Bigg Boss Kannada
ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.
ಕನ್ನಡದಲ್ಲಿ ಬಿಗ್ ಬಾಸ್ 12ನೇ ಸೀಸನ್ ಆರಂಭ ಆಗಲಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.
ಬಿಗ್ ಬಾಸ್ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.
ರಜತ್ ಹಾಗೂ ಚೈತ್ರಾನ ಎಲಿಮಿನೇಟ್ ಮಾಡಲು ಕಾರಣ ಕೊಟ್ಟ ಸುದೀಪ್
ಬಿಗ್ ಬಾಸ್ ಕನ್ನಡ ಮನೆಯಿಂದ ರಜತ್ ಮತ್ತು ಚೈತ್ರಾ ಕುಂದಾಪುರ ಅನಿರೀಕ್ಷಿತವಾಗಿ ಎಲಿಮಿನೇಟ್ ಆಗಿದ್ದಾರೆ. ವೋಟಿಂಗ್ ಇಲ್ಲದೆ ನಡೆದ ಈ ನಿರ್ಗಮನಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ‘ಅವರಿಬ್ಬರೂ ಮನೆಯ ಅತಿಥಿಗಳಾಗಿದ್ದು, ಸ್ಪರ್ಧಿಗಳಿಗೆ ಸ್ಫೂರ್ತಿ ನೀಡಲು ಬಂದಿದ್ದರು. ಅತಿಥಿಗಳಾಗಿದ್ದರೂ ಇಬ್ಬರೂ ಉತ್ತಮವಾಗಿ ಆಟವಾಡಿದ್ದಾರೆ ಎಂದಿದ್ದಾರೆ ಸುದೀಪ್.
- Rajesh Duggumane
- Updated on: Dec 22, 2025
- 10:25 am
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ ಶೆಟ್ಟಿ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ ಹೇಳಿದ್ದಾರೆ. ಅವರಿಗೆ ಕಾವ್ಯ ಶೈವ ತಿರುಗೇಟು ನೀಡಿದ್ದಾರೆ. ‘ಕಾನ್ಫಿಡೆನ್ಸ್ ಇರಬೇಕು. ಆದರೆ ಅವಳಿಗೆ ಓವರ್ ಕಾನ್ಫಿಡೆನ್ಸ್ ಇದೆ’ ಎಂದು ಕಿಚ್ಚ ಸುದೀಪ್ ಎದುರಲ್ಲೇ ಕಾವ್ಯ ಶೈವ ಅವರು ಹೇಳಿದ್ದಾರೆ.
- Madan Kumar
- Updated on: Dec 21, 2025
- 2:15 pm
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
‘ನನಗೆ ಏನಾದರೂ ಕೊರೊನಾ ಬಂದಿದೆಯಾ’ ಎಂದು ಗಿಲ್ಲಿ ನಟ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 21ರ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಸಂಚಿಕೆಯ ಪ್ರೋಮೋ ಇಲ್ಲಿದೆ. ಕಲರ್ಸ್ ಕನ್ನಡ ಚಾನೆಲ್ ಹಾಗೂ ಜಿಯೋ ಹಾಟ್ ಸ್ಟಾರ್ ಒಟಿಟಿಯಲ್ಲಿ ಪೂರ್ತಿ ಸಂಚಿಕೆಯನ್ನು ನೋಡಬಹುದು.
- Madan Kumar
- Updated on: Dec 21, 2025
- 9:33 am
ಗಿಲ್ಲಿ ಪ್ರೀತಿಯಿಂದ ಕೈ ಕೊಟ್ಟರು ಕ್ಯಾರೇ ಎನ್ನದೇ ಹೋದ ಕಾವ್ಯಾ; ಫ್ಯಾನ್ಸ್ಗೆ ಬೇಸರ
ಬಿಗ್ ಬಾಸ್ ಕನ್ನಡ 12ರಲ್ಲಿ ಕಾವ್ಯಾ ಹಾಗೂ ಗಿಲ್ಲಿ ಗೆಳೆತನ ಮತ್ತೆ ಸುದ್ದಿಯಲ್ಲಿದೆ. ಚಟುವಟಿಕೆಯ ವೇಳೆ ಗಿಲ್ಲಿ ತಮಗೆ ಆದ ನೋವನ್ನು ಹೇಳಿಕೊಂಡಾಗ, ಕಾವ್ಯಾ ಗಿಲ್ಲಿಯ ಕೈ ಕುಲುಕಲು ನಿರಾಕರಿಸಿದರು. ಈ ವರ್ತನೆ ಗಿಲ್ಲಿ ಅಭಿಮಾನಿಗಳಿಗೆ ತೀವ್ರ ಬೇಸರ ತರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
- Rajesh Duggumane
- Updated on: Dec 20, 2025
- 1:00 pm
ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ
ಚೈತ್ರಾ ಕುಂದಾಪುರ ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರ ತಂದೆ ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ತಮಗೆ ರಕ್ಷಣೆ ಬೇಕು ಎಂದು ಕೋರ್ಟ್ ಹೋಗಿದ್ದರು. ಕೋರ್ಟ್ ಅವರ ಪರವಾಗಿ ತೀರ್ಪು ನೀಡಿದೆ ಈ ಬಗ್ಗೆ ಅವರು ಮಾತನಾಡಿದ್ದು, ನನಗೆ ಚೈತ್ರಾ ಪತಿಯಿಂದಲೂ ಕಿರುಕುಳ ಆಗಿದೆ ಎಂದು ಹೇಳಿದ್ದನ್ನು ವಿಡಿಯೋದಲ್ಲಿ ಕಾಣಬಹುದು.
- Shreelaxmi H
- Updated on: Dec 20, 2025
- 8:31 am
ತುಂಬಾನೇ ಕೆಳಮಟ್ಟದಲ್ಲಿ ಯೋಚಿಸಿದ್ರಾ ರಕ್ಷಿತಾ ಶೆಟ್ಟಿ? ನೆಟ್ಟಿಗರ ಕ್ಲಾಸ್
ರಕ್ಷಿತಾ ಶೆಟ್ಟಿ ಅವರ ಬಿಗ್ ಬಾಸ್ ಮನೆಯೊಳಗಿನ ವರ್ತನೆ ಬದಲಾಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸೀಕ್ರೆಟ್ ರೂಂ ಟಾಸ್ಕ್ನಲ್ಲಿ ಮಹಿಳಾ ಸ್ಪರ್ಧಿಗಳ ವೈಯಕ್ತಿಕ ಮೇಕಪ್ ಬ್ರಷ್ಗಳನ್ನು ನೆಲದ ಮೇಲೆ ಚೆಲ್ಲಿದ ಅವರ ಕ್ರಮವನ್ನು ಹಲವರು "ಕೀಳುಮಟ್ಟದ ಆಲೋಚನೆ" ಎಂದು ಟೀಕಿಸಿದ್ದಾರೆ. ವೈಯಕ್ತಿಕ ವಸ್ತುಗಳಿಗೆ ಅಗೌರವ ತೋರಿದ್ದಕ್ಕೆ ರಾಶಿಕಾ ಸೇರಿದಂತೆ ಇತರೆ ಸ್ಪರ್ಧಿಗಳು ನೋವು ವ್ಯಕ್ತಪಡಿಸಿದ್ದು, ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.
- Rajesh Duggumane
- Updated on: Dec 20, 2025
- 8:03 am
‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ
ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ನಟ ನಡುವೆ ಡಿಸೆಂಬರ್ 19ರ ಸಂಚಿಕೆಯಲ್ಲಿ ದೊಡ್ಡ ಕಿರಿಕ್ ನಡೆದಿತ್ತು. ಕಾವ್ಯಾ ಅವರು ಗಿಲ್ಲಿಗೆ ಗಂಭೀರವಾಗಿ ವಾರ್ನ್ ಮಾಡಿದ್ದು, "ನಿನಗೆ ಮಾನ, ಮರ್ಯಾದೆ, ಸ್ವಾಭಿಮಾನ ಏನು ಇಲ್ಲ" ಎಂದು ನೇರವಾಗಿ ಹೇಳಿದ್ದಾರೆ. ಗಿಲ್ಲಿ ಇದನ್ನು ಹಗುರವಾಗಿ ಪರಿಗಣಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
- Rajesh Duggumane
- Updated on: Dec 20, 2025
- 12:59 pm
ಬಿಗ್ ಬಾಸ್ ಕ್ಯಾಪ್ಟನ್ ಆದ ಕಾವ್ಯಾ; ಗಿಲ್ಲಿ ಬಿಟ್ಟು ಆಡಲು ಇದು ಅಗ್ನಿ ಪರೀಕ್ಷೆ
12ನೇ ವಾರದಲ್ಲಿ ಬಿಗ್ ಬಾಸ್ ಕ್ಯಾಪ್ಟನ್ ಆಗಿರುವ ಕಾವ್ಯ ಶೈವ ಅವರ ಎದುರು ಸವಾಲು ಇದೆ. ಗಿಲ್ಲಿ ನಟನನ್ನು ಬಿಟ್ಟು ತಾನು ಆಟ ಆಡಬಲ್ಲೆ ಎಂಬುದನ್ನು ಕಾವ್ಯ ಅವರೀಗ ತೋರಿಸಬೇಕಿದೆ. ಗಿಲ್ಲಿಯನ್ನು ಪೂರ್ತಿಯಾಗಿ ದೂರ ತಳ್ಳಿದರೆ ಆಗಲೂ ಅವರ ಮೇಲೆ ಬೇರೆ ಅಭಿಪ್ರಾಯ ಬರಬಹುದು.
- Madan Kumar
- Updated on: Dec 19, 2025
- 10:57 pm
ಗಂಡನ ಬಗ್ಗೆ ಬಿಗ್ ಬಾಸ್ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ
ಚೈತ್ರಾ ಕುಂದಾಪುರ ಅವರ ಕುಟುಂಬದಲ್ಲಿನ ಬಿರುಕು ದೊಡ್ಡದಾಗಿದೆ. ಚೈತ್ರಾ ವಿರುದ್ಧ ತಂದೆ ಬಾಲಕೃಷ್ಣ ನಾಯ್ಕ್ ಅವರು ಅನೇಕ ಆರೋಪಗಳನ್ನು ಮಾಡಿದ್ದಾರೆ. ಪತಿ ಶ್ರೀಕಾಂತ್ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಹೇಳಿದ ಮಾತುಗಳು ಸುಳ್ಳು ಎಂದು ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ..
- Prajwal Amin
- Updated on: Dec 19, 2025
- 10:10 pm
ಚೈತ್ರಾ ಡಿಬಾರ್ ಆಗಿದ್ದಳು: ಮಗಳ ಕಿರುಕುಳಕ್ಕೆ ನೊಂದು ಎಲ್ಲ ವಿಷಯ ಹೇಳಿದ ಬಾಲಕೃಷ್ಣ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿರುದ್ಧ ನ್ಯಾಯಾಲಯ ಆದೇಶ ನೀಡಿದೆ. ತಂದೆ ಬಾಲಕೃಷ್ಣ ನಾಯ್ಕ್ ಅವರು ಚೈತ್ರಾ ಮೇಲೆ ಕೇಸ್ ಹಾಕಿದ್ದರು. ಕೋರ್ಟ್ ಆದೇಶದ ಬಳಿಕ ಬಾಲಕೃಷ್ಣ ನಾಯ್ಕ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
- Prajwal Amin
- Updated on: Dec 19, 2025
- 9:02 pm
ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್?
‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿರುದ್ಧ ಸ್ವತಃ ತಂದೆಯೇ ದೂರು ನೀಡಿದ್ದರು. ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ವಿರುದ್ಧ ಕೋರ್ಟ್ ಆದೇಶ ನೀಡಿದೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
- Prajwal Amin
- Updated on: Dec 19, 2025
- 7:50 pm
ಈ ವಾರ ಒಬ್ಬರಲ್ಲ ಇಬ್ಬರು ಔಟ್? ಟ್ವಿಸ್ಟ್ ಕೊಡಲು ಬಿಗ್ ಬಾಸ್ ರೆಡಿ
ಬಿಗ್ ಬಾಸ್ ಕನ್ನಡ 12ರಲ್ಲಿ ನಾಟಕೀಯ ತಿರುವುಗಳು ಎದುರಾಗುತ್ತಾ ಇದೆ. ರಕ್ಷಿತಾ, ಧ್ರುವಂತ್ ಸೀಕ್ರೆಟ್ ರೂಂನಿಂದ ಮರಳಲಿದ್ದು, ಇಬ್ಬರು ಡಬಲ್ ಎಲಿಮಿನೇಷನ್ ಮೂಲಕ ಹೊರಹೋಗುವ ಸಾಧ್ಯತೆ ಇದೆ. ಈ ಬಾರಿ ವೋಟಿಂಗ್ ಲೈನ್ ತೆರೆದಿಲ್ಲ. ಸ್ಪರ್ಧಿಗಳ ಸಂಖ್ಯೆ ಕಡಿತಗೊಳಿಸುವ ಅನಿವಾರ್ಯತೆ ಇರುವುದರಿಂದ ಈ ನಿರ್ಧಾರ ತಳೆಯುವ ನಿರೀಕ್ಷೆ ಇದೆ. ದೊಡ್ಮನೆ ಆಟ ಮತ್ತಷ್ಟು ರೋಚಕವಾಗುತ್ತಿದೆ.
- Rajesh Duggumane
- Updated on: Dec 19, 2025
- 12:59 pm