AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI

BCCI

BCCI: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಭಾರತೀಯ ಕ್ರಿಕೆಟ್​ನ ಆಡಳಿತ ಕೇಂದ್ರ. 1928 ರಲ್ಲಿ ರಚಿಸಲಾದ ಈ ಸಂಸ್ಥೆಯು ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯ ಮೊದಲ ಅಧ್ಯಕ್ಷ ಆರ್​ಇ ಗ್ರಾಂಟ್ ಗೋವನ್. ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರೋಜರ್ ಬಿನ್ನಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪೂರ್ಣ ಮತ್ತು ಸಹವರ್ತಿ ಸದಸ್ಯ ಸಂಸ್ಥೆಗಳನ್ನು ಒಳಗೊಂಡಿದ್ದು, ಇದಲರಲ್ಲಿ ಬಹುಪಾಲು ಸದಸ್ಯರು ರಾಜ್ಯ ಕ್ರಿಕೆಟ್ ಸಂಸ್ಥೆಗಳಾಗಿವೆ. ಅದರಂತೆ ಇದೀಗ ಬಿಸಿಸಿಐ ಅಧೀನದಲ್ಲಿ 41 ಕ್ರಿಕೆಟ್ ಸಂಸ್ಥೆಗಳಿವೆ. ಇನ್ನು ರಾಷ್ಟ್ರೀಯ ಸರಣಿಗಳೊಂದಿಗೆ ಬಿಸಿಸಿಐ ಆಯೋಜಿಸುವ ಪ್ರಮುಖ ದೇಶೀಯ ಟೂರ್ನಿಗಳೆಂದರೆ ರಣಜಿ ಟ್ರೋಫಿ, ವಿಜಯ್ ಹಝಾರೆ ಟ್ರೋಫಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ದುಲೀಪ್ ಟ್ರೋಫಿ ಮತ್ತು ಐಪಿಎಲ್​

ಇನ್ನೂ ಹೆಚ್ಚು ಓದಿ

IND vs SA: ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಭಾರತದ ಸ್ಟಾರ್ ಆಲ್​ರೌಂಡರ್

IND vs SA T20 Series: ಭಾರತ ಮತ್ತು ದಕ್ಷಿಣ ಆಫ್ರಿಕಾ T20 ಸರಣಿಯ ನಿರ್ಣಾಯಕ ಕೊನೆಯ ಎರಡು ಪಂದ್ಯಗಳಿಂದ ಅಕ್ಷರ್ ಪಟೇಲ್ ಅನಾರೋಗ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಶಹಬಾಜ್ ಅಹ್ಮದ್ ತಂಡ ಸೇರಿಕೊಂಡಿದ್ದಾರೆ. ಇತ್ತ, ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದು, ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ. 2-1 ಮುನ್ನಡೆಯೊಂದಿಗೆ ಭಾರತ ನಾಲ್ಕನೇ ಪಂದ್ಯಕ್ಕೆ ಸಜ್ಜಾಗಿದೆ.

ಏಕೈಕ ಆಟಗಾರನಿಗೆ ವಿನಾಯಿತಿ ನೀಡಿ ಮಿಕ್ಕವರಿಗೆ ಖಡಕ್ ಆದೇಶ ಹೊರಡಿಸಿದ ಬಿಸಿಸಿಐ

Indian Cricket Stars Must Play Vijay Hazare: ದೇಶಿ ಕ್ರಿಕೆಟ್​ಗೆ ಮೆರಗು ತರಲು ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಅಂತರರಾಷ್ಟ್ರೀಯ ಪಂದ್ಯಗಳ ನಡುವಿನ ಅಂತರದಲ್ಲಿ ಟೀಂ ಇಂಡಿಯಾದ ಎಲ್ಲಾ ಆಟಗಾರರು ದೇಶಿ ಟೂರ್ನಿಗಳಲ್ಲಿ, ವಿಶೇಷವಾಗಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಕನಿಷ್ಠ ಎರಡು ಪಂದ್ಯಗಳನ್ನು ಆಡಬೇಕೆಂದು ಕಡ್ಡಾಯಗೊಳಿಸಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವು ಸ್ಟಾರ್ ಆಟಗಾರರು ಇನ್ನು ಮುಂದೆ ತಮ್ಮ ರಾಜ್ಯ ತಂಡಗಳ ಪರ ಆಡಲಿದ್ದಾರೆ. ಇದು ದೇಶಿ ಕ್ರಿಕೆಟ್‌ಗೆ ಹೊಸ ಮೆರುಗು ತರಲಿದೆ.

IPL vs PSL; ಬಿಸಿಸಿಐ ಜೊತೆ ಮತ್ತೆ ಪೈಪೋಟಿಗಿಳಿದ ಪಾಕ್ ಕ್ರಿಕೆಟ್ ಮಂಡಳಿ

PSL vs IPL Schedule Battle: ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮತ್ತೊಮ್ಮೆ ಬಿಸಿಸಿಐ ಜೊತೆ ಕದನಕ್ಕಿಳಿದಿದೆ. 2026ರ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ನಡೆಯುವ ಅವಧಿಯಲ್ಲೇ (ಮಾರ್ಚ್ 26 - ಮೇ 3) ನಡೆಸಲು ನಿರ್ಧರಿಸಿದೆ. ಈ ಮುಖಾಮುಖಿಯು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಐಪಿಎಲ್‌ನಲ್ಲಿ ಅವಕಾಶ ಸಿಗದ ಆಟಗಾರರು ಹೆಚ್ಚಾಗಿ ಪಿಎಸ್‌ಎಲ್‌ನಲ್ಲಿ ಭಾಗವಹಿಸುತ್ತಾರೆ. 2026ರಲ್ಲಿ ಪಿಎಸ್‌ಎಲ್ 8 ತಂಡಗಳೊಂದಿಗೆ ವಿಸ್ತರಿಸಲಿದೆ.

77 ಸ್ಥಾನ, 350 ಆಟಗಾರರು, 237.55 ಕೋಟಿ ಬಜೆಟ್; ಐಪಿಎಲ್ ಮಿನಿ ಹರಾಜಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

IPL 2026 Mini Auction: ಐಪಿಎಲ್ 2026 ಮಿನಿ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯುವ ಈ ಹರಾಜಿನಲ್ಲಿ 77 ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು 350 ಶಾರ್ಟ್‌ಲಿಸ್ಟ್ ಮಾಡಿದ ಆಟಗಾರರು ಸ್ಪರ್ಧಿಸಲಿದ್ದಾರೆ. ಒಟ್ಟು 237.55 ಕೋಟಿ ರೂ. ಬಜೆಟ್‌ನಲ್ಲಿ ತಂಡಗಳು ತಮ್ಮ ಅಗತ್ಯಗಳಿಗೆ ತಕ್ಕಂತೆ ಆಟಗಾರರನ್ನು ಖರೀದಿಸಲಿವೆ.

ಐಸಿಸಿ ಮನವಿಗೂ ನಿಲುವು ಬದಲಿಸದ ಬಿಸಿಸಿಐ; ಪಾಕ್ ನಾಯಕನೊಂದಿಗೆ ಕೈಕುಲುಕದ ಟೀಂ ಇಂಡಿಯಾ ನಾಯಕ

India vs Pakistan U19 Asia Cup: ದುಬೈನಲ್ಲಿ ನಡೆದ ಅಂಡರ್ 19 ಏಷ್ಯಾಕಪ್ ಭಾರತ vs ಪಾಕಿಸ್ತಾನ ಪಂದ್ಯದಲ್ಲಿ ಆಟಗಾರರು ಕೈಕುಲುಕದೆ ಹಿರಿಯರ ಪಂದ್ಯದ ಸಂಪ್ರದಾಯ ಮುಂದುವರಿಸಿದರು. ಐಸಿಸಿ ಮನವಿಯ ಹೊರತಾಗಿಯೂ ಬಿಸಿಸಿಐ ತನ್ನ ನಿಲುವನ್ನು ಬದಲಿಸಲಿಲ್ಲ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಸಮಯದಲ್ಲಿ ನಡೆದ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ರಾಜಕೀಯವನ್ನು ಕ್ರೀಡೆಯಿಂದ ದೂರವಿಡಲು ಕೈಕುಲುಕುವಂತೆ ಐಸಿಸಿ ಮನವಿ ಮಾಡಿತ್ತು.

IPL 2026 Auction: 6 ಭಾರತೀಯರು ಸೇರಿದಂತೆ 9 ಆಟಗಾರರು ಐಪಿಎಲ್ ಹರಾಜಿನಿಂದ ಔಟ್

IPL 2026 Auction: ಐಪಿಎಲ್ ಮಿನಿ ಹರಾಜು 2026 ಆಟಗಾರರ ಪಟ್ಟಿಯಲ್ಲಿ ಬಿಸಿಸಿಐ ಪ್ರಮುಖ ಬದಲಾವಣೆ ಮಾಡಿದೆ. ಮೊದಲು 350 ಆಟಗಾರರನ್ನು ಸೇರಿಸಿ, ನಂತರ 9 ಮಂದಿಯನ್ನು ಸೇರಿಸಲಾಗಿತ್ತು. ಆದರೆ ಹರಾಜಿಗೂ ಮುನ್ನ ಈ 9 ಆಟಗಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಸ್ವಸ್ತಿಕ್ ಚಿಕಾರ, ವಿರಾಟ್ ಸಿಂಗ್ ಸೇರಿದಂತೆ ಹಲವು ಭಾರತೀಯ-ವಿದೇಶಿ ಆಟಗಾರರು ಹೊರಬಿದ್ದಿದ್ದು, ಇದಕ್ಕೆ ಕಾರಣ ಅಸ್ಪಷ್ಟವಾಗಿದೆ.

ಐಪಿಎಲ್ ಮಿನಿ ಹರಾಜು ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ಎಲ್ಲಿ ವೀಕ್ಷಿಸಬಹುದು?

IPL Mini Auction 2026: ಮುಂದಿನ ಐಪಿಎಲ್ ಸೀಸನ್‌ಗಾಗಿ ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯುವ ಮಿನಿ ಹರಾಜಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಗುವ ಈ ಹರಾಜನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಸುಮಾರು 350 ಆಟಗಾರರಲ್ಲಿ ಗರಿಷ್ಠ 77 ಆಟಗಾರರಿಗೆ ಅವಕಾಶವಿದೆ.

IND vs SA: ನಾಲಾಯಕ್ ನಾಯಕ, ಉಪನಾಯಕ; ಭಾರತ ಟಿ20 ತಂಡದಲ್ಲಿರುವುದು 9 ಆಟಗಾರರಷ್ಟೆ

Team India T20: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸೋಲಿಗೆ ಸೂರ್ಯಕುಮಾರ್ ಯಾದವ್ ಮತ್ತು ಶುಭ್​ಮನ್ ಗಿಲ್ ಕಳಪೆ ಬ್ಯಾಟಿಂಗ್ ಪ್ರದರ್ಶನವೇ ಕಾರಣ. ನಾಯಕ ಸೂರ್ಯಕುಮಾರ್ ಕಳೆದ 20 ಪಂದ್ಯಗಳಲ್ಲಿ ಅರ್ಧಶತಕ ಗಳಿಸಿಲ್ಲ, ಗಿಲ್ ಸಹ T20ಯಲ್ಲಿ ನಿರಂತರವಾಗಿ ವಿಫಲರಾಗಿದ್ದಾರೆ. ಇವರ ಕಳಪೆ ಫಾರ್ಮ್ ಮುಂಬರುವ ಟಿ20 ವಿಶ್ವಕಪ್‌ಗೆ ತಂಡದ ಸಿದ್ಧತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಪ್ರತಿಭಾವಂತರಿಗೆ ಅವಕಾಶ ಸಿಗದಿರುವುದು ಆತಂಕಕಾರಿ ಸಂಗತಿಯಾಗಿದೆ.

IND vs SA: 7 ಕ್ಕೆ ಏಳರಲ್ಲೂ ಸೋಲು; ಗುರಿ ದೊಡ್ಡದಿದ್ದರೆ ಟೀಂ ಇಂಡಿಯಾಗೆ ನಡುಕ

India vs South Africa T20: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ T20ಯಲ್ಲಿ ಟೀಂ ಇಂಡಿಯಾ 51 ರನ್‌ಗಳ ಭಾರಿ ಸೋಲು ಕಂಡಿದೆ. 213 ರನ್‌ಗಳ ದೊಡ್ಡ ಗುರಿ ಬೆನ್ನಟ್ಟುವಲ್ಲಿ ಭಾರತ ವಿಫಲವಾಯಿತು. 200+ ಗುರಿಗಳ ಮುಂದೆ ತಂಡ ನಡುಗುತ್ತದೆ ಎಂದು ಅಂಕಿಅಂಶಗಳು ತೋರಿಸುತ್ತವೆ. ಬುಮ್ರಾ ಮತ್ತು ಅರ್ಷದೀಪ್ ದುಬಾರಿಯಾಗಿದ್ದು ಸೋಲಿಗೆ ಕಾರಣವಾಯಿತು. ಈ ಗೆಲುವಿನೊಂದಿಗೆ ಆಫ್ರಿಕಾ ಭಾರತದ ವಿರುದ್ಧ ಅತಿ ಹೆಚ್ಚು T20 ಗೆದ್ದ ದಾಖಲೆ ನಿರ್ಮಿಸಿದೆ.

ಬರೋಬ್ಬರಿ 15 ವರ್ಷಗಳ ನಂತರ ಡೆಲ್ಲಿ ಪರ ಕಣಕ್ಕಿಳಿಯಲಿರುವ ಕಿಂಗ್ ಕೊಹ್ಲಿ

Virat Kohli Vijay Hazare Trophy: ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ಸಜ್ಜಾಗಿದ್ದಾರೆ. ದೆಹಲಿ ಸಂಭಾವ್ಯ ತಂಡದಲ್ಲಿ ಆಯ್ಕೆಯಾದ ಕೊಹ್ಲಿ, ರಿಷಭ್ ಪಂತ್ ಜೊತೆ ಕಣಕ್ಕಿಳಿಯಲಿದ್ದಾರೆ. 2027ರ ವಿಶ್ವಕಪ್ ದೃಷ್ಟಿಯಿಂದ ಕೊಹ್ಲಿಗೆ ಇದು ನಿರ್ಣಾಯಕವಾಗಿದೆ. ಇವರೊಂದಿಗೆ ರೋಹಿತ್ ಶರ್ಮಾ ಕೂಡ ಈ ದೇಶಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಇದು ದೇಶಿ ಕ್ರಿಕೆಟ್‌ಗೆ ಹೊಸ ಮೆರುಗು ನೀಡಲಿದೆ.

ರೋಹಿತ್​, ಕೊಹ್ಲಿ ಖಜಾನೆಗೆ ಕತ್ತರಿ ಹಾಕಿ, ಗಿಲ್ ಜೇಬು ತುಂಬಿಸಲು ಮುಂದಾದ ಬಿಸಿಸಿಐ

BCCI Contract: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಬಿಸಿಸಿಐ ವಾರ್ಷಿಕ ವೇತನಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಟಿ20 ಹಾಗೂ ಟೆಸ್ಟ್‌ಗೆ ವಿದಾಯ ಹೇಳಿ ಕೇವಲ ಏಕದಿನ ಮಾದರಿಯಲ್ಲಿ ಆಡುತ್ತಿರುವ ಕಾರಣ ಅವರ ಗ್ರೇಡ್ ಎ+ ನಿಂದ ಎ ಗೆ ಇಳಿಯಬಹುದು. ಇತ್ತ, ಎಲ್ಲಾ ಮೂರು ಸ್ವರೂಪಗಳಲ್ಲಿ ಆಡುವ ಶುಭ್​ಮನ್ ಗಿಲ್ ಎ ಗ್ರೇಡ್‌ನಿಂದ ಎ+ ಗೆ ಬಡ್ತಿ ಪಡೆಯುವ ನಿರೀಕ್ಷೆಯಿದೆ. ಡಿಸೆಂಬರ್ 22 ರ ಬಿಸಿಸಿಐ ಸಭೆಯಲ್ಲಿ ಈ ಕುರಿತು ನಿರ್ಧಾರವಾಗಲಿದೆ.

IND vs SA: ಎರಡಂಕಿ ಮೊತ್ತಕ್ಕೆ ಆಫ್ರಿಕಾ ಆಲೌಟ್; ಭಾರತಕ್ಕೆ ಭಾರಿ ಅಂತರದ ಜಯ

India vs South Africa 1st T20: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 101 ರನ್‌ಗಳ ಭಾರಿ ಜಯ ಸಾಧಿಸಿದೆ. ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾವನ್ನು ಕೇವಲ 74 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ ತಂಡ ಹೊಸ ದಾಖಲೆ ಬರೆಯಿತು. ಹಾರ್ದಿಕ್ ಪಾಂಡ್ಯ ಅರ್ಧಶತಕ ಹಾಗೂ 1 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?