![Assembly Elections](https://images.tv9kannada.com/wp-content/uploads/2023/05/Karnataka-assembly-elections-2023-3.jpg)
Assembly Elections
ಸಾರ್ವತ್ರಿಕ ಚುನಾವಣೆ ಎಂದು ಕರೆಯಲ್ಪಡುವ ವಿಧಾನಸಭಾ ಚುನಾವಣೆಗಳು ಭಾರತದಲ್ಲಿ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಆಗಿದೆ. ಆಯಾ ರಾಜ್ಯದ ವಿಧಾನಸಭೆ ಚುನಾವಣೆಗಳು ಐದು ವರ್ಷಕ್ಕೊಮ್ಮೆ ನಡೆಯುತ್ತವೆ. ವಿಶೇಷ ಸಮದರ್ಭಗಳಲ್ಲಿ ಮಾತ್ರಾ ಅದಕ್ಕೂ ಮುಂಚೆ ನೆಡಯಬಹುದು. ಆಯಾ ರಾಜ್ಯಗಳಲ್ಲಿ ಇಂತಿಷ್ಟು ವಿಧಾನಸಭಾ ಕ್ಷೇತ್ರಗಳಿದ್ದು, ಆಯಾ ಕ್ಷೇತ್ರಗಳಲ್ಲಿ ಜನರಿಂದ ಆಯ್ಕೆಯಾದವರನ್ನು ವಿಧಾನಸಭೆ ಶಾಸಕರು ಎಂದು ಕರೆಯಲಾಗುತ್ತದೆ. ವಿಧಾನಸಭೆ ಚುನಾವಣೆಯನ್ನು ರಾಜ್ಯ ಚುನಾವಣೆ ಆಯೋಗವು ನಡೆಸುತ್ತದೆ. ಹಾಗಂತ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ಇರುವುದಿಲ್ಲ ಅಂತ ಅರ್ಥ ಅಲ್ಲ. ಕೇಂದ್ರ ಚುನಾವಣೆಗೂ ರಾಜ್ಯ ಚುನಾವಣೆ ಆಯೋಗ ಮಾಹಿತಿ ನೀಡುತ್ತೆ. ಅದರ ಸಲಹೆ ಸೂಚನೆಗಳ ಮೇರೆಗೆ ರಾಜ್ಯ ಚುನಾವಣೆ ಆಯೋಗವು ಆಯಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಸುತ್ತೆ.
ಕೇಂದ್ರದಲ್ಲಿ ಲೋಕಸಭೆ ಕೆಳಮನೆಯಾದರೆ, ರಾಜ್ಯಸಭೆ ಮೇಲ್ಮನೆಯಾಗಿರುತ್ತದೆ. ಅಂತೆಯೇ ರಾಜ್ಯಗಳಲ್ಲಿ ವಿಧಾನಸಭೆ ಕೆಳಮನೆಯಾಗಿದ್ದು, ವಿಧಾನ ಪರಿಷತ್ತು ಮೇಲ್ಮನೆಯಾಗಿರುತ್ತದೆ. ವಿಧಾನ ಪರಿಷತ್ತು ಎಲ್ಲ ರಾಜ್ಯಗಳಲ್ಲೂ ಕಡ್ಡಾಯವಲ್ಲ. ಸದ್ಯಕ್ಕೆ ಭಾರತದ 7 ರಾಜ್ಯಗಳು ವಿಧಾನ ಪರಿಷತ್ತು ಹೊಂದಿವೆ. ರಾಜ್ಯದ ಸ್ಥಾನ ಮಾನವಿಲ್ಲದ ಎರಡು ಕೇಂದ್ರಾಡಳಿತ ಪ್ರದೇಶಗಳು ವಿಧಾನಸಭೆಯನ್ನು ಹೊಂದಿವೆ. ಅವುಗಳೆಂದರೆ ದೆಹಲಿ ಮತ್ತು ಪುದುಚೇರಿ.
ವಿಧಾನಸಭೆಯ ಸದಸ್ಯರು ವಿಧಾನಸಭೆಯ ವ್ಯಾಪ್ತಿಯ ಒಂದು ಕ್ಷೇತ್ರದ ಹದಿನೆಂಟು ವಯಸ್ಸು ಮೀರಿದ ಮತದಾರರಿಂದ ನೇರವಾಗಿ ಆಯ್ಕೆಯಾಗಿರುತ್ತಾರೆ. ವಿಧಾನಸಭೆಯ ಸದಸ್ಯರ ಬಲವನ್ನು ಭಾರತದ ಸಂವಿಧಾನ 60ಕ್ಕೆ ಕಡಿಮೆ ಹಾಗು 500ಕ್ಕೆ ಹೆಚ್ಚು ಇರಬಾರದು ಎಂದು ನಮೂದಿಸಿದೆ. ಆದಾಗ್ಯೂ ಕೆಲ ಚಿಕ್ಕ ರಾಜ್ಯಗಳ ವಿಚಾರದಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕೆ ಕಡಿಮೆಯಿದೆ. ಗೋವಾ, ಸಿಕ್ಕಿಂ, ಮಿಝೋರಾಂ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚ್ಚೇರಿಯಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕಿಂತಲೂ ಕಡಿಮೆಯಿದ್ದು ಆ ರಾಜ್ಯಗಳಿಗೆ ವಿಧಾನಸಭಾ ಸದಸ್ಯರ ಸಂಖ್ಯಾ ಬಲದ ವಿಚಾರದಲ್ಲಿ ಸಡಿಲಿಕೆ ಕೊಡಲಾಗಿದೆ.
ವಿಧಾನಸಭೆ ಚುನಾವಣೆ ವಿಭಿನ್ನವಾಗಿರುತ್ತದೆ; ಸೀಟು ಹಂಚಿಕೆ ಬಗ್ಗೆ ದೊಡ್ಡ ಸುಳಿವು ಕೊಟ್ಟ ಶರದ್ ಪವಾರ್
ಈ ವರ್ಷದ ಕೊನೆಯಲ್ಲಿ ಹರಿಯಾಣ ಮತ್ತು ಜಾರ್ಖಂಡ್ನ ಚುನಾವಣೆಗಳೊಂದಿಗೆ ಮಹಾರಾಷ್ಟ್ರದಲ್ಲಿ ಕೂಡ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಎನ್ಸಿಪಿ-ಶರದ್ ಪವಾರ್, ಶಿವಸೇನೆ (ಉದ್ಧವ್ ಠಾಕ್ರೆ) ಮತ್ತು ಕಾಂಗ್ರೆಸ್ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಸದಸ್ಯರಾಗಿದ್ದಾರೆ.
- Sushma Chakre
- Updated on: Jun 22, 2024
- 3:35 pm
Arunachal Pradesh Results: ಮತ್ತೆ ಬಿಜೆಪಿ ತೆಕ್ಕೆಗೆ ಅರುಣಾಚಲ ಪ್ರದೇಶ, ಕಳೆದ ಚುನಾವಣೆಯ ಅಂಕಿ-ಅಂಶಗಳು ಇಲ್ಲಿವೆ
Arunachal Pradesh Assembly Election Results 2024: ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ಲೋಕಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಬಹುಮತ ಪಡೆದಿದ್ದು, ಸಿಕ್ಕಿಂನಲ್ಲಿ ಎಸ್ಕೆಎಂ ಮುಂದಿದೆ.
- Nayana Rajeev
- Updated on: Jun 2, 2024
- 2:15 pm
ರಾಹುಲ್ ಗಾಂಧಿ ಇವತ್ತು ಹಾಜರಾಗದಿದ್ದರೆ ಕೋರ್ಟ್ ವಾರಂಟ್ ಜಾರಿಗೊಳಿಸಲಿದೆ: ವಿನೋದ, ಬಿಜೆಪಿ ಪರ ವಕೀಲ
ವಕೀಲ ವಿನೋದ್ ಹೇಳುವ ಪ್ರಕಾರ ಕಾಂಗ್ರೆಸ್ ನಾಯಕರು ಆಗಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆಧಾರರಹಿತ ಆರೋಪಗಳನ್ನು ಮಾಡಿದ್ದರು. ಇದೇ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿತ್ತು.
- Arun Belly
- Updated on: Jun 1, 2024
- 12:33 pm
ಬಿಜೆಪಿ, ಜನಸೇನಾ ಅಭ್ಯರ್ಥಿಗಳ ಪರ ಚಿರಂಜೀವಿ ಚುನಾವಣಾ ಪ್ರಚಾರ; ವಿಡಿಯೋ ವೈರಲ್
ಬಿಜೆಪಿ ಹಾಗೂ ಜನಸೇನಾ ಪಕ್ಷದ ಅಭ್ಯರ್ಥಿಗಳ ಪರ ‘ಮೆಗಾ ಸ್ಟಾರ್’ ಚಿರಂಜೀವಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈ ವರ್ಷ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿತ್ತು. ಈಗ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಚಿರಂಜೀವಿ ಅವರು ಈ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂಬ ಟೀಕೆ ಕೆಲವರಿಂದ ವ್ಯಕ್ತವಾಗಿದೆ.
- Madan Kumar
- Updated on: Apr 22, 2024
- 3:45 pm
Assembly Election 2024: ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ಚುನಾವಣಾ ಆಯೋಗವು ಇಂದು(ಶನಿವಾರ) ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಈ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕ ಘೋಷಿಸಿದ್ದು, ಯಾವೆಲ್ಲ ರಾಜ್ಯಗಳಲ್ಲಿ ಯಾವಾಗ ಚುನಾವಣೆ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.
- Rashmi Kallakatta
- Updated on: Mar 16, 2024
- 5:08 pm