BCCI

BCCI

BCCI: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಭಾರತೀಯ ಕ್ರಿಕೆಟ್​ನ ಆಡಳಿತ ಕೇಂದ್ರ. 1928 ರಲ್ಲಿ ರಚಿಸಲಾದ ಈ ಸಂಸ್ಥೆಯು ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯ ಮೊದಲ ಅಧ್ಯಕ್ಷ ಆರ್​ಇ ಗ್ರಾಂಟ್ ಗೋವನ್. ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರೋಜರ್ ಬಿನ್ನಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪೂರ್ಣ ಮತ್ತು ಸಹವರ್ತಿ ಸದಸ್ಯ ಸಂಸ್ಥೆಗಳನ್ನು ಒಳಗೊಂಡಿದ್ದು, ಇದಲರಲ್ಲಿ ಬಹುಪಾಲು ಸದಸ್ಯರು ರಾಜ್ಯ ಕ್ರಿಕೆಟ್ ಸಂಸ್ಥೆಗಳಾಗಿವೆ. ಅದರಂತೆ ಇದೀಗ ಬಿಸಿಸಿಐ ಅಧೀನದಲ್ಲಿ 41 ಕ್ರಿಕೆಟ್ ಸಂಸ್ಥೆಗಳಿವೆ. ಇನ್ನು ರಾಷ್ಟ್ರೀಯ ಸರಣಿಗಳೊಂದಿಗೆ ಬಿಸಿಸಿಐ ಆಯೋಜಿಸುವ ಪ್ರಮುಖ ದೇಶೀಯ ಟೂರ್ನಿಗಳೆಂದರೆ ರಣಜಿ ಟ್ರೋಫಿ, ವಿಜಯ್ ಹಝಾರೆ ಟ್ರೋಫಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ದುಲೀಪ್ ಟ್ರೋಫಿ ಮತ್ತು ಐಪಿಎಲ್​

ಇನ್ನೂ ಹೆಚ್ಚು ಓದಿ

‘ನನ್ನ ಮಗನ ವೃತ್ತಿಜೀವನವನ್ನು ಮುಗಿಸಲು ನೋಡುತ್ತಿದ್ದಾರೆ’; ಸಂಜು ಸ್ಯಾಮ್ಸನ್‌ ತಂದೆಯ ಗಂಭೀರ ಆರೋಪ

Sanju Samson's Father Speaks Out: ಸಂಜು ಸ್ಯಾಮ್ಸನ್ ಅವರ ತಂದೆ ಕೇರಳ ಕ್ರಿಕೆಟ್ ಸಂಸ್ಥೆಯ ನಿರ್ಲಕ್ಷ್ಯದಿಂದ ತಮ್ಮ ಮಗನ ವೃತ್ತಿಜೀವನಕ್ಕೆ ಅಪಾಯ ಎದುರಾಗುತ್ತಿದೆ ಎಂದು ಆರೋಪಿಸಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಸಂಜು ಆಡಲು ಅವಕಾಶ ನೀಡದಿರುವುದರಿಂದ ಅವರು ಬೇಸರಗೊಂಡಿದ್ದಾರೆ. ಬೇರೆ ರಾಜ್ಯ ತಂಡದಲ್ಲಿ ಆಡಲು ಸಂಜು ಸಿದ್ಧ ಎಂದು ಅವರು ಹೇಳಿದ್ದಾರೆ.

Virat Kohli Ranji Trophy: ರಣಜಿ ಟ್ರೋಫಿಯಲ್ಲಿ ಈ ದಿನದಂದು ಕಣಕ್ಕಿಳಿಯಲಿದ್ದಾರೆ ವಿರಾಟ್ ಕೊಹ್ಲಿ

Virat Kohli Ranji Trophy: ವಿರಾಟ್ ಕೊಹ್ಲಿ 13 ವರ್ಷಗಳ ನಂತರ ರಣಜಿ ಟ್ರೋಫಿಗೆ ಮರಳುತ್ತಿದ್ದಾರೆ. ಜನವರಿ 30 ರಿಂದ ರೈಲ್ವೇಸ್ ವಿರುದ್ಧ ದೆಹಲಿ ಪರ ಆಡುವ ಸಾಧ್ಯತೆಯಿದೆ. ಗಾಯದಿಂದಾಗಿ ಮೊದಲ ಪಂದ್ಯವನ್ನು ಕೊಹ್ಲಿ ಆಡುವುದು ಅನುಮಾನವಾಗಿದೆ. ಹೀಗಾಗಿ ಮೊದಲ ಪಂದ್ಯಕ್ಕೆ ಅವರನ್ನು ತಂಡದಿಂದ ಕೈಬಿಡಲಾಗಿದೆ. ಆದರೆ ಅವರು ಎರಡನೇ ಪಂದ್ಯವನ್ನು ಆಡುವ ಸಾಧ್ಯತೆಗಳು ಹೆಚ್ಚಿವೆ.

Rohit Sharma: ಮುಂಬೈ ರಣಜಿ ತಂಡಕ್ಕೆ ರೋಹಿತ್ ಶರ್ಮಾ ಎಂಟ್ರಿ; ಆದರೆ ನಾಯಕನಾಗಿ ಅಲ್ಲ..!

Rohit Sharma Ranji Trophy: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಮುಂಬೈ ತಂಡದ ಪರ ಆಡಲಿದ್ದಾರೆ. ಕಳಪೆ ಫಾರ್ಮ್‌ನಿಂದಾಗಿ 10 ವರ್ಷಗಳ ನಂತರ ಅವರು ರಣಜಿಗೆ ಮರಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುನ್ನ ಈ ಪಂದ್ಯ ಅವರಿಗೆ ಉತ್ತಮ ಅಭ್ಯಾಸವಾಗಲಿದೆ. ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ರೋಹಿತ್ ಶರ್ಮಾ ಆಡಲಿದ್ದಾರೆ. ಈ ಪಂದ್ಯ ಜನವರಿ 23 ರಿಂದ ಆರಂಭವಾಗಲಿದೆ.

Champions Trophy 2025: ಟೀಂ ಇಂಡಿಯಾದಲ್ಲಿ ಯಾರು ಇನ್? ಯಾರು ಔಟ್?

Champions Trophy 2025: ಬಿಸಿಸಿಐ, 2025ರ ಚಾಂಪಿಯನ್ಸ್ ಟ್ರೋಫಿಗೆ 15 ಆಟಗಾರರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ನಾಯಕತ್ವದ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಮೊಹಮ್ಮದ್ ಶಮಿ ಮತ್ತು ಶ್ರೇಯಸ್ ಅಯ್ಯರ್ ಅವರಿಗೆ ಅವಕಾಶ ದೊರೆತಿದೆ. ಆದರೆ, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್ ಮತ್ತು ಕರುಣ್ ನಾಯರ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

Champions Trophy 2025: ಭಾರತ ಸೇರಿದಂತೆ 7 ತಂಡಗಳು ಪ್ರಕಟ; ಟೀಂ ಇಂಡಿಯಾದಲ್ಲಿ ಯಾರ್ಯಾರಿಗೆ ಸ್ಥಾನ?

Champions Trophy 2025: ಫೆಬ್ರವರಿ 19 ರಿಂದ ಆರಂಭವಾಗುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕತ್ವದ 15 ಸದಸ್ಯರ ಬಲಿಷ್ಠ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ. ಇಂಗ್ಲೆಂಡ್, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ತಂಡಗಳನ್ನೂ ಈಗಾಗಲೇ ಪ್ರಕಟಿಸಲಾಗಿದೆ. ಪಾಕಿಸ್ತಾನ ಮಾತ್ರ ತನ್ನ ತಂಡವನ್ನು ಪ್ರಕಟಿಸಿಲ್ಲ.

Vijay Hazare Trophy: ಕರ್ನಾಟಕ vs ಕನ್ನಡಿಗ; ಬಲಿಷ್ಠ ತಂಡಗಳ ನಡುವೆ ಫೈನಲ್ ಫೈಟ್; ಎಷ್ಟು ಗಂಟೆಗೆ ಪಂದ್ಯ ಆರಂಭ?

Vijay Hazare Trophy 2024-25 Final: ವಿಜಯ್ ಹಜಾರೆ ಟ್ರೋಫಿಯ ಫೈನಲ್‌ನಲ್ಲಿ ಕರ್ನಾಟಕ ಮತ್ತು ವಿದರ್ಭ ತಂಡಗಳು ಭೇಟಿಮುಖಾಮುಖಿಯಾಗಲಿವೆ. ಕರ್ನಾಟಕ ತಂಡ ಐದನೇ ಬಾರಿಗೆ ಫೈನಲ್​ಗೆ ಅರ್ಹತೆ ಪಡೆದಿದ್ದರೆ, ಈ ಮೊದಲು ಕರ್ನಾಟಕದಲ್ಲೇ ಆಡಿದ್ದ ಕರುಣ್ ನಾಯರ್ ನಾಯಕತ್ವದ ವಿದರ್ಭ ತಂಡ ಮೊದಲ ಬಾರಿಗೆ ಫೈನಲ್ ತಲುಪಿದೆ. ಎರಡೂ ತಂಡಗಳ ನಾಯಕರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕರುಣ್ ನಾಯರ್ ಅವರ ಅದ್ಭುತ ಬ್ಯಾಟಿಂಗ್ ಕರ್ನಾಟಕಕ್ಕೆ ಸವಾಲಾಗಿದೆ. ಫೈನಲ್ ಪಂದ್ಯ ಜನವರಿ 18 ರಂದು ನಡೆಯಲಿದೆ.

ಸಂಜು ಸ್ಯಾಮ್ಸನ್ ಮೇಲೆ ಬಿಸಿಸಿಐ ಗರಂ; ಏಕದಿನ ಸರಣಿಗೆ ಆಯ್ಕೆ ಅನುಮಾನ

Sanju Samson: ವಿಜಯ್ ಹಜಾರೆ ಟ್ರೋಫಿಯಿಂದ ಹಿಂದೆ ಸರಿದಿರುವ ಸಂಜು ಸ್ಯಾಮ್ಸನ್ ಮೇಲೆ ಬಿಸಿಸಿಐ ಗರಂ ಆಗಿದೆ. ಪ್ರತಿಯೊಬ್ಬರು ದೇಶೀ ಟೂರ್ನಿ ಆಡಬೇಕೆಂಬ ಕಡ್ಡಾಯ ನಿಯಮಿದ್ದರೂ ಸಂಜು ಏಕದಿನ ಟೂರ್ನಿಯಿಂದ ಹಿಂದೆ ಸರಿದಿದ್ದು, ಇದೀಗ ಅವರ ವಿರುದ್ಧ ಕ್ರಮಕ್ಕೆ ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ. ಇದರ ಪರಿಣಾಮವಾಗಿ ಸಂಜು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗೆ ತಂಡದಲ್ಲಿ ಆಯ್ಕೆಯಾಗುವುದು ಅನುಮಾನ ಎನ್ನಲಾಗುತ್ತಿದೆ.

13 ವರ್ಷಗಳ ಬಳಿಕ ದೆಹಲಿ ರಣಜಿ ತಂಡಕ್ಕೆ ವಿರಾಟ್ ಕೊಹ್ಲಿ ಆಯ್ಕೆ..! ರಿಷಬ್​ ಪಂತ್​ಗೂ ಅವಕಾಶ

Ranji Trophy: ಬಿಸಿಸಿಐನ ಆದೇಶದಂತೆ, ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ರಣಜಿ ಟ್ರೋಫಿಗೆ ಮರಳಿದ್ದಾರೆ. ದೆಹಲಿ ತಂಡಕ್ಕೆ ಆಯ್ಕೆಯಾಗಿರುವ ವಿರಾಟ್ ಕೊಹ್ಲಿ ಹಾಗೂ ರಿಷಬ್ ಪಂತ್ ಕ್ರಮವಾಗಿ 13 ಮತ್ತು 8 ವರ್ಷಗಳ ಬಳಿಕ ರಣಜಿ ಕ್ರಿಕೆಟ್‌ ಆಡಲಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿ ಕೊಹ್ಲಿ ಆಡುವುದು ಖಚಿತವಿಲ್ಲ. ಆದಾಗ್ಯೂ ಅವರು ತಂಡದೊಂದಿಗೆ ಇರಲಿದ್ದಾರೆ.

WPL 2025: ಡಬ್ಲ್ಯುಪಿಎಲ್ 3ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯದಲ್ಲೇ ಆರ್​ಸಿಬಿ ಕಣಕ್ಕೆ

WPL 2025 Schedule: ಮಹಿಳಾ ಪ್ರೀಮಿಯರ್ ಲೀಗ್​ನ ಮೂರನೇ ಸೀಸನ್ ಫೆಬ್ರವರಿ 14 ರಿಂದ ಮಾರ್ಚ್ 15 ರವರೆಗೆ ನಡೆಯಲಿದೆ. ಈ ಬಾರಿ ಲಕ್ನೋ, ಮುಂಬೈ, ಬರೋಡಾ ಮತ್ತು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವಿನ ಪಂದ್ಯದೊಂದಿಗೆ ಟೂರ್ನಿ ಆರಂಭವಾಗಲಿದೆ. 30 ದಿನಗಳ ಈ ಟೂರ್ನಿಯಲ್ಲಿ ಆಟಗಾರ್ತಿಯರಿಗೆ ಸಾಕಷ್ಟು ವಿಶ್ರಾಂತಿ ನೀಡಲಾಗಿದೆ. ಪ್ರತಿ ದಿನ ಒಂದೇ ಒಂದು ಪಂದ್ಯ ನಡೆಯಲಿದೆ.

ಟೀಂ ಇಂಡಿಯಾ ಆಟಗಾರರಿಗೆ 10 ಕಠಿಣ ನಿಯಮ; ಮೀರಿದರೆ IPL​​ ಸೇರಿ ಎಲ್ಲಾ ಟೂರ್ನಿಯಿಂದ ಹೊರಕ್ಕೆ  

ಭಾರತ ಕ್ರಿಕೆಟ್ ತಂಡದ ಇತ್ತೀಚಿನ ಕಳಪೆ ಪ್ರದರ್ಶನದಿಂದಾಗಿ ಬಿಸಿಸಿಐ ಚಿಂತೆಗೆ ಒಳಗಾಗಿದೆ. ಹೀಗಾಗಿ ಆಟಗಾರರಲ್ಲಿ ಶಿಸ್ತು ತರಲು 10 ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ದೇಶೀಯ ಪಂದ್ಯಗಳ ಆಡುವುದು, ಬ್ಯಾಗೇಜ್ ನಿಯಮಗಳು, ತರಬೇತಿ ಹಾಜರಾತಿ, ಜಾಹೀರಾತು ಚಿತ್ರೀಕರಣದ ಮೇಲಿನ ನಿರ್ಬಂಧಗಳು ಮತ್ತು ಕುಟುಂಬದವರ ಭೇಟಿಗೆ ಷರತ್ತುಗಳು ಸೇರಿವೆ.

ಜಿಟಿಟಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಟಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ