AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI

BCCI

BCCI: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಭಾರತೀಯ ಕ್ರಿಕೆಟ್​ನ ಆಡಳಿತ ಕೇಂದ್ರ. 1928 ರಲ್ಲಿ ರಚಿಸಲಾದ ಈ ಸಂಸ್ಥೆಯು ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯ ಮೊದಲ ಅಧ್ಯಕ್ಷ ಆರ್​ಇ ಗ್ರಾಂಟ್ ಗೋವನ್. ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರೋಜರ್ ಬಿನ್ನಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪೂರ್ಣ ಮತ್ತು ಸಹವರ್ತಿ ಸದಸ್ಯ ಸಂಸ್ಥೆಗಳನ್ನು ಒಳಗೊಂಡಿದ್ದು, ಇದಲರಲ್ಲಿ ಬಹುಪಾಲು ಸದಸ್ಯರು ರಾಜ್ಯ ಕ್ರಿಕೆಟ್ ಸಂಸ್ಥೆಗಳಾಗಿವೆ. ಅದರಂತೆ ಇದೀಗ ಬಿಸಿಸಿಐ ಅಧೀನದಲ್ಲಿ 41 ಕ್ರಿಕೆಟ್ ಸಂಸ್ಥೆಗಳಿವೆ. ಇನ್ನು ರಾಷ್ಟ್ರೀಯ ಸರಣಿಗಳೊಂದಿಗೆ ಬಿಸಿಸಿಐ ಆಯೋಜಿಸುವ ಪ್ರಮುಖ ದೇಶೀಯ ಟೂರ್ನಿಗಳೆಂದರೆ ರಣಜಿ ಟ್ರೋಫಿ, ವಿಜಯ್ ಹಝಾರೆ ಟ್ರೋಫಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ದುಲೀಪ್ ಟ್ರೋಫಿ ಮತ್ತು ಐಪಿಎಲ್​

ಇನ್ನೂ ಹೆಚ್ಚು ಓದಿ
Follow us:

IND vs ENG: ಮಿಂಚಿದ ಅಕ್ಷರ್, ಗಿಲ್; ಇಂಗ್ಲೆಂಡ್‌ ವಿರುದ್ಧ ಗೆದ್ದ ಟೀಂ ಇಂಡಿಯಾ

Team India's Commanding Start: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಇಂಗ್ಲೆಂಡ್ 258 ರನ್ ಗಳಿಸಿದರೆ, ಭಾರತ ಶುಭ್​ಮನ್ ಗಿಲ್ (80 ರನ್ ರಿಟೈಡ್ ಹರ್ಟ್) ಮತ್ತು ಅಕ್ಷರ್ ಪಟೇಲ್ (50 ರನ್, 4 ವಿಕೆಟ್) ಅವರ ಆಲ್​ರೌಂಡ್ ಪ್ರದರ್ಶನದಿಂದ ಜಯ ಗಳಿಸಿತು. ಈ ಗೆಲುವಿನೊಂದಿಗೆ ಭಾರತ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ. ಇದು ಇಂಗ್ಲೆಂಡ್ ಪ್ರವಾಸದಲ್ಲಿ ಭಾರತದ ಮೊದಲ ಗೆಲುವಾಗಿದೆ.

IND vs ENG: ಏಕದಿನ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್

Shubman Gill Sets New ODI World Record: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶುಭ್​ಮನ್ ಗಿಲ್ ಅರ್ಧಶತಕ ಗಳಿಸಿ ಏಕದಿನ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 50ಕ್ಕೂ ಹೆಚ್ಚು ಇನ್ನಿಂಗ್ಸ್‌ಗಳಲ್ಲಿ 60ಕ್ಕೂ ಹೆಚ್ಚಿನ ಸರಾಸರಿ ಹಾಗೂ 100ಕ್ಕೂ ಹೆಚ್ಚಿನ ಸ್ಟ್ರೈಕ್‌ರೇಟ್ ಹೊಂದಿದ ವಿಶ್ವದ ಮೊದಲ ಬ್ಯಾಟರ್ ಎನಿಸಿದ್ದಾರೆ. ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಎಬಿ ಡಿವಿಲಿಯರ್ಸ್‌ನಂತಹ ದಿಗ್ಗಜರಿಗೂ ಈ ಸಾಧನೆ ಸಾಧ್ಯವಾಗಿರಲಿಲ್ಲ.

IND vs ENG: 12 ಎಸೆತಗಳಲ್ಲಿ 13 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟಿದ ಅಕ್ಷರ್ ಪಟೇಲ್

Akshar Patel's 4-Wicket Haul: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅಮೋಘ ಬೌಲಿಂಗ್ ಪ್ರದರ್ಶಿಸಿ 4 ಪ್ರಮುಖ ವಿಕೆಟ್ ಕಬಳಿಸಿದರು. ಕೇವಲ 12 ಎಸೆತಗಳಲ್ಲಿ 4 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುವ ಮೂಲಕ ಇಂಗ್ಲೆಂಡ್ ತಂಡವನ್ನು 258 ರನ್‌ಗಳಿಗೆ ಕಟ್ಟಿಹಾಕಿದರು. 41-50 ಓವರ್‌ಗಳಲ್ಲಿ 4 ವಿಕೆಟ್ ಪಡೆದ ಎರಡನೇ ಭಾರತೀಯ ಸ್ಪಿನ್ನರ್ ಎನಿಸಿ ರವೀಂದ್ರ ಜಡೇಜಾ ದಾಖಲೆ ಸಮಕ್ಕೆ ನಿಂತರು.

IND vs ENG: 5 ರನ್​​ಗಳ ಅಂತರದಲ್ಲಿ ಪೆವಿಲಿಯನ್‌ ಸೇರಿಕೊಂಡ ರೋಹಿತ್, ಕೊಹ್ಲಿ

India vs England 1st ODI: ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ vs ಇಂಗ್ಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ, ಇಂಗ್ಲೆಂಡ್ 258 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ರೋಹಿತ್ ಶರ್ಮಾ (11) ಮತ್ತು ವಿರಾಟ್ ಕೊಹ್ಲಿ (5) ವೈಫಲ್ಯದಿಂದ ಆರಂಭಿಕ ಆಘಾತ ಎದುರಾಯಿತು. ಈ ಇಬ್ಬರು ಅನುಭವಿ ಆಟಗಾರರ ಶೀಘ್ರ ವಿಕೆಟ್ ಪತನ ತಂಡವನ್ನು ಸಂಕಷ್ಟಕ್ಕೆ ತಳ್ಳಿದ್ದು, ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ಮೇಲೆ ಭಾರ ಬಿದ್ದಿದೆ.

IND vs ENG: ಒಂದೇ ಕೈನಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದ ಕೆಎಲ್ ರಾಹುಲ್; ವಿಡಿಯೋ

KL Rahul's Stunning Catch: ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ vs ಇಂಗ್ಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಬೌಲರ್‌ಗಳು ಮತ್ತು ಫೀಲ್ಡರ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಕೆಎಲ್ ರಾಹುಲ್ ಅವರ ಆಕರ್ಷಕ ಕ್ಯಾಚ್ ಗಮನ ಸೆಳೆಯಿತು. ಇಂಗ್ಲೆಂಡ್ ತಂಡವನ್ನು 258 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಅಕ್ಷರ್ ಪಟೇಲ್ 4 ವಿಕೆಟ್ ಪಡೆದು ಮಿಂಚಿದರು. ತಂಡದ ಉತ್ತಮ ಫೀಲ್ಡಿಂಗ್ ಪ್ರದರ್ಶನ ಹಿಂದಿನ ಲೋಪಗಳನ್ನು ಮರೆಸಿತು.

IND vs ENG: 968 ದಿನಗಳ ಬಳಿಕ ಕಣಕ್ಕಿಳಿದು ಇತಿಹಾಸ ಸೃಷ್ಟಿಸಿದ ಬುಮ್ರಾ..!

Jasprit Bumrah's Historic ODI Comeback: ಸುಮಾರು ಮೂರು ವರ್ಷಗಳ ನಂತರ ಏಕದಿನ ಕ್ರಿಕೆಟ್‌ಗೆ ಮರಳಿದ ಜಸ್ಪ್ರೀತ್ ಬುಮ್ರಾ, ಇಂಗ್ಲೆಂಡ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದರು. ತಮ್ಮ 90ನೇ ಪಂದ್ಯದಲ್ಲಿ 150 ಏಕದಿನ ವಿಕೆಟ್ ಪಡೆದು ಭಾರತದ ಪರ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ ಹೆಚ್ಷು ಏಕದಿನ ವಿಕೆಟ್ ಪಡೆದ ಮೂರನೇ ಅತಿ ವೇಗದ ಬೌಲರ್ ಎನಿಸಿಕೊಂಡರು. ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು (31) ಏಕದಿನ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು, ರವೀಂದ್ರ ಜಡೇಜಾ ಅವರನ್ನು ಹಿಂದಿಕ್ಕಿದರು.

ಏಕದಿನದಲ್ಲಿ ಕನ್ನಡಿಗನ ಕಮಾಲ್; ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಪ್ರಸಿದ್ಧ್ ಕೃಷ್ಣ

Team India Dominates Edgbaston ODI: ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಹಿನ್ನಡೆ ನಂತರ ಅದ್ಭುತ ಪುನರಾಗಮನ ಮಾಡಿದೆ. ಪ್ರಸಿದ್ಧ್ ಕೃಷ್ಣ ಅವರ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಭಾರತ ಕೇವಲ 19 ರನ್‌ಗಳಿಗೆ 5 ಪ್ರಮುಖ ವಿಕೆಟ್‌ಗಳನ್ನು ಕಬಳಿಸಿತು. ಕೃಷ್ಣ ಒಂದೇ ಓವರ್‌ನಲ್ಲಿ ಬಟ್ಲರ್ ಮತ್ತು ಸ್ಯಾಮ್ ಕರನ್ ಅವರ ಪ್ರಮುಖ ವಿಕೆಟ್‌ಗಳನ್ನು ಪಡೆದರು. ಇದು ಟೀಂ ಇಂಡಿಯಾದ ಬೌಲಿಂಗ್ ಪ್ರಾಬಲ್ಯವನ್ನು ತೋರಿಸಿದೆ.

IND vs ENG: ಒಂದೇ ಓವರ್​ನಲ್ಲಿ ಆರಂಭಿಕರಿಬ್ಬರನ್ನು ಪೆವಿಲಿಯನ್​ಗಟ್ಟಿದ ಬ್ರಾರ್

India vs England ODI: ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ ಯುವ ವೇಗಿ ಗುರ್ನೂರ್ ಬ್ರಾರ್ ಮಿಂಚಿದರು. ತಮ್ಮ ಮೊದಲ ಎರಡು ಓವರ್‌ಗಳಲ್ಲಿ ದುಬಾರಿಯಾಗಿದ್ದರೂ, ಮೂರನೇ ಓವರ್‌ನಲ್ಲಿ ಜಾಕೋಬ್ ಬೆಥೆಲ್ ಹಾಗೂ ಬೆನ್ ಡಕೆಟ್ ಅವರನ್ನು ಔಟ್ ಮಾಡಿ ನಿರ್ಣಾಯಕ ತಿರುವು ನೀಡಿದರು. ಅಪಾಯಕಾರಿ ಅರ್ಧಶತಕದ ಜೊತೆಯಾಟವನ್ನು ಮುರಿದ ಬ್ರಾರ್, ಒಂದೇ ಓವರ್‌ನಲ್ಲಿ ಇಂಗ್ಲೆಂಡ್‌ನ ಇಬ್ಬರು ಆರಂಭಿಕರನ್ನು ಪೆವಿಲಿಯನ್‌ಗೆ ಕಳುಹಿಸಿ ಟೀಂ ಇಂಡಿಯಾಕ್ಕೆ ನಿರಾಳತೆ ತಂದರು.

ಏಕದಿನ ಸರಣಿ ಬಳಿಕ ಟೀಂ ಇಂಡಿಯಾ ಸಹಾಯಕ ಕೋಚ್ ರಾಜೀನಾಮೆ

Ryan ten Doeschate resignation: ಭಾರತ ಕ್ರಿಕೆಟ್ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ವೈಯಕ್ತಿಕ ಮತ್ತು ಕುಟುಂಬದ ಕಾರಣಗಳಿಂದಾಗಿ ಅವರು ತಂಡದಿಂದ ಹೊರನಡೆಯಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ನಂತರ ಅವರು ತಮ್ಮ ಕೊನೆಯ ಪಂದ್ಯವನ್ನು ಆಡಲಿದ್ದಾರೆ. ಅವರ ಒಪ್ಪಂದವೂ ಅಂತ್ಯಗೊಳ್ಳುತ್ತಿದ್ದು, ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸಿದ್ದಾರೆ.

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

India vs England ODI Series Starts: ಭಾರತ-ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿ ಇಂದು ಆರಂಭಗೊಂಡಿದೆ. ಮೊದಲ ಪಂದ್ಯ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದ್ದು, 2027ರ ವಿಶ್ವಕಪ್‌ಗೆ ಇದು ನಿರ್ಣಾಯಕ ಸಿದ್ಧತೆಯಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ದೀರ್ಘ ಸಮಯದ ನಂತರ ಒಟ್ಟಿಗೆ ಆಡುತ್ತಿದ್ದಾರೆ. ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ, ಭಾರತ ಮೊದಲು ಬೌಲಿಂಗ್ ಮಾಡುತ್ತಿದೆ.

IND vs ENG: ಇಂಗ್ಲೆಂಡ್‌ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ

India vs England ODI: ಭಾರತ-ಇಂಗ್ಲೆಂಡ್ ಏಕದಿನ ಸರಣಿ ಆರಂಭವಾಗಿದೆ. ಟಿ20 ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಸಿದ್ಧವಾಗಿದೆ. ಇಂಗ್ಲೆಂಡ್ ಆಡುವ ಹನ್ನೊಂದರ ಬಳಗ ಘೋಷಿಸಿದೆ. ಈ ಸರಣಿಯಲ್ಲಿ ಭಾರತದ 8 ಆಟಗಾರರು ಇಂಗ್ಲೆಂಡ್ ನೆಲದಲ್ಲಿ ತಮ್ಮ ಮೊದಲ ಏಕದಿನ ಪಂದ್ಯವನ್ನಾಡಲಿದ್ದಾರೆ. ರೋಹಿತ್, ಕೊಹ್ಲಿ, ಬುಮ್ರಾ, ರಾಹುಲ್, ಕುಲದೀಪ್‌ಗೆ ಅನುಭವವಿದ್ದರೆ, ಗಿಲ್, ಶ್ರೇಯಸ್, ಇಶಾನ್ ಕಿಶನ್ ಸೇರಿದಂತೆ ಹಲವರಿಗೆ ಇದು ಇಂಗ್ಲೆಂಡ್‌ನಲ್ಲಿ ಮೊದಲ ಏಕದಿನ ಸರಣಿ.

IND vs ENG: ಏಕದಿನ ಸರಣಿಯಲ್ಲಿ 7 ದಾಖಲೆಗಳ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ

Virat Kohli's ODI Comeback: ಗಾಯದಿಂದ ಚೇತರಿಸಿಕೊಂಡಿರುವ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ 15,000 ಏಕದಿನ ರನ್‌ಗಳನ್ನು ಪೂರೈಸುವ, ಇಂಗ್ಲೆಂಡ್ ವಿರುದ್ಧ ಹೆಚ್ಚು ರನ್ ಗಳಿಸುವ ಮತ್ತು ಇನ್ನೂ ಹಲವು ದಾಖಲೆಗಳನ್ನು ಮುರಿಯುವ ಗುರಿ ಹೊಂದಿದ್ದಾರೆ. ಸಚಿನ್ ತೆಂಡೂಲ್ಕರ್ ನಂತರ ಏಕದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆ ಅವರದು.

ಪ್ರಯಾಣಿಕರಂತೆ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್
ಪ್ರಯಾಣಿಕರಂತೆ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್
ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್
ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?