AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada

Bigg Boss Kannada

ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್​ ಬಾಸ್​ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.

ಕನ್ನಡದಲ್ಲಿ ಬಿಗ್ ಬಾಸ್ 12ನೇ ಸೀಸನ್ ಆರಂಭ ಆಗಲಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.

ಬಿಗ್ ಬಾಸ್​ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್​ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.

ಇನ್ನೂ ಹೆಚ್ಚು ಓದಿ

ಕಿಚ್ಚನ ಚಪ್ಪಾಳೆ: ಸುದೀಪ್ ಇನ್​ಸ್ಟಾಗ್ರಾಮ್ ಪೋಸ್ಟ್ ತುಂಬ ಅಸಮಾಧಾನದ ಕಮೆಂಟ್ಸ್

ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ ನೀಡಿದ್ದರಿಂದ ಬಹಳ ಅಸಮಾಧಾನ ವ್ಯಕ್ತವಾಗಿದೆ. ಖಾರವಾದ ಕಮೆಂಟ್​​ಗಳ ಮೂಲಕ ಬಿಗ್ ಬಾಸ್ ಶೋ ವೀಕ್ಷಕರು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗಿಲ್ಲಿ ಅವರಿಗೆ ಇಡೀ ಸೀಸನ್​​ನ ಚಪ್ಪಾಳೆ ಸಿಗಬೇಕಿತ್ತು ಎಂಬುದು ವೀಕ್ಷಕರ ಅನಿಸಿಕೆ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಬಿಗ್ ಬಾಸ್: ಮಂಗಳವಾರ ಸಂಜೆವರೆಗೆ ಮಾತ್ರ ವೋಟ್ ಹಾಕಲು ಅವಕಾಶ

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈಗ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಧನುಶ್, ಧ್ರುವಂತ್, ರಘು ಹಾಗೂ ಅಶ್ವಿನಿ ಗೌಡ ಇದ್ದಾರೆ. ಇವರ ಪೈಕಿ ಧನುಶ್ ನೇರವಾಗಿ ಟಾಪ್ 6ಕ್ಕೆ ಏರಿದ್ದಾರೆ. ಉಳಿದಿರೋದು ಆರು ಮಂದಿ ಮಾತ್ರ. ಅವರೆಲ್ಲರೂ ನೇರವಾಗಿ ನಾಮಿನೇಟ್ ಆಗಿದ್ದಾರೆ.

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 

Gilli Nata Bigg Boss Eviction Speech: ಗಿಲ್ಲಿ ನಟ ಕಪ್ ಗೆಲ್ಲುವ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಗಿಲ್ಲಿ ನಟ ಅವರು ಎಲಿಮಿನೇಟ್ ಆಗಿದ್ದರೆ ಹೇಗೆ ಭಾಷಣ ಕೊಡುತ್ತಿದ್ದರು? ಈ ಬಗ್ಗೆ ಸ್ಪೀಚ್ ಕೊಟ್ಟಿದ್ದಾರೆ. ‘ಸೋಲಬಹುದು, ಸತ್ತಿಲ್ಲ’ ಎಂಬ ಸುದೀಪ್ ಮಾತನ್ನು ಎವಿಕ್ಷನ್ ಸ್ಪೀಚ್ ಕೊಟ್ಟಿದ್ದಾರೆ. 

ಬಿಗ್ ಬಾಸ್ ಸೂರಜ್​​ಗೆ ಸೀರಿಯಲ್ ಆಫರ್; ‘ಪವಿತ್ರ ಬಂಧನ’ದ ಕಥೆ ಏನು?

ಬಿಗ್ ಬಾಸ್ ಮೂಲಕ ಚಾಕೋಲೇಟ್ ಹೀರೋ ಆಗಿ ಮಿಂಚಿದ ಸೂರಜ್, ಈಗ 'ಪವಿತ್ರ ಬಂಧನ' ಧಾರಾವಾಹಿಯ ನಾಯಕರಾಗಿದ್ದಾರೆ. ಬಾಣಸಿಗರಾಗಿದ್ದ ಅವರು ಮಾಡೆಲಿಂಗ್ ನಂತರ ಬಿಗ್ ಬಾಸ್ ಪ್ರವೇಶಿಸಿ ಜನಪ್ರಿಯತೆ ಗಳಿಸಿದರು. ಮೂರುವರೆ ಲಕ್ಷ ಹಿಂಬಾಲಕರನ್ನು ಪಡೆದ ಸೂರಜ್, ಇದೀಗ ದೇವದತ್ ದೇಶ್​ಮುಖ್ ಪಾತ್ರದಲ್ಲಿ ಕಿರುತೆರೆ ಪ್ರವೇಶಿಸಲು ಸಜ್ಜಾಗಿದ್ದಾರೆ.

ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ

ಕಾವ್ಯಾ ಶೈವ ಅವರಿಗೆ ಗಿಲ್ಲಿ ನಟ ಹಲವು ಬಾರಿ ಕಿರಿಕಿರಿ ಮಾಡಿದ್ದುಂಟು. ಇಷ್ಟು ದಿನಗಳ ಕೋಪವನ್ನು ಕಾವ್ಯಾ ಅವರು ಈಗ ತೀರಿಸಿಕೊಂಡಿದ್ದಾರೆ. ಗಿಲ್ಲಿಗೆ ಅವರು ಶಿಕ್ಷೆ ನೀಡಿದ್ದಾರೆ. ಕಾವ್ಯಾ ಮಾತ್ರವಲ್ಲದೇ ಮ್ಯೂಟೆಂಟ್ ರಘು ಕೂಡ ಹೀಗೆಯೇ ಮಾಡಿದ್ದಾರೆ. ಭಾನುವಾರದ (ಜನವರಿ 11) ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ ಮಾಡಿದ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಕೊನೆಯ ವಾರದ ಪಂಚಾಯ್ತಿಯು ಇಂದು ನಡೆಯಲಿದೆ ಮತ್ತು ಸುದೀಪ್ ಅವರು ಇದನ್ನು ನಡೆಸಿಕೊಡಲಿದ್ದಾರೆ. ಈ ಪೈಕಿ ಯಾರು ಎಲಿಮಿನೇಟ್ ಆಗುತ್ತಾರೆ ಎಂಬ ಕುತೂಹಲವು ಅಭಿಮಾನಿಗಳಿಗೆ ಮೂಡಿದೆ. ಈ ವಾರ ಪ್ರಮುಖರೆ ನಾಮಿನೇಟ ಆಗಿರುವುದು ಅಚ್ಚರಿಯ ಸಂಗತಿ.

ಬಿಗ್ ಬಾಸ್ ಕನ್ನಡ 12: ಗಿಲ್ಲಿಗಿಂತಲೂ ಮೊದಲೇ ಫಿನಾಲೆ ತಲುಪಿದ ಧನುಷ್

ಆರಂಭದಿಂದಲೂ ಓಡುವ ಕುದುರೆ ಆಗಿದ್ದ ಗಿಲ್ಲಿ ನಟ ಅವರು ಇನ್ನೂ ಫಿನಾಲೆಗೆ ತಲುಪಿಲ್ಲ. ಆದರೆ ಅವರಿಗಿಂತಲೂ ಮೊದಲು ಧನುಷ್ ಅವರು ಬಿಗ್ ಬಾಸ್ ಫಿನಾಲೆಗೆ ಎಂಟ್ರಿ ಪಡೆದಿದ್ದಾರೆ. ಟಾಪ್ 6 ಆಟದಲ್ಲಿ ಧನುಷ್ ಅವರು ಎಲ್ಲರಿಗಿಂತ ಚೆನ್ನಾಗಿ ಆಟ ಆಡಿ ಮುನ್ನಡೆ ಸಾಧಿಸಿದ್ದಾರೆ.

ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಮ್ಯೂಟೆಂಟ್ ರಘು ಅವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದರು. ಅಂತಿಮ ಹಂತದ ತನಕ ಅವರು ಸಾಗಿಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಮ್ಯೂಟೆಂಟ್ ರಘು ಅವರಿಗೆ ಬಹಳಷ್ಟು ಅನುಭವಗಳು ಆಗಿವೆ. ಆ ಬಗ್ಗೆ ಅವರು ಮಾತನಾಡಿದ್ದಾರೆ. ಪ್ರೋಮೋ ನೋಡಿ..

ಅಶ್ವಿನಿ ಗೌಡಗೆ ಅಹಂಕಾರ ಇತ್ತು: ಪ್ರಶಾಂತ್ ಸಂಬರ್ಗಿ ಹೀಗೆ ಹೇಳಿದ್ದು ಯಾಕೆ?

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಅವರು 12ನೇ ಸೀಸನ್ ಬಗ್ಗೆ ಮಾತಾಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿ ಈ ಸೀಸನ್​ನ ಸ್ಪರ್ಧಿಗಳ ಕುರಿತು ತಮ್ಮ ಅಭಿಪ್ರಾಯ ಏನೆಂಬುದನ್ನು ಹಂಚಿಕೊಂಡಿದ್ದಾರೆ. ಅಶ್ವಿನಿ ಗೌಡ ಅವರ ಆಟ ಆರಂಭದಲ್ಲಿ ಹೇಗಿತ್ತು ಹಾಗೂ ಈಗ ಹೇಗಿದೆ ಎಂಬುದನ್ನು ಪ್ರಶಾಂತ್ ಸಂಬರ್ಗಿ ವಿವರಿಸಿದ್ದಾರೆ.

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 8 ಮಂದಿ ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರು ಎಲಿಮಿನೇಟ್ ಆಗಲಿದ್ದಾರೆ. ಆಗ ಕೇವಲ 6 ಸ್ಪರ್ಧಿಗಳು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್​​ಗೆ ಅಶ್ವಿನಿ ಗೌಡ ಹೇಳಿದ್ದಾರೆ. ಅದನ್ನು ಕೇಳಿ ಧ್ರುವಂತ್ ಕಣ್ಣೀರು ಹಾಕಿದಂತೆ ನಟಿಸಿದ್ದಾರೆ. ಪ್ರೋಮೋ ನೋಡಿ..

ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ಗಿಲ್ಲಿ ನಟನ ಅಭಿಮಾನಿ ಬಳಗ ಎಷ್ಟು ದೊಡ್ಡದು ಎಂಬುದನ್ನು ಮತ್ತೆ ಹೇಳಬೇಕಿಲ್ಲ. ಅವರ ಅಭಿಮಾನಿ ಈಗ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಗಿಲ್ಲಿ ಅಭಿಮಾನಿ ಬಳಗ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅದಕ್ಕೆ ಇದು ಹೊಸ ಉದಾಹರಣೆ ಎಂದೇ ಹೇಳಬಹುದು. 

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ

ಗಿಲ್ಲಿ ನಟ ಅವರು ಹಾಗೂ ರಕ್ಷಿತಾ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಈ ಬಾಂಡಿಂಗ್ ಬದಲಾಗುವಂತದ್ದಲ್ಲ. ಇವರು ಇತ್ತೀಚೆಗೆ ಹೆಚ್ಚು ಆಪ್ತರಾಗಿದ್ದಾರೆ. ಗಿಲ್ಲಿ ಕಂಡರೆ ರಕ್ಷಿತಾಗೆ ಎಲ್ಲಿಲ್ಲದ ಪ್ರೀತಿ. ಅದಕ್ಕೆ ಈಗ ವೈರಲ್ ಆಗಿರುವ ವಿಡಿಯೋನೆ ಸಾಕ್ಷಿ. ಈ ವಿಡಿಯೋ ಗಮನ ಸೆಳಯುವ ರೀತಿಯಲ್ಲಿ ಇದೆ.

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು