AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada

Bigg Boss Kannada

ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್​ ಬಾಸ್​ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.

ಕನ್ನಡದಲ್ಲಿ ಬಿಗ್ ಬಾಸ್ 12ನೇ ಸೀಸನ್ ಆರಂಭ ಆಗಲಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.

ಬಿಗ್ ಬಾಸ್​ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್​ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.

ಇನ್ನೂ ಹೆಚ್ಚು ಓದಿ

ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋದಲ್ಲಿದೆ ಪೂರ್ತಿ ವಿವರ..

Bigg Boss Kannada Season 13: ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ.

‘ಬಿಗ್ ಬಾಸ್ ಕನ್ನಡ 13’ ಆಡಿಷನ್: ಈ ಸಲ ಸಾಮಾನ್ಯ ಜನರಿಗೂ ಸಿಗಲಿದೆ ಅವಕಾಶ

Bigg Boss Kannada 13 Audition: ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಆಸೆ ಇದ್ದವರು ಆಡಿಷನ್ ಮೂಲಕ ಆಯ್ಕೆ ಆಗಬಹುದು. ಈ ಬಾರಿ ಜನಸಾಮಾನ್ಯರಿಗೆ ಅವಕಾಶ ಸಿಗಲಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ಆಡಿಷನ್ ಬಗ್ಗೆ ‘ಕಲರ್ಸ್ ಕನ್ನಡ’ ವಾಹಿನಿಯು ಅಪ್​ಡೇಟ್ ನೀಡಿದೆ. ಆ ಕುರಿತು ಇಲ್ಲಿದೆ ವಿವರ..

ಹೊಸ ಕಾರು ಖರೀದಿ ಮಾಡಿದ ಮಲ್ಲಮ್ಮ; ಅನೇಕರಿಗೆ ಮಾದರಿಯಾದ ಬಿಗ್​ ಬಾಸ್ ಸ್ಪರ್ಧಿ

ಬಿಗ್ ಬಾಸ್ ಖ್ಯಾತಿಯ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಮಲ್ಲಮ್ಮ ತಮ್ಮ ಕಠಿಣ ಪರಿಶ್ರಮದಿಂದ ಹೊಸ ಮಾರುತಿ ಸುಜುಕಿ ಡಿಸೈರ್ ಕಾರು ಖರೀದಿಸಿದ್ದಾರೆ. ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದ ಅವರು, ಸಾಮಾಜಿಕ ಜಾಲತಾಣಗಳು ಮತ್ತು ಬಿಗ್ ಬಾಸ್ ಮೂಲಕ ಜನಪ್ರಿಯತೆ ಗಳಿಸಿ, ಈಗ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದಾರೆ. ಅವರ ಈ ಸಾಧನೆ ಅನೇಕರಿಗೆ ಪ್ರೇರಣೆ ನೀಡಿದ್ದು, ಕನಸುಗಳನ್ನು ಬೆನ್ನಟ್ಟಿದರೆ ಯಶಸ್ಸು ಖಂಡಿತ ಎಂಬುದು ಮಲ್ಲಮ್ಮ ಕಥೆಯಿಂದ ಸ್ಪಷ್ಟವಾಗಿದೆ.

ಬಂದೇ ಬಿಡ್ತು ಬಿಗ್ ಬಾಸ್ ಹೊಸ ಸೀಸನ್: ಸರ್ಪ್ರೈಸ್ ನೀಡಿದ ‘ಕಲರ್ಸ್ ಕನ್ನಡ’

‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋ ಆರಂಭದ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ಹೊಸ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಅಚ್ಚರಿ ನೀಡಲಾಗಿದೆ. ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋನ ಹೊಸ ಸೀಸನ್ ಈ ವರ್ಷ ಸ್ವಲ್ಪ ಬೇಗ ಶುರುವಾಗಲಿದೆ ಎಂಬುದು ಖಚಿತವಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’

ಗ್ರಾಮೀಣ ಭಾಗದ ಕಹಾನಿಯನ್ನು ಹೊಂದಿರುವ ‘ಸರ್ವೇ ನಂಬರ್ 45’ ಸಿನಿಮಾದಲ್ಲಿ ಗಿಲ್ಲಿ ನಟ ಅವರು ಅಭಿನಯಿಸಿದ್ದಾರೆ. ಅವರ ಗೆಟಪ್ ಗಮನ ಸೆಳೆಯುತ್ತಿದೆ. ನಿಜ ಜೀವನದಲ್ಲಿ ಹಳ್ಳಿ ಹೈದನಾಗಿರುವ ಗಿಲ್ಲಿ ನಟ ಅವರು ಈ ಸಿನಿಮಾದಲ್ಲೂ ಅಂಥದ್ದೇ ಪಾತ್ರವನ್ನು ಮಾಡಿದ್ದಾರೆ. ಸಿನಿಮಾದ ಬಗ್ಗೆ ಇಲ್ಲಿದೆ ಮಾಹಿತಿ..

ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ.

‘ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ’: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್

ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋಗೆ ‘ಮಾರ್ಕ್’ ಸಿನಿಮಾದ ಹಾಡು ಬಳಸಿದ್ದಕ್ಕೆ ಡಾಗ್ ಸತೀಶ್ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವಿನಯ್ ಗೌಡ, ರಜತ್ ಮುಂತಾದವರು ಸತೀಶ್ ಮೇಲೆ ಗರಂ ಆಗಿದ್ದರು. ಈ ಪ್ರಕರಣ ಇಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಆ ಬಗ್ಗೆ ಸತೀಶ್ ಮಾತಾಡಿದ್ದಾರೆ.

ಸುದೀಪ್ ನಟ ಆದ್ರೆ ತಲೆ ಮೇಲೆ ಕೊಂಬು ಇರುತ್ತಾ? ಡಾಗ್ ಸತೀಶ್ ಗರಂ

ಡಾಗ್ ಸತೀಶ್ ಅವರ ಒಂದು ವಿಡಿಯೋದಲ್ಲಿ ಸುದೀಪ್ ಹಾಡು ಬಳಸಿದ್ದಕ್ಕೆ ವಿವಾದ ಸೃಷ್ಟಿಯಾಗಿದೆ. ರಜತ್, ವಿಜಯ್ ಗೌಡ ಅವರು ಸತೀಶ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಅದಕ್ಕೆ ಸತೀಶ್ ಪ್ರತಿಕ್ರಿಯಿಸಿದ್ದಾರೆ. ತಾವು ಮಾಡಿದ್ದರಲ್ಲಿ ತಪ್ಪೇ ಇಲ್ಲ ಎಂದು ಹೇಳುತ್ತಿರುವ ಸತೀಶ್ ಅವರು ಸುದೀಪ್ ಬಗ್ಗೆಯೂ ಮಾತಾಡಿದ್ದಾರೆ.

ಮತ್ತೆ ಕಿರಿಕ್ ಮಾಡಿಕೊಂಡ ರಜತ್ ಕಿಶನ್; ಎಫ್​ಐಆರ್​ ದಾಖಲು

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರಿಗೆ ಹೊಸ ಸಂಕಷ್ಟ ಶುರುವಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಎಫ್​ಐಆರ್ ದಾಖಲಾಗಿದೆ. ಡಾಗ್ ಸತೀಶ್ ಜೊತೆ ಸ್ನೇಹ ಮಾಡಬಾರದು ಎಂದು ರಜತ್ ಕಿಶನ್ ಅವರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಕನ್ನಡದಲ್ಲಿ ಪ್ರಾಪರ್ಟಿ ಕಾಮಿಡಿ ಮೊದಲು ಶುರು ಮಾಡಿದ್ದು ಗಿಲ್ಲಿ ಅಲ್ಲ, ಹಾಗಿದ್ರೆ?

ಬಿಗ್ ಬಾಸ್​​ಗಿಂತ ಮೊದಲು ಗಿಲ್ಲಿ ನಟ ಅವರು ಪ್ರಾಪರ್ಟಿ ಕಾಮಿಡಿ ಮಾಡುತ್ತಿದ್ದರು. ಅವರು ಜೀ ಕನ್ನಡದ ವೇದಿಕೆ ಮೇಲೆ ಅನೇಕ ಬಾರಿ ಪ್ರಾಪರ್ಟಿ ಕಾಮಿಡಿ ಮಾಡಿದ್ದರು. ಪ್ರಾಪರ್ಟಿ ಕಾಮಿಡಿ ಎಂದರೆ ಎರಡು ವಸ್ತುಗಳನ್ನು ಇಟ್ಟುಕೊಂಡು ಅಥವಾ ಎರಡು ಶಬ್ದ ಇಟ್ಟುಕೊಂಡು ಅದಕ್ಕೆ ಹೊಸ ಅರ್ಥವನ್ನು ನೀಡೋದು. ಈ ರೀತಿಯ ಕಾಮಿಡಿಯನ್ನು ಗಿಲ್ಲಿ ಸಾಕಷ್ಟು ಬಾರಿ ಮಾಡಿದ್ದಾರೆ.

ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ

‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋ ಮುಗಿದು ತಿಂಗಳು ಕಳೆದಿದ್ದರೂ ಸ್ಪರ್ಧಿಗಳ ಹವಾ ಕಮ್ಮಿಯಾಗಿಲ್ಲ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ‘ಹಯಗ್ರೀವ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮಂಡ್ಯದಲ್ಲಿ ನಡೆದಿದೆ. ಆ ವೇದಿಕೆಯಲ್ಲಿ ಅಶ್ವಿನಿ ಗೌಡ, ಗಿಲ್ಲಿ ನಟ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಅಶ್ವಿನಿ ಗೌಡ ವಿಷಯದಲ್ಲಿ ಗಿಲ್ಲಿ ಹೇಳಿದ್ದ ಆ ಮಾತು ನಿಜವೇ ಆಯ್ತು

ಬಿಗ್ ಬಾಸ್ ಕನ್ನಡ 12ರ ನಂತರವೂ ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ಕಿತ್ತಾಟ ಮುಂದುವರಿದಿದೆ. ದೊಡ್ಮನೆಯಲ್ಲಿ ಆದ ಪರಚು ಗಾಯಗಳ ಬಗ್ಗೆ ಅಶ್ವಿನಿ ಈಗ ಚೈತ್ರಾ ಮೇಲೆ ಉದ್ದೇಶಪೂರ್ವಕ ಆರೋಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಆಟವನ್ನು ಆಟವಾಗಿಯೇ ನೋಡುತ್ತೇನೆ ಎಂದಿದ್ದಾರೆ. ಹೆಣ್ಣು ಮಕ್ಕಳು ಜಗಳ ಆರಂಭಿಸಿದರೆ ಮುಗಿಯದು ಎಂಬ ಗಿಲ್ಲಿ ಮಾತು ನಿಜವಾಗಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.