AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Job

Bank Job

ಹಲೋ ಉದ್ಯೋಗಾಕಾಂಕ್ಷಿಗಳೇ! ಸರ್ಕಾರಿ ಬ್ಯಾಂಕ್‌ನ ಜೊತೆಗೆ ವಿವಿಧ ಬ್ಯಾಂಕ್​ಗಳಲ್ಲಿ ಉದ್ಯೋಗ ಹೊಂದುವ ಕನಸು ಸಾಕಾರಗೊಳಿಸಲು ಬಯಸುವ ಪದವೀಧರರು ಮತ್ತು ವೃತ್ತಿಪರ ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ನೀವು ಬ್ಯಾಂಕಿಂಗ್ ಉದ್ಯೋಗಕ್ಕೆ ವರ್ಷಗಳಿಂದ ತಯಾರಿ ನಡೆಸುತ್ತಿದ್ದರೆ, ವಿವಿಧ ಬ್ಯಾಂಕ್​ಗಳಿಗೆ ಸಂಬಂಧಿಸಿದ ಪ್ರಮುಖ ಪ್ರಕಟನೆಗಳು, ಏನೆಲ್ಲಾ ಪ್ರಮುಖ ಮಾಹಿತಿಗಳನ್ನು ತಿಳಿದಿರಬೇಕು, ಯಾವ್ಯಾವ ಬ್ಯಾಂಕ್‌ಗಳಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪದವೀಧರರು ಮತ್ತು ವೃತ್ತಿಪರ ಅಭ್ಯರ್ಥಿಗಳು ಈ ಸುವರ್ಣವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಇನ್ನೂ ಹೆಚ್ಚು ಓದಿ

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ; 86 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) 86 ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವಿ ಮತ್ತು ಪಿಜಿ, ವೃತ್ತಿಪರ ಅರ್ಹತೆ, ಜೊತೆಗೆ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನದೊಂದಿಗೆ ಉತ್ತಮ ಬ್ಯಾಂಕಿಂಗ್ ವೃತ್ತಿ ಅವಕಾಶವಿದೆ. ಅರ್ಜಿ ಶುಲ್ಕ ಮತ್ತು ವಯೋಮಿತಿ ವಿವರಗಳಿದ್ದು, ಆಸಕ್ತರು ಜುಲೈ 6 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗೆ ಅರ್ಜಿ ಆಹ್ವಾನ; ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸುವರ್ಣಾವಕಾಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 1500 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜೂನ್ 18 ರಿಂದ ಜುಲೈ 8 ರವರೆಗೆ ಆನ್‌ಲೈನ್‌ನಲ್ಲಿ ಪದವೀಧರರು ಅರ್ಜಿ ಸಲ್ಲಿಸಬಹುದು. ಮೂರು ಹಂತದ ಆಯ್ಕೆ ಪ್ರಕ್ರಿಯೆ, ಆಕರ್ಷಕ ವೇತನ ಹಾಗೂ ಭತ್ಯೆಗಳು ಇರಲಿವೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಕೊನೆಯ ದಿನಾಂಕದ ವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಿ.

RBI Recruitment 2026: ಆರ್‌ಬಿಐನಲ್ಲಿ ‘ಯುವ ವೃತ್ತಿಪರರ’ ನೇಮಕಾತಿ; ಮಾಸಿಕ 1.5 ಲಕ್ಷ ರೂ. ಸ್ಟೈಫಂಡ್!

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಪ್ರತಿಭಾನ್ವಿತ 'ಯುವ ವೃತ್ತಿಪರರ' ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ವಲಯದಲ್ಲಿ ವೃತ್ತಿಜೀವನ ರೂಪಿಸಲು ಇದು ಸುವರ್ಣಾವಕಾಶ. ಕೃತಕ ಬುದ್ಧಿಮತ್ತೆ (AI), ಡೇಟಾ ವಿಶ್ಲೇಷಣೆ ಸೇರಿದಂತೆ ವಿವಿಧ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಹುದ್ದೆಗಳಿವೆ. ಆಯ್ಕೆಯಾದವರಿಗೆ ತಿಂಗಳಿಗೆ 1.5 ಲಕ್ಷ ರೂ. ಸ್ಟೈಫಂಡ್ ದೊರೆಯಲಿದ್ದು, ಆಸಕ್ತರು ಜುಲೈ 6ರೊಳಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.

Bank Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (PSB) ಕೃತಕ ಬುದ್ಧಿಮತ್ತೆ (AI) ಸಂಬಂಧಿತ ತಾಂತ್ರಿಕ ವಿಭಾಗಗಳಲ್ಲಿ ವ್ಯವಸ್ಥಾಪಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಕರೆ ನೀಡಿದೆ. ಎಂಜಿನಿಯರಿಂಗ್ ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ AI ಮತ್ತು ತಂತ್ರಜ್ಞಾನದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇದೊಂದು ಸುವರ್ಣಾವಕಾಶ. ಆನ್‌ಲೈನ್ ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನಾಂಕ. ಅರ್ಹತೆ, ವಯೋಮಿತಿ ಮತ್ತು ಆಯ್ಕೆ ವಿಧಾನದ ಕುರಿತು ವಿವರಗಳು ಲಭ್ಯ.

SBI Recruitment 2026: SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ

SBI ದೇಶಾದ್ಯಂತ 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಪದವೀಧರ ಅಭ್ಯರ್ಥಿಗಳು ಮೇ 19ರಿಂದ ಜೂನ್ 8ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಒಂದು ವರ್ಷದ ತರಬೇತಿ ಅವಧಿಯಲ್ಲಿ ತಿಂಗಳಿಗೆ 15,000ರೂ. ಸ್ಟೈಪೆಂಡ್ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಿ.

PSB Apprentice Jobs 2026: ಬ್ಯಾಂಕಿಂಗ್ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ; 635 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ!

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ದೇಶಾದ್ಯಂತ 635 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಪದವೀಧರರಿಗೆ ಇದೊಂದು ಸುವರ್ಣಾವಕಾಶ. 20-28 ವರ್ಷ ವಯಸ್ಸಿನ ಅಭ್ಯರ್ಥಿಗಳು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆ ಮೂಲಕ ಆಯ್ಕೆಗೊಳ್ಳುತ್ತಾರೆ. ಜೂನ್ 6 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

SBI Recruitment 2026: ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ

ಭಾರತದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ (SBI), 7,150 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಆಯ್ಕೆಯಾದವರಿಗೆ ಒಂದು ವರ್ಷ ತರಬೇತಿಯೊಂದಿಗೆ ಪ್ರತಿ ತಿಂಗಳು ರೂ 15,000 ಸ್ಟೈಫಂಡ್ ನೀಡಲಾಗುತ್ತದೆ. ಜೂನ್ 8 ಕೊನೆಯ ದಿನಾಂಕ. ಈ ತರಬೇತಿ ಪೂರ್ಣಗೊಳಿಸಿದವರಿಗೆ ಭವಿಷ್ಯದಲ್ಲಿ ಎಸ್‌ಬಿಐ ಕ್ಲರ್ಕ್ ನೇಮಕಾತಿಯಲ್ಲಿ ಆದ್ಯತೆ ದೊರೆಯಲಿದೆ.

BOB Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 5,000 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು

ಬ್ಯಾಂಕ್ ಆಫ್ ಬರೋಡಾ (BOB) 5,000 ಅಪ್ರೆಂಟಿಸ್ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ. ಇದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಉತ್ತಮ ಅವಕಾಶ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ಅವಧಿಯಲ್ಲಿ ಮಾಸಿಕ 15,000ರೂ. ಸ್ಟೈಫಂಡ್ ನೀಡಲಾಗುತ್ತದೆ. ಅರ್ಹರು ಜೂನ್ 8 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

Union Bank Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಸುವರ್ಣಾವಕಾಶ; ಯೂನಿಯನ್ ಬ್ಯಾಂಕ್‌ನಲ್ಲಿ 1,865 ಹುದ್ದೆಗಳಿಗೆ ನೇಮಕಾತಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 1,865 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಅವಕಾಶ ಬಯಸುವವರಿಗೆ ಇದು ಸುವರ್ಣಾವಕಾಶ. ಪದವಿ ಪೂರ್ಣಗೊಳಿಸಿರುವ, ಸ್ಥಳೀಯ ಭಾಷಾ ಜ್ಞಾನ ಹೊಂದಿರುವ 20-28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಪರೀಕ್ಷೆ, ಭಾಷಾ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಕೂಡಲೇ ಅರ್ಜಿ ಸಲ್ಲಿಸಿ.

SBI Recruitment 2026: ಎಸ್‌ಬಿಐನಲ್ಲಿ ಬಂಪರ್ ನೇಮಕಾತಿ; 45 ಲಕ್ಷ ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 8 ಲೀಡ್ ಬಿಸಿನೆಸ್ ಅನಾಲಿಸ್ಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ/ಬಿಟೆಕ್, ಎಂಸಿಎ, ಎಂಬಿಎ ಪದವೀಧರರಿಗೆ 45 ಲಕ್ಷ ರೂ. ವಾರ್ಷಿಕ ವೇತನದೊಂದಿಗೆ ಇದು ಸುವರ್ಣಾವಕಾಶ. ಲಿಖಿತ ಪರೀಕ್ಷೆ ಇಲ್ಲದೆ, ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ. ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ. ಶುಲ್ಕವಿದ್ದು, ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ. ಮೇ 4 ರೊಳಗೆ ಅರ್ಜಿ ಸಲ್ಲಿಸಿ.

RBI Recruitment 2026: RBIನಲ್ಲಿ ನೇಮಕಾತಿ; ದೇಶದ ಅತ್ಯುನ್ನತ ಬ್ಯಾಂಕಿಂಗ್ ಸಂಸ್ಥೆಯಲ್ಲಿ ಕೆಲಸ ಪಡೆಯಲು ಇಲ್ಲಿದೆ ಸುವರ್ಣವಕಾಶ

ಭಾರತೀಯ ರಿಸರ್ವ್ ಬ್ಯಾಂಕ್ ಜೂನಿಯರ್ ಎಂಜಿನಿಯರ್ (ಸಿವಿಲ್/ಎಲೆಕ್ಟ್ರಿಕಲ್) 11 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಬಂಧಿತ ವಿಭಾಗದಲ್ಲಿ ಡಿಪ್ಲೋಮಾ/ಪದವಿ ಪಡೆದ 20-30 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಮತ್ತು ಭಾಷಾ ಪ್ರಾವೀಣ್ಯತಾ ಪರೀಕ್ಷೆ ಒಳಗೊಂಡಿದೆ. ಪರೀಕ್ಷೆಯು ಜೂನ್‌ನಲ್ಲಿ ನಡೆಯಲಿದ್ದು, ಆಸಕ್ತರು ಮೇ 6ರೊಳಗೆ ಅರ್ಜಿ ಸಲ್ಲಿಸಿ ದೇಶದ ಕೇಂದ್ರ ಬ್ಯಾಂಕ್‌ನಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಿ.

Bank recruitment 2026: ಈ ಬ್ಯಾಂಕ್‌ನಲ್ಲಿ ಬರೋಬ್ಬರಿ 1,000 ಹುದ್ದೆಗಳಿಗೆ ನೇಮಕಾತಿ; ಪದವೀಧರರಿಗೆ ಸುವರ್ಣ ಅವಕಾಶ!

ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ 1000 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವೀಧರರಿಗೆ ಇದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಉತ್ತಮ ಅವಕಾಶ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 20ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಯೋಮಿತಿ, ಶೈಕ್ಷಣಿಕ ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕದ ಸಂಪೂರ್ಣ ಮಾಹಿತಿ ಲೇಖನದಲ್ಲಿದೆ.

ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ