Assembly Elections
ಸಾರ್ವತ್ರಿಕ ಚುನಾವಣೆ ಎಂದು ಕರೆಯಲ್ಪಡುವ ವಿಧಾನಸಭಾ ಚುನಾವಣೆಗಳು ಭಾರತದಲ್ಲಿ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಆಗಿದೆ. ಆಯಾ ರಾಜ್ಯದ ವಿಧಾನಸಭೆ ಚುನಾವಣೆಗಳು ಐದು ವರ್ಷಕ್ಕೊಮ್ಮೆ ನಡೆಯುತ್ತವೆ. ವಿಶೇಷ ಸಮದರ್ಭಗಳಲ್ಲಿ ಮಾತ್ರಾ ಅದಕ್ಕೂ ಮುಂಚೆ ನೆಡಯಬಹುದು. ಆಯಾ ರಾಜ್ಯಗಳಲ್ಲಿ ಇಂತಿಷ್ಟು ವಿಧಾನಸಭಾ ಕ್ಷೇತ್ರಗಳಿದ್ದು, ಆಯಾ ಕ್ಷೇತ್ರಗಳಲ್ಲಿ ಜನರಿಂದ ಆಯ್ಕೆಯಾದವರನ್ನು ವಿಧಾನಸಭೆ ಶಾಸಕರು ಎಂದು ಕರೆಯಲಾಗುತ್ತದೆ. ವಿಧಾನಸಭೆ ಚುನಾವಣೆಯನ್ನು ರಾಜ್ಯ ಚುನಾವಣೆ ಆಯೋಗವು ನಡೆಸುತ್ತದೆ. ಹಾಗಂತ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ಇರುವುದಿಲ್ಲ ಅಂತ ಅರ್ಥ ಅಲ್ಲ. ಕೇಂದ್ರ ಚುನಾವಣೆಗೂ ರಾಜ್ಯ ಚುನಾವಣೆ ಆಯೋಗ ಮಾಹಿತಿ ನೀಡುತ್ತೆ. ಅದರ ಸಲಹೆ ಸೂಚನೆಗಳ ಮೇರೆಗೆ ರಾಜ್ಯ ಚುನಾವಣೆ ಆಯೋಗವು ಆಯಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಸುತ್ತೆ.
ಕೇಂದ್ರದಲ್ಲಿ ಲೋಕಸಭೆ ಕೆಳಮನೆಯಾದರೆ, ರಾಜ್ಯಸಭೆ ಮೇಲ್ಮನೆಯಾಗಿರುತ್ತದೆ. ಅಂತೆಯೇ ರಾಜ್ಯಗಳಲ್ಲಿ ವಿಧಾನಸಭೆ ಕೆಳಮನೆಯಾಗಿದ್ದು, ವಿಧಾನ ಪರಿಷತ್ತು ಮೇಲ್ಮನೆಯಾಗಿರುತ್ತದೆ. ವಿಧಾನ ಪರಿಷತ್ತು ಎಲ್ಲ ರಾಜ್ಯಗಳಲ್ಲೂ ಕಡ್ಡಾಯವಲ್ಲ. ಸದ್ಯಕ್ಕೆ ಭಾರತದ 7 ರಾಜ್ಯಗಳು ವಿಧಾನ ಪರಿಷತ್ತು ಹೊಂದಿವೆ. ರಾಜ್ಯದ ಸ್ಥಾನ ಮಾನವಿಲ್ಲದ ಎರಡು ಕೇಂದ್ರಾಡಳಿತ ಪ್ರದೇಶಗಳು ವಿಧಾನಸಭೆಯನ್ನು ಹೊಂದಿವೆ. ಅವುಗಳೆಂದರೆ ದೆಹಲಿ ಮತ್ತು ಪುದುಚೇರಿ.
ವಿಧಾನಸಭೆಯ ಸದಸ್ಯರು ವಿಧಾನಸಭೆಯ ವ್ಯಾಪ್ತಿಯ ಒಂದು ಕ್ಷೇತ್ರದ ಹದಿನೆಂಟು ವಯಸ್ಸು ಮೀರಿದ ಮತದಾರರಿಂದ ನೇರವಾಗಿ ಆಯ್ಕೆಯಾಗಿರುತ್ತಾರೆ. ವಿಧಾನಸಭೆಯ ಸದಸ್ಯರ ಬಲವನ್ನು ಭಾರತದ ಸಂವಿಧಾನ 60ಕ್ಕೆ ಕಡಿಮೆ ಹಾಗು 500ಕ್ಕೆ ಹೆಚ್ಚು ಇರಬಾರದು ಎಂದು ನಮೂದಿಸಿದೆ. ಆದಾಗ್ಯೂ ಕೆಲ ಚಿಕ್ಕ ರಾಜ್ಯಗಳ ವಿಚಾರದಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕೆ ಕಡಿಮೆಯಿದೆ. ಗೋವಾ, ಸಿಕ್ಕಿಂ, ಮಿಝೋರಾಂ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚ್ಚೇರಿಯಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕಿಂತಲೂ ಕಡಿಮೆಯಿದ್ದು ಆ ರಾಜ್ಯಗಳಿಗೆ ವಿಧಾನಸಭಾ ಸದಸ್ಯರ ಸಂಖ್ಯಾ ಬಲದ ವಿಚಾರದಲ್ಲಿ ಸಡಿಲಿಕೆ ಕೊಡಲಾಗಿದೆ.
ಉಚಿತ ಎಲ್ಪಿಜಿ, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ
ಬಿಜೆಪಿ ಇಂದು (ಮಂಗಳವಾರ) ತಮಿಳುನಾಡಿನಲ್ಲಿ ಮುಂಬರುವ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮಹಿಳೆಯರಿಗೆ ರೂ.2,000, ವಾರ್ಷಿಕವಾಗಿ 3 ಎಲ್ಪಿಜಿ ಸಿಲಿಂಡರ್ಗಳನ್ನು ನೀಡುವುದಾಗಿ ಬಿಜೆಪಿಯ ತಮಿಳುನಾಡಿನಲ್ಲಿ ಭರವಸೆ ನೀಡಿದೆ. ಈ ದಾಖಲೆಯನ್ನು ಹಿರಿಯ ಬಿಜೆಪಿ ನಾಯಕ ಜೆ.ಪಿ. ನಡ್ಡಾ ಚೆನ್ನೈನಲ್ಲಿ ಬಿಡುಗಡೆ ಮಾಡಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಬಿಜೆಪಿ ನಾಯಕರಾದ ಕೆ. ಅಣ್ಣಾಮಲೈ ಮತ್ತು ತಮಿಳಿಸೈ ಸೌಂದರರಾಜನ್ ಸೇರಿದಂತೆ ಬಿಜೆಪಿಯ ಇತರ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
- Sushma Chakre
- Updated on: Apr 14, 2026
- 3:37 pm
ದಾವಣಗೆರೆ ದಂಗಲ್, ಕಾಂಗ್ರೆಸ್ ಕಂಗಾಲು: ‘ಕೈ’ಕೊಡ್ತಾ ಉಪಚುನಾವಣೆ ರಿಸಲ್ಟ್?
ದಾವಣಗೆರೆ ದಕ್ಷಿಣದ ಉಪಚುನಾವಣೆಯ ಬೇಗುದಿ ಈಗ ಕಾಂಗ್ರೆಸ್ನಲ್ಲಿ ಕಿಚ್ಚು ಹಚ್ಚಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ನಸೀರ್ ಅಹ್ಮದ್ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಈ ಎಲ್ಲ ಬೆಳವಣಿಗೆಗಳು ದಾವಣಗೆರೆಯಲ್ಲಿ ಕಾಂಗ್ರೆಸ್ಗೆ ಫಲಿತಾಂಶ ‘ಕೈ’ಕೊಡುತ್ತಾ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.
- Ganapathi Sharma
- Updated on: Apr 14, 2026
- 1:59 pm
ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ, ಯುವ ವಿರೋಧಿ ಪಕ್ಷ: ಟಿಎಂಸಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ, ಯುವ ವಿರೋಧಿ ಪಕ್ಷ ಎಂದು ಕರೆದಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ ಭಾಗದ ಸಿಲಿಗುರಿಯ ಕವಾಖಾಲಿ ಮೈದಾನದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಟಿಎಂಸಿ ತನ್ನ 15 ವರ್ಷಗಳ ಅವಧಿಯಲ್ಲಿ ಪಶ್ಚಿಮ ಬಂಗಾಳವನ್ನು ನಾಶಮಾಡಿದೆ ಎಂದು ಪ್ರತಿಪಾದಿಸಿದರು ಮತ್ತು ಮದರಸಾಗಳಿಗೆ 6,000 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದಕ್ಕಾಗಿ ಪಕ್ಷವನ್ನು ಟೀಕಿಸಿದರು.
- Nayana Rajeev
- Updated on: Apr 12, 2026
- 3:16 pm
ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ದಿನಗಣನೆ ಶುರುವಾಗಿದೆ. ಚುನಾವಣಾ ರ್ಯಾಲಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವ್ಲಾಗರ್ ಆಗಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಹೊಸ ಪ್ರಯೋಗ ನಡೆಸಿದ್ದಾರೆ. ಇದೇ ಮೊದಲ ಬಾರಿಗೆ ತಾವೇ ಕ್ಯಾಮೆರಾದ ಎದುರು ನಿಂತು ಪ್ರಧಾನಿ ಮೋದಿ ತಮ್ಮ ಹಿಂದೆ ಸೇರಿದ್ದ ಜನಸಾಗರವನ್ನು ಪರಿಚಯಿಸುವ ಮೂಲಕ ಪಶ್ಚಿಮ ಬಂಗಾಳದ ಚುನಾವಣಾ ಅಖಾಡದ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
- Sushma Chakre
- Updated on: Apr 11, 2026
- 8:20 pm
ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ; ಜನರಿಂದ ಜೈ ಶ್ರೀರಾಮ್ ಘೋಷಣೆ
ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಇದಕ್ಕೂ ಮೊದಲು ಅವರು ರೋಡ್ ಶೋ ನಡೆಸಿದರು. ಪ್ರಧಾನ ಮಂತ್ರಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸಿಲಿಗುರಿಯ ಬೀದಿಗಳು ತುಂಬಿ ತುಳುಕುತ್ತಿದ್ದವು. ಅಲ್ಲಿ ಸೇರಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ, ಕೇಸರಿ ಬಾವುಟಗಳನ್ನು ಹಾರಿಸುತ್ತಾ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು.
- Sushma Chakre
- Updated on: Apr 11, 2026
- 7:24 pm
ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ
ಟಿಎಂಸಿಯ ಲೂಟಿ, ಸುಳ್ಳಿನ ರಾಜಕೀಯ ಹಾಗೂ ಅದರ ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭರವಸೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಪಕ್ಷಗಳ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ.
- Sushma Chakre
- Updated on: Apr 11, 2026
- 5:17 pm
ಇವಿಎಂನಲ್ಲಿ ಭದ್ರವಾಯ್ತು ಮಿನಿ ಕದನದ ಅಭ್ಯರ್ಥಿಗಳ ಭವಿಷ್ಯ! ದಾವಣಗೆರೆ ದಕ್ಷಿಣದಲ್ಲಿ ಗೆಲ್ಲೋದ್ಯಾರು? ಬಾಗಲ‘ಕೋಟೆ’ ಯಾರಿಗೆ?
Karnataka By Election: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಸರಾಸರಿ ಶೇ 68ರಷ್ಟು ಮತದಾನ ದಾಖಲಾಗಿದೆ. ಹಣ ಮತ್ತು ಕೋಳಿ ಹಂಚಿಕೆಯಂತಹ ಗಂಭೀರ ಆರೋಪಗಳ ನಡುವೆ ಅಭ್ಯರ್ಥಿಗಳ ಭವಿಷ್ಯ ಈಗ ಇವಿಎಂ ಸೇರಿದ್ದು, ಮೇ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
- Ravi H Mooki
- Updated on: Apr 10, 2026
- 6:59 am
ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯ
ಚುನಾವಣಾ ಆಯೋಗದ ಬಿಗಿ ಭದ್ರತೆ ಮತ್ತು ವಿವರವಾದ ವ್ಯವಸ್ಥೆಗಳ ನಡುವೆ ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳ ಮತದಾನ ಇಂದು ಒಂದೇ ಹಂತದಲ್ಲಿ ಮುಕ್ತಾಯವಾಗಿದೆ. ಇಂದು ಸಂಜೆ 5 ಗಂಟೆಯ ವೇಳೆಗೆ ಅಸ್ಸಾಂ ಶೇ. 84.42ರಷ್ಟು ಮತದಾನವನ್ನು ದಾಖಲಿಸಿದೆ. ಪುದುಚೇರಿ ಮತ್ತು ಕೇರಳದಲ್ಲಿಯೂ ಚುನಾವಣೆ ಇಂದೇ ಮುಕ್ತಾಯವಾಗಿದೆ. ಯಾವ ರಾಜ್ಯದಲ್ಲಿ ಎಷ್ಟು ಪ್ರಮಾಣದ ಮತದಾನವಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
- Sushma Chakre
- Updated on: Apr 9, 2026
- 9:59 pm
ತಮಿಳುನಾಡಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಟಿವಿಕೆ ಜೊತೆ ಇಲ್ಲ ಎನ್ನುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಟಿವಿಕೆಯನ್ನು ಬೆಂಬಲಿಸುತ್ತಿದ್ದಾರೆ ಎಂಬ ನಟ ವಿಜಯ್ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಬಗ್ಗೆ ಮಾತನಾಡಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ವಿಜಯ್ ಒಬ್ಬ ಅಪ್ರಬುದ್ಧ ರಾಜಕಾರಣಿ. ಅವರ ಜೊತೆ ಆ ಟಿಎಂಸಿ ಇರಬಹುದು, ಆದರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅವರ ಜೊತೆ ಇಲ್ಲ. ನಾವು ಡಿಎಂಕೆ ಜೊತೆಗಿದ್ದೇವೆ ಎಂದಿದ್ದಾರೆ.
- Sushma Chakre
- Updated on: Apr 9, 2026
- 7:42 pm
ಬಾರಾಮತಿ ಉಪಚುನಾವಣೆಯಲ್ಲಿ ಅಚ್ಚರಿಯ ಬೆಳವಣಿಗೆ; ಸುನೇತ್ರಾ ಪವಾರ್ ಅವಿರೋಧ ಆಯ್ಕೆ
ಬಾರಾಮತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸುನೇತ್ರಾ ಪವಾರ್ ವಿರುದ್ಧದ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಈ ವರ್ಷದ ಆರಂಭದಲ್ಲಿ ವಿಮಾನ ಅಪಘಾತದಲ್ಲಿ ನಿಧನರಾದ ಮಾಜಿ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರ ಗೌರವಾರ್ಥವಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಇದರಿಂದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ಬಾರಾಮತಿ ಉಪಚುನಾವಣೆಯಲ್ಲಿ ಅವಿರೋಧವಾಗಿ ಗೆಲ್ಲಲಿದ್ದಾರೆ.
- Sushma Chakre
- Updated on: Apr 9, 2026
- 4:31 pm
Video: ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ 6 ಭರವಸೆಗಳ ಕೊಟ್ಟ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ 6 ಭರವಸೆಗಳನ್ನು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಭ್ರಷ್ಟರನ್ನು ಜೈಲಿಗೆ ಕಳುಹಿಸಲಾಗುತ್ತದೆ ಮತ್ತು ಎಲ್ಲಾ ಹಳೆಯ ಹಗರಣದ ಕಡತಗಳನ್ನು ಮತ್ತೆ ತೆರೆಯಲಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಟಿಎಂಸಿ ಹರಡಿರುವ ಭಯ ಮತ್ತು ಭಯೋತ್ಪಾದನೆಯನ್ನು ಬಿಜೆಪಿ ಕೊನೆಗೊಳಿಸುತ್ತದೆ ಮತ್ತು ರಾಜ್ಯದಲ್ಲಿ ಕಾನೂನಿನ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುತ್ತದೆ.
- Nayana Rajeev
- Updated on: Apr 9, 2026
- 2:23 pm
ಬಾಗಲಕೋಟೆ ಬೈ ಎಲೆಕ್ಷನ್: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್?; ವಿಡಿಯೋ ವೈರಲ್
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮತದಾರರಿಗೆ 500 ರೂ. ಹಂಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತ ವಿಡಿಯೋವೊಂದು ವೈರಲ್ ಆಗಿದ್ದು, ನವನಗರದ ವಾಂಬೆ ಕಾಲೋನಿಯಲ್ಲಿ ಮತದಾರರಿಗೆ ಆಮಿಷ ಒಡ್ಡಲಾಗಿರುವ ದೃಶ್ಯ ಇದು ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕಾಂಗ್ರೆಸಿಗರು ಕೋಟ್ಯಾಂತರ ರೂಪಾಯಿ ಹಂಚಿದ್ದಾರೆ ಎಂದು ಆರೋಪಿಸಿದ್ದ ಬೆನ್ನಲ್ಲೇ ಘಟನೆ ನಡೆದಿದೆ.
- Ravi H Mooki
- Updated on: Apr 9, 2026
- 1:06 pm