Bigg Boss Kannada
ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.
ಕನ್ನಡದಲ್ಲಿ ಬಿಗ್ ಬಾಸ್ 12ನೇ ಸೀಸನ್ ಆರಂಭ ಆಗಲಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.
ಬಿಗ್ ಬಾಸ್ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ.
- Madan Kumar
- Updated on: Mar 9, 2026
- 8:53 pm
‘ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ’: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋಗೆ ‘ಮಾರ್ಕ್’ ಸಿನಿಮಾದ ಹಾಡು ಬಳಸಿದ್ದಕ್ಕೆ ಡಾಗ್ ಸತೀಶ್ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವಿನಯ್ ಗೌಡ, ರಜತ್ ಮುಂತಾದವರು ಸತೀಶ್ ಮೇಲೆ ಗರಂ ಆಗಿದ್ದರು. ಈ ಪ್ರಕರಣ ಇಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಆ ಬಗ್ಗೆ ಸತೀಶ್ ಮಾತಾಡಿದ್ದಾರೆ.
- Mangala RR
- Updated on: Mar 8, 2026
- 2:17 pm
ಸುದೀಪ್ ನಟ ಆದ್ರೆ ತಲೆ ಮೇಲೆ ಕೊಂಬು ಇರುತ್ತಾ? ಡಾಗ್ ಸತೀಶ್ ಗರಂ
ಡಾಗ್ ಸತೀಶ್ ಅವರ ಒಂದು ವಿಡಿಯೋದಲ್ಲಿ ಸುದೀಪ್ ಹಾಡು ಬಳಸಿದ್ದಕ್ಕೆ ವಿವಾದ ಸೃಷ್ಟಿಯಾಗಿದೆ. ರಜತ್, ವಿಜಯ್ ಗೌಡ ಅವರು ಸತೀಶ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಅದಕ್ಕೆ ಸತೀಶ್ ಪ್ರತಿಕ್ರಿಯಿಸಿದ್ದಾರೆ. ತಾವು ಮಾಡಿದ್ದರಲ್ಲಿ ತಪ್ಪೇ ಇಲ್ಲ ಎಂದು ಹೇಳುತ್ತಿರುವ ಸತೀಶ್ ಅವರು ಸುದೀಪ್ ಬಗ್ಗೆಯೂ ಮಾತಾಡಿದ್ದಾರೆ.
- Mangala RR
- Updated on: Mar 8, 2026
- 8:17 am
ಮತ್ತೆ ಕಿರಿಕ್ ಮಾಡಿಕೊಂಡ ರಜತ್ ಕಿಶನ್; ಎಫ್ಐಆರ್ ದಾಖಲು
ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರಿಗೆ ಹೊಸ ಸಂಕಷ್ಟ ಶುರುವಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ. ಡಾಗ್ ಸತೀಶ್ ಜೊತೆ ಸ್ನೇಹ ಮಾಡಬಾರದು ಎಂದು ರಜತ್ ಕಿಶನ್ ಅವರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
- Madan Kumar
- Updated on: Mar 6, 2026
- 10:29 pm
ಕನ್ನಡದಲ್ಲಿ ಪ್ರಾಪರ್ಟಿ ಕಾಮಿಡಿ ಮೊದಲು ಶುರು ಮಾಡಿದ್ದು ಗಿಲ್ಲಿ ಅಲ್ಲ, ಹಾಗಿದ್ರೆ?
ಬಿಗ್ ಬಾಸ್ಗಿಂತ ಮೊದಲು ಗಿಲ್ಲಿ ನಟ ಅವರು ಪ್ರಾಪರ್ಟಿ ಕಾಮಿಡಿ ಮಾಡುತ್ತಿದ್ದರು. ಅವರು ಜೀ ಕನ್ನಡದ ವೇದಿಕೆ ಮೇಲೆ ಅನೇಕ ಬಾರಿ ಪ್ರಾಪರ್ಟಿ ಕಾಮಿಡಿ ಮಾಡಿದ್ದರು. ಪ್ರಾಪರ್ಟಿ ಕಾಮಿಡಿ ಎಂದರೆ ಎರಡು ವಸ್ತುಗಳನ್ನು ಇಟ್ಟುಕೊಂಡು ಅಥವಾ ಎರಡು ಶಬ್ದ ಇಟ್ಟುಕೊಂಡು ಅದಕ್ಕೆ ಹೊಸ ಅರ್ಥವನ್ನು ನೀಡೋದು. ಈ ರೀತಿಯ ಕಾಮಿಡಿಯನ್ನು ಗಿಲ್ಲಿ ಸಾಕಷ್ಟು ಬಾರಿ ಮಾಡಿದ್ದಾರೆ.
- Shreelaxmi H
- Updated on: Mar 4, 2026
- 7:55 am
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋ ಮುಗಿದು ತಿಂಗಳು ಕಳೆದಿದ್ದರೂ ಸ್ಪರ್ಧಿಗಳ ಹವಾ ಕಮ್ಮಿಯಾಗಿಲ್ಲ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ‘ಹಯಗ್ರೀವ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮಂಡ್ಯದಲ್ಲಿ ನಡೆದಿದೆ. ಆ ವೇದಿಕೆಯಲ್ಲಿ ಅಶ್ವಿನಿ ಗೌಡ, ಗಿಲ್ಲಿ ನಟ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
- Madan Kumar
- Updated on: Feb 22, 2026
- 8:38 am
ಅಶ್ವಿನಿ ಗೌಡ ವಿಷಯದಲ್ಲಿ ಗಿಲ್ಲಿ ಹೇಳಿದ್ದ ಆ ಮಾತು ನಿಜವೇ ಆಯ್ತು
ಬಿಗ್ ಬಾಸ್ ಕನ್ನಡ 12ರ ನಂತರವೂ ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ಕಿತ್ತಾಟ ಮುಂದುವರಿದಿದೆ. ದೊಡ್ಮನೆಯಲ್ಲಿ ಆದ ಪರಚು ಗಾಯಗಳ ಬಗ್ಗೆ ಅಶ್ವಿನಿ ಈಗ ಚೈತ್ರಾ ಮೇಲೆ ಉದ್ದೇಶಪೂರ್ವಕ ಆರೋಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಆಟವನ್ನು ಆಟವಾಗಿಯೇ ನೋಡುತ್ತೇನೆ ಎಂದಿದ್ದಾರೆ. ಹೆಣ್ಣು ಮಕ್ಕಳು ಜಗಳ ಆರಂಭಿಸಿದರೆ ಮುಗಿಯದು ಎಂಬ ಗಿಲ್ಲಿ ಮಾತು ನಿಜವಾಗಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.
- Rajesh Duggumane
- Updated on: Feb 13, 2026
- 7:37 am
‘ದೊಡ್ಮನೆ ಹಬ್ಬ’ದಲ್ಲಿ ರಕ್ಷಿತಾ ಶೆಟ್ಟಿ ಕಣ್ಣೀರು; ತಬ್ಬಿ ಸಂತೈಸಿದ ರಘು-ಗಿಲ್ಲಿ
‘ಬಿಗ್ ಬಾಸ್’ ಮನೆಯಲ್ಲಿ ಈಗ ದೊಡ್ಮನೆ ಹಬ್ಬ ನಡೆಯುತ್ತಿದೆ.ಅಂದರೆ ಎಲ್ಲಾ ಸ್ಪರ್ಧಿಗಳು ಮತ್ತೊಮ್ಮೆ ಸೇರೋ ಸಮಯ. ಈ ವೇಳೆ ರಕ್ಷಿತಾ ಶೆಟ್ಟಿ ಅವರು ಕಣ್ಣೀರು ಹಾಕಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.
- Shreelaxmi H
- Updated on: Feb 12, 2026
- 11:25 am
ಫೆಬ್ರವರಿ 14ರಂದು ‘ಕಲರ್ಸ್ ದೊಡ್ಮನೆ ಹಬ್ಬ’: ಸತತ 3 ಗಂಟೆಗಳ ಮನರಂಜನೆ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿಗಳು ವೇದಿಕೆಯಲ್ಲಿ ತಮ್ಮಿಷ್ಟದ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಬಿಗ್ ಬಾಸ್ ದಿನಗಳನ್ನು ಮೆಲುಕು ಹಾಕಿದ್ದಾರೆ. ಹೊರ ಬಂದ ಮೇಲೆ ಸಿಕ್ಕ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಹೇಳಿಕೊಂಡಿದ್ದಾರೆ. ಈ ಎಲ್ಲ ಮನರಂಜನೆಯ ರಸದೌತಣವನ್ನು ಸವಿಯಲು ‘ಕಲರ್ಸ್ ದೊಡ್ಮನೆ ಹಬ್ಬ’ ಕಾರ್ಯಕ್ರಮವನ್ನು ನೋಡಬೇಕು.
- Madan Kumar
- Updated on: Feb 10, 2026
- 6:35 pm
ಫೆ.27ಕ್ಕೆ ಗಿಲ್ಲಿ ಸಿನಿಮಾ ‘ಸೂಪರ್ ಹಿಟ್’ ರಿಲೀಸ್; ಈಗಲೇ ಬಂದಿದೆ ಒಟಿಟಿ ಡಿಮ್ಯಾಂಡ್
ಗಿಲ್ಲಿ ನಟ ಅವರು ಬಿಗ್ ಬಾಸ್ ಶೋಗೆ ಹೋಗುವುದಕ್ಕೂ ಮುನ್ನ ‘ಸೂಪರ್ ಹಿಟ್’ ಚಿತ್ರದಲ್ಲಿ ನಟಿಸಿದ್ದರು. ಈಗ ಅವರಿಗೆ ಅಪಾರ ಜನಪ್ರಿಯತೆ ಬಂದಿದ್ದು, ಈ ಸಿನಿಮಾ ಫೆಬ್ರವರಿ 27ರಂದು ರಿಲೀಸ್ ಆಗುತ್ತಿದೆ. ಇತ್ತೀಚೆಗೆ ‘ಸೂಪರ್ ಹಿಟ್’ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರತಂಡದವರು ಮಾಹಿತಿ ಹಂಚಿಕೊಂಡರು.
- Madan Kumar
- Updated on: Feb 10, 2026
- 5:31 pm
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಸಾಕಷ್ಟು ಕಿರಿಕ್ ಆಗಿತ್ತು. ಈ ಕಿರಿಕ್ಗಳು ಮನೆಯಿಂದ ಹೊರ ಬಂದ ಬಳಿಕವೂ ಮುಂದುವರಿದವು. ಗಿಲ್ಲಿ ಹಾಗೂ ಅಶ್ವಿನಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈಗ ಸೋಶೀಯಲ್ ಮೀಡಿಯಾದಲ್ಲಿ ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.
- Rajesh Duggumane
- Updated on: Feb 10, 2026
- 8:59 am
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಸಿಗಲಿಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಬಿಗ್ ಬಾಸ್ ಮುಗಿದ ಬಳಿಕ ದರ್ಶನ್ ಅವರನ್ನು ಗಿಲ್ಲಿ ನಟ ಭೇಟಿ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ಬಗ್ಗೆ ಸ್ವತಃ ಗಿಲ್ಲಿ ಅವರು ಈಗ ಪ್ರತಿಕ್ರಿಯೆ ನೀಡಿದ್ದಾರೆ. ಗಿಲ್ಲಿ ಅವರು ದರ್ಶನ್ ಭೇಟಿಗೆ ಪ್ರಯತ್ನ ಮಾಡಿದ್ದಾರೆ. ಆದರೆ ಭೇಟಿಗೆ ಅವಕಾಶ ಇಲ್ಲ ಎಂಬುದು ತಿಳಿದುಬಂದಿದೆ.
- Madan Kumar
- Updated on: Feb 9, 2026
- 9:40 pm