Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Elections

Assembly Elections

ಸಾರ್ವತ್ರಿಕ ಚುನಾವಣೆ ಎಂದು ಕರೆಯಲ್ಪಡುವ ವಿಧಾನಸಭಾ ಚುನಾವಣೆಗಳು ಭಾರತದಲ್ಲಿ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಆಗಿದೆ. ಆಯಾ ರಾಜ್ಯದ ವಿಧಾನಸಭೆ ಚುನಾವಣೆಗಳು ಐದು ವರ್ಷಕ್ಕೊಮ್ಮೆ ನಡೆಯುತ್ತವೆ. ವಿಶೇಷ ಸಮದರ್ಭಗಳಲ್ಲಿ ಮಾತ್ರಾ ಅದಕ್ಕೂ ಮುಂಚೆ ನೆಡಯಬಹುದು. ಆಯಾ ರಾಜ್ಯಗಳಲ್ಲಿ ಇಂತಿಷ್ಟು ವಿಧಾನಸಭಾ ಕ್ಷೇತ್ರಗಳಿದ್ದು, ಆಯಾ ಕ್ಷೇತ್ರಗಳಲ್ಲಿ ಜನರಿಂದ ಆಯ್ಕೆಯಾದವರನ್ನು ವಿಧಾನಸಭೆ ಶಾಸಕರು ಎಂದು ಕರೆಯಲಾಗುತ್ತದೆ. ವಿಧಾನಸಭೆ ಚುನಾವಣೆಯನ್ನು ರಾಜ್ಯ ಚುನಾವಣೆ ಆಯೋಗವು ನಡೆಸುತ್ತದೆ. ಹಾಗಂತ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ಇರುವುದಿಲ್ಲ ಅಂತ ಅರ್ಥ ಅಲ್ಲ. ಕೇಂದ್ರ ಚುನಾವಣೆಗೂ ರಾಜ್ಯ ಚುನಾವಣೆ ಆಯೋಗ ಮಾಹಿತಿ ನೀಡುತ್ತೆ. ಅದರ ಸಲಹೆ ಸೂಚನೆಗಳ ಮೇರೆಗೆ ರಾಜ್ಯ ಚುನಾವಣೆ ಆಯೋಗವು ಆಯಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಸುತ್ತೆ.

ಕೇಂದ್ರದಲ್ಲಿ ಲೋಕಸಭೆ ಕೆಳಮನೆಯಾದರೆ, ರಾಜ್ಯಸಭೆ ಮೇಲ್ಮನೆಯಾಗಿರುತ್ತದೆ. ಅಂತೆಯೇ ರಾಜ್ಯಗಳಲ್ಲಿ ವಿಧಾನಸಭೆ ಕೆಳಮನೆಯಾಗಿದ್ದು, ವಿಧಾನ ಪರಿಷತ್ತು ಮೇಲ್ಮನೆಯಾಗಿರುತ್ತದೆ. ವಿಧಾನ ಪರಿಷತ್ತು ಎಲ್ಲ ರಾಜ್ಯಗಳಲ್ಲೂ ಕಡ್ಡಾಯವಲ್ಲ. ಸದ್ಯಕ್ಕೆ ಭಾರತದ 7 ರಾಜ್ಯಗಳು ವಿಧಾನ ಪರಿಷತ್ತು ಹೊಂದಿವೆ. ರಾಜ್ಯದ ಸ್ಥಾನ ಮಾನವಿಲ್ಲದ ಎರಡು ಕೇಂದ್ರಾಡಳಿತ ಪ್ರದೇಶಗಳು ವಿಧಾನಸಭೆಯನ್ನು ಹೊಂದಿವೆ. ಅವುಗಳೆಂದರೆ ದೆಹಲಿ ಮತ್ತು ಪುದುಚೇರಿ.

ವಿಧಾನಸಭೆಯ ಸದಸ್ಯರು ವಿಧಾನಸಭೆಯ ವ್ಯಾಪ್ತಿಯ ಒಂದು ಕ್ಷೇತ್ರದ ಹದಿನೆಂಟು ವಯಸ್ಸು ಮೀರಿದ ಮತದಾರರಿಂದ ನೇರವಾಗಿ ಆಯ್ಕೆಯಾಗಿರುತ್ತಾರೆ. ವಿಧಾನಸಭೆಯ ಸದಸ್ಯರ ಬಲವನ್ನು ಭಾರತದ ಸಂವಿಧಾನ 60ಕ್ಕೆ ಕಡಿಮೆ ಹಾಗು 500ಕ್ಕೆ ಹೆಚ್ಚು ಇರಬಾರದು ಎಂದು ನಮೂದಿಸಿದೆ. ಆದಾಗ್ಯೂ ಕೆಲ ಚಿಕ್ಕ ರಾಜ್ಯಗಳ ವಿಚಾರದಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕೆ ಕಡಿಮೆಯಿದೆ. ಗೋವಾ, ಸಿಕ್ಕಿಂ, ಮಿಝೋರಾಂ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚ್ಚೇರಿಯಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕಿಂತಲೂ ಕಡಿಮೆಯಿದ್ದು ಆ ರಾಜ್ಯಗಳಿಗೆ ವಿಧಾನಸಭಾ ಸದಸ್ಯರ ಸಂಖ್ಯಾ ಬಲದ ವಿಚಾರದಲ್ಲಿ ಸಡಿಲಿಕೆ ಕೊಡಲಾಗಿದೆ.

 

ಇನ್ನೂ ಹೆಚ್ಚು ಓದಿ

ದೆಹಲಿಗೆ ಮತ್ತೊಮ್ಮೆ ಮಹಿಳಾ ಮುಖ್ಯಮಂತ್ರಿ?; ಬಿಜೆಪಿಯಿಂದ ಅಚ್ಚರಿಯ ಆಯ್ಕೆ ಸಾಧ್ಯತೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 27 ವರ್ಷಗಳ ಬಳಿಕ ಸರ್ಕಾರ ರಚಿಸಲಿದೆ. ಇನ್ನೂ ಬಿಜೆಪಿ ಸಿಎಂ ಯಾರಾಗಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಆದರೆ, ಮೂಲಗಳ ಪ್ರಕಾರ, ಬಿಜೆಪಿ ದೆಹಲಿಯಲ್ಲಿ ಅಚ್ಚರಿಯ ಆಯ್ಕೆಗೆ ಮುಂದಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಗೆ 4ನೇ ಬಾರಿಗೆ ಮಹಿಳಾ ಮುಖ್ಯಮಂತ್ರಿ ಅಧಿಕಾರಕ್ಕೇರುವ ಸಾಧ್ಯತೆಯಿದೆ ಎನ್ನಲಾಗಿದೆ. ಇದರ ಜೊತೆಗೆ ಪರ್ವೇಶ್ ವರ್ಮಾ ಸೇರಿದಂತೆ ಅನೇಕ ಪುರುಷ ಅಭ್ಯರ್ಥಿಗಳು ಕೂಡ ಸಿಎಂ ರೇಸ್​ನಲ್ಲಿದ್ದಾರೆ.

Delhi Results: ದೆಹಲಿಯಲ್ಲಿ 48 ಸ್ಥಾನಗಳ ಭರ್ಜರಿ ಜಯ ಗಳಿಸಿದ ಬಿಜೆಪಿ; ಆಪ್​ಗೆ 22 ಸ್ಥಾನ, ಈ ಬಾರಿಯೂ ಶೂನ್ಯಕ್ಕೆ ಶರಣಾದ ಕಾಂಗ್ರೆಸ್

27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ಆಮ್ ಆದ್ಮಿ ಪಕ್ಷವನ್ನು ಸೋಲಿಸಿ ದೇಶದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಕೇಸರಿ ಪಕ್ಷ ಮುಂದಾಗಿದೆ. ಫೆಬ್ರವರಿ 5ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಾಗರಿಕರು ತಮ್ಮ ಮತಗಳನ್ನು ಚಲಾಯಿಸಿದರು. ಇಂದು (ಫೆಬ್ರವರಿ 8) ಮತ ಎಣಿಕೆ ನಡೆಯಿತು. ಇದೀಗ ಫಲಿತಾಂಶ ಹೊರಬಿದ್ದಿದ್ದು, ಶೀಘ್ರದಲ್ಲೇ ಹೊಸ ಸರ್ಕಾರ ರಚನೆಯಾಗಲಿದೆ.

ದೆಹಲಿಯ ಜನಾದೇಶ ರಾಜಕೀಯದಲ್ಲಿ ಯಾವುದೇ ಶಾರ್ಟ್‌ಕಟ್‌ಗಳಿಲ್ಲ ಎಂದು ಸಾಬೀತುಪಡಿಸಿದೆ; ಪ್ರಧಾನಿ ಮೋದಿ

ಆಡಳಿತ ಆಮ್ ಆದ್ಮಿ ಪಕ್ಷವನ್ನು ಸೋಲಿಸಿದ ನಂತರ ದೆಹಲಿಯಲ್ಲಿ ಬಿಜೆಪಿ ಅದ್ಭುತ ಪುನರಾಗಮನ ಮಾಡಿದೆ. ಚುನಾವಣೆಯಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಪ್ರಮುಖ ವ್ಯಕ್ತಿಗಳು ತಮ್ಮ ಸ್ಥಾನಗಳನ್ನು ಕಳೆದುಕೊಂಡಿದ್ದಾರೆ. ಬಿಜೆಪಿ ವಿಜಯವನ್ನು ಆಚರಿಸುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ದೆಹಲಿಯಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ವೇಗದ ಅಭಿವೃದ್ಧಿ; ಗೆಲುವಿನ ಬಳಿಕ ಪ್ರಧಾನಿ ಮೋದಿ ಭರವಸೆ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಿ ಬಿಜೆಪಿ ಜಯಭೇರಿ ಬಾರಿಸಿದೆ. ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ. ಬಿಜೆಪಿಯ ಭರ್ಜರಿ ಗೆಲುವಿನ ಬಳಿಕ ದೆಹಲಿಯ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಬಿಜೆಪಿ ನಾಯಕರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾರೆ.

Parvesh Verma: ಅರವಿಂದ್ ಕೇಜ್ರಿವಾಲ್​ ಎದುರು ಗೆದ್ದು ದೆಹಲಿ ಸಿಎಂ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿರುವ ಪರ್ವೇಶ್ ವರ್ಮಾ ಯಾರು?

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಗೆದ್ದು ಬೀಗಿದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಇದೀಗ ಕೇಂದ್ರಬಿಂದುವಾಗಿದ್ದಾರೆ. ಈ ವರ್ಷ ದೆಹಲಿ ಚುನಾವಣೆಯ ಮ್ಯಾನ್ ಆಫ್ ದಿ ಮ್ಯಾಚ್ ಎಂದೇ ಕರೆಸಿಕೊಳ್ಳುತ್ತಿರುವ ಪರ್ವೇಶ್ ವರ್ಮಾ ದೆಹಲಿಯ ಮುಂದಿನ ಮುಖ್ಯಮಂತ್ರಿಗಳ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಹಾಗಾದರೆ, ಈ ಪರ್ವೇಶ್ ವರ್ಮಾ ಯಾರು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಸುಳ್ಳಿನ ಆಡಳಿತದ ಅಂತ್ಯ; ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ ಸಂತಸ

ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಸೋಲಿಸಿ ಬಿಜೆಪಿ ಭರ್ಜರಿ ಪುನರಾಗಮನಕ್ಕೆ ಸಜ್ಜಾಗಿದೆ. ಈ ಬೃಹತ್ ಜನಾದೇಶಕ್ಕಾಗಿ ದೆಹಲಿಯ ಜನರಿಗೆ ಕೃತಜ್ಞತೆ ಸಲ್ಲಿಸಿದ ಅಮಿತ್ ಶಾ, ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ದೆಹಲಿಯನ್ನು ವಿಶ್ವದ ನಂಬರ್ ಒನ್ ರಾಜಧಾನಿಯನ್ನಾಗಿ ಮಾಡುತ್ತದೆ ಎಂದು ಭರವಸೆ ನೀಡಿದರು.

ದೆಹಲಿಯ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

27 ವರ್ಷಗಳ ಕಾಲದ ನಂತರ ಕೇಸರಿ ಪಕ್ಷವು ರಾಷ್ಟ್ರ ರಾಜಧಾನಿಯಲ್ಲಿ ನಿರ್ಣಾಯಕ ಜನಾದೇಶದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗುತ್ತಿದ್ದಂತೆ ದೆಹಲಿಯ ಪ್ರಧಾನ ಕಚೇರಿಯ ಹೊರಗೆ ಬಿಜೆಪಿ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದರು. ದೆಹಲಿಯ 70 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎಎಪಿ 22 ಸ್ಥಾನಗಳಲ್ಲಿ ಮುಂದಿದೆ.

Delhi Results: ದೆಹಲಿಯಲ್ಲಿ 40 ಸ್ಥಾನಗಳನ್ನು ಪಡೆದು ಬಹುಮತ ದಾಟಿದ ಬಿಜೆಪಿ; ಡೊಳ್ಳು ಬಾರಿಸಿ ಕಾರ್ಯಕರ್ತರ ಸಂಭ್ರಮಾಚರಣೆ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 36 ಸ್ಥಾನಗಳ ಗಡಿಯನ್ನು ಬಿಜೆಪಿ ದಾಟುವ ಮೂಲಕ ಈ ಬಾರಿಯ ಸರ್ಕಾರ ರಚಿಸಲು ಸಜ್ಜಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 27 ವರ್ಷಗಳಿಂದ ಪ್ರಯತ್ನಿಸುತ್ತಿದ್ದ ಬಿಜೆಪಿಯ ಪ್ರಯತ್ನಕ್ಕೀಗ ಫಲ ಸಿಕ್ಕಿದೆ. ಭರ್ಜರಿ ಗೆಲುವಿನ ಮೂಲಕ ಬಿಜೆಪಿ ದೆಹಲಿಯಲ್ಲಿ ಪುನರಾಗಮನ ಮಾಡಿದೆ. ಸದ್ಯದ ಅಂಕಿ-ಅಂಶಗಳ ಪ್ರಕಾರ ಬಿಜೆಪಿ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇನ್ನೂ ಕೆಲವು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕೇಜ್ರಿವಾಲ್, ಸಿಸೋಡಿಯಾ ಸೇರಿ ದೆಹಲಿ ಚುನಾವಣೆಯಲ್ಲಿ ಈ ಪ್ರಮುಖ ಆಪ್ ನಾಯಕರಿಗೆ ಭಾರೀ ಮುಖಭಂಗ

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಉಳಿದಿದೆ. ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಂತೆ ಈಗಾಗಲೇ ಬಿಜೆಪಿ ಭರ್ಜರಿ ಜಯ ಗಳಿಸುವ ಮೂಲಕ ದೆಹಲಿಯಲ್ಲಿ ಸರ್ಕಾರ ರಚಿಸುವ ಉತ್ಸಾಹದಲ್ಲಿದೆ. ಈ ನಡುವೆ ಈ ಚುನಾವಣೆಯಲ್ಲಿ ಸೋಲನ್ನಪ್ಪಿದ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕರ ಬಗ್ಗೆ ಮಾಹಿತಿ ಇಲ್ಲಿದೆ.

ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಕಮಾಲ್: ಮೋದಿ, ನಡ್ಡಾಗೆ ಪತ್ರದ ಮೂಲಕ ಅಭಿನಂದನೆ ತಿಳಿಸಿದ ಯಡಿಯೂರಪ್ಪ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿಗೆ ಬಿಎಸ್ ಯಡಿಯೂರಪ್ಪ ಪ್ರಧಾನಿ ಮೋದಿ ಮತ್ತು ಜೆ.ಪಿ. ನಡ್ಡಾಗೆ ಅಭಿನಂದನೆ ಸಲ್ಲಿಸಿದ್ದಾರೆ. 27 ವರ್ಷಗಳ ಬಳಿಕ ಬಿಜೆಪಿ ಈ ಗೆಲುವು ಸಾಧಿಸಿದೆ. ಮೋದಿಯವರ ನಾಯಕತ್ವ ಮತ್ತು ಪಕ್ಷದ ಕಾರ್ಯಕರ್ತರ ಶ್ರಮ ಈ ಗೆಲುವಿಗೆ ಕಾರಣ ಎಂದು ಯಡಿಯೂರಪ್ಪ ಉಲ್ಲೇಖಿಸಿದ್ದಾರೆ.