AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada

Bigg Boss Kannada

ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್​ ಬಾಸ್​ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.

ಕನ್ನಡದಲ್ಲಿ ಬಿಗ್ ಬಾಸ್ 12ನೇ ಸೀಸನ್ ಆರಂಭ ಆಗಲಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.

ಬಿಗ್ ಬಾಸ್​ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್​ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.

ಇನ್ನೂ ಹೆಚ್ಚು ಓದಿ

ಬಿಗ್​​ಬಾಸ್ ಸ್ಪರ್ಧಿಗಳಿಗೆ ಎದುರಾಗಲಿದೆ ಅಗ್ನಿಪರೀಕ್ಷೆ, ಎದುರಿದ್ದಾರೆ ನಾಲ್ವರು ತೀರ್ಪುಗಾರರು

Bigg Boss Kannada: ಈ ಬಾರಿ ಸಾಕಷ್ಟು ವಿಶೇಷತೆಗಳು ಬಿಗ್​​ಬಾಸ್​​ನಲ್ಲಿ ಇರಲಿವೆ. ಅದರಲ್ಲೂ ಸ್ಪರ್ಧಿಗಳ ಆಯ್ಕೆ ಈ ಬಾರಿ ಬಹಳ ಭಿನ್ನವಾಗಿರಲಿದೆ. ಈ ಬಾರಿ ‘ಬಿಗ್​​ಬಾಸ್ ಅಗ್ನಿಪರೀಕ್ಷೆ’ ಎಂಬ ಹೊಸ ಕಾನ್ಸೆಪ್ಟ್ ಅನ್ನು ಪರಿಚಯಿಸಲಾಗಿದ್ದು, ಮನೆಯ ಒಳಗೆ ಹೋಗುವ ಸ್ಪರ್ಧಿಗಳು ಮೊದಲು ಅಗ್ನಿಪರೀಕ್ಷೆಯನ್ನು ಎದುರಿಸಬೇಕಿರಲಿದೆ. ಈ ಪರೀಕ್ಷೆಯನ್ನು ತೆಗೆದುಕೊಳ್ಳುವವರು ನಾಲ್ಕು ಬಿಗ್​​ಬಾಸ್ ಪರಿಣಿತರು.

ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?

‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಸಲ ಸಾಮಾನ್ಯ ಜನರಿಗೂ ಅವಕಾಶ ಸಿಗುತ್ತಿದೆ ಎಂಬುದು. ಲಾಲ್ ಬಾಗ್ ಫ್ಲವರ್ ಶೋನಲ್ಲಿ ಕೂಡ ಬಿಗ್ ಬಾಸ್ ಪ್ರಚಾರ ಮಾಡಲಾಗುತ್ತಿದೆ. ಆಗಸ್ಟ್ 6ರಿಂದ ಶುರುವಾಗಿರುವ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಚೇರ್ ಇರಿಸಲಾಗಿದೆ.

ಲಾಲ್​​ಬಾಗ್ ಫ್ಲವರ್ ಶೋನಲ್ಲಿ ಸಿಗಲಿದೆ ಬಿಗ್​​ಬಾಸ್​​ಗೆ ಹೋಗುವ ಅವಕಾಶ

Bigg Boss Kannada season 13: ಬಿಗ್​​ಬಾಸ್ ಕನ್ನಡ ಸೀಸನ್ 13 ಶೀಘ್ರವೇ ಶುರು ಆಗಲಿದೆ. ಈ ಬಾರಿ ಸಾಮಾನ್ಯರು ಸಹ ಬಿಗ್​​ಬಾಸ್ ಸ್ಪರ್ಧಿಗಳಾಗಿ ಮನೆ ಪ್ರವೇಶಿಸಲಿದ್ದಾರೆ. ವಿಶೇಷವೆಂದರೆ ಈ ಬಾರಿ ಬಿಗ್​​ಬಾಸ್ ವೀಕೆಂಡ್ ಎಪಿಸೋಡ್ ಅನ್ನು ಲೈವ್ ನೋಡುವ ಅವಕಾಶವನ್ನು ಸಹ ಗೆಲ್ಲಬಹುದಾಗಿದೆ. ಅದಕ್ಕೆ ಕೆಲವು ನಿಯಮಗಳಿದ್ದು, ಮಾಹಿತಿ ಇಲ್ಲಿದೆ ನೋಡಿ...

ಪ್ಯಾರಿಸ್‌ನಲ್ಲಿ ಬಾಯ್‌ಫ್ರೆಂಡ್‌ ಪರಿಚಯಿಸಿದ ನಟಿ ಸ್ಪಂದನಾ ಸೋಮಣ್ಣ

ಬಿಗ್ ಬಾಸ್ ಖ್ಯಾತಿಯ ನಟಿ ಸ್ಪಂದನಾ ಸೋಮಣ್ಣ ಪ್ಯಾರಿಸ್‌ನಲ್ಲಿ ತಮ್ಮ ಪ್ರಿಯಕರನೊಂದಿಗೆ ಕಾಣಿಸಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಬಿಗ್ ಬಾಸ್‌ನಿಂದ ಹೊರಬಂದ ಬಳಿಕ ಮ್ಯೂಸಿಕ್ ವಿಡಿಯೋದಲ್ಲಿ ಮಿಂಚಿದ್ದ ಸ್ಪಂದನಾ, ಇದೀಗ ಹುಡುಗನ ಮುಖ ಮತ್ತು ಹೆಸರು ಬಹಿರಂಗಪಡಿಸದೆ ಸಸ್ಪೆನ್ಸ್ ಕಾಯ್ದುಕೊಂಡು ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಆಗಸ್ಟ್ 16ರಿಂದ ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್ ಶುರು; ಈ ಬಾರಿ ಅಗ್ನಿಪರೀಕ್ಷೆ

ಈ ಬಾರಿ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಬಹಳ ಡಿಫರೆಂಟ್ ಆಗಿರಲಿದೆ. ದೊಡ್ಮನೆ ಒಳಗೆ ಕಾಲಿಡಲು ಜನಸಾಮಾನ್ಯರಿಗೂ ಅವಕಾಶ ಸಿಗುತ್ತಿದೆ. ಆದರೆ ಅದಕ್ಕೂ ಮುನ್ನ ದೊಡ್ಡ ಅಗ್ನಿಪರೀಕ್ಷೆ ನಡೆಯಲಿದೆ. ಈ ಅಗ್ನಿಪರೀಕ್ಷೆಯಲ್ಲಿ ಯಶಸ್ವಿ ಆದವರಿಗೆ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಗಲಿದೆ.

‘ಬಿಗ್ ಬಾಸ್’ ಭಾವಿ ಸ್ಪರ್ಧಿಗಳಿಗೆ ‘ಅಗ್ನಿಪರೀಕ್ಷೆ’; ಜಡ್ಜ್​ ಸ್ಥಾನದಲ್ಲಿ ಗಿಲ್ಲಿ, ಸಂಗೀತಾ?

'ಬಿಗ್ ಬಾಸ್ ಕನ್ನಡ ಸೀಸನ್ 13' ರಂಗೇರಲು ಸಿದ್ಧವಾಗಿದ್ದು, ಪ್ರೋಮೊ ಈಗಾಗಲೇ ಧೂಳೆಬ್ಬಿಸಿದೆ. ಈ ಬಾರಿ ಸಾಮಾನ್ಯ ಸ್ಪರ್ಧಿಗಳಿಗೆ 'ಅಗ್ನಿಪರೀಕ್ಷೆ' ನಡೆಸಲು ಬಿಗ್ ಬಾಸ್ ಟೀಮ್ ಪ್ಲ್ಯಾನ್ ಮಾಡಿದೆ. ಜಡ್ಜ್ ಸ್ಥಾನದಲ್ಲಿ ಹಳೇ ಸ್ಪರ್ಧಿಗಳಾದ ಸಂಗೀತಾ ಶೃಂಗೇರಿ, ವಿನಯ್ ಗೌಡ ಮತ್ತು ಗಿಲ್ಲಿ ನಟ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಬಿಗ್ ಬಾಸ್ ಸಂಭಾವನೆ ಗುಟ್ಟು ರಟ್ಟು ಮಾಡಿದ ಧನರಾಜ್; ಅಸಲಿ ವಿಷಯ ಕೇಳಿ ಜನ ಶಾಕ್

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಪಡೆಯುವ ಸಂಭಾವನೆ ಬಗ್ಗೆ ಧನರಾಜ್ ಆಚಾರ್ ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ. ಶೋನಲ್ಲಿ ಸಿಕ್ಕಾಪಟ್ಟೆ ದುಡ್ಡಿದ್ದು ಕೆಲವರಿಗೆ ವಿನ್ನರ್ ಪಡೆಯುವ ಮೊತ್ತದ ಅರ್ಧದಷ್ಟು ಸಂಭಾವನೆ ಸಿಗುತ್ತದೆ. ಅತಿ ಕಡಿಮೆ ಸಂಭಾವನೆ ಪಡೆದಿದ್ದು ನಾವೇ ಎಂದು ಧನರಾಜ್ ತಮಾಷೆಯಾಗಿ ಸಂದರ್ಶನದಲ್ಲಿ ಹೇಳಿದ್ದಾರೆ.

ಅಶ್ಲೀಲವಾಗಿ ಟ್ರೋಲ್ ಮಾಡಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಧ್ರುವಂತ್

ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬಗ್ಗೆ ಮಾನಹಾನಿ ಆಗುವ ರೀತಿಯಲ್ಲಿ ಟ್ರೋಲ್ ಮಾಡಿದವರ ವಿರುದ್ಧ ನಟ ಧ್ರುವಂತ್ ಅವರು ದೂರು ದಾಖಲಿಸಿದ್ದಾರೆ. ಹಲವು ಟ್ರೋಲ್ ಪೇಜ್​ಗಳ ಹೆಸರನ್ನು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಶ್ಲೀಲ, ಅಸಭ್ಯ ಹಾಗೂ ಅವಾಚ್ಯ ಟ್ರೋಲ್​ಗಳಿಂದ ತಮಗೆ ತೊಂದರೆ ಆಗಿದೆ ಎಂದು ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್‌ನಿಂದ ಏಕಕಾಲದಲ್ಲಿ ಶುರುವಾಗಲಿದೆ 6 ಭಾಷೆಗಳ ‘ಬಿಗ್ ಬಾಸ್’ ಹೊಸ ಶೋ

ಈ ಬಾರಿ ಸೆಪ್ಟೆಂಬರ್‌ನಿಂದ ಭಾರತದಾದ್ಯಂತ ಬಿಗ್ ಬಾಸ್ ಹಬ್ಬ ಶುರುವಾಗಲಿದ್ದು, ಕನ್ನಡದ ಬಿಗ್ ಬಾಸ್ ಶೋ ವೀಕ್ಷಕರಿಗೆ ಕಿಚ್ಚ ಸುದೀಪ್ ಜೊತೆ ಮತ್ತೊಂದು ಜಬರ್ದಸ್ತ್ ಮನರಂಜನೆಯ ರಸದೌತಣ ಸಿಗುವುದು ಗ್ಯಾರಂಟಿ. ಕನ್ನಡದ ಜೊತೆಯಲ್ಲೇ ಇನ್ನುಳಿದ ಭಾಷೆಗಳ ಬಿಗ್ ಬಾಸ್ ಕೂಡ ಆರಂಭ ಆಗಲಿದೆ.

ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದು ಬಂದಿದ್ದು ಹೇಗೆ?

‘ಪಾರು’ ಸೀರಿಯಲ್ ಮತ್ತು ‘ಬಿಗ್ ಬಾಸ್’ ರಿಯಾಲಿಟಿ ಶೋ ಖ್ಯಾತಿಯ ನಟಿ ಮೋಕ್ಷಿತಾ ಪೈ ಅವರು ‘ರುಕ್ಮಿಣಿ ರಾಧಾ ಕೃಷ್ಣ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಅವರು ರಾಧಾ ಎಂಬ ಪಾತ್ರ ಮಾಡಿದ್ದಾರೆ. ಆ ಕುರಿತು ಅವರು ಟಿವಿ9 ಜೊತೆ ಮಾತನಾಡಿದ್ದಾರೆ.

ಬೆಂಗಳೂರಲ್ಲಿ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್‌ಗೆ ಕಹಿ ಅನುಭವ; ಯುವಕನ ವಿಕೃತ ವರ್ತನೆ

‘ಬಿಗ್ ಬಾಸ್ ಕನ್ನಡ ಸೀಸನ್ 8’ ಖ್ಯಾತಿಯ ನಟಿ ದಿವ್ಯಾ ಸುರೇಶ್ ಅವರ ಎದುರು ಯುವಕನೊಬ್ಬ ವಿಕೃತವಾಗಿ ನಡೆದುಕೊಂಡಿದ್ದಾನೆ. ಇದು ಭಯಾನಕ ಘಟನೆ ಎಂದು ದಿವ್ಯಾ ಅವರು ಹೇಳಿದ್ದಾರೆ. ಅಲ್ಲದೇ, ಬೆಂಗಳೂರಿನಲ್ಲಿ ಮಹಿಳೆಯರಿಗೆ ಎಷ್ಟು ಸುರಕ್ಷತೆ ಇದೆ ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ.

ಅಂದುಕೊಂಡಂತೆಯೇ ‘ಪಳಾರ್’ ಆದ ಗಿಲ್ಲಿ ನಟ; ಹೊಸ ಸಿನಿಮಾಗೆ ಇದೇ ಟೈಟಲ್

ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರ ಸಿನಿಮಾಗೆ ‘ಪಳಾರ್’ ಎಂದು ಶೀರ್ಷಿಕೆ ಇಡಲಾಗಿದೆ. ನವೀನ್ ಮತ್ತು ಹರೀಶ್ ನಿರ್ಮಾಣದ ಈ ಚಿತ್ರಕ್ಕೆ ಚಂದ್ರಮೋಹನ್ ನಿರ್ದೇಶನ ಮಾಡುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಚಂದ್ರಶೇಖರನ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ಬಿ. ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.

ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ