Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI

BCCI

BCCI: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಭಾರತೀಯ ಕ್ರಿಕೆಟ್​ನ ಆಡಳಿತ ಕೇಂದ್ರ. 1928 ರಲ್ಲಿ ರಚಿಸಲಾದ ಈ ಸಂಸ್ಥೆಯು ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯ ಮೊದಲ ಅಧ್ಯಕ್ಷ ಆರ್​ಇ ಗ್ರಾಂಟ್ ಗೋವನ್. ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರೋಜರ್ ಬಿನ್ನಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪೂರ್ಣ ಮತ್ತು ಸಹವರ್ತಿ ಸದಸ್ಯ ಸಂಸ್ಥೆಗಳನ್ನು ಒಳಗೊಂಡಿದ್ದು, ಇದಲರಲ್ಲಿ ಬಹುಪಾಲು ಸದಸ್ಯರು ರಾಜ್ಯ ಕ್ರಿಕೆಟ್ ಸಂಸ್ಥೆಗಳಾಗಿವೆ. ಅದರಂತೆ ಇದೀಗ ಬಿಸಿಸಿಐ ಅಧೀನದಲ್ಲಿ 41 ಕ್ರಿಕೆಟ್ ಸಂಸ್ಥೆಗಳಿವೆ. ಇನ್ನು ರಾಷ್ಟ್ರೀಯ ಸರಣಿಗಳೊಂದಿಗೆ ಬಿಸಿಸಿಐ ಆಯೋಜಿಸುವ ಪ್ರಮುಖ ದೇಶೀಯ ಟೂರ್ನಿಗಳೆಂದರೆ ರಣಜಿ ಟ್ರೋಫಿ, ವಿಜಯ್ ಹಝಾರೆ ಟ್ರೋಫಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ದುಲೀಪ್ ಟ್ರೋಫಿ ಮತ್ತು ಐಪಿಎಲ್​

ಇನ್ನೂ ಹೆಚ್ಚು ಓದಿ

ಜಯ್​ ಶಾ ಬದಲಿಗೆ ಪಾಕಿಸ್ತಾನದ ಮೊಹ್ಸಿನ್ ನಖ್ವಿಗೆ ಅಧ್ಯಕ್ಷ ಸ್ಥಾನ..!

Asian Cricket Council: ಪಾಕಿಸ್ತಾನ ಕ್ರಿಕೆಟ್ ತಂಡದ ನಿರಂತರ ವೈಫಲ್ಯದ ನಡುವೆ, ಮೊಹ್ಸಿನ್ ನಖ್ವಿ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ಜಯ್​ ಶಾ ಅವರ ಬದಲಿಗೆ ಮೊಹ್ಸಿನ್ ನಖ್ವಿ ಈ ಹುದ್ದೆಯನ್ನು ಅಲಂಕರಿಸಿದ್ದಾರೆ.ಈ ಬಾರಿಯ ಏಷ್ಯಾಕಪ್ ಭಾರತದಲ್ಲೇ ನಡೆಯುತ್ತಿರುವ ಕಾರಣ ನಖ್ವಿ ತಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

ತವರಿನಲ್ಲಿ 4 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟ

Team India's 2025 Home Series Schedule: ಬಿಸಿಸಿಐ 2025ರಲ್ಲಿ ಭಾರತ ತಂಡದ ದೇಶೀಯ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 2 ರಿಂದ ಡಿಸೆಂಬರ್ 19 ರವರೆಗೆ ನಡೆಯುವ ಈ ಸರಣಿಯಲ್ಲಿ, ಹಲವು ಹೊಸ ಮತ್ತು ಸಾಂಪ್ರದಾಯಿಕ ಕ್ರೀಡಾಂಗಣಗಳಲ್ಲಿ ಪಂದ್ಯಗಳು ಆಡಲಿವೆ.

ಶ್ರೇಯಸ್​ಗೆ ಶುಭ ಸುದ್ದಿ ನೀಡಿದ ಬಿಸಿಸಿಐ; ಕಿಶನ್​ಗೆ ಮತ್ತೊಮ್ಮೆ ಎದುರಾಯ್ತು ಶಾಕ್

Shreyas Iyer's BCCI Central Contract Return: ಐಪಿಎಲ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಶ್ರೇಯಸ್ ಅಯ್ಯರ್ ಮತ್ತೆ ಬಿಸಿಸಿಐ ಕೇಂದ್ರ ಒಪ್ಪಂದವನ್ನು ಪಡೆಯಲಿದ್ದಾರೆ. ಅವರಿಗೆ ಎ ಗ್ರೇಡ್‌ನಲ್ಲಿ 5 ಕೋಟಿ ರೂಪಾಯಿ ವಾರ್ಷಿಕ ವೇತನ ಸಿಗಲಿದೆ. ಇಶಾನ್ ಕಿಶನ್ ಅವರಿಗೆ ತಾಂತ್ರಿಕ ಕಾರಣಗಳಿಂದ ಕೇಂದ್ರ ಒಪ್ಪಂದ ಸಿಗುತ್ತಿಲ್ಲ. ಅಕ್ಷರ್ ಪಟೇಲ್ ಮತ್ತು ಇತರ ಆಟಗಾರರು ಬಡ್ತಿ ಪಡೆಯಲಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಎ+ ದರ್ಜೆಯ ಒಪ್ಪಂದ ಪಡೆಯುವ ನಿರೀಕ್ಷೆಯಿದೆ.

IPL 2025: ಕಾವ್ಯ ಮಾರನ್ ಸುಳ್ಳು ಹೇಳುತ್ತಿದ್ದಾರಾ? SRH ಆರೋಪಕ್ಕೆ ಸ್ಪಷ್ಟನೆ ನೀಡಿದ HCA

Sunrisers Hyderabad-HCA Dispute: ಸನ್‌ರೈಸರ್ಸ್ ಹೈದರಾಬಾದ್ ಮತ್ತು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ನಡುವಿನ ಟಿಕೆಟ್ ವಿವಾದ ತೀವ್ರಗೊಂಡಿದೆ. SRH, HCA ವಿರುದ್ಧ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಆರೋಪ ಹೊರಿಸಿದೆ. ಆದರೆ HCA ಅಧ್ಯಕ್ಷರು ಈ ಆರೋಪಗಳನ್ನು ಸುಳ್ಳು ಎಂದು ನಿರಾಕರಿಸಿದ್ದಾರೆ. ಹೆಚ್ಚುವರಿ ಟಿಕೆಟ್‌ಗಳ ಬೇಡಿಕೆ ಮತ್ತು ಕ್ರೀಡಾಂಗಣದ ಬಾಡಿಗೆಯ ವಿಷಯದಲ್ಲಿ ಎರಡೂ ಕಡೆ ವಿಭಿನ್ನ ವಾದಗಳಿವೆ.

IPL 2025: ಮುಂಬೈಗೆ ಮರ್ಮಾಘಾತ; ಇನ್ನೆರಡು ವಾರ ಐಪಿಎಲ್​ನಿಂದ ಬುಮ್ರಾ ಔಟ್..!

Jasprit Bumrah Injury Update: ಮುಂಬೈ ಇಂಡಿಯನ್ಸ್‌ನ ವೇಗಿ ಜಸ್ಪ್ರೀತ್ ಬುಮ್ರಾ ಅವರು ಮುಂದಿನ ಎರಡು ವಾರಗಳ ಕಾಲ IPL 2025 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಅವರಿಗೆ ಇನ್ನೂ ಫಿಟ್‌ನೆಸ್ ಕ್ಲಿಯರೆನ್ಸ್ ಸಿಕ್ಕಿಲ್ಲ. ಇದರಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ ಆದರೆ ಅವರ ಮರಳುವಿಕೆಯ ಬಗ್ಗೆ ಖಚಿತತೆ ಇಲ್ಲ.

IPL 2025: ಸಿಎಸ್​ಕೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಯಾನ್ ಪರಾಗ್​ಗೆ ಶಾಕ್ ನೀಡಿದ ಬಿಸಿಸಿಐ

Riyan Parag Fined: ಐಪಿಎಲ್ 2025ರ 11ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದರೂ, ನಾಯಕ ರೈಯಾನ್ ಪರಾಗ್ ಅವರಿಗೆ ನಿಧಾನ ಓವರ್ ರೇಟ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದೇ ನಿಯಮ ಉಲ್ಲಂಘನೆಗೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೂಡ ದಂಡ ಪಾವತಿಸಿದ್ದಾರೆ.

IPL 2025: ಜೈಪುರದಲ್ಲಿ ಧೋನಿಗೆ ವಿಶೇಷ ಗೌರವ ಸಲ್ಲಿಸಿದ ಬಿಸಿಸಿಐ; ವಿಡಿಯೋ

MS Dhoni Honored by BCCI: ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ 2025 ಪಂದ್ಯದ ಮುನ್ನ, ಮಾಜಿ ಭಾರತ ನಾಯಕ ಎಂ.ಎಸ್. ಧೋನಿ ಅವರಿಗೆ ಬಿಸಿಸಿಐ ವಿಶೇಷ ಗೌರವ ಸಲ್ಲಿಸಿದೆ. 18 ವರ್ಷಗಳ ಐಪಿಎಲ್ ಅನುಭವಕ್ಕಾಗಿ ಧೋನಿ ಈ ಗೌರವಕ್ಕೆ ಭಾಜನರಾಗಿದ್ದಾರೆ. ಜೈಪುರದಲ್ಲಿ ನಡೆದ ಈ ಸಮಾರಂಭದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

IPL 2025: ಕಾವ್ಯ ತಂಡಕ್ಕೆ ಬೆದರಿಕೆ, ಬ್ಲ್ಯಾಕ್‌ಮೇಲ್..! ಎಸ್​ಆರ್​ಹೆಚ್ ತವರು ಪಂದ್ಯಗಳು ಬೇರೆಡೆಗೆ ಶಿಫ್ಟ್?

IPL 2025 SRH-HCA Conflict: ಸನ್‌ರೈಸರ್ಸ್ ಹೈದರಾಬಾದ್ ತಂಡವು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಜೊತೆಗಿನ ವಿವಾದದಿಂದಾಗಿ ತನ್ನ ತನ್ನ ತವರು ಪಂದ್ಯಗಳನ್ನು ಬೇರೆಡೆ ಸ್ಥಳಾಂತರಿಸುವ ಬಗ್ಗೆ ಪರಿಗಣಿಸುತ್ತಿದೆ. HCA ಉಚಿತ ಟಿಕೆಟ್‌ಗಳನ್ನು ಒತ್ತಾಯಿಸುತ್ತಿರುವುದರಿಂದ ಈ ವಿವಾದ ಉದ್ಭವಿಸಿದೆ ಎಂದು ವರದಿಯಾಗಿದೆ. SRH ತಂಡವು HCA ವಿರುದ್ಧ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಆರೋಪಗಳನ್ನು ಹೊರಿಸಿದೆ.

IND vs AUS: ಭಾರತ- ಆಸ್ಟ್ರೇಲಿಯಾ ನಡುವೆ ಏಕದಿನ, ಟಿ20 ಸರಣಿ; ವೇಳಾಪಟ್ಟಿ ಪ್ರಕಟ

Team India's Australia White-Ball Tour: ಭಾರತ ಕ್ರಿಕೆಟ್ ತಂಡವು 2025ರ ಅಕ್ಟೋಬರ್-ನವೆಂಬರ್‌ನಲ್ಲಿ 8 ಪಂದ್ಯಗಳ ವೈಟ್ ಬಾಲ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. 3 ಏಕದಿನ ಮತ್ತು 5 ಟಿ20 ಪಂದ್ಯಗಳು 8 ವಿಭಿನ್ನ ನಗರಗಳಲ್ಲಿ ನಡೆಯಲಿವೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಸರಣಿಯಲ್ಲಿ ಮಾತ್ರ ಆಡಲಿದ್ದಾರೆ. ಈ ಪ್ರವಾಸದ ವೇಳಾಪಟ್ಟಿ ಮತ್ತು ಸ್ಥಳಗಳ ಬಗ್ಗೆ ಸಂಪೂರ್ಣ ಮಾಹಿತಿ ಲೇಖನದಲ್ಲಿದೆ.

IND vs ENG: ಬುಮ್ರಾ, ಪಂತ್ ಅಲ್ಲ; ರೋಹಿತ್ ಬದಲು ಈತನಿಗೆ ಭಾರತ ಟೆಸ್ಟ್ ತಂಡದ ನಾಯಕತ್ವ

IND vs ENG: ಐಪಿಎಲ್ ನಂತರದ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ನಾಯಕತ್ವದ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿರುವುದರಿಂದ, ಶುಭ್ಮನ್ ಗಿಲ್ ಅವರನ್ನು ಬದಲಿ ನಾಯಕರಾಗಿ ಆಯ್ಕೆ ಮಾಡುವ ಬಗ್ಗೆ ಸುದ್ದಿ ಇದೆ. ಜಸ್ಪ್ರೀತ್ ಬುಮ್ರಾ ಮತ್ತು ರಿಷಭ್ ಪಂತ್ ಕೂಡ ನಾಯಕತ್ವದ ರೇಸ್​ನಲ್ಲಿದ್ದಾರೆ. ರೋಹಿತ್ ಅವರು ಪ್ರವಾಸದಲ್ಲಿ ಆಡುವ ಬಗ್ಗೆ ನಿರ್ಧಾರವನ್ನು ಮೇ ತಿಂಗಳಲ್ಲಿ ತಿಳಿಸುವ ಸಾಧ್ಯತೆ ಇದೆ.

‘ವಿದ್ಯಾಪತಿ’ ಸಿನಿಮಾಕ್ಕೆ ಭಿನ್ನವಾಗಿ ಆಹ್ವಾನ ನೀಡಿದ ಡಾಲಿ ಧನಂಜಯ್
‘ವಿದ್ಯಾಪತಿ’ ಸಿನಿಮಾಕ್ಕೆ ಭಿನ್ನವಾಗಿ ಆಹ್ವಾನ ನೀಡಿದ ಡಾಲಿ ಧನಂಜಯ್
Jasprit Bumrah: ಜಸ್​ಪ್ರೀತ್ ಬುಮ್ರಾ ಎಂಟ್ರಿ: RCB ಗೆ ಟೆನ್ಶನ್ ಶುರು
Jasprit Bumrah: ಜಸ್​ಪ್ರೀತ್ ಬುಮ್ರಾ ಎಂಟ್ರಿ: RCB ಗೆ ಟೆನ್ಶನ್ ಶುರು
ರಾಮನವಮಿ ದಿನವೇ ರಾಮೇಶ್ವರಂನಲ್ಲಿ ಪಂಬನ್ ರೈಲ್ವೆ ಸೇತುವೆ ಉದ್ಘಾಟಿಸಿದ ಮೋದಿ
ರಾಮನವಮಿ ದಿನವೇ ರಾಮೇಶ್ವರಂನಲ್ಲಿ ಪಂಬನ್ ರೈಲ್ವೆ ಸೇತುವೆ ಉದ್ಘಾಟಿಸಿದ ಮೋದಿ
ಕಾರಿನ ಟಾಪ್ ಮೇಲೆ ಕುಳಿತು ಹುಚ್ಚಾಟ: ಸ್ವಲ್ಪ ಹೆಚ್ಚು ಕಡಿಮೆ ಆದ್ರು ಯಮನಪಾದ!
ಕಾರಿನ ಟಾಪ್ ಮೇಲೆ ಕುಳಿತು ಹುಚ್ಚಾಟ: ಸ್ವಲ್ಪ ಹೆಚ್ಚು ಕಡಿಮೆ ಆದ್ರು ಯಮನಪಾದ!
ಅಯೋಧ್ಯೆಯಲ್ಲಿ ಬಾಲ ರಾಮನ ಹಣೆ ಸ್ಪರ್ಶಿಸಿದ ಸೂರ್ಯ ರಶ್ಮಿ
ಅಯೋಧ್ಯೆಯಲ್ಲಿ ಬಾಲ ರಾಮನ ಹಣೆ ಸ್ಪರ್ಶಿಸಿದ ಸೂರ್ಯ ರಶ್ಮಿ
ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ
ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ
2,300 ವರ್ಷ ಹಳೆಯ ಬೋಧಿ ವೃಕ್ಷವಿರುವ ಬೌದ್ಧ ದೇವಾಲಯಕ್ಕೆ ಮೋದಿ ಭೇಟಿ
2,300 ವರ್ಷ ಹಳೆಯ ಬೋಧಿ ವೃಕ್ಷವಿರುವ ಬೌದ್ಧ ದೇವಾಲಯಕ್ಕೆ ಮೋದಿ ಭೇಟಿ
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಪರವಾಗಿ ಹಾಲಿ ಕಾಂಗ್ರೆಸ್ ಅಧ್ಯಕ್ಷ ಪ್ರಾರ್ಥನೆ
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಪರವಾಗಿ ಹಾಲಿ ಕಾಂಗ್ರೆಸ್ ಅಧ್ಯಕ್ಷ ಪ್ರಾರ್ಥನೆ
ಬೆಂಗಳೂರಿನಲ್ಲಿ ಟಿವಿ9 ಶಿಕ್ಷಣ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಟಿವಿ9 ಶಿಕ್ಷಣ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ
ಪರೀಕ್ಷೆಯ ನಂತರದ ಗೊಂದಲ ನಿವಾರಣೆ, ಸರಿಯಾದ ಕೋರ್ಸ್​ ಆಯ್ಕೆ ಹೇಗೆ?
ಪರೀಕ್ಷೆಯ ನಂತರದ ಗೊಂದಲ ನಿವಾರಣೆ, ಸರಿಯಾದ ಕೋರ್ಸ್​ ಆಯ್ಕೆ ಹೇಗೆ?