AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Job

Bank Job

ಹಲೋ ಉದ್ಯೋಗಾಕಾಂಕ್ಷಿಗಳೇ! ಸರ್ಕಾರಿ ಬ್ಯಾಂಕ್‌ನ ಜೊತೆಗೆ ವಿವಿಧ ಬ್ಯಾಂಕ್​ಗಳಲ್ಲಿ ಉದ್ಯೋಗ ಹೊಂದುವ ಕನಸು ಸಾಕಾರಗೊಳಿಸಲು ಬಯಸುವ ಪದವೀಧರರು ಮತ್ತು ವೃತ್ತಿಪರ ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ನೀವು ಬ್ಯಾಂಕಿಂಗ್ ಉದ್ಯೋಗಕ್ಕೆ ವರ್ಷಗಳಿಂದ ತಯಾರಿ ನಡೆಸುತ್ತಿದ್ದರೆ, ವಿವಿಧ ಬ್ಯಾಂಕ್​ಗಳಿಗೆ ಸಂಬಂಧಿಸಿದ ಪ್ರಮುಖ ಪ್ರಕಟನೆಗಳು, ಏನೆಲ್ಲಾ ಪ್ರಮುಖ ಮಾಹಿತಿಗಳನ್ನು ತಿಳಿದಿರಬೇಕು, ಯಾವ್ಯಾವ ಬ್ಯಾಂಕ್‌ಗಳಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪದವೀಧರರು ಮತ್ತು ವೃತ್ತಿಪರ ಅಭ್ಯರ್ಥಿಗಳು ಈ ಸುವರ್ಣವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಇನ್ನೂ ಹೆಚ್ಚು ಓದಿ

IBPS CSA Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ 11,403 ಹುದ್ದೆಗಳ ಬಂಪರ್ ನೇಮಕಾತಿ; ಕರ್ನಾಟಕದಲ್ಲೇ 1,414 ಹುದ್ದೆಗಳು!

ಬ್ಯಾಂಕ್ ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣಾವಕಾಶ. IBPS ನಿಂದ 11,403 ಗ್ರಾಹಕ ಸೇವಾ ಸಹವರ್ತಿ (CSA) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಒಂದರಲ್ಲೇ 1,414 ಹುದ್ದೆಗಳಿದ್ದು, ಆಗಸ್ಟ್ 21ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಹತೆ ಹಾಗೂ ಪರೀಕ್ಷಾ ಮಾದರಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

PNB Recruitment 2026: ಪಂಜಾಬ್ ನ್ಯಾಷನಲ್ ಬ್ಯಾಂಕ್​ನಲ್ಲಿ ನೇಮಕಾತಿ; 545 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 545 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕಕ್ಕೆ 78 ಹುದ್ದೆಗಳು ಲಭ್ಯವಿವೆ. ಪದವಿ, 1 ವರ್ಷ ಬ್ಯಾಂಕಿಂಗ್ ಅನುಭವ ಮತ್ತು ಸ್ಥಳೀಯ ಭಾಷಾ ಜ್ಞಾನವಿರುವ 20-30 ವರ್ಷದವರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 9 ಕೊನೆಯ ದಿನ. ಆಕರ್ಷಕ ವೇತನ ಶ್ರೇಣಿ ಮತ್ತು ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆ ಹೊಂದಿದೆ.

Apply Now: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 395 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) 2026-27ನೇ ಸಾಲಿಗೆ 395 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಮ್ಯಾನೇಜರ್‌ನಿಂದ ಡಿಜಿಎಂ ಹಂತದವರೆಗೆ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳು, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಆಕರ್ಷಕ ವೇತನ ಶ್ರೇಣಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ಒದಗಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

RBI Recruitment 2026: ಆರ್‌ಬಿಐನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಗಂಟೆಗೆ 1,000 ರೂ. ಸಂಭಾವನೆ!

ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಾನ್ಪುರ ಶಾಖೆಯಲ್ಲಿ ಬ್ಯಾಂಕ್ ವೈದ್ಯಕೀಯ ಸಲಹೆಗಾರ (BMC) ಹುದ್ದೆಗಳಿಗೆ ಅರ್ಹ ವೈದ್ಯಕೀಯ ವೃತ್ತಿಪರರಿಂದ ಅರ್ಜಿ ಆಹ್ವಾನಿಸಿದೆ. ಇದು ಒಪ್ಪಂದ ಆಧಾರಿತ ನೇಮಕಾತಿಯಾಗಿದ್ದು, ಗಂಟೆಗೆ 1,000ರೂ. ಸಂಭಾವನೆ ನೀಡಲಾಗುತ್ತದೆ. ಎಂಬಿಬಿಎಸ್ ಪದವಿ ಕಡ್ಡಾಯ. ಲಿಖಿತ ಪರೀಕ್ಷೆ ಇಲ್ಲ, ಕೇವಲ ಸಂದರ್ಶನದ ಮೂಲಕ ಆಯ್ಕೆ. ಜುಲೈ 31 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

IOB Recruitment 2026: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಓವರ್ಸೀಸ್ ಬ್ಯಾಂಕ್ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 2 ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಆಯ್ಕೆಯಾದವರಿಗೆ ಆಕರ್ಷಕ ಸ್ಟೈಫಂಡ್ ನೀಡಲಾಗುತ್ತದೆ. ಆಸಕ್ತರು ಕೊನೆಯ ದಿನದವರೆಗೂ ಕಾಯದೆ ತಕ್ಷಣ ಅರ್ಜಿ ಸಲ್ಲಿಸಿ.

Apply Now: ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್; ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಬ್ಯಾಂಕ್ ಆಫ್ ಬರೋಡಾ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಡೇಟಾ ವಿಶ್ಲೇಷಕ, ಯೋಜನಾ ನಿರ್ವಹಣೆ, ಅಗೈಲ್ ಟ್ರಾನ್ಸ್‌ಫರ್ಮೇಷನ್ ಮತ್ತು ವ್ಯವಹಾರ ಹಣಕಾಸು ತಜ್ಞರ ಹುದ್ದೆಗಳು ಲಭ್ಯವಿವೆ. ಪದವಿ ಮತ್ತು ಅಗತ್ಯ ಅನುಭವ ಹೊಂದಿರುವ ಅಭ್ಯರ್ಥಿಗಳು bankofbaroda.bank.in ಮೂಲಕ ಅರ್ಜಿ ಸಲ್ಲಿಸಬಹುದು. ಉನ್ನತ ಬ್ಯಾಂಕಿಂಗ್ ವೃತ್ತಿಜೀವನಕ್ಕೆ ಇದೊಂದು ಉತ್ತಮ ಅವಕಾಶ.

Bank Recruitment 2026: ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ನೇಮಕಾತಿ; ಲಿಖಿತ ಪರೀಕ್ಷೆ ಇಲ್ಲದೆ ನೇರ ಆಯ್ಕೆ!

ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಹಾಯಕ, ಉಪ ಸಿಬ್ಬಂದಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. 10ನೇ ತರಗತಿ, ಪಿಯುಸಿ ಅಥವಾ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಕೇವಲ ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ನಡೆಯುತ್ತದೆ. ಆಸಕ್ತರು ಜುಲೈ 1ರಿಂದ 15 ರೊಳಗೆ ಅರ್ಜಿ ಸಲ್ಲಿಸಿ.

Bank of India Recruitment: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಭರ್ಜರಿ ಉದ್ಯೋಗವಕಾಶ; 779 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ!

ಬ್ಯಾಂಕ್ ಆಫ್ ಇಂಡಿಯಾ 2026ನೇ ಸಾಲಿಗೆ 779 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ, CA CFA ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ 64,820 ರಿಂದ 1,20,940 ರೂ. ವೇತನ ಲಭ್ಯವಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-07-2026. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್​ನ ಅಧಿಕೃತ ವೆಬ್​​ಸೈಟ್​​ಗೆ ಭೇಟಿ ನೀಡಿ.

Bank Jobs 2026: ಚಿಕ್ಕಮಗಳೂರು ಪಟ್ಟಣ ಸಹಕಾರ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ; ನೇರ ನೇಮಕಾತಿ ಪ್ರಕಟಣೆ!

ಚಿಕ್ಕಮಗಳೂರು ಪಟ್ಟಣ ಸಹಕಾರಿ ಬ್ಯಾಂಕ್ ಲಿಮಿಟೆಡ್​​ನಲ್ಲಿ 5 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅರಸುವವರಿಗೆ ಇದೊಂದು ಸುವರ್ಣಾವಕಾಶ. ಜೂನ್ 25 ರಿಂದ ಅರ್ಜಿ ವಿತರಣೆ ಆರಂಭವಾಗಿದ್ದು, ಜುಲೈ 24 ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಚಿಕ್ಕಮಗಳೂರು ಮುಖ್ಯ ಕಚೇರಿಯಲ್ಲಿ ಶುಲ್ಕ ಪಾವತಿಸಿ ಅರ್ಜಿ ಪಡೆದು ಸಲ್ಲಿಸಬಹುದು.

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ; 86 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) 86 ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವಿ ಮತ್ತು ಪಿಜಿ, ವೃತ್ತಿಪರ ಅರ್ಹತೆ, ಜೊತೆಗೆ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನದೊಂದಿಗೆ ಉತ್ತಮ ಬ್ಯಾಂಕಿಂಗ್ ವೃತ್ತಿ ಅವಕಾಶವಿದೆ. ಅರ್ಜಿ ಶುಲ್ಕ ಮತ್ತು ವಯೋಮಿತಿ ವಿವರಗಳಿದ್ದು, ಆಸಕ್ತರು ಜುಲೈ 6 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗೆ ಅರ್ಜಿ ಆಹ್ವಾನ; ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸುವರ್ಣಾವಕಾಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 1500 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜೂನ್ 18 ರಿಂದ ಜುಲೈ 8 ರವರೆಗೆ ಆನ್‌ಲೈನ್‌ನಲ್ಲಿ ಪದವೀಧರರು ಅರ್ಜಿ ಸಲ್ಲಿಸಬಹುದು. ಮೂರು ಹಂತದ ಆಯ್ಕೆ ಪ್ರಕ್ರಿಯೆ, ಆಕರ್ಷಕ ವೇತನ ಹಾಗೂ ಭತ್ಯೆಗಳು ಇರಲಿವೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಕೊನೆಯ ದಿನಾಂಕದ ವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಿ.

RBI Recruitment 2026: ಆರ್‌ಬಿಐನಲ್ಲಿ ‘ಯುವ ವೃತ್ತಿಪರರ’ ನೇಮಕಾತಿ; ಮಾಸಿಕ 1.5 ಲಕ್ಷ ರೂ. ಸ್ಟೈಫಂಡ್!

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಪ್ರತಿಭಾನ್ವಿತ 'ಯುವ ವೃತ್ತಿಪರರ' ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ವಲಯದಲ್ಲಿ ವೃತ್ತಿಜೀವನ ರೂಪಿಸಲು ಇದು ಸುವರ್ಣಾವಕಾಶ. ಕೃತಕ ಬುದ್ಧಿಮತ್ತೆ (AI), ಡೇಟಾ ವಿಶ್ಲೇಷಣೆ ಸೇರಿದಂತೆ ವಿವಿಧ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಹುದ್ದೆಗಳಿವೆ. ಆಯ್ಕೆಯಾದವರಿಗೆ ತಿಂಗಳಿಗೆ 1.5 ಲಕ್ಷ ರೂ. ಸ್ಟೈಫಂಡ್ ದೊರೆಯಲಿದ್ದು, ಆಸಕ್ತರು ಜುಲೈ 6ರೊಳಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು