AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Job

Bank Job

ಹಲೋ ಉದ್ಯೋಗಾಕಾಂಕ್ಷಿಗಳೇ! ಸರ್ಕಾರಿ ಬ್ಯಾಂಕ್‌ನ ಜೊತೆಗೆ ವಿವಿಧ ಬ್ಯಾಂಕ್​ಗಳಲ್ಲಿ ಉದ್ಯೋಗ ಹೊಂದುವ ಕನಸು ಸಾಕಾರಗೊಳಿಸಲು ಬಯಸುವ ಪದವೀಧರರು ಮತ್ತು ವೃತ್ತಿಪರ ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ನೀವು ಬ್ಯಾಂಕಿಂಗ್ ಉದ್ಯೋಗಕ್ಕೆ ವರ್ಷಗಳಿಂದ ತಯಾರಿ ನಡೆಸುತ್ತಿದ್ದರೆ, ವಿವಿಧ ಬ್ಯಾಂಕ್​ಗಳಿಗೆ ಸಂಬಂಧಿಸಿದ ಪ್ರಮುಖ ಪ್ರಕಟನೆಗಳು, ಏನೆಲ್ಲಾ ಪ್ರಮುಖ ಮಾಹಿತಿಗಳನ್ನು ತಿಳಿದಿರಬೇಕು, ಯಾವ್ಯಾವ ಬ್ಯಾಂಕ್‌ಗಳಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪದವೀಧರರು ಮತ್ತು ವೃತ್ತಿಪರ ಅಭ್ಯರ್ಥಿಗಳು ಈ ಸುವರ್ಣವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಇನ್ನೂ ಹೆಚ್ಚು ಓದಿ

ಬ್ಯಾಂಕ್ ಆಫ್ ಬರೋಡಾದಲ್ಲಿ 1,100 ಹುದ್ದೆಗಳ ಬಂಪರ್ ನೇಮಕಾತಿ: ಅರ್ಜಿ ಸಲ್ಲಿಸಲು ಸುವರ್ಣಾವಕಾಶ

ಬ್ಯಾಂಕ್ ಆಫ್ ಬರೋಡಾ 1100 ವೆಲ್ತ್ ಎಕ್ಸಿಕ್ಯೂಟಿವ್ ಮತ್ತು ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ, 22-33 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನ ಶ್ರೇಣಿ ಮತ್ತು ಭತ್ಯೆಗಳು ಲಭ್ಯವಿವೆ. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 24 ಕೊನೆಯ ದಿನಾಂಕವಾಗಿದೆ. ಆಸಕ್ತರು ಈ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ: 60 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ನಲ್ಲಿ 60 ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವಾಚ್​ ಮ್ಯಾನ್​, ಸಿಪಾಯಿ, ಕಿರಿಯ ಸಹಾಯಕ, ವಾಹನ ಚಾಲಕ ಸೇರಿದಂತೆ ಹಲವು ಹುದ್ದೆಗಳಿಗೆ 10ನೇ, 12ನೇ, ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಇಲ್ಲ. ಆಯ್ಕೆಯಾದವರಿಗೆ 14,550 ರಿಂದ 43,200ರೂ. ವೇತನ ಸಿಗಲಿದೆ. ಆಸಕ್ತರು ಸೆ. 15 ರೊಳಗೆ ಅರ್ಜಿ ಸಲ್ಲಿಸಿ.

IBPS Recruitment 2027: ಗ್ರಾಮೀಣ ಬ್ಯಾಂಕುಗಳಲ್ಲಿ 13,706 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣವಕಾಶ

IBPS RRB ಅಧಿಸೂಚನೆ: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ 13,706 ಗ್ರೂಪ್ 'ಎ' ಅಧಿಕಾರಿ ಮತ್ತು ಗ್ರೂಪ್ 'ಬಿ' ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರರಿಗೆ ಇದೊಂದು ಭಾರಿ ಉದ್ಯೋಗಾವಕಾಶವಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆ ಸೆಪ್ಟೆಂಬರ್ 1 ರಿಂದ 21 ರವರೆಗೆ ನಡೆಯಲಿದೆ. ಪ್ರಿಲಿಮ್ಸ್, ಮುಖ್ಯ ಪರೀಕ್ಷೆ ಜೊತೆಗೆ ಅಂತಿಮ ಹಂತವಾಗಿ ಸಂದರ್ಶನವನ್ನು (Interview) ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IOB Recruitment 2026: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ಬೃಹತ್ ನೇಮಕಾತಿ; ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) 291 ಸ್ಪೆಷಲಿಸ್ಟ್ ಮತ್ತು ಜನರಲಿಸ್ಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಮ್ಯಾನೇಜರ್, ಐಟಿ, ಕ್ರೆಡಿಟ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅರ್ಜಿ ಸಲ್ಲಿಸಬಹುದು. ಪದವಿ, ಬಿ.ಇ/ಬಿ.ಟೆಕ್, ಎಂಬಿಎ ವಿದ್ಯಾರ್ಹತೆ ಹೊಂದಿರುವವರು ಸೆಪ್ಟೆಂಬರ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಆಯ್ಕೆ ಪ್ರಕ್ರಿಯೆಯಲ್ಲಿ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಇರಲಿದೆ. ಇದು ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ.

Bank Job 2026: ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು

ಬ್ಯಾಂಕ್ ಆಫ್ ಬರೋಡಾ (BOB) 2482 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಪದವೀಧರರು, ಒಂದು ವರ್ಷ ಬ್ಯಾಂಕಿಂಗ್ ಅನುಭವ ಮತ್ತು ಸ್ಥಳೀಯ ಭಾಷಾ ಜ್ಞಾನವಿರುವ 21-30 ವರ್ಷದ ಅಭ್ಯರ್ಥಿಗಳು ಅರ್ಹರು. ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ. ಸೆಪ್ಟೆಂಬರ್ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಿ.

SBI recruitment 2026: ಎಸ್‌ಬಿಐ ಬೃಹತ್ ನೇಮಕಾತಿ; 9,100ಕ್ಕೂ ಹೆಚ್ಚು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕದಲ್ಲಿ ಬ್ಯಾಂಕ್ ಕೆಲಸ ಹುಡುಕುತ್ತಿರುವ ಪದವೀಧರರಿಗೆ ಶುಭ ಸುದ್ದಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 9,124 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆಯ್ಕೆಯಾದ ಆಭ್ಯರ್ಥಿಗಳಿಗೆ ಮಾಸಿಕ 64,480ರೂ. ವರೆಗೆ ವೇತನ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಇರಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31 ಎಂದು ನಿಗದಿಪಡಿಸಲಾಗಿದೆ.

SBI Recruitment 2026: SBIನಲ್ಲಿ 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಪೂರ್ಣ ವಿವರ ಇಲ್ಲಿದೆ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ವಿಶೇಷ ನೇಮಕಾತಿ ಅಧಿಸೂಚನೆ ಹೊರಡಿಸಿದೆ. SC, ST, OBC ಅಭ್ಯರ್ಥಿಗಳಿಗೆ ಮೀಸಲಾದ 1,538 ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, 20-28 ವಯಸ್ಸಿನ ಮಿತಿಯಿದೆ. ಆಗಸ್ಟ್ 7 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 27 ಕೊನೆಯ ದಿನಾಂಕ. ಇದು ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ.

IOB Recruitment 2026: ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) 250 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ವಯೋಮಿತಿ, ಪರೀಕ್ಷಾ ವಿಧಾನ ಮತ್ತು ವೇತನ ಶ್ರೇಣಿಯ ಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

IBPS CSA Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ 11,403 ಹುದ್ದೆಗಳ ಬಂಪರ್ ನೇಮಕಾತಿ; ಕರ್ನಾಟಕದಲ್ಲೇ 1,414 ಹುದ್ದೆಗಳು!

ಬ್ಯಾಂಕ್ ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣಾವಕಾಶ. IBPS ನಿಂದ 11,403 ಗ್ರಾಹಕ ಸೇವಾ ಸಹವರ್ತಿ (CSA) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಒಂದರಲ್ಲೇ 1,414 ಹುದ್ದೆಗಳಿದ್ದು, ಆಗಸ್ಟ್ 21ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಹತೆ ಹಾಗೂ ಪರೀಕ್ಷಾ ಮಾದರಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

PNB Recruitment 2026: ಪಂಜಾಬ್ ನ್ಯಾಷನಲ್ ಬ್ಯಾಂಕ್​ನಲ್ಲಿ ನೇಮಕಾತಿ; 545 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 545 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕಕ್ಕೆ 78 ಹುದ್ದೆಗಳು ಲಭ್ಯವಿವೆ. ಪದವಿ, 1 ವರ್ಷ ಬ್ಯಾಂಕಿಂಗ್ ಅನುಭವ ಮತ್ತು ಸ್ಥಳೀಯ ಭಾಷಾ ಜ್ಞಾನವಿರುವ 20-30 ವರ್ಷದವರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 9 ಕೊನೆಯ ದಿನ. ಆಕರ್ಷಕ ವೇತನ ಶ್ರೇಣಿ ಮತ್ತು ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆ ಹೊಂದಿದೆ.

Apply Now: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 395 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) 2026-27ನೇ ಸಾಲಿಗೆ 395 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಮ್ಯಾನೇಜರ್‌ನಿಂದ ಡಿಜಿಎಂ ಹಂತದವರೆಗೆ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳು, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಆಕರ್ಷಕ ವೇತನ ಶ್ರೇಣಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ಒದಗಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

RBI Recruitment 2026: ಆರ್‌ಬಿಐನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಗಂಟೆಗೆ 1,000 ರೂ. ಸಂಭಾವನೆ!

ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಾನ್ಪುರ ಶಾಖೆಯಲ್ಲಿ ಬ್ಯಾಂಕ್ ವೈದ್ಯಕೀಯ ಸಲಹೆಗಾರ (BMC) ಹುದ್ದೆಗಳಿಗೆ ಅರ್ಹ ವೈದ್ಯಕೀಯ ವೃತ್ತಿಪರರಿಂದ ಅರ್ಜಿ ಆಹ್ವಾನಿಸಿದೆ. ಇದು ಒಪ್ಪಂದ ಆಧಾರಿತ ನೇಮಕಾತಿಯಾಗಿದ್ದು, ಗಂಟೆಗೆ 1,000ರೂ. ಸಂಭಾವನೆ ನೀಡಲಾಗುತ್ತದೆ. ಎಂಬಿಬಿಎಸ್ ಪದವಿ ಕಡ್ಡಾಯ. ಲಿಖಿತ ಪರೀಕ್ಷೆ ಇಲ್ಲ, ಕೇವಲ ಸಂದರ್ಶನದ ಮೂಲಕ ಆಯ್ಕೆ. ಜುಲೈ 31 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಡೆಂಕಣಿಕೋಟೆಯಲ್ಲಿ 'ಕಾಂತಾರ ಗಣಪನ' ಭಾರಿ ಹವಾ
ಡೆಂಕಣಿಕೋಟೆಯಲ್ಲಿ 'ಕಾಂತಾರ ಗಣಪನ' ಭಾರಿ ಹವಾ
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ