BCCI
BCCI: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಭಾರತೀಯ ಕ್ರಿಕೆಟ್ನ ಆಡಳಿತ ಕೇಂದ್ರ. 1928 ರಲ್ಲಿ ರಚಿಸಲಾದ ಈ ಸಂಸ್ಥೆಯು ಇದೀಗ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯ ಮೊದಲ ಅಧ್ಯಕ್ಷ ಆರ್ಇ ಗ್ರಾಂಟ್ ಗೋವನ್. ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರೋಜರ್ ಬಿನ್ನಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪೂರ್ಣ ಮತ್ತು ಸಹವರ್ತಿ ಸದಸ್ಯ ಸಂಸ್ಥೆಗಳನ್ನು ಒಳಗೊಂಡಿದ್ದು, ಇದಲರಲ್ಲಿ ಬಹುಪಾಲು ಸದಸ್ಯರು ರಾಜ್ಯ ಕ್ರಿಕೆಟ್ ಸಂಸ್ಥೆಗಳಾಗಿವೆ. ಅದರಂತೆ ಇದೀಗ ಬಿಸಿಸಿಐ ಅಧೀನದಲ್ಲಿ 41 ಕ್ರಿಕೆಟ್ ಸಂಸ್ಥೆಗಳಿವೆ. ಇನ್ನು ರಾಷ್ಟ್ರೀಯ ಸರಣಿಗಳೊಂದಿಗೆ ಬಿಸಿಸಿಐ ಆಯೋಜಿಸುವ ಪ್ರಮುಖ ದೇಶೀಯ ಟೂರ್ನಿಗಳೆಂದರೆ ರಣಜಿ ಟ್ರೋಫಿ, ವಿಜಯ್ ಹಝಾರೆ ಟ್ರೋಫಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ದುಲೀಪ್ ಟ್ರೋಫಿ ಮತ್ತು ಐಪಿಎಲ್
IPL 2026: ಕೀರನ್ ಪೊಲಾರ್ಡ್ಗೆ ದಂಡದ ಬರೆ ಎಳೆದ ಬಿಸಿಸಿಐ
Kieron Pollard Penalty: 2026ರ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪ್ಲೇಆಫ್ನಿಂದ ಹೊರಬಿದ್ದಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ತಂಡದ ಬ್ಯಾಟಿಂಗ್ ಕೋಚ್ ಕೀರನ್ ಪೊಲಾರ್ಡ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ಅವರ ಪಂದ್ಯ ಶುಲ್ಕದ ಶೇ. 15ರಷ್ಟು ದಂಡ ಮತ್ತು 1 ಡಿಮೆರಿಟ್ ಪಾಯಿಂಟ್ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ಈ ಕ್ರಮ ಕೈಗೊಂಡಿದೆ.
- pruthvi Shankar
- Updated on: May 15, 2026
- 3:32 pm
ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ
India A Squad for Sri Lanka Tri-Series 2026: ಐಪಿಎಲ್ ನಂತರ ಶ್ರೀಲಂಕಾದಲ್ಲಿ ನಡೆಯಲಿರುವ ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳ ತ್ರಿಕೋನ ಏಕದಿನ ಸರಣಿಗೆ ಬಿಸಿಸಿಐ ಭಾರತ ಎ ತಂಡವನ್ನು ಪ್ರಕಟಿಸಿದೆ. ತಿಲಕ್ ವರ್ಮಾ ನಾಯಕರಾಗಿದ್ದು, ರಿಯಾನ್ ಪರಾಗ್ ಉಪನಾಯಕರಾಗಿದ್ದಾರೆ. ಐಪಿಎಲ್ನಲ್ಲಿ ಗಮನ ಸೆಳೆದ ವೈಭವ್ ಸೂರ್ಯವಂಶಿ, ಪ್ರಿಯಾಂಶ್ ಆರ್ಯ ಸೇರಿದಂತೆ ಹಲವು ಯುವ ಆಟಗಾರರಿಗೆ ಈ ಸರಣಿಯಲ್ಲಿ ಅವಕಾಶ ನೀಡಲಾಗಿದೆ. ಜೂನ್ 9 ರಿಂದ 21 ರವರೆಗೆ ಸರಣಿ ನಡೆಯಲಿದೆ.
- pruthvi Shankar
- Updated on: May 14, 2026
- 5:13 pm
ಅವಮಾನಕರ ಸೋಲಿನ ಆಘಾತದಲ್ಲಿರುವ ಪ್ಯಾಟ್ ಕಮ್ಮಿನ್ಸ್ಗೆ ಮತ್ತೊಂದು ಶಾಕ್ ನೀಡಿದ ಬಿಸಿಸಿಐ
Pat Cummins Fined ₹12 Lakh: ಗುಜರಾತ್ ಟೈಟಾನ್ಸ್ ವಿರುದ್ಧ ಹೀನಾಯ ಸೋಲು ಕಂಡ ಸನ್ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ಗೆ ಬಿಸಿಸಿಐ ದಂಡ ವಿಧಿಸಿದೆ. ನಿಧಾನಗತಿಯ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ ಕಮ್ಮಿನ್ಸ್ 12 ಲಕ್ಷ ರೂ. ದಂಡ ತೆರಬೇಕಾಗಿದೆ. ಕಮ್ಮಿನ್ಸ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದು, ಈ ತಪ್ಪಿಗೆ ಈ ಹಿಂದೆ ಹಲವು ನಾಯಕರು ದಂಡ ತೆತ್ತಿದ್ದಾರೆ.
- pruthvi Shankar
- Updated on: May 13, 2026
- 4:13 pm
ICC Annual Ranking: ಏಕದಿನ ಕ್ರಿಕೆಟ್ನಲ್ಲಿ ಮುಂದುವರೆದ ಭಾರತದ ಪಾರುಪತ್ಯ
ICC Annual Ranking: ಐಸಿಸಿ ತನ್ನ ವಾರ್ಷಿಕ ಏಕದಿನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಟೀಂ ಇಂಡಿಯಾ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡದಿದ್ದರೂ, 118 ಅಂಕಗಳೊಂದಿಗೆ ನಂಬರ್ 1 ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದ್ದು, ಪಾಕಿಸ್ತಾನ ಐದನೇ ಸ್ಥಾನಕ್ಕೆ ಕುಸಿದಿದೆ. ಭಾರತದ ಕ್ರಿಕೆಟ್ ಪ್ರಾಬಲ್ಯವನ್ನು ಇದು ಮತ್ತೊಮ್ಮೆ ಸಾಬೀತುಪಡಿಸಿದೆ.
- pruthvi Shankar
- Updated on: May 11, 2026
- 5:37 pm
IPL 2026: ಎಲ್ಲವೂ ಬಂದ್; ಬಿಸಿಸಿಐ ಎಚ್ಚೆರಿಕೆಯ ಬಳಿಕ ಎಚ್ಚೆತ್ತ ಫ್ರಾಂಚೈಸಿಗಳು
IPL Privacy Clampdown: ಬಿಸಿಸಿಐನ ಕಟ್ಟುನಿಟ್ಟಿನ ಸೂಚನೆಗಳ ನಂತರ ಐಪಿಎಲ್ ಫ್ರಾಂಚೈಸಿಗಳು ತಂಡದ ಗೌಪ್ಯತೆ ಕಾಪಾಡಲು ಹಲವು ಕ್ರಮಗಳನ್ನು ಜಾರಿಗೊಳಿಸಿವೆ. ಡ್ರೆಸ್ಸಿಂಗ್ ರೂಮ್ಗೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದ್ದು, ಆಟಗಾರರಿಗೆ ವ್ಲಾಗ್ ಮಾಡಲು ನಿರ್ಬಂಧ ವಿಧಿಸಲಾಗಿದೆ. ಅರ್ಷದೀಪ್ ಸಿಂಗ್ ವ್ಲಾಗ್ ವಿವಾದದ ನಂತರ ಈ ಕ್ರಮ ಇನ್ನಷ್ಟು ಬಲಗೊಂಡಿದೆ. ಹನಿ ಟ್ರ್ಯಾಪ್ ಅಪಾಯಗಳನ್ನು ತಪ್ಪಿಸಲು ಹಾಗೂ ತಂಡದ ಮಾಲೀಕರ ನಡೆವಳಿಕೆಗೂ ಬಿಸಿಸಿಐ ಹೊಸ ನಿಯಮಗಳನ್ನು ರೂಪಿಸಿದೆ.
- pruthvi Shankar
- Updated on: May 8, 2026
- 6:02 pm
IPL 2026: ಉಚಿತ ಟಿಕೆಟ್ಗಳ ಬೇಡಿಕೆಯಿಂದಲೇ ಫೈನಲ್ ಪಂದ್ಯ ಶಿಫ್ಟ್; ಬಿಸಿಸಿಐ ಸ್ಪಷ್ಟನೆ
IPL 2026 Final: ಬೆಂಗಳೂರಿನಿಂದ ಐಪಿಎಲ್ 2026 ಫೈನಲ್ ಪಂದ್ಯವನ್ನು ಅಹಮದಾಬಾದ್ಗೆ ಸ್ಥಳಾಂತರಿಸಲು ಉಚಿತ ಟಿಕೆಟ್ ಬೇಡಿಕೆಯೇ ಕಾರಣ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್ಸಿಎ) ಶಾಸಕರು ಮತ್ತು ಇತರರಿಗಾಗಿ ಸುಮಾರು 10,000 ಹೆಚ್ಚುವರಿ ಉಚಿತ ಟಿಕೆಟ್ಗಳನ್ನು ಕೇಳಿತ್ತು. ಇದು 15% ನಿಯಮಿತ ಕೋಟಾವನ್ನು ಮೀರಿತ್ತು. ಬಿಸಿಸಿಐ ನಿಯಮ ಉಲ್ಲಂಘನೆಯಾಗುವ ಕಾರಣ, ಪಂದ್ಯವನ್ನು ಸ್ಥಳಾಂತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
- pruthvi Shankar
- Updated on: May 7, 2026
- 6:06 pm
IPL 2026: ವಿಮಾನದಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ಯುಜ್ವೇಂದ್ರ ಚಾಹಲ್; ವಿಡಿಯೋ ವೈರಲ್
IPL E-Cigarette Controversy: ರಿಯಾನ್ ಪರಾಗ್ ಇ-ಸಿಗರೇಟ್ ಸೇದಿದ್ದಕ್ಕೆ ದಂಡ ತೆತ್ತ ಬೆನ್ನಲ್ಲೇ, ಯುಜ್ವೇಂದ್ರ ಚಾಹಲ್ ವಿಮಾನದಲ್ಲಿ ಇ-ಸಿಗರೇಟ್ ಸೇದಿ ವಿವಾದಕ್ಕೆ ಸಿಲುಕಿದ್ದಾರೆ. ವಿಮಾನದಲ್ಲಿ ಧೂಮಪಾನ ಕಟ್ಟುನಿಟ್ಟಾಗಿ ನಿಷಿದ್ಧವಾಗಿದ್ದು, ಈ ಕೃತ್ಯದಿಂದ ಚಾಹಲ್ಗೆ ಕಾನೂನು ಕ್ರಮ ಮತ್ತು ವಿಮಾನ ಪ್ರಯಾಣ ನಿಷೇಧದ ಭೀತಿ ಎದುರಾಗಿದೆ. ಈ ಘಟನೆ ಐಪಿಎಲ್ ಆಟಗಾರರ ವರ್ತನೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- pruthvi Shankar
- Updated on: May 7, 2026
- 5:41 pm
IPL 2026: ‘ನಿರಾಶೆಯಾಗಿದೆ’.. ಕೈತಪ್ಪಿದ ಫೈನಲ್ ಆತಿಥ್ಯ; ಹೇಳಿಕೆ ಬಿಡುಗಡೆ ಮಾಡಿದ ಕೆಎಸ್ಸಿಎ
IPL 2026 Playoffs and Final Shift: ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ 2026 ಪ್ಲೇಆಫ್ ಹಾಗೂ ಫೈನಲ್ ಪಂದ್ಯಗಳನ್ನು ಬಿಸಿಸಿಐ ಬೇರೆಡೆಗೆ ಸ್ಥಳಾಂತರಿಸಿದೆ. ಇದರಿಂದ ಕೆಎಸ್ಸಿಎ ನಿರಾಶೆಗೊಂಡಿದ್ದು, ಸಿದ್ಧತೆಗಳ ಕುರಿತು ಬಿಸಿಸಿಐಗೆ ಪತ್ರ ಬರೆದಿತ್ತು. ಬೆಂಗಳೂರಿನಲ್ಲಿ ಪಂದ್ಯಗಳನ್ನು ಯಶಸ್ವಿಯಾಗಿ ಆಯೋಜಿಸುವ ಸಾಮರ್ಥ್ಯವನ್ನು ಕೆಎಸ್ಸಿಎ ಸಾಬೀತುಪಡಿಸಿದೆ ಎಂದು ತಿಳಿಸಿದೆ. ಬಿಸಿಸಿಐ ನಿರ್ಧಾರಕ್ಕೆ ಕೆಎಸ್ಸಿಎ ಗೌರವ ಸೂಚಿಸಿದೆ.
- pruthvi Shankar
- Updated on: May 6, 2026
- 8:13 pm
IPL 2026: ಆರ್ಸಿಬಿ ಫ್ಯಾನ್ಸ್ಗೆ ಬಿಗ್ ಶಾಕ್; ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್
IPL 2026 Final Moved: 2026ರ ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ಗೆ ಸ್ಥಳಾಂತರಗೊಂಡಿದೆ. ಸ್ಥಳೀಯ ಸಂಘಗಳ ಟಿಕೆಟ್ ಬೇಡಿಕೆಗಳು ಬಿಸಿಸಿಐ ಮಾರ್ಗಸೂಚಿಗಳಿಗೆ ವಿರುದ್ಧವಾಗಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಯಶಸ್ವಿಯಾಗಿ ಲೀಗ್ ಪಂದ್ಯಗಳು ನಡೆದರೂ, ಫೈನಲ್ ಆಯೋಜನೆ ನಿರೀಕ್ಷಿಸಿದ್ದ ಆರ್ಸಿಬಿ ಅಭಿಮಾನಿಗಳಿಗೆ ಇದು ನಿರಾಸೆ ತಂದಿದೆ. ಬಿಸಿಸಿಐ ಪ್ಲೇಆಫ್ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಿದೆ.
- pruthvi Shankar
- Updated on: May 6, 2026
- 4:05 pm
IPL 2026: ನೋಡುವವರಿಲ್ಲ, ಟಿಆರ್ಪಿಯೂ ಇಲ್ಲ..! ಕಳೆಗುಂದಿದ ಐಪಿಎಲ್ ಜನಪ್ರಿಯತೆ
IPL 2026 Popularity Decline: 2026ರ ಐಪಿಎಲ್ ಜನಪ್ರಿಯತೆ ಕುಸಿಯುತ್ತಿದ್ದು, ಟಿಆರ್ಪಿ ಶೇ. 18.8, ವೀಕ್ಷಕರ ಸಂಖ್ಯೆ ಶೇ. 26ರಷ್ಟು ಕಡಿಮೆಯಾಗಿದೆ. ಜಾಹೀರಾತುದಾರರ ಸಂಖ್ಯೆಯೂ ಕುಸಿದಿದೆ. ಲೀಗ್ನ ದೀರ್ಘಾವಧಿ, ಫ್ಲಾಟ್ ಪಿಚ್ಗಳು, ಫ್ಯಾಂಟಸಿ ಆ್ಯಪ್ ನಿಷೇಧ ಹಾಗೂ ವೀಕ್ಷಕರ ಅಭ್ಯಾಸ ಬದಲಾವಣೆಗಳು ಇದಕ್ಕೆ ಮುಖ್ಯ ಕಾರಣಗಳಾಗಿವೆ.
- pruthvi Shankar
- Updated on: May 4, 2026
- 4:36 pm
ಭಾರತೀಯರಿಲ್ಲದ ವಿಶ್ವ ಏಕದಿನ ಪ್ಲೇಯಿಂಗ್ XI ಪ್ರಕಟಿಸಿದ ಬಾಬರ್ ಆಝಂ
Babar Azam's World ODI XI Sparks Debate: ಪಾಕಿಸ್ತಾನಿ ನಾಯಕ ಬಾಬರ್ ಆಜಮ್ ತಮ್ಮ ವಿಶ್ವ ಏಕದಿನ XI ತಂಡವನ್ನು ಹೆಸರಿಸಿದ್ದಾರೆ. ಈ ತಂಡದಲ್ಲಿ ಯಾವುದೇ ಭಾರತೀಯ ಆಟಗಾರರಿಗೆ ಸ್ಥಾನ ನೀಡಿಲ್ಲ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಅವರಂತಹ ಅಗ್ರ ಆಟಗಾರರ ಅನುಪಸ್ಥಿತಿಯು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಆಟಗಾರರು ಬಾಬರ್ ಆಯ್ಕೆಯಲ್ಲಿ ಸ್ಥಾನ ಪಡೆದಿದ್ದಾರೆ.
- pruthvi Shankar
- Updated on: May 3, 2026
- 4:22 pm
ಲಾರ್ಡ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ
Lord's Test: ಜೂನ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಭಾರತ ಮಹಿಳಾ ತಂಡ ಪ್ರಕಟಗೊಂಡಿದೆ. ಇದರ ಜೊತೆಗೆ, ಜುಲೈನಲ್ಲಿ ಲಾರ್ಡ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುವ ಏಕೈಕ ಟೆಸ್ಟ್ ಪಂದ್ಯಕ್ಕೂ ಬಿಸಿಸಿಐ 15 ಸದಸ್ಯರ ತಂಡವನ್ನು ಘೋಷಿಸಿದೆ. ಹರ್ಮನ್ಪ್ರೀತ್ ಕೌರ್ ನಾಯಕತ್ವ ವಹಿಸಿದ್ದು, ಸ್ಮೃತಿ ಮಂಧಾನ ಉಪನಾಯಕಿ. ನಂದಿನಿ ಶರ್ಮಾ ಮತ್ತು ಶ್ರೀ ಚರಣಿಯಂತಹ ಹೊಸ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದೆ. ಅನುಭವಿ ಸ್ನೇಹ್ ರಾಣಾ, ಹರ್ಲೀನ್ ಡಿಯೋಲ್ ಕೂಡ ತಂಡದಲ್ಲಿದ್ದಾರೆ
- pruthvi Shankar
- Updated on: May 2, 2026
- 8:56 pm