜನರಿಂದ ಆಯ್ಕೆಯಾದವರನ್ನು ವಿಧಾನಸಭೆ ಶಾಸಕರು ಎಂದು ಕರೆಯಲಾಗುತ್ತದೆ. ವಿಧಾನಸಭೆ ಚುನಾವಣೆಯನ್ನು ರಾಜ್ಯ ಚುನಾವಣೆ ಆಯೋಗವು ನಡೆಸುತ್ತದೆ. ಹಾಗಂತ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ಇರುವುದಿಲ್ಲ ಅಂತ ಅರ್ಥ ಅಲ್ಲ. ಕೇಂದ್ರ ಚುನಾವಣೆಗೂ ರಾಜ್ಯ ಚುನಾವಣೆ ಆಯೋಗ ಮಾಹಿತಿ ನೀಡುತ್ತೆ. ಅದರ ಸಲಹೆ ಸೂಚನೆಗಳ ಮೇರೆಗೆ ರಾಜ್ಯ ಚುನಾವಣೆ ಆಯೋಗವು ಆಯಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಸುತ್ತೆ.

ಕೇಂದ್ರದಲ್ಲಿ ಲೋಕಸಭೆ ಕೆಳಮನೆಯಾದರೆ, ರಾಜ್ಯಸಭೆ ಮೇಲ್ಮನೆಯಾಗಿರುತ್ತದೆ. ಅಂತೆಯೇ ರಾಜ್ಯಗಳಲ್ಲಿ ವಿಧಾನಸಭೆ ಕೆಳಮನೆಯಾಗಿದ್ದು, ವಿಧಾನ ಪರಿಷತ್ತು ಮೇಲ್ಮನೆಯಾಗಿರುತ್ತದೆ. ವಿಧಾನ ಪರಿಷತ್ತು ಎಲ್ಲ ರಾಜ್ಯಗಳಲ್ಲೂ ಕಡ್ಡಾಯವಲ್ಲ. ಸದ್ಯಕ್ಕೆ ಭಾರತದ 7 ರಾಜ್ಯಗಳು ವಿಧಾನ ಪರಿಷತ್ತು ಹೊಂದಿವೆ. ರಾಜ್ಯದ ಸ್ಥಾನ ಮಾನವಿಲ್ಲದ ಎರಡು ಕೇಂದ್ರಾಡಳಿತ ಪ್ರದೇಶಗಳು ವಿಧಾನಸಭೆಯನ್ನು ಹೊಂದಿವೆ. ಅವುಗಳೆಂದರೆ ದೆಹಲಿ ಮತ್ತು ಪುದುಚೇರಿ.

ವಿಧಾನಸಭೆಯ ಸದಸ್ಯರು ವಿಧಾನಸಭೆಯ ವ್ಯಾಪ್ತಿಯ ಒಂದು ಕ್ಷೇತ್ರದ ಹದಿನೆಂಟು ವಯಸ್ಸು ಮೀರಿದ ಮತದಾರರಿಂದ ನೇರವಾಗಿ ಆಯ್ಕೆಯಾಗಿರುತ್ತಾರೆ. ವಿಧಾನಸಭೆಯ ಸದಸ್ಯರ ಬಲವನ್ನು ಭಾರತದ ಸಂವಿಧಾನ 60ಕ್ಕೆ ಕಡಿಮೆ ಹಾಗು 500ಕ್ಕೆ ಹೆಚ್ಚು ಇರಬಾರದು ಎಂದು ನಮೂದಿಸಿದೆ. ಆದಾಗ್ಯೂ ಕೆಲ ಚಿಕ್ಕ ರಾಜ್ಯಗಳ ವಿಚಾರದಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕೆ ಕಡಿಮೆಯಿದೆ. ಗೋವಾ, ಸಿಕ್ಕಿಂ, ಮಿಝೋರಾಂ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚ್ಚೇರಿಯಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕಿಂತಲೂ ಕಡಿಮೆಯಿದ್ದು ಆ ರಾಜ್ಯಗಳಿಗೆ ವಿಧಾನಸಭಾ ಸದಸ್ಯರ ಸಂಖ್ಯಾ ಬಲದ ವಿಚಾರದಲ್ಲಿ ಸಡಿಲಿಕೆ ಕೊಡಲಾಗಿದೆ.

 

ಇನ್ನೂ ಹೆಚ್ಚು ಓದಿ

ಹಿಂದೂ ಶಾಸಕ ಏಕೆ ಆಯ್ಕೆಯಾಗಿಲ್ಲ? ಎಂದ ಕೇರಳದ ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಕೇರಳದಲ್ಲಿ ಚುನಾವಣಾ ಅಖಾಡ ಸಿದ್ಧವಾಗಿದೆ. ಈ ನಡುವೆ ಗುರುವಾಯೂರಿನ ಬಿಜೆಪಿ ಅಭ್ಯರ್ಥಿಯೊಬ್ಬರು 'ಹಿಂದೂ ಶಾಸಕ' ಎಂಬ ಪದ ಬಳಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿವೆ. ಗುರುವಾಯೂರು ಎನ್‌ಡಿಎ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ವಿರುದ್ಧ ಕೋಮುವಾದಿ ಹೇಳಿಕೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದೆ ಮತ್ತು ವಿಧಾನಸಭಾ ಚುನಾವಣೆಗೆ ಮುನ್ನ ಓಲೈಕೆ ರಾಜಕೀಯದಲ್ಲಿ ತೊಡಗಿದೆ ಎಂದು ಅವರು ಆರೋಪಿಸಿದ್ದಾರೆ. ರಾಹುಲ್ ಗಾಂಧಿಯವರ ರಾಜಕೀಯ ವಿಧಾನವು ಬಿಜೆಪಿಗೆ ಪದೇ ಪದೇ ಪ್ರಯೋಜನವನ್ನು ನೀಡಿದೆ. ಹೀಗಾಗಿ, ಕಾಂಗ್ರೆಸ್ ಬಿಜೆಪಿಯ ಬಿ-ಟೀಂ ಎಂದು ಟೀಕಿಸಿದ್ದಾರೆ.

ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ 11 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ಕೇರಳದ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಪ್ರಕಟವಾಗಿದೆ. ಚುನಾವಣೆಗೆ ಬಿಜೆಪಿಯಿಂದ ಇಂದು 11 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತಿರುವನಂತಪುರಂನಿಂದ ಕೆ. ಜಯನ್ ಕಣಕ್ಕಿಳಿದಿದ್ದಾರೆ. ಇಂದು ಬಿಜೆಪಿ ಪುದುಚೇರಿ ಮತ್ತು ಕೇರಳದಲ್ಲಿ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇರಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9ರಂದು ನಡೆಯಲಿದೆ.

ಬಂಗಾಳದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮತ್ತೆ ಮಮತಾ ಬ್ಯಾನರ್ಜಿ- ಸುವೇಂದು ಅಧಿಕಾರಿ ಮುಖಾಮುಖಿ

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇಂದು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಟಿಎಂಸಿ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದ 294 ಸ್ಥಾನಗಳಲ್ಲಿ 291 ಸ್ಥಾನಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಕಳೆದ ಚುನಾವಣೆಯಂತೆ ಈ ಬಾರಿಯೂ ಭವಾನಿಪುರ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಸುವೇಂದು ಅಧಿಕಾರಿ ಎದುರಾಳಿಯಾಗಿ ಮಮತಾ ಬ್ಯಾನರ್ಜಿ ಕಣಕ್ಕಿಳಿದಿದ್ದಾರೆ.

ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ಮುಂದಿನ ತಿಂಗಳು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಕೆ. ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ. ನೇಮಮ್ ನಿಂದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಿದೆ. ಏಪ್ರಿಲ್ 9ರಂದು ಕೇರಳದ ಎಲ್ಲಾ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿಯ ಅಭ್ಯರ್ಥಿಗಳ ಪೂರ್ತಿ ಪಟ್ಟಿ ಇಲ್ಲಿದೆ.

ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

West Bengal Assembly Elections: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಬಿಜೆಪಿ 144 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಂಗಾಳದ ಭವಾನಿಪುರದಲ್ಲಿ ಟಿಎಂಸಿ ನಾಯಕಿ ಹಾಗೂ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕಿಳಿದಿದ್ದಾರೆ. ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿ ಏ. 9, 23ರಂದು ಉಪಚುನಾವಣೆ; ಮೇ 4ರಂದು ಫಲಿತಾಂಶ

Bypolls for 8 assembly constituencies: ಆರು ರಾಜ್ಯಗಳಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 9 ಮತ್ತು 29ರಂದು ಉಪಚುನಾವಣೆಗಳು ನಡೆಯಲಿವೆ. ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಇದನ್ನು ಪ್ರಕಟಿಸಿದ್ದಾರೆ.

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ

2026, April 9-29th polling in five states and union territory: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ರಾಜ್ಯಗಳು ಹಾಗೂ ಪುದುಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಅಸ್ಸಾಮ್, ಕೇರಳ, ಪುದುಚೆರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ.

ಇಂದು ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣಾ ವೇಳಾಪಟ್ಟಿ ಘೋಷಣೆ ಸಾಧ್ಯತೆ

ಚುನಾವಣಾ ಆಯೋಗವು ಇಂದು ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ. ಏಪ್ರಿಲ್‌ನಲ್ಲಿ ಮತದಾನ ನಡೆದು, ಮೇ ತಿಂಗಳಲ್ಲಿ ಫಲಿತಾಂಶ ನಿರೀಕ್ಷಿಸಲಾಗಿದೆ. ಚುನಾವಣಾ ಸಿದ್ಧತೆ ಪೂರ್ಣಗೊಂಡಿದ್ದು, ವೇಳಾಪಟ್ಟಿ ಘೋಷಣೆಯಾದ ಕೂಡಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಪಶ್ಚಿಮ ಬಂಗಾಳಕ್ಕೆ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿಯ ಅದ್ಧೂರಿ ಸಾರ್ವಜನಿಕ ಸಭೆಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11ರಂದು ಮತ್ತೆ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 1ರಂದು ತಮಿಳುನಾಡು ಮತ್ತು ಪುದುಚೆರಿಗೆ ತೆರಳಿದ್ದ ಮೋದಿ 7,100 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದರು. ಇದೀಗ ಮತ್ತೆ ಅವರು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಮೋದಿ ಪದೇಪದೇ ಈ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಕಾಂಗ್ರೆಸ್ ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತೇ ವಿನಃ ಅಭಿವೃದ್ಧಿಗೆ ಗಮನ ಕೊಡಲಿಲ್ಲ; ಪ್ರಧಾನಿ ಮೋದಿ ಟೀಕೆ

ಗುವಾಹಟಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ನಿಂದ ದೀರ್ಘಕಾಲದಿಂದ ನಿರ್ಲಕ್ಷಿಸಲ್ಪಟ್ಟ ಈಶಾನ್ಯ ರಾಜ್ಯಗಳನ್ನು ಅಭಿವೃದ್ಧಿ ಮಾಡುವುದೇ ತಮ್ಮ ಸರ್ಕಾರದ ಪ್ರಮುಖ ಆದ್ಯತೆ ಎಂದು ಘೋಷಿಸಿದರು. ಈ ಪ್ರದೇಶವನ್ನು 'ಅಷ್ಟಲಕ್ಷ್ಮಿ ದೇವತೆ'ಗೆ ಹೋಲಿಸಿದರು. ಅಸ್ಸಾಂ ಕಳೆದ 11 ವರ್ಷಗಳಲ್ಲಿ ಅಭಿವೃದ್ಧಿ ಯೋಜನೆಗಳಿಗಾಗಿ ಕೇಂದ್ರ ಸರ್ಕಾರದಿಂದ ರೂ. 5.5 ಲಕ್ಷ ಕೋಟಿಗೂ ಹೆಚ್ಚು ಪಡೆದಿದೆ. ಕಾಂಗ್ರೆಸ್ ಆಡಳಿತದ ಅವಧಿಗಿಂತ ಇದು 5 ಪಟ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಚುನಾವಣೆಗೆ ಸಜ್ಜಾಗಿರುವ ರಾಜ್ಯವಾದ ಅಸ್ಸಾಂನಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ ಮಾಡಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮರ್ಮಾಘಾತ: ಅಚ್ಚರಿ ಮೂಡಿಸಿದ ಅಣ್ಣಾಮಲೈ ನಡೆ!

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಎನ್‌ಡಿಎ ನಾಯಕರ ಜತೆಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಬಿರುಸಿನ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದಾರೆ. ಆದ್ರೆ, ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ತಮಿಳುನಾಡಿನಲ್ಲಿ ಬಿಜೆಪಿಗೆ ದೊಡ್ಡ ಶಾಕ್ ಎದುರಾಗಿದೆ. ಬಿಜೆಪಿ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡಿರುವ ಅಣ್ಣಾಮಲೈ ಅವರು ಕೈಗೊಂಡ ನಿರ್ಧಾರ ಕೇಸರಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ.