AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI

BCCI

BCCI: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಭಾರತೀಯ ಕ್ರಿಕೆಟ್​ನ ಆಡಳಿತ ಕೇಂದ್ರ. 1928 ರಲ್ಲಿ ರಚಿಸಲಾದ ಈ ಸಂಸ್ಥೆಯು ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯ ಮೊದಲ ಅಧ್ಯಕ್ಷ ಆರ್​ಇ ಗ್ರಾಂಟ್ ಗೋವನ್. ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರೋಜರ್ ಬಿನ್ನಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪೂರ್ಣ ಮತ್ತು ಸಹವರ್ತಿ ಸದಸ್ಯ ಸಂಸ್ಥೆಗಳನ್ನು ಒಳಗೊಂಡಿದ್ದು, ಇದಲರಲ್ಲಿ ಬಹುಪಾಲು ಸದಸ್ಯರು ರಾಜ್ಯ ಕ್ರಿಕೆಟ್ ಸಂಸ್ಥೆಗಳಾಗಿವೆ. ಅದರಂತೆ ಇದೀಗ ಬಿಸಿಸಿಐ ಅಧೀನದಲ್ಲಿ 41 ಕ್ರಿಕೆಟ್ ಸಂಸ್ಥೆಗಳಿವೆ. ಇನ್ನು ರಾಷ್ಟ್ರೀಯ ಸರಣಿಗಳೊಂದಿಗೆ ಬಿಸಿಸಿಐ ಆಯೋಜಿಸುವ ಪ್ರಮುಖ ದೇಶೀಯ ಟೂರ್ನಿಗಳೆಂದರೆ ರಣಜಿ ಟ್ರೋಫಿ, ವಿಜಯ್ ಹಝಾರೆ ಟ್ರೋಫಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ದುಲೀಪ್ ಟ್ರೋಫಿ ಮತ್ತು ಐಪಿಎಲ್​

ಇನ್ನೂ ಹೆಚ್ಚು ಓದಿ

ಐಸಿಸಿ ಮನವಿಗೂ ನಿಲುವು ಬದಲಿಸದ ಬಿಸಿಸಿಐ; ಪಾಕ್ ನಾಯಕನೊಂದಿಗೆ ಕೈಕುಲುಕದ ಟೀಂ ಇಂಡಿಯಾ ನಾಯಕ

India vs Pakistan U19 Asia Cup: ದುಬೈನಲ್ಲಿ ನಡೆದ ಅಂಡರ್ 19 ಏಷ್ಯಾಕಪ್ ಭಾರತ vs ಪಾಕಿಸ್ತಾನ ಪಂದ್ಯದಲ್ಲಿ ಆಟಗಾರರು ಕೈಕುಲುಕದೆ ಹಿರಿಯರ ಪಂದ್ಯದ ಸಂಪ್ರದಾಯ ಮುಂದುವರಿಸಿದರು. ಐಸಿಸಿ ಮನವಿಯ ಹೊರತಾಗಿಯೂ ಬಿಸಿಸಿಐ ತನ್ನ ನಿಲುವನ್ನು ಬದಲಿಸಲಿಲ್ಲ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಸಮಯದಲ್ಲಿ ನಡೆದ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ರಾಜಕೀಯವನ್ನು ಕ್ರೀಡೆಯಿಂದ ದೂರವಿಡಲು ಕೈಕುಲುಕುವಂತೆ ಐಸಿಸಿ ಮನವಿ ಮಾಡಿತ್ತು.

IPL 2026 Auction: 6 ಭಾರತೀಯರು ಸೇರಿದಂತೆ 9 ಆಟಗಾರರು ಐಪಿಎಲ್ ಹರಾಜಿನಿಂದ ಔಟ್

IPL 2026 Auction: ಐಪಿಎಲ್ ಮಿನಿ ಹರಾಜು 2026 ಆಟಗಾರರ ಪಟ್ಟಿಯಲ್ಲಿ ಬಿಸಿಸಿಐ ಪ್ರಮುಖ ಬದಲಾವಣೆ ಮಾಡಿದೆ. ಮೊದಲು 350 ಆಟಗಾರರನ್ನು ಸೇರಿಸಿ, ನಂತರ 9 ಮಂದಿಯನ್ನು ಸೇರಿಸಲಾಗಿತ್ತು. ಆದರೆ ಹರಾಜಿಗೂ ಮುನ್ನ ಈ 9 ಆಟಗಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಸ್ವಸ್ತಿಕ್ ಚಿಕಾರ, ವಿರಾಟ್ ಸಿಂಗ್ ಸೇರಿದಂತೆ ಹಲವು ಭಾರತೀಯ-ವಿದೇಶಿ ಆಟಗಾರರು ಹೊರಬಿದ್ದಿದ್ದು, ಇದಕ್ಕೆ ಕಾರಣ ಅಸ್ಪಷ್ಟವಾಗಿದೆ.

ಐಪಿಎಲ್ ಮಿನಿ ಹರಾಜು ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ಎಲ್ಲಿ ವೀಕ್ಷಿಸಬಹುದು?

IPL Mini Auction 2026: ಮುಂದಿನ ಐಪಿಎಲ್ ಸೀಸನ್‌ಗಾಗಿ ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯುವ ಮಿನಿ ಹರಾಜಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಗುವ ಈ ಹರಾಜನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಸುಮಾರು 350 ಆಟಗಾರರಲ್ಲಿ ಗರಿಷ್ಠ 77 ಆಟಗಾರರಿಗೆ ಅವಕಾಶವಿದೆ.

IND vs SA: ನಾಲಾಯಕ್ ನಾಯಕ, ಉಪನಾಯಕ; ಭಾರತ ಟಿ20 ತಂಡದಲ್ಲಿರುವುದು 9 ಆಟಗಾರರಷ್ಟೆ

Team India T20: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸೋಲಿಗೆ ಸೂರ್ಯಕುಮಾರ್ ಯಾದವ್ ಮತ್ತು ಶುಭ್​ಮನ್ ಗಿಲ್ ಕಳಪೆ ಬ್ಯಾಟಿಂಗ್ ಪ್ರದರ್ಶನವೇ ಕಾರಣ. ನಾಯಕ ಸೂರ್ಯಕುಮಾರ್ ಕಳೆದ 20 ಪಂದ್ಯಗಳಲ್ಲಿ ಅರ್ಧಶತಕ ಗಳಿಸಿಲ್ಲ, ಗಿಲ್ ಸಹ T20ಯಲ್ಲಿ ನಿರಂತರವಾಗಿ ವಿಫಲರಾಗಿದ್ದಾರೆ. ಇವರ ಕಳಪೆ ಫಾರ್ಮ್ ಮುಂಬರುವ ಟಿ20 ವಿಶ್ವಕಪ್‌ಗೆ ತಂಡದ ಸಿದ್ಧತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಪ್ರತಿಭಾವಂತರಿಗೆ ಅವಕಾಶ ಸಿಗದಿರುವುದು ಆತಂಕಕಾರಿ ಸಂಗತಿಯಾಗಿದೆ.

IND vs SA: 7 ಕ್ಕೆ ಏಳರಲ್ಲೂ ಸೋಲು; ಗುರಿ ದೊಡ್ಡದಿದ್ದರೆ ಟೀಂ ಇಂಡಿಯಾಗೆ ನಡುಕ

India vs South Africa T20: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ T20ಯಲ್ಲಿ ಟೀಂ ಇಂಡಿಯಾ 51 ರನ್‌ಗಳ ಭಾರಿ ಸೋಲು ಕಂಡಿದೆ. 213 ರನ್‌ಗಳ ದೊಡ್ಡ ಗುರಿ ಬೆನ್ನಟ್ಟುವಲ್ಲಿ ಭಾರತ ವಿಫಲವಾಯಿತು. 200+ ಗುರಿಗಳ ಮುಂದೆ ತಂಡ ನಡುಗುತ್ತದೆ ಎಂದು ಅಂಕಿಅಂಶಗಳು ತೋರಿಸುತ್ತವೆ. ಬುಮ್ರಾ ಮತ್ತು ಅರ್ಷದೀಪ್ ದುಬಾರಿಯಾಗಿದ್ದು ಸೋಲಿಗೆ ಕಾರಣವಾಯಿತು. ಈ ಗೆಲುವಿನೊಂದಿಗೆ ಆಫ್ರಿಕಾ ಭಾರತದ ವಿರುದ್ಧ ಅತಿ ಹೆಚ್ಚು T20 ಗೆದ್ದ ದಾಖಲೆ ನಿರ್ಮಿಸಿದೆ.

ಬರೋಬ್ಬರಿ 15 ವರ್ಷಗಳ ನಂತರ ಡೆಲ್ಲಿ ಪರ ಕಣಕ್ಕಿಳಿಯಲಿರುವ ಕಿಂಗ್ ಕೊಹ್ಲಿ

Virat Kohli Vijay Hazare Trophy: ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ಸಜ್ಜಾಗಿದ್ದಾರೆ. ದೆಹಲಿ ಸಂಭಾವ್ಯ ತಂಡದಲ್ಲಿ ಆಯ್ಕೆಯಾದ ಕೊಹ್ಲಿ, ರಿಷಭ್ ಪಂತ್ ಜೊತೆ ಕಣಕ್ಕಿಳಿಯಲಿದ್ದಾರೆ. 2027ರ ವಿಶ್ವಕಪ್ ದೃಷ್ಟಿಯಿಂದ ಕೊಹ್ಲಿಗೆ ಇದು ನಿರ್ಣಾಯಕವಾಗಿದೆ. ಇವರೊಂದಿಗೆ ರೋಹಿತ್ ಶರ್ಮಾ ಕೂಡ ಈ ದೇಶಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಇದು ದೇಶಿ ಕ್ರಿಕೆಟ್‌ಗೆ ಹೊಸ ಮೆರುಗು ನೀಡಲಿದೆ.

ರೋಹಿತ್​, ಕೊಹ್ಲಿ ಖಜಾನೆಗೆ ಕತ್ತರಿ ಹಾಕಿ, ಗಿಲ್ ಜೇಬು ತುಂಬಿಸಲು ಮುಂದಾದ ಬಿಸಿಸಿಐ

BCCI Contract: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಬಿಸಿಸಿಐ ವಾರ್ಷಿಕ ವೇತನಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಟಿ20 ಹಾಗೂ ಟೆಸ್ಟ್‌ಗೆ ವಿದಾಯ ಹೇಳಿ ಕೇವಲ ಏಕದಿನ ಮಾದರಿಯಲ್ಲಿ ಆಡುತ್ತಿರುವ ಕಾರಣ ಅವರ ಗ್ರೇಡ್ ಎ+ ನಿಂದ ಎ ಗೆ ಇಳಿಯಬಹುದು. ಇತ್ತ, ಎಲ್ಲಾ ಮೂರು ಸ್ವರೂಪಗಳಲ್ಲಿ ಆಡುವ ಶುಭ್​ಮನ್ ಗಿಲ್ ಎ ಗ್ರೇಡ್‌ನಿಂದ ಎ+ ಗೆ ಬಡ್ತಿ ಪಡೆಯುವ ನಿರೀಕ್ಷೆಯಿದೆ. ಡಿಸೆಂಬರ್ 22 ರ ಬಿಸಿಸಿಐ ಸಭೆಯಲ್ಲಿ ಈ ಕುರಿತು ನಿರ್ಧಾರವಾಗಲಿದೆ.

IND vs SA: ಎರಡಂಕಿ ಮೊತ್ತಕ್ಕೆ ಆಫ್ರಿಕಾ ಆಲೌಟ್; ಭಾರತಕ್ಕೆ ಭಾರಿ ಅಂತರದ ಜಯ

India vs South Africa 1st T20: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 101 ರನ್‌ಗಳ ಭಾರಿ ಜಯ ಸಾಧಿಸಿದೆ. ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾವನ್ನು ಕೇವಲ 74 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ ತಂಡ ಹೊಸ ದಾಖಲೆ ಬರೆಯಿತು. ಹಾರ್ದಿಕ್ ಪಾಂಡ್ಯ ಅರ್ಧಶತಕ ಹಾಗೂ 1 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

IPL: ಮಾಯವಾಯ್ತ ಐಪಿಎಲ್ ಜನಪ್ರಿಯತೆ? ಪಾತಾಳಕ್ಕೆ ಕುಸಿದ ಎಲ್ಲಾ ತಂಡಗಳ ಬ್ರಾಂಡ್ ಮೌಲ್ಯ

IPL Brand Value Decline: 2026ರ ಐಪಿಎಲ್‌ ಮಿನಿ ಹರಾಜಿಗೆ ಸಿದ್ಧತೆಗಳು ನಡೆಯುತ್ತಿದ್ದರೂ, ಐಪಿಎಲ್ ತಂಡಗಳ ಬ್ರಾಂಡ್ ಮೌಲ್ಯ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಗುಜರಾತ್ ಟೈಟಾನ್ಸ್ ಹೊರತುಪಡಿಸಿ ಬಹುತೇಕ ಎಲ್ಲಾ ತಂಡಗಳ ಜನಪ್ರಿಯತೆ ಇಳಿದಿದ್ದು, ರಾಜಸ್ಥಾನ ರಾಯಲ್ಸ್ ಶೇ. 35ರಷ್ಟು ಕುಸಿತ ಕಂಡಿದೆ. ಐಪಿಎಲ್ ತನ್ನ ಜನಪ್ರಿಯತೆಯನ್ನು ಕಳೆದುಕೊಳ್ಳುತ್ತಿದೆಯೇ ಎಂಬ ಅನುಮಾನ ಮೂಡಿದೆ.

IND vs SA: ಮೊದಲ ಟಿ20 ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ? ಯಾರಿಗೆಲ್ಲ ಸ್ಥಾನ?

IND vs SA Playing XI: ಭಾರತ-ದಕ್ಷಿಣ ಆಫ್ರಿಕಾ ಮೊದಲ T20 ಪಂದ್ಯ ಡಿಸೆಂಬರ್ 9 ರಂದು ಕಟಕ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಬಗ್ಗೆ ಭಾರಿ ಕುತೂಹಲವಿದೆ. ಶುಭ್​ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದ್ದು, ಅಭಿಷೇಕ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಪ್ರಮುಖ ಆಟಗಾರರು. ಜಿತೇಶ್ ಶರ್ಮಾ ವಿಕೆಟ್ ಕೀಪರ್ ಆಗುವ ಸಾಧ್ಯತೆ ಹೆಚ್ಚು. ಬುಮ್ರಾ, ಅರ್ಷದೀಪ್ ಮತ್ತು ವರುಣ್ ಚಕ್ರವರ್ತಿ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.

ರೋ-ಕೊ ಜೋಡಿ ಟೀಂ ಇಂಡಿಯಾ ಪರ ಮತ್ತೆ ಕಣಕ್ಕಿಳಿಯುವುದು ಯಾವಾಗ? ದಿನಾಂಕ ಪ್ರಕಟ

Virat Kohli Rohit Sharma next match: ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ 2-1 ಏಕದಿನ ಸರಣಿ ಗೆದ್ದಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ಟಿ20 ಮತ್ತು ಟೆಸ್ಟ್‌ನಿಂದ ನಿವೃತ್ತರಾಗಿರುವ ಈ ಜೋಡಿ ಮುಂದಿನ ಸರಣಿಯಲ್ಲಿ ಯಾವಾಗ ಆಡುತ್ತಾರೆ ಎಂಬ ಕುತೂಹಲವಿದೆ. ಇವರಿಬ್ಬರು ಜನವರಿ 2026 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಅದಕ್ಕೂ ಮುನ್ನ ದೇಶೀಯ ಕ್ರಿಕೆಟ್ ಆಡುವ ಸಾಧ್ಯತೆಯಿದೆ.

IND vs SA: ಮೊದಲ ಟಿ20ಯಲ್ಲಿ ಸಂಜುಗೆ ಅವಕಾಶ ಸಿಗುತ್ತಾ? ಸೂರ್ಯ ಏನು ಹೇಳಿದ್ರು ನೋಡಿ

India vs South Africa T20: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ T20 ಪಂದ್ಯದಲ್ಲಿ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು ನೀಡಿದ್ದಾರೆ. ಶುಭ್‌ಮನ್ ಗಿಲ್ ಆಡಲು ಸಿದ್ಧರಾಗಿದ್ದಾರೆ. ಆದರೆ, ಅತ್ಯುತ್ತಮ ಫಾರ್ಮ್‌ನಲ್ಲಿದ್ದರೂ, ಆಸ್ಟ್ರೇಲಿಯಾ ಪ್ರವಾಸದ ಕೊನೆಯ ಪ್ಲೇಯಿಂಗ್ 11 ಅನ್ನು ಮುಂದುವರೆಸುವ ನಿರ್ಧಾರದಿಂದ ಸಂಜು ಸ್ಯಾಮ್ಸನ್‌ಗೆ ಮೊದಲ ಪಂದ್ಯದಲ್ಲಿ ಅವಕಾಶ ಸಿಗುವುದು ಅನುಮಾನ ಎಂದು ಸೂರ್ಯಕುಮಾರ್ ಹೇಳಿಕೆ ಸೂಚಿಸುತ್ತದೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ