Assembly Session
ಕರ್ನಾಟಕದಲ್ಲಿ ಪ್ರತಿ ವರ್ಷ ಸಾಮಾನ್ಯವಾಗಿ ಮೂರು ಬಾರಿ ವಿಧಾನ ಮಂಡಲ ಅಧಿವೇಶನ ನಡೆಯುತ್ತದೆ. ಕೆಲವೊಂದು ಬಾರಿ ವಿಶೇಷ ಸಂದರ್ಭಗಳಲ್ಲಿ ವಿಶೇಷ ಅಧಿವೇಶನ ನಡೆಸಲಾಗುತ್ತದೆ. ಬಜೆಟ್ ಅಧಿವೇಶನ, ಮುಂಗಾರು ಮತ್ತು ಚಳಿಗಾಲದ ಅಧಿವೇಶನ ಮುಖ್ಯವಾಗಿ ಪ್ರತಿ ವರ್ಷ ನಡೆಯುವಂಥವು. ಬಜೆಟ್ ಅಧಿವೇಶನ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆಯುತ್ತದೆ. ಇನ್ನು, ಚಳಿಗಾಲದ ಅಧಿವೇಶನ ಹೆಚ್ಚಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತದೆ. 2024ರ ಚಳಿಗಾಲದ ವಿಧಾನಮಂಡಲ ಅಧಿವೇಶನ ಡಿಸೆಂಬರ್ 9 ರಿಂದ ಆರಂಭವಾಗುತ್ತಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳು ಮತ್ತು ಆಡಳಿತದಲ್ಲಿ ತರಬೇಕಾದ ಸುಧಾರಣೆಗಳ ಬಗ್ಗೆ ಚರ್ಚೆಯಾಗುತ್ತದೆ. ಮಸೂದೆಗಳ ಮಂಡನೆ, ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುತ್ತದೆ. ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ಆಯವ್ಯಯವನ್ನು ಮಂಡಿಸಲಾಗುತ್ತದೆ. ಬಜೆಟ್ನಲ್ಲಿ ಹೊಸ ಹೊಸ ಯೋಜನೆಗಳನ್ನು ಘೋಷಿಸಲಾಗುತ್ತದೆ. ಮತ್ತು ಇಲಾಖೆಗಳಿಗೆ ಹಣ ನೀಡಲಾಗುತ್ತದೆ. ಕರ್ನಾಟಕ ವಿಧಾನಸಭೆ 224 ಶಾಸಕರ ಬಲ ಹೊಂದಿದೆ. ಕರ್ನಾಟಕ ವಿಧಾನ ಪರಿಷತ್ತು 75 ಸದಸ್ಯರ ಖಾಯಂ ಸಂಸ್ಥೆಯಾಗಿದೆ. ಅವರಲ್ಲಿ 64 ಮಂದಿಯನ್ನು ಚುನಾಯಿತರಾಗಿ ಆಯ್ಕೆ ಮಾಡಲಾಗುತ್ತದೆ. 11 ಮಂದಿಯನ್ನು ರಾಜ್ಯಪಾಲರು ನೇಮಿಸುತ್ತಾರೆ.
ದ್ವೇಷ ಭಾಷಣ ವಿಧೇಯಕ ರಿಜೆಕ್ಟ್ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ?
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ವಕೀಲ ಗಿರೀಶ್ ಭಾರದ್ವಾಜ್ ಮತ್ತು ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಪಾಲರಿಗೆ ಪತ್ರ ಬರೆದು, ವಿಧೇಯಕಕ್ಕೆ ಅಂಕಿತ ಹಾಕದಂತೆ ಮನವಿ ಮಾಡಿದ್ದಾರೆ. ಅಲ್ಲದೆ, ವಿಧೇಯಕವನ್ನು ತಿರಸ್ಕರಿಸಲು ಬಲವಾದ ಕಾರಣ (ಸಂವಿಧಾನದ ಸೆಕ್ಷನ್) ಒಂದನ್ನು ಅವರು ಉಲ್ಲೇಖಿಸಿದ್ದಾರೆ. ಅದ್ಯಾವುದು? ಇಲ್ಲಿದೆ ಮಾಹಿತಿ.
- Ganapathi Sharma
- Updated on: Dec 22, 2025
- 6:52 am
ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕ ಕುರಿತ ಚರ್ಚೆ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದರು. ಸದನದಲ್ಲಿ ಯತ್ನಾಳ್ ಮಾತಿನ ದಾಟಿಯ ವಿಡಿಯೋ ಇಲ್ಲಿದೆ.
- Ganapathi Sharma
- Updated on: Dec 19, 2025
- 12:53 pm
ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: 1 ಲೀಟರ್ ಹಾಲಿಗೆ ಪ್ರೋತ್ಸಾಧನ 7 ರೂ.ಗೆ ಏರಿಕೆ, ಸಿದ್ದರಾಮಯ್ಯ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಪ್ರತಿ ಲೀಟರ್ ಹಾಲಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರಸ್ತುತ 5 ರೂಪಾಯಿಯಿಂದ 7 ರೂಪಾಯಿಗೆ ಏರಿಕೆ ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದರು. ರೈತರಿಗೆ ನೆರವಾಗಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ತಮ್ಮ ಸರ್ಕಾರದ ಹಿಂದಿನ ಹಾಗೂ ಪ್ರಸ್ತುತ ಅವಧಿಯ ಪ್ರಣಾಳಿಕೆ ಭರವಸೆಗಳ ಈಡೇರಿಕೆಯ ಕುರಿತು ಸಹ ಅವರು ಮಾಹಿತಿ ನೀಡಿದರು.
- Kiran Haniyadka
- Updated on: Dec 19, 2025
- 12:09 pm
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯಲ್ಲಿ ಕರ್ನಾಟಕದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು,ದ್ವೇಷ ಭಾಷಣ ಮಸೂದೆ ಮತ್ತು ಎಸ್ಸಿ ಉಪ-ವರ್ಗೀಕರಣ ಮಸೂದೆ, ರೈತರ ಸಮಸ್ಯೆಗಳು, ಆಡಳಿತಾತ್ಮಕ ವೈಫಲ್ಯಗಳು, ಪ್ರವಾಹ ಪರಿಹಾರ, ಜೈಲು ಚಟುವಟಿಕೆಗಳು ಮತ್ತು ಡಿ.ಕೆ. ಶಿವಕುಮಾರ್ ವಿವಾದಗಳ ಕುರಿತು ವಿರೋಧ ಪಕ್ಷದ ಚರ್ಚೆ ನಡೆಯಲಿದೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.
- Bhavana Hegde
- Updated on: Dec 19, 2025
- 10:58 am
ಕಾಂಗ್ರೆಸ್ನಲ್ಲಿ ಮುಂದುವರಿದ ಡಿನ್ನರ್ ಮೀಟಿಂಗ್: ಅನಾರೋಗ್ಯದ ನಡುವೆಯೂ ಸಿಎಂ ಭಾಗಿ
ಕರ್ನಾಟಕ ಕಾಂಗ್ರೆಸ್ನಲ್ಲಿನ ಬಣ ರಾಜಕೀಯ ಬ್ರೇಕ್ ಫಾಸ್ಟ್ನಿಂದ ಡಿನ್ನರ್ ವರೆಗೂ ಬಂದು ನಿಂತಿದೆ. ಹೌದು.. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ಡಿನ್ನರ್ ಪಾಲಿಟಿಕ್ಸ್ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ 18) ಸಚಿವ ಸತೀಶ್ ಜಾರಕಿಹೊಳಿ ತಮ್ಮ ಬೆಳಗಾವಿ ನಿವಾಸದಲ್ಲಿ ಸಿಎಂ ಸೇರಿದಂತೆ ಇತರೆ ತಮ್ಮ ಬಣದ ನಾಯಕರಿಗೆ ಔತಣಕೂಟ ಏರ್ಪಡಿಸಲಾಗಿದೆ.
- Ramesh B Jawalagera
- Updated on: Dec 18, 2025
- 11:13 pm
ಕರಾವಳಿಗರು ಬೆಂಕಿ ಹಚ್ಚೋರು ಎಂದ ಸಚಿವ ಭೈರತಿ ಸುರೇಶ್ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ಸದಸ್ಯರ ತೀವ್ರ ವಿರೋಧ ಮತ್ತು ಪ್ರತಿಭಟನೆ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಇಂದು ಅಂಗೀಕಾರಗೊಂಡಿತು. ಇದರ ನಡುವೆ ಸಚಿವ ಭೈರತಿ ಸುರೇಶ್ 'ನೀವು ಕರಾವಳಿಯವರು ಬೆಂಕಿ ಹಚ್ಚುವವರು' ಎಂಬ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದು, ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ.
- Ramesh B Jawalagera
- Updated on: Dec 18, 2025
- 10:29 pm
ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್: ವಿಧಾನ ಪರಿಷತ್ನಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ
ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಗೃಹ ಸಚಿವರೇ ಈ ಮಾಹಿತಿಯನ್ನು ದೃಢಪಡಿಸಿದ್ದು, ಕೆಲ ಪೊಲೀಸರ ನಡೆ ಸಾರ್ವಜನಿಕರು ಅವರ ಮೇಲಿಟ್ಟಿದ್ದ ವಿಶ್ವಾಸಕ್ಕೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ. ರಕ್ಷಕರೇ ಭಕ್ಷಕರಾದರೆ ಹೇಗೆ ಎಂಬ ಪ್ರಶ್ನೆಯೂ ಉದ್ಭವಿಸಿದೆ.
- Harish GR
- Updated on: Dec 18, 2025
- 12:29 pm
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಇಡೀ ರಾತ್ರಿ ಕೋಲಾರ ತಾಲೂಕು ಕಚೇರಿ ಕಾವಲಿಗೆ ಕುಳಿತ BJP ಕಾರ್ಯಕರ್ತರು!
ಬಿಜೆಪಿ ಶಾಸಕ ಛಲವಾದಿ ನಾರಾಯಣಸ್ವಾಮಿ ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಜಮಾಯಿಸಿ ದಾಖಲೆಗಳನ್ನು ರಕ್ಷಿಸುವ ಉದ್ದೇಶದಿಂದ ಇಡೀ ರಾತ್ರಿ ಕಾವಲು ಕಾದಿದ್ದಾರೆ.
- Rajendra Simha BL
- Updated on: Dec 18, 2025
- 9:52 am
ಸುಧಾಮೂರ್ತಿ, ಸುಧಾಕರ್ ಸೇರಿ ಇತರ ಜನಪ್ರತಿನಿಧಿಗಳನ್ನು ಜಿಬಿಎ ಸದಸ್ಯರ ಪಟ್ಟಿಗೆ ಸೇರಿಸುವ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಎರಡನೇ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ ನೀಡಿದ್ದು, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ ಸೇರಿದಂತೆ ಜಿಬಿಎ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಸದಸ್ಯರ ಪಟ್ಟಿಗೆ ಸೇರಿಸಲು ಅನುಮೋದನೆ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿಧೇಯಕ ಮಂಡನೆ ಮಾಡಿ ಮಾಹಿತಿ ನೀಡಿದರು.
- Ganapathi Sharma
- Updated on: Dec 18, 2025
- 8:50 am
Siddaramaiah Health: ಸಿಎಂ ಸಿದ್ದರಾಮಯ್ಯಗೆ ನಿಜಕ್ಕೂ ಆಗಿದ್ದೇನು? ಈಗ ಹೇಗಿದ್ದಾರೆ? ಇಲ್ಲಿದೆ ಮಾಹಿತಿ
ಬೆಳಗಾವಿಯಲ್ಲಿ 8 ದಿನ ಅಧಿವೇಶನ ಮುಕ್ತಾಯ ಆಗಿ ಇಂದು ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಆರೋಗ್ಯ ದಿಢೀರ್ ಏರುಪೇರಾಗಿ ಸರ್ಕ್ಯೂಟ್ ಹೌಸ್ನಲ್ಲಿ ಉಳಿದುಕೊಂಡಿದ್ದರು. ಸದ್ಯ ಸಿಎಂ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಹಾಗಾದರೆ, ಸಿದ್ದರಾಮಯ್ಯಗೆ ನಿಜಕ್ಕೂ ಆಗಿದ್ದೇನು? ಇಲ್ಲಿದೆ ಮಾಹಿತಿ.
- Sahadev Mane
- Updated on: Dec 18, 2025
- 6:22 am
ಗೃಹ’ಲಕ್ಷ್ಮೀ’ ವಿವಾದ: ಹಣ ಪಾವತಿ ಆಗದಿರೋದ್ಯಾಕೆ? ಬಾಕಿ ಮೊತ್ತ ಜಮೆ ಯಾವಾಗ?; ಇಲ್ಲಿದೆ ಮಾಹಿತಿ
ಗೃಹಲಕ್ಷ್ಮೀ ಯೋಜನೆ ಹಣ ಪಾವತಿ ವಿಳಂಬದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನಕ್ಕೆ ತಾವು ನೀಡಿದ್ದ ಮಾಹಿತಿ ವಿಚಾರವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಆದ್ರೆ ವಿಪಕ್ಷ ಬಿಜೆಪಿ ಅವರ ಕ್ಷಮೆಗೆ ಪಟ್ಟು ಹಿಡಿದ ಕಾರಣ ವಿಧಾನಸಭೆಯಲ್ಲಿ ಕೋಲಾಹಲವೇ ನಡೆದಿದೆ. ಅಷ್ಟಕ್ಕೂ ಎರಡು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗದಿರೋದ್ಯಾಕೆ? ಬಾಕಿ ಮೊತ್ತವನ್ನು ಸರ್ಕಾರ ಯಾವಾಗ ಪಾವತಿ ಮಾಡುತ್ತೆ? ಎಂಬ ಮಾಹಿತಿ ಇಲ್ಲಿದೆ.
- Prasanna Hegde
- Updated on: Dec 17, 2025
- 5:40 pm
ಬೆಳಗಾವಿ ಅಧಿವೇಶನ: ಪರಿಷತ್ನಲ್ಲಿ ಪ್ರಶ್ನೆ ಕೇಳಿದ್ದ BJP ಎಂಎಲ್ಸಿಗೆ ಕೊಟ್ಟಿದ್ದು ಖಾಲಿ ಪೆನ್ಡ್ರೈವ್!
ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿಪಕ್ಷಗಳು ಆಕ್ರೋಶ ವಕ್ತಪಡಿಸುತ್ತಿರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಪರಿಷತ್ ಬಿಜೆಪಿ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಅಧಿಕಾರಿಗಳು ಬೇಜವಾಬ್ದಾರಿ ತೋರಿರೋದು ಆಡಳಿತ ಪಕ್ಷಕ್ಕೆ ಇರುಸುಮುರುಸು ಉಂಟುಮಾಡಿದೆ.
- Harish GR
- Updated on: Dec 17, 2025
- 4:00 pm