AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI

BCCI

BCCI: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಭಾರತೀಯ ಕ್ರಿಕೆಟ್​ನ ಆಡಳಿತ ಕೇಂದ್ರ. 1928 ರಲ್ಲಿ ರಚಿಸಲಾದ ಈ ಸಂಸ್ಥೆಯು ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯ ಮೊದಲ ಅಧ್ಯಕ್ಷ ಆರ್​ಇ ಗ್ರಾಂಟ್ ಗೋವನ್. ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರೋಜರ್ ಬಿನ್ನಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪೂರ್ಣ ಮತ್ತು ಸಹವರ್ತಿ ಸದಸ್ಯ ಸಂಸ್ಥೆಗಳನ್ನು ಒಳಗೊಂಡಿದ್ದು, ಇದಲರಲ್ಲಿ ಬಹುಪಾಲು ಸದಸ್ಯರು ರಾಜ್ಯ ಕ್ರಿಕೆಟ್ ಸಂಸ್ಥೆಗಳಾಗಿವೆ. ಅದರಂತೆ ಇದೀಗ ಬಿಸಿಸಿಐ ಅಧೀನದಲ್ಲಿ 41 ಕ್ರಿಕೆಟ್ ಸಂಸ್ಥೆಗಳಿವೆ. ಇನ್ನು ರಾಷ್ಟ್ರೀಯ ಸರಣಿಗಳೊಂದಿಗೆ ಬಿಸಿಸಿಐ ಆಯೋಜಿಸುವ ಪ್ರಮುಖ ದೇಶೀಯ ಟೂರ್ನಿಗಳೆಂದರೆ ರಣಜಿ ಟ್ರೋಫಿ, ವಿಜಯ್ ಹಝಾರೆ ಟ್ರೋಫಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ದುಲೀಪ್ ಟ್ರೋಫಿ ಮತ್ತು ಐಪಿಎಲ್​

ಇನ್ನೂ ಹೆಚ್ಚು ಓದಿ

ಮುಂಬರುವ ಎರಡು ಟಿ20 ಸರಣಿಗಳಿಂದ ಹಾರ್ದಿಕ್ ಪಾಂಡ್ಯಗೆ ಕೋಕ್?

Hardik Pandya: ಹಾರ್ದಿಕ್ ಪಾಂಡ್ಯ ಐರ್ಲೆಂಡ್ ಮತ್ತು ಇಂಗ್ಲೆಂಡ್ ಟಿ20 ಪ್ರವಾಸಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. 2027ರ ಏಕದಿನ ವಿಶ್ವಕಪ್‌ಗೆ ಅವರನ್ನು ಸಿದ್ಧಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ದಿಕ್ ಅವರ ಫಿಟ್‌ನೆಸ್ ಮತ್ತು 10 ಓವರ್ ಬೌಲಿಂಗ್ ಸಾಮರ್ಥ್ಯವನ್ನು ಆಯ್ಕೆದಾರರು ಸೂಕ್ಷ್ಮವಾಗಿ ಗಮನಿಸಲಿದ್ದಾರೆ. ಗಾಯದ ಸಮಸ್ಯೆಗಳು ಪಾಂಡ್ಯಗೆ ದೊಡ್ಡ ತಲೆನೋವಾಗಿದ್ದು, ಶಿವಂ ದುಬೆ ಮತ್ತು ನಿತೀಶ್ ರೆಡ್ಡಿ ಅವರ ಸ್ಥಾನ ತುಂಬುವ ಸಾಧ್ಯತೆ ಇದೆ.

‘ಆ ಒಂದು ಪಂದ್ಯಕ್ಕೆ ಏಕೆ ಅಷ್ಟೊಂದು ಮನ್ನಣೆ’?; ವಿಶ್ವಕಪ್​ಗೂ ಮುನ್ನ ಸ್ಮೃತಿ ಮನವಿ

Smriti Mandhana:2026ರ ಮಹಿಳಾ ಟಿ20 ವಿಶ್ವಕಪ್ ಸಮೀಪಿಸುತ್ತಿದ್ದು, ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ವಿಶೇಷ ಮನವಿ ಮಾಡಿದ್ದಾರೆ. ಭಾರತ-ಪಾಕ್ ಪಂದ್ಯಕ್ಕೆ ಮಾತ್ರವಲ್ಲದೆ, ಪಂದ್ಯಾವಳಿಯ ಎಲ್ಲಾ ಪಂದ್ಯಗಳಿಗೂ ಅಭಿಮಾನಿಗಳು ಮತ್ತು ಮಾಧ್ಯಮಗಳು ಸಮಾನ ಗಮನ ಮತ್ತು ಬೆಂಬಲ ನೀಡಬೇಕು. ಮಹಿಳಾ ಕ್ರಿಕೆಟ್ ಪ್ರಗತಿಗೆ ಇದು ಅತ್ಯಗತ್ಯ ಎಂದು ಮಂಧಾನ ಒತ್ತಿ ಹೇಳಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆರ್​ಸಿಬಿ ಪರ ಆಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ

KS Bharat Retires from International Cricket at 32: ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೆ.ಎಸ್. ಭರತ್ 32ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸಣ್ಣ ಟೆಸ್ಟ್ ವೃತ್ತಿಜೀವನದಲ್ಲಿ, ಅವರು ಭಾರತದ ಪರ 7 ಪಂದ್ಯಗಳನ್ನು ಆಡಿದ್ದು, ವಿಕೆಟ್ ಕೀಪಿಂಗ್‌ನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೇರಿದಂತೆ ತಂಡದ ಸದಸ್ಯರು, ತರಬೇತುದಾರರು ಮತ್ತು ಬಿಸಿಸಿಐಗೆ ಕೃತಜ್ಞತೆ ಸಲ್ಲಿಸಿ ಹೆಮ್ಮೆಯಿಂದ ತಮ್ಮ ವಿದಾಯ ಹೇಳಿದ್ದಾರೆ.

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಜೊತೆಗೆ ರೋಹಿತ್ ಕೂಡ ಔಟ್?

India vs Afghanistan Series: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಕ್ರಿಕೆಟ್ ಸರಣಿ ಜೂನ್ 6 ರಿಂದ ಪ್ರಾರಂಭವಾಗಲಿದೆ. ಆದರೆ, ಈ ಸರಣಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದು, ಮಂಡಿರಜ್ಜು ಗಾಯದಿಂದ ರೋಹಿತ್ ಶರ್ಮಾ ಆಡುವುದು ಅನುಮಾನವಾಗಿದೆ. ಈ ದಿಗ್ಗಜರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಜೂನ್ 6 ರಂದು ಆಯ್ಕೆದಾರರು ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಅವರಂತಹ ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.

ಶ್ರೇಯಸ್ ಅಯ್ಯರ್​ಗೆ ಟಿ20 ತಂಡದ ನಾಯಕತ್ವ; ಯಾರಿಗೆ ಸಿಗಲಿದೆ ಉಪನಾಯಕತ್ವ?

Shreyas Iyer India T20 captain: ಭಾರತದ ಮುಂದಿನ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅಧಿಕೃತವಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ. ಜೂನ್ 6 ರಿಂದ ಪ್ರಾರಂಭವಾಗುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಗಳಿಗೆ ಅಯ್ಯರ್ ತಂಡವನ್ನು ಮುನ್ನಡೆಸಲಿದ್ದಾರೆ. ಸೂರ್ಯಕುಮಾರ್ ಯಾದವ್ ಬದಲಿಗೆ ಅಯ್ಯರ್ ಆಯ್ಕೆಯಾಗಲಿದ್ದು, ತಿಲಕ್ ವರ್ಮಾ ಉಪನಾಯಕತ್ವ ವಹಿಸಲಿದ್ದಾರೆ. ಐಪಿಎಲ್‌ನಲ್ಲಿ ಶ್ರೇಯಸ್ ಯಶಸ್ವಿ ನಾಯಕತ್ವದ ಅನುಭವ ಹೊಂದಿದ್ದಾರೆ. ಬಿಸಿಸಿಐನ ಅಂತಿಮ ನಿರ್ಧಾರ ಶೀಘ್ರದಲ್ಲೇ ಹೊರಬೀಳಲಿದೆ.

IND vs AFG: ಕೊಹ್ಲಿ ಬದಲು ಯಾರಿಗೆ ಅವಕಾಶ? ಹೇಗಿರಲಿದೆ ಪ್ಲೇಯಿಂಗ್ 11?

Virat Kohli Injury: ವಿರಾಟ್ ಕೊಹ್ಲಿ ಗಾಯದ ಕಾರಣ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಐಪಿಎಲ್ ಫೈನಲ್‌ನಲ್ಲಿ ಆದ ಮಂಡಿರಜ್ಜು ಗಾಯದಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ, ಇದು ವಿಶ್ವಕಪ್ ಸಿದ್ಧತೆಗಳಿಗೆ ಹಿನ್ನಡೆಯಾಗಿದೆ. ಅವರ ಬದಲಿಗೆ ಇಶಾನ್ ಕಿಶನ್ ಆಡುವ ಸಾಧ್ಯತೆಯಿದೆ. ಟೀಂ ಇಂಡಿಯಾದಲ್ಲಿ ರೋಹಿತ್, ಗಿಲ್, ಶ್ರೇಯಸ್, ರಾಹುಲ್ ಮತ್ತು ಆಲ್‌ರೌಂಡರ್‌ಗಳಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.

Women’s T20 World Cup 2026: ಚಾಂಪಿಯನ್‌ ತಂಡಕ್ಕೆ ಸಿಗಲಿದೆ ದಾಖಲೆಯ ಬಹುಮಾನ..!

Women's T20 World Cup 2026 Prize Money: 10ನೇ ಮಹಿಳಾ ಟಿ20 ವಿಶ್ವಕಪ್ ಜೂನ್ 12ರಿಂದ ಜುಲೈ 5ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯಲಿದೆ. ಈ ಬಾರಿಯ ಪಂದ್ಯಾವಳಿಯಲ್ಲಿ 12 ತಂಡಗಳು ಭಾಗವಹಿಸಲಿದ್ದು, ಒಟ್ಟು ಬಹುಮಾನದ ಮೊತ್ತ 83 ಕೋಟಿ ರೂ.ಗೆ ಏರಿಕೆಯಾಗಿದೆ. ಜೂನ್ 14ರಂದು ಭಾರತ ತಂಡ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ವಿಜೇತ ತಂಡಕ್ಕೆ 21.8 ಕೋಟಿ ರೂ. ಬಹುಮಾನ ಲಭಿಸಲಿದೆ.

ನಾಯಕತ್ವದ ಜೊತೆಗೆ ಟಿ20 ತಂಡದಿಂದಲೂ ಸೂರ್ಯಕುಮಾರ್​ಗೆ ಗೇಟ್​ಪಾಸ್

Suryakumar Yadav Sacked: ಕಳಪೆ ಫಾರ್ಮ್‌ನಿಂದಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವ ಮತ್ತು ತಂಡದಿಂದ ಕೈಬಿಡಲು ಬಿಸಿಸಿಐ ನಿರ್ಧರಿಸಿದೆ. 2026ರ ಐಪಿಎಲ್ ಹಾಗೂ ಇತ್ತೀಚಿನ ಪಂದ್ಯಗಳಲ್ಲಿ ಅವರ ಪ್ರದರ್ಶನ ತೀರ ಕಳಪೆಯಾಗಿದ್ದು, ಗೌತಮ್ ಗಂಭೀರ್ ಜೊತೆ ಚರ್ಚಿಸಿ ಹೊಸ ನಾಯಕನನ್ನು ಘೋಷಿಸಲಾಗುವುದು. ಶ್ರೇಯಸ್ ಅಯ್ಯರ್ ಸೇರಿದಂತೆ ಹಲವು ಆಟಗಾರರ ಹೆಸರು ನಾಯಕತ್ವಕ್ಕೆ ಕೇಳಿಬರುತ್ತಿದೆ.

IND vs AFG: ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

India vs Afghanistan Test: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟೆಸ್ಟ್ ಪಂದ್ಯ ಜೂನ್ 6 ರಂದು ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಆಟಗಾರರು ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಅಭ್ಯಾಸದಲ್ಲಿ ತೊಡಗಿದ್ದಾರೆ. ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್ ಪ್ರಮುಖ ಆಕರ್ಷಣೆಯಾಗಿದ್ದಾರೆ. ಈ ಮೈದಾನದಲ್ಲಿ ನಡೆಯಲಿರುವ ಮೊದಲ ಅಂತಾರಾಷ್ಟ್ರೀಯ ಪಂದ್ಯ ಇದಾಗಿದ್ದು, ಭಾರತ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ?

Rohit Sharma and Virat Kohli Practice: ಐಪಿಎಲ್ ನಂತರ ಟೀಂ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧದ ಸರಣಿಯೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೂನ್ 9 ರಿಂದ ಮುಲ್ಲನ್‌ಪುರದಲ್ಲಿ ಅಭ್ಯಾಸ ನಡೆಸಲಿದ್ದು, ಜೂನ್ 13 ರಂದು ಧರ್ಮಶಾಲಾದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಈ ಸರಣಿಯು 2027ರ ವಿಶ್ವಕಪ್‌ಗೆ ಪ್ರಮುಖ ಸಿದ್ಧತೆಯಾಗಿದ್ದು, ಇಬ್ಬರೂ ಆಟಗಾರರ ಫಿಟ್‌ನೆಸ್ ಮತ್ತು ಫಾರ್ಮ್ ನಿರ್ಣಾಯಕವಾಗಿದೆ.

IPL 2026: ಈ ಐಪಿಎಲ್​ನಲ್ಲೂ ಈ 5 ದಾಖಲೆಗಳನ್ನು ಮುರಿಯಲಾಗಲಿಲ್ಲ..!

5 Historic Unbroken Records: 2026ರ ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ಸೀಸನ್‌ನಲ್ಲೂ ಕ್ರಿಸ್ ಗೇಲ್ ಅವರ ವೈಯಕ್ತಿಕ ಗರಿಷ್ಠ ಸ್ಕೋರ್ (175 ರನ್), ವಿರಾಟ್ ಕೊಹ್ಲಿ ಅವರ ಒಂದೇ ಸೀಸನ್‌ನಲ್ಲಿ ಅತಿ ಹೆಚ್ಚು ರನ್ (973 ರನ್) ಸೇರಿದಂತೆ ಐಪಿಎಲ್ ಇತಿಹಾಸದ 5 ಪ್ರಮುಖ ದಾಖಲೆಗಳನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಲಿಲ್ಲ. ವೈಭವ್ ಸೂರ್ಯವಂಶಿ, ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದರೂ, ಗೇಲ್, ಕೊಹ್ಲಿ, ಪಟೇಲ್, ಬ್ರಾವೋ ಅವರ ದಾಖಲೆಗಳು ಅಚಲವಾಗಿ ಉಳಿದವು.

IND vs AFG: ಟೀಂ ಇಂಡಿಯಾಗೆ ಆಘಾತ; ಟೆಸ್ಟ್ ಪಂದ್ಯಕ್ಕೆ ಸ್ಟಾರ್ ವೇಗಿ ಅಲಭ್ಯ

Mohammed Siraj injury: ಮೊಹಮ್ಮದ್ ಸಿರಾಜ್ ಗಾಯದಿಂದಾಗಿ ಭಾರತ-ಅಫ್ಘಾನಿಸ್ತಾನ ಟೆಸ್ಟ್‌ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ. ಜೂನ್ 6ರಿಂದ ನಡೆಯುವ ಈ ಸರಣಿಗೆ ಸಿರಾಜ್ ಬದಲಿಗೆ ಗುರ್ನೂರ್ ಬ್ರಾರ್ ಅಥವಾ ಆಕಿಬ್ ನಬಿಗೆ ಅವಕಾಶ ಸಿಗಬಹುದು. ಐಪಿಎಲ್ ನಂತರ ಭಾರತ ತಂಡ ಅಂತರಾಷ್ಟ್ರೀಯ ಸರಣಿಗೆ ಸಜ್ಜಾಗಿದ್ದು, ಏಕದಿನ ಪಂದ್ಯಗಳ ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿದೆ.