Assembly Session
ಕರ್ನಾಟಕದಲ್ಲಿ ಪ್ರತಿ ವರ್ಷ ಸಾಮಾನ್ಯವಾಗಿ ಮೂರು ಬಾರಿ ವಿಧಾನ ಮಂಡಲ ಅಧಿವೇಶನ ನಡೆಯುತ್ತದೆ. ಕೆಲವೊಂದು ಬಾರಿ ವಿಶೇಷ ಸಂದರ್ಭಗಳಲ್ಲಿ ವಿಶೇಷ ಅಧಿವೇಶನ ನಡೆಸಲಾಗುತ್ತದೆ. ಬಜೆಟ್ ಅಧಿವೇಶನ, ಮುಂಗಾರು ಮತ್ತು ಚಳಿಗಾಲದ ಅಧಿವೇಶನ ಮುಖ್ಯವಾಗಿ ಪ್ರತಿ ವರ್ಷ ನಡೆಯುವಂಥವು. ಬಜೆಟ್ ಅಧಿವೇಶನ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆಯುತ್ತದೆ. ಇನ್ನು, ಚಳಿಗಾಲದ ಅಧಿವೇಶನ ಹೆಚ್ಚಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತದೆ. ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳು ಮತ್ತು ಆಡಳಿತದಲ್ಲಿ ತರಬೇಕಾದ ಸುಧಾರಣೆಗಳ ಬಗ್ಗೆ ಚರ್ಚೆಯಾಗುತ್ತದೆ. ಮಸೂದೆಗಳ ಮಂಡನೆ, ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುತ್ತದೆ. ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ಆಯವ್ಯಯವನ್ನು ಮಂಡಿಸಲಾಗುತ್ತದೆ. ಬಜೆಟ್ನಲ್ಲಿ ಹೊಸ ಹೊಸ ಯೋಜನೆಗಳನ್ನು ಘೋಷಿಸಲಾಗುತ್ತದೆ. ಮತ್ತು ಇಲಾಖೆಗಳಿಗೆ ಹಣ ನೀಡಲಾಗುತ್ತದೆ. ಕರ್ನಾಟಕ ವಿಧಾನಸಭೆ 224 ಶಾಸಕರ ಬಲ ಹೊಂದಿದೆ. ಕರ್ನಾಟಕ ವಿಧಾನ ಪರಿಷತ್ತು 75 ಸದಸ್ಯರ ಖಾಯಂ ಸಂಸ್ಥೆಯಾಗಿದೆ. ಅವರಲ್ಲಿ 64 ಮಂದಿಯನ್ನು ಚುನಾಯಿತರಾಗಿ ಆಯ್ಕೆ ಮಾಡಲಾಗುತ್ತದೆ. 11 ಮಂದಿಯನ್ನು ರಾಜ್ಯಪಾಲರು ನೇಮಿಸುತ್ತಾರೆ.
ಇನ್ನೂ ಹೆಚ್ಚು ಓದಿಕಸ್ತೂರಿ ರಂಗನ್ ವರದಿ ವಿರುದ್ಧ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ, ಇದಕ್ಕಾಗಿಯೇ 1 ದಿನ ವಿಶೇಷ ಅಧಿವೇಶನ
ಪಶ್ಚಿಮ ಘಟ್ಟಗಳ ರಕ್ಷಣೆಗೆ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಳೆದ ವಾರ ನಡೆದ ವಿಧಾನಸಭೆ ಅಧಿವೇಶನದಲ್ಲೂ ಕೇಂದ್ರದ ಏಳನೇ ಕರಡು ಅಧಿಸೂಚನೆ ವಿರೋಧಿಸಲಾಗಿದೆ. ಈ ಕುರಿತು ಕಾನೂನು ಹೋರಾಲು ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿ ನಡೆಸಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಬೇರೆ ವಿಷಯಗಳ ಬಗ್ಗೆಯೂ ಮಾತನಾಡಿದ್ದು, ಅದು ಈ ಕೆಳಗಿನಂತಿದೆ.
- Anil Kalkere
- Updated on: Aug 26, 2026
- 10:25 pm
ಕರ್ನಾಟಕದಲ್ಲಿ RSS ವಿರುದ್ಧ ಯಾವುದೇ ಕೇಸ್ ಇಲ್ಲ: ಗೃಹ ಸಚಿವ ಖರ್ಗೆ ಸ್ಪಷ್ಟನೆ
ಆರ್ ಎಸ್ ಎಸ್ ಸಂಘಟನೆಯ ನೋಂದಣಿ ಹಾಗೂ ಕಾನೂನು ಮಾನ್ಯತೆಯ ಕುರಿತಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರಂತರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದಾರೆ. ಈ ಹಿಂದೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿದ್ದಾಗಲೂ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಇದೀಗ ರಾಜ್ಯದ ಗೃಹ ಸಚಿವರಾಗಿದ್ದು, ಸಂಘದ ನೋಂದಣಿ ವಿಚಾರವಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಸದ್ಯ ಇದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುಚರ್ಚಿತ ವಿಚಾರವಾಗಿದೆ. ಇದರ ಮಧ್ಯೆ ಕರ್ನಾಟಕದಲ್ಲಿ ಆರ್ಎಸ್ಎಸ್ ವಿರುದ್ಧದ ಒಂದೇ ಒಂದು ಕೇಸು ಇಲ್ಲ ಎನ್ನುವುದು ಬಹಿರಂಗವಾಗಿದೆ.
- Ramesh B Jawalagera
- Updated on: Aug 25, 2026
- 8:14 pm
ಪಾರ್ಕ್ಗಳ ಶೇ.5ರಷ್ಟು ಭೂಮಿ ಪರಭಾರೆಗೆ ಅವಕಾಶ ಮಾಡಿಕೊಡುವ ವಿಧೇಯಕ ಅಂಗೀಕಾರ: ಮರುಪರಿಶೀಲನೆಗೆ ಸೂಚಿಸುವಂತೆ ರಾಜ್ಯಪಾಲರಿಗೆ ಸೂರ್ಯ ಪತ್ರ
ವಿಧಾನಮಂಡಲದಲ್ಲಿ ಕರ್ನಾಟಕ ಉದ್ಯಾನವನಗಳ (ತಿದ್ದುಪಡಿ) ವಿಧೇಯಕ ಅಂಗೀಕಾರಗೊಂಡಿದ್ದು, ಉದ್ಯಾನವನಗಳ ಶೇ. 5ರಷ್ಟು ಭೂಮಿಯನ್ನು ಇತರ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸಿದೆ. ಆದರೆ ಸಂಸದ ತೇಜಸ್ವಿ ಸೂರ್ಯ ರಾಜ್ಯಪಾಲರಿಗೆ ಪತ್ರ ಬರೆದು ವಿಧೇಯಕವನ್ನು ಮರುಪರಿಶೀಲಿಸುವಂತೆ ಕೋರಿದ್ದಾರೆ. ಹಸಿರು ಪ್ರದೇಶಗಳ ರಕ್ಷಣೆ ನಮ್ಮ ಹೋರಾಟವಾಗಿದೆ.
- Kiran Haniyadka
- Updated on: Aug 24, 2026
- 10:53 pm
ಮೂರು ದಿನ ಮೊದಲೇ ವಿಧಾನಮಂಡಲ ಅಧಿವೇಶನಕ್ಕೆ ತೆರೆ: ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆ ನಡುವೆಯೇ, ಕರ್ನಾಟಕ ವಿಧಾನಮಂಡಲದ ಮಳೆಗಾಲದ ಅಧಿವೇಶನವನ್ನು ನಿಗದಿತ ಸಮಯಕ್ಕಿಂತ 3 ದಿನ ಮುಂಚಿತವಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದು, 20-30 ವರ್ಷಗಳಲ್ಲಿ ಮೊದಲ ಬಾರಿ ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ ಎಂದಿದ್ದಾರೆ.
- Kiran Haniyadka
- Updated on: Aug 24, 2026
- 7:22 pm
ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ಆರೋಪ: ವಿಧಾನಸಭೆ ಸ್ಪೀಕರ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ
ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ವಿಪಕ್ಷ ನಾಯಕರು ಹಾಗೂ ಶಾಸಕರ ಹೇಳಿಕೆ, ವೀಡಿಯೋಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡದೆ ವಾರ್ತಾ ಇಲಾಖೆ ತಾರತಮ್ಯ ಮಾಡುತ್ತಿದೆ ಎಂದು ಆರ್. ಅಶೋಕ್ ಆರೋಪಿಸಿದ್ದು, ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಸ್ಪೀಕರ್ಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ವಾರ್ತಾ ಇಲಾಖೆಗೆ ನಿರ್ದೇಶನ ನೀಡಿ ಎಂದವರು ಆಗ್ರಹಿಸಿದ್ದಾರೆ.
- Kiran HV
- Updated on: Aug 24, 2026
- 1:01 pm
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸಂಗ್ರಾಮ: 3 ದಿಕ್ಕಿನಲ್ಲೂ ವಿಧಾನಸೌಧ ಮುತ್ತಿಗೆಗೆ ಪ್ಲಾನ್
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ನಡೆಯುತ್ತಿರುವ ಈ ಹೋರಾಟ ನಿರ್ಣಾಯಕ ಹಂತ ತಲುಪಿದೆ. ಇಂದು ಫ್ರೀಡಂ ಪಾರ್ಕ್ನಿಂದ ವಿಧಾನಸೌಧಕ್ಕೆ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಬಿಜೆಪಿ ಯೋಜಿಸಿದೆ. ಈ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿದೆ.
- Ganapathi Sharma
- Updated on: Aug 24, 2026
- 9:11 am
TV9 Kannada News Highlights: ಇ-ಕಾಮರ್ಸ್ನಲ್ಲಿ ದತ್ತೂರಿ ಹಣ್ಣು ಮಾರಾಟಕ್ಕೆ ಬ್ರೇಕ್; ಈ ಹೊತ್ತಿನ ಪ್ರಮುಖ ಸುದ್ದಿಗಳು
Karnataka News Today Highlights Updates: ಮಾಜಿ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿದರು. ಇನ್ನು ದೆಹಲಿಯಲ್ಲಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತವಾಗಿದೆ. ಇತ್ತ ದೊಡ್ಡಬಳ್ಳಾಪುರದಲ್ಲಿ ಪಾಕ್ ಗ್ಯಾಂಗ್ಸ್ಟರ್ನೊಂದಿಗೆ ನಂಟು ಹೊಂದಿದ್ದ ಮೆಕ್ಯಾನಿಕ್ನನ್ನು ಪೊಲೀಸರು ಬಂಧಿಸಿದ್ದಾರೆ.
- Bhavana Hegde
- Updated on: Aug 24, 2026
- 11:06 pm
ವಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನ ಸಭೆಯಲ್ಲಿ ಅಪಾರ್ಟ್ಮೆಂಟ್ ವಿಧೇಯಕ-2026 ಅಂಗೀಕಾರ
Apartment Bill 2026: ಅಪಾರ್ಟ್ಮೆಂಟ್ಗಳ ಆಡಳಿತಕ್ಕೆ ಸಂಬಂಧಿಸಿ ನಿರ್ದಿಷ್ಟ ಕಾರ್ಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬುಧಾವರ ವಿಧಾನ ಸಭೆಯಲ್ಲಿ ಮಂಡಿಸಿದ್ದ ಅಪಾರ್ಟ್ಮೆಂಟ್(ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ-2026 ಇಂದು ಅಂಗೀಕಾರಗೊಂಡಿದೆ. ಅಪಾರ್ಟ್ಮೆಂಟ್ ಸಂಘಗಳ ನೋಂದಣಿ ಕಡ್ಡಾಯದ ಜೊತೆಗೆ ಹಲವು ಪ್ರಮುಖ ವಿಚಾರಗಳನ್ನು ವಿಧೇಯಕ ಒಳಗೊಂಡಿದೆ.
- Sunil MH
- Updated on: Aug 21, 2026
- 3:54 pm
ರಾಜ್ಯದಲ್ಲಿ 911 ಅಕ್ರಮ ನುಸುಳುಕೋರರ ಪತ್ತೆ: ಪರಿಷತ್ನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
ವಿಧಾನಮಂಡಲ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. 911 ಅಕ್ರಮ ನುಸುಳುಕೋರರ ಪತ್ತೆ, ಅದರಲ್ಲಿ 868 ಬಾಂಗ್ಲಾದೇಶಿಯರು ಸೇರಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು. ಪಿಯು ಅತಿಥಿ ಉಪನ್ಯಾಸಕರ 14,000 ಕನಿಷ್ಠ ವೇತನ ಹೆಚ್ಚಳಕ್ಕೆ ನಯನಾ ಮೋಟಮ್ಮ ಆಗ್ರಹಿಸಿದರು. ಪದ್ಮ ಪ್ರಶಸ್ತಿ ವಿಜೇತರಿಗೆ ಮಾಸಿಕ ಪಿಂಚಣಿ ನೀಡುವಂತೆ ಬಿ.ಬಿ. ಚಿಮ್ಮನಕಟ್ಟಿ ಒತ್ತಾಯಿಸಿದರು.
- Akshay Pallamajalu
- Updated on: Aug 21, 2026
- 11:44 am
TV9 Kannada News Live: ಸನ್ನಡತೆ ಆಧಾರದ ಮೇಲೆ 28 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಪುಟ ಅಸ್ತು
Karnataka News Today Live Updates: ಓಣಂ ಹಬ್ಬಕ್ಕಾಗಿ ಬೆಂಗಳೂರಿನಿಂದ ತಿರುವನಂತಪುರಂಗೆ ವಿಶೇಷ ರೈಲು ಸಂಚಾರ, ಕೆ.ಆರ್. ಮಾರ್ಕೆಟ್ನಲ್ಲಿ ವರಮಹಾಲಕ್ಷ್ಮಿ ಹಬ್ಬದ ಖರೀದಿ ಭರಾಟೆ ಮತ್ತು ಸಂಚಾರ ನಿಯಂತ್ರಣ ಕ್ರಮಗಳು ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಹೌಸ್ಫುಲ್ ಟಿಕೆಟ್ ಬುಕಿಂಗ್ ಹವಾ ಸೇರಿದಂತೆ ಕರ್ನಾಟಕ ಹಾಗೂ ಬೆಂಗಳೂರಿನ ಪ್ರಮುಖ ಲೈವ್ ಅಪ್ಡೇಟ್ಗಳು ಇಲ್ಲಿವೆ.
- Bhavana Hegde
- Updated on: Aug 21, 2026
- 10:52 pm
ಇನ್ಮುಂದೆ ಖಾಸಗಿ ರಸ್ತೆಗಳು ಸಾರ್ವಜನಿಕ ಆಸ್ತಿ! ವಿಪಕ್ಷಗಳ ವಿರೋಧದ ನಡುವೆಯೂ ಮಹತ್ವದ ಮಸೂದೆಗೆ ವಿಧಾನಸಭೆ ಅನುಮೋದನೆ
ರಾಜ್ಯ ಸರ್ಕಾರ ಹೊಸದೊಂದು ಕಾನೂನು ತರುತ್ತಿದೆ. ಇದರ ಅನ್ವಯ ಪಟ್ಟಣ ಪ್ರದೇಶದಲ್ಲಿ ಖಾಸಗಿ ರಸ್ತೆಯೂ ಸರ್ಕಾರದ್ದೇ ಎಂದೇ ಪರಿಗಣಿಸಲಾಗುತ್ತದೆ. ಆದರೆ, ವಿಪಕ್ಷಗಳು ಇದನ್ನು ವಿರೋಧಿಸುತ್ತಾ ಇವೆ. ಇದೆಲ್ಲದರ ನಡುವೆ ಮಸೂದೆಗೆ ವಿಧಾನಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಅಷ್ಟಕ್ಕೂ ವಿಪಕ್ಷಗಳ ವಿರೋಧ ಏಕೆ? ಇಲ್ಲಿದೆ ಮಾಹಿತಿ.
- Kiran Haniyadka
- Updated on: Aug 21, 2026
- 9:04 am
ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
Karnataka Assembly: ವಿಧಾನಸಭೆಯಲ್ಲಿ ಬರಪೀಡಿತ ತಾಲೂಕುಗಳ ಚರ್ಚೆ ವೇಳೆ ಬಿಜೆಪಿ ಅಡ್ಡಿಪಡಿಸಿದ್ದರಿಂದ ಸಚಿವ ಶಿವಲಿಂಗೇಗೌಡ ಆಕ್ಷೇಪಾರ್ಹ ಪದಗಳನ್ನು ಬಳಸಿದ ಪ್ರಸಂಗ ನಡೆದಿದೆ. ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ವಿಪಕ್ಷಗಳ ಪ್ರತಿಭಟನೆ ಸಂಬಂಧ ತೀವ್ರ ವಾಗ್ದಾಳಿ ನಡೆಸಿದ ಶಿವಲಿಂಗೇಗೌಡರು, ಒಂದು ದಿನವಾದರೆ ಸರಿ. ವಾರಗಟ್ಟಲೆ ಸದನದಲ್ಲಿ ಪ್ರತಿಭಟನೆಯಾ ಎಂದು ತರಾಟೆಗೆ ಪಡೆದಿದ್ದಾರೆ.
- Prasanna Hegde
- Updated on: Aug 20, 2026
- 6:22 pm