Assembly Elections
ಸಾರ್ವತ್ರಿಕ ಚುನಾವಣೆ ಎಂದು ಕರೆಯಲ್ಪಡುವ ವಿಧಾನಸಭಾ ಚುನಾವಣೆಗಳು ಭಾರತದಲ್ಲಿ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಆಗಿದೆ. ಆಯಾ ರಾಜ್ಯದ ವಿಧಾನಸಭೆ ಚುನಾವಣೆಗಳು ಐದು ವರ್ಷಕ್ಕೊಮ್ಮೆ ನಡೆಯುತ್ತವೆ. ವಿಶೇಷ ಸಮದರ್ಭಗಳಲ್ಲಿ ಮಾತ್ರಾ ಅದಕ್ಕೂ ಮುಂಚೆ ನೆಡಯಬಹುದು. ಆಯಾ ರಾಜ್ಯಗಳಲ್ಲಿ ಇಂತಿಷ್ಟು ವಿಧಾನಸಭಾ ಕ್ಷೇತ್ರಗಳಿದ್ದು, ಆಯಾ ಕ್ಷೇತ್ರಗಳಲ್ಲಿ ಜನರಿಂದ ಆಯ್ಕೆಯಾದವರನ್ನು ವಿಧಾನಸಭೆ ಶಾಸಕರು ಎಂದು ಕರೆಯಲಾಗುತ್ತದೆ. ವಿಧಾನಸಭೆ ಚುನಾವಣೆಯನ್ನು ರಾಜ್ಯ ಚುನಾವಣೆ ಆಯೋಗವು ನಡೆಸುತ್ತದೆ. ಹಾಗಂತ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ಇರುವುದಿಲ್ಲ ಅಂತ ಅರ್ಥ ಅಲ್ಲ. ಕೇಂದ್ರ ಚುನಾವಣೆಗೂ ರಾಜ್ಯ ಚುನಾವಣೆ ಆಯೋಗ ಮಾಹಿತಿ ನೀಡುತ್ತೆ. ಅದರ ಸಲಹೆ ಸೂಚನೆಗಳ ಮೇರೆಗೆ ರಾಜ್ಯ ಚುನಾವಣೆ ಆಯೋಗವು ಆಯಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಸುತ್ತೆ.
ಕೇಂದ್ರದಲ್ಲಿ ಲೋಕಸಭೆ ಕೆಳಮನೆಯಾದರೆ, ರಾಜ್ಯಸಭೆ ಮೇಲ್ಮನೆಯಾಗಿರುತ್ತದೆ. ಅಂತೆಯೇ ರಾಜ್ಯಗಳಲ್ಲಿ ವಿಧಾನಸಭೆ ಕೆಳಮನೆಯಾಗಿದ್ದು, ವಿಧಾನ ಪರಿಷತ್ತು ಮೇಲ್ಮನೆಯಾಗಿರುತ್ತದೆ. ವಿಧಾನ ಪರಿಷತ್ತು ಎಲ್ಲ ರಾಜ್ಯಗಳಲ್ಲೂ ಕಡ್ಡಾಯವಲ್ಲ. ಸದ್ಯಕ್ಕೆ ಭಾರತದ 7 ರಾಜ್ಯಗಳು ವಿಧಾನ ಪರಿಷತ್ತು ಹೊಂದಿವೆ. ರಾಜ್ಯದ ಸ್ಥಾನ ಮಾನವಿಲ್ಲದ ಎರಡು ಕೇಂದ್ರಾಡಳಿತ ಪ್ರದೇಶಗಳು ವಿಧಾನಸಭೆಯನ್ನು ಹೊಂದಿವೆ. ಅವುಗಳೆಂದರೆ ದೆಹಲಿ ಮತ್ತು ಪುದುಚೇರಿ.
ವಿಧಾನಸಭೆಯ ಸದಸ್ಯರು ವಿಧಾನಸಭೆಯ ವ್ಯಾಪ್ತಿಯ ಒಂದು ಕ್ಷೇತ್ರದ ಹದಿನೆಂಟು ವಯಸ್ಸು ಮೀರಿದ ಮತದಾರರಿಂದ ನೇರವಾಗಿ ಆಯ್ಕೆಯಾಗಿರುತ್ತಾರೆ. ವಿಧಾನಸಭೆಯ ಸದಸ್ಯರ ಬಲವನ್ನು ಭಾರತದ ಸಂವಿಧಾನ 60ಕ್ಕೆ ಕಡಿಮೆ ಹಾಗು 500ಕ್ಕೆ ಹೆಚ್ಚು ಇರಬಾರದು ಎಂದು ನಮೂದಿಸಿದೆ. ಆದಾಗ್ಯೂ ಕೆಲ ಚಿಕ್ಕ ರಾಜ್ಯಗಳ ವಿಚಾರದಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕೆ ಕಡಿಮೆಯಿದೆ. ಗೋವಾ, ಸಿಕ್ಕಿಂ, ಮಿಝೋರಾಂ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚ್ಚೇರಿಯಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕಿಂತಲೂ ಕಡಿಮೆಯಿದ್ದು ಆ ರಾಜ್ಯಗಳಿಗೆ ವಿಧಾನಸಭಾ ಸದಸ್ಯರ ಸಂಖ್ಯಾ ಬಲದ ವಿಚಾರದಲ್ಲಿ ಸಡಿಲಿಕೆ ಕೊಡಲಾಗಿದೆ.
ಹಾಡಿನ ಮೂಲಕ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ಖುಷಿ ಹಂಚಿಕೊಂಡ ಮೈಥಿಲಿ ಠಾಕೂರ್
ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾದ 25 ವರ್ಷದ ಮೈಥಿಲಿ ಠಾಕೂರ್ ದೇಶದ ಅತಿ ಕಿರಿಯ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೈಥಿಲಿ ಠಾಕೂರ್ ಅವರು ಬಿಹಾರದ ಅಲಿನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ನಲ್ಲಿ 84,915 ಮತಗಳನ್ನು ಪಡೆದು ಆರ್ಜೆಡಿಯ ವಿನೋದ್ ಮಿಶ್ರಾ ಅವರನ್ನು ಸೋಲಿಸಿದ್ದಾರೆ.
- Sushma Chakre
- Updated on: Nov 19, 2025
- 4:19 pm
ಬಿಹಾರದ ಐತಿಹಾಸಿನ ಗೆಲುವಿನ ಬಳಿಕ 1,800 ಶಾಸಕರ ಗುರಿಯತ್ತ ಕಣ್ಣಿಟ್ಟ ಬಿಜೆಪಿ
ಬಿಹಾರ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ರಾಜ್ಯ ವಿಧಾನಸಭೆಗಳಲ್ಲಿ 1800 ಶಾಸಕರ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಒಂದು ಕಾಲದಲ್ಲಿ ಇಡೀ ದೇಶವನ್ನೇ ಹಿಡಿತದಲ್ಲಿಟ್ಟುಕೊಂಡಿದ್ದ ಕಾಂಗ್ರೆಸ್ ಈ ಬಾರಿಯ ಬಿಹಾರ ಚುನಾವಣೆಯಲ್ಲಿ ಧೂಳೀಪಟವಾಗಿದೆ. ಬಿಹಾರದ ಐತಿಹಾಸಿಕ ಗೆಲುವಿನಿಂದ ಉತ್ತೇಜನಗೊಂಡು ಹೊಸ ಹುರುಪಿನಿಂದ ವಿಧಾನಸಭಾ ಚುನಾವಣೆಗಳಲ್ಲಿ ಧುಮುಕಲು ಬಿಜೆಪಿ ಸಿದ್ಧವಾಗಿದೆ. ಮುಂದಿನ 2 ವರ್ಷಗಳಲ್ಲಿ 1800 ಬಿಜೆಪಿ ಶಾಸಕರನ್ನು ಹೊಂದುವ ಗುರಿಯನ್ನು ಪಕ್ಷ ಹೊಂದಿದೆ.
- Sushma Chakre
- Updated on: Nov 17, 2025
- 7:38 pm
ಬಿಹಾರದಲ್ಲಿ ಸಿಎಂ ಗಾದಿಗೆ ಟಿಕೆಟ್ ವಿತರಣೆ ಸೂತ್ರ? ಜೆಡಿಯುಗೆ ಸಿಎಂ; ಬಿಜೆಪಿ, ಎಲ್ಜೆಪಿಗೆ ಡಿಸಿಎಂ ಸ್ಥಾನ?
Bihar politics update: ಬಿಹಾರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾದರೂ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಬಿಜೆಪಿಗಿಂತ 4 ಸ್ಥಾನ ಕಡಿಮೆ ಪಡೆದರೂ ಜೆಡಿಯುಗೆ ಸಿಎಂ ಸ್ಥಾನ ಮುಂದುವರಿಯಬಹುದು. ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ಜೆಪಿ ಹಾಗೂ ಬಿಜೆಪಿಗೆ ಒಂದೊಂದು ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗುತ್ತಿದೆ.
- Vijaya Sarathy SN
- Updated on: Nov 16, 2025
- 4:56 pm
ಬಿಹಾರ ಚುನಾವಣೆ:35 ಕ್ಷೇತ್ರಗಳಲ್ಲಿ ವಿರೋಧಿಗಳ ಗೆಲುವಿಗೆ ಕಾರಣರಾದ ಪ್ರಶಾಂತ್ ಕಿಶೋರ್
ಬಿಹಾರ ವಿಧಾನಸಭೆ ಚುನಾವಣೆ(Bihar Assembly Election) ನಡೆದು ಫಲಿತಾಂಶವು ಹೊರಬಿದ್ದಿದೆ. ಎನ್ಡಿಎ ಭಾರಿ ಬಹುಮತ ಪಡೆದು ಜಯಭೇರಿ ಬಾರಿಸಿದೆ. ಜನ್ ಸುರಾಜ್ ಪಕ್ಷ ಕಟ್ಟಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ಗೆ ಭಾರೀ ಆಘಾತವಾಗಿದೆ. ರಾಜ್ಯದ 243 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೂ ಒಂದೇ ಒಂದು ಸ್ಥಾನ ಗೆಲ್ಲುವಲ್ಲಿ ತಂತ್ರಗಾರಿಕೆ ಕೆಲಸ ಮಾಡಿಲ್ಲ.
- Nayana Rajeev
- Updated on: Nov 16, 2025
- 10:25 am
ಬಿಹಾರದಲ್ಲಿ ಆರ್ಜೆಡಿ ಸೋಲಿನ ಬಳಿಕ ಕುಟುಂಬ, ರಾಜಕೀಯವೆರಡನ್ನೂ ತೊರೆದ ಲಾಲು ಯಾದವ್ ಮಗಳು ರೋಹಿಣಿ ಆಚಾರ್ಯ
ಬಿಹಾರದಲ್ಲಿ ಎನ್ಡಿಎ ಎದುರು ಆರ್ಜೆಡಿ-ಕಾಂಗ್ರೆಸ್ ಮೈತ್ರಿ ಹೀನಾಯ ಸೋಲನ್ನು ಅನುಭವಿಸಿದೆ. ಬಿಹಾರದಲ್ಲಿ ಸೋಲಿನ ನಂತರ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ರಾಜಕೀಯವನ್ನು ತೊರೆದಿದ್ದಾರೆ ಹಾಗೂ ಅವರ ಕುಟುಂಬವನ್ನು ಕೂಡ ಬಿಟ್ಟು ಹೋಗಿದ್ದಾರೆ. ಆದರೆ, ಅವರ ಈ ನಿರ್ಧಾರಕ್ಕೆ ನಿಖರವಾದ ಕಾರಣವೇನೆಂಬುದು ಮಾತ್ರ ಇನ್ನೂ ರಹಸ್ಯವಾಗಿಯೇ ಉಳಿದಿದೆ.
- Sushma Chakre
- Updated on: Nov 15, 2025
- 9:10 pm
ಚುನಾವಣೆ ಆರಂಭದಿಂದಲೇ ನ್ಯಾಯಯುತವಾಗಿರಲಿಲ್ಲ; ಬಿಹಾರದ ಸೋಲಿನ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದೇನು?
ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಎರಡು ಹಂತಗಳಲ್ಲಿ ನಡೆದ ಮತದಾನದಲ್ಲಿ ಎನ್ಡಿಎ 202 ಸ್ಥಾನಗಳನ್ನು ಗಳಿಸಿದ್ದರೆ ಮಹಾಘಟಬಂಧನ್ 35 ಸ್ಥಾನಗಳನ್ನು ಗಳಿಸಿದೆ. ಇತರೆ 6 ಸ್ಥಾನಗಳನ್ನು ಪಡೆದಿದೆ. ಬಿಜೆಪಿ ಬಿಹಾರದಲ್ಲಿ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಈ ಹೀನಾಯ ಸೋಲಿನ ಬಗ್ಗೆ ಕಾಂಗ್ರೆಸ್ ಯಾವ ರೀತಿಯ ಪ್ರತಿಕ್ರಿಯೆ ನೀಡಿದೆ? ಕಾಂಗ್ರೆಸ್ ನಾಯಕರ ಅಭಿಪ್ರಾಯವೇನು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
- Sushma Chakre
- Updated on: Nov 14, 2025
- 11:09 pm
Maithili Thakur: ಪಿಯುಸಿ ಪಾಸ್ ಆಗಿರುವ ಮೈಥಿಲಿ ಠಾಕೂರ್ ಈಗ ಭಾರತದ ಅತಿ ಕಿರಿಯ ಶಾಸಕಿ; ಯಾರು ಈಕೆ?
ಬಿಹಾರದ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವುದಕ್ಕಿಂತ ಕೇವಲ ಒಂದು ದಿನ ಮೊದಲು ಪಕ್ಷಕ್ಕೆ ಸೇರ್ಪಡೆಯಾಗಿದ್ದ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಅವರ ಹೆಸರೂ ಕೂಡ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು. ಹಲವು ಹಿರಿಯ ನಾಯಕರಿಗೇ ಟಿಕೆಟ್ ಸಿಗದಿದ್ದಾಗ ಕೇವಲ 25 ವರ್ಷದ ಈ ಹುಡುಗಿಗೆ ಟಿಕೆಟ್ ನೀಡಿದ್ದಕ್ಕೆ ಹಲವರಿಗೆ ಕೊಂಚ ಅಸಮಾಧಾನವೂ ಆಗಿತ್ತು. ಆದರೆ, ಅದೇ ಮೈಥಿಲಿ ಈಗ ಮೊದಲ ಪ್ರಯತ್ನದಲ್ಲೇ ಆರ್ಜೆಡಿ ಅಭ್ಯರ್ಥಿ ವಿರುದ್ಧ ಗೆದ್ದು ದೇಶದ ಅತಿ ಕಿರಿಯ ಶಾಸಕಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
- Sushma Chakre
- Updated on: Nov 14, 2025
- 11:17 pm
ಬಿಜೆಪಿ ಕಾರ್ಯಕರ್ತರತ್ತ ಸ್ಕಾರ್ಫ್ ಬೀಸುತ್ತಾ ವಿಜಯದ ನಗು ಬೀರಿದ ಪ್ರಧಾನಿ ಮೋದಿ
ಬಿಹಾರ ಚುನಾವಣೆ 2025ರಲ್ಲಿ NDAಯ ಐತಿಹಾಸಿಕ ಗೆಲುವಿನ ನಂತರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು, ಸಂಭ್ರಮಾಚರಣೆಯಲ್ಲಿ ಶಾಲನ್ನು ಬೀಸುತ್ತಾ ಸಂತಸ ವ್ಯಕ್ತಪಡಿಸಿದರು. ಈ ವೇಳೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸನ್ಮಾನ ಮಾಡಲಾಯಿತು.
- Sushma Chakre
- Updated on: Nov 14, 2025
- 7:33 pm
Bihar election result 2025: ಮೋದಿ ಬಿಹಾರ ಗೆಲುವಿನ ಭಾಷಣದ ನೇರಪ್ರಸಾರ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಐತಿಹಾಸಿಕ ಗೆಲುವು ಸಾಧಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅದ್ಧೂರಿ ಸಂಭ್ರಮಾಚರಣೆ ನಡೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್ ಸಮ್ಮುಖದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದರು, ವಿಜಯೋತ್ಸವದ ಸಂತೋಷವನ್ನು ಹಂಚಿಕೊಂಡರು.
- Gangadhar Saboji
- Updated on: Nov 14, 2025
- 7:42 pm
ಬಿಹಾರದಲ್ಲಿ ಪಟಾಕಿ ಸಿಡಿಸಿ ಜೆಡಿಯು ಕಾರ್ಯಕರ್ತರ ಸಂಭ್ರಮಾಚರಣೆ
ನವೆಂಬರ್ 6ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11ರಂದು 2ನೇ ಹಂತದ ಮತದಾನ ನಡೆಯಿತು. ಈ ವರ್ಷ ಬಿಹಾರವು ಅಭೂತಪೂರ್ವವಾಗಿ ಶೇ. 66.91ರಷ್ಟು ಮತದಾನವನ್ನು ಕಂಡಿತು. ಇದು 1951ರಿಂದೀಚೆಗೆ ಬಿಹಾರದ ಇತಿಹಾಸದಲ್ಲಿಯೇ ಅತ್ಯಧಿಕ ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ECI) ತಿಳಿಸಿದೆ.
- Sushma Chakre
- Updated on: Nov 14, 2025
- 7:05 pm