Bigg Boss Kannada

Bigg Boss Kannada

ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್​ ಬಾಸ್​ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.

ಕನ್ನಡದಲ್ಲಿ ಬಿಗ್ ಬಾಸ್ 10ನೇ ಸೀಸನ್ ಆರಂಭ ಆಗಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.

ಬಿಗ್ ಬಾಸ್​ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್​ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.

ಇನ್ನೂ ಹೆಚ್ಚು ಓದಿ

ಬೆಂಗಳೂರಲ್ಲಿ ಮಳೆ ಸೃಷ್ಟಿಸುತ್ತಿರುವ ಅನಾಹುತಗಳ ಮೇಲೆ ಬೆಳಕು ಚೆಲ್ಲಿದ ಖ್ಯಾತ ವಕೀಲ ಜಗದೀಶ್

ಕೊಡಿಗೇಹಳ್ಳಿಯ ಕೆರೆಯನ್ನು ಶೇಕಡಾ 40ರಷ್ಟು ಒತ್ತುವರಿ ಮಾಡಿಕೊಳ್ಳಲಾಗಿದೆ, ಪ್ರದೇಶದ ರಾಜಾಕಾಲುವೆಗಳ ಮೇಲೆ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗಿದೆ, ಕೆಂಪೇಗೌಡ ಅವರ ಕಾಲದಲ್ಲಿ ಅಪಾರ ಸಂಖ್ಯೆಯಲ್ಲಿದ್ದ ಕೆರೆಗಳು ಈಗ ಬೆರಳೆಣಿಕೆಯಷ್ಟು ಮಾತ್ರ ಉಳಿದಿವೆ ಎಂದು ಜಗದೀಶ್ ಹೇಳುತ್ತಾರೆ.

ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ

ದಿನ ಕಳೆದಂತೆಲ್ಲ ಬಿಗ್ ಬಾಸ್​ ಮನೆಯಲ್ಲಿ ಟೆನ್ಷನ್ ಹೆಚ್ಚುತ್ತಿದೆ. ಶಿಶಿರ್ ಬಳಿಕ ಅಲ್ಪಾವಧಿಗೆ ಹನುಮಂತ ಕ್ಯಾಪ್ಟನ್ ಆಗಿದ್ದರು. ಈಗ ಹೊಸ ಕ್ಯಾಪ್ಟನ್ ಆಯ್ಕೆಗೆ ಟಾಸ್ಕ್ ನೀಡಲಾಗಿದೆ. ಈ ವೇಳೆ ಶಿಶಿರ್ ಮತ್ತು ಉಗ್ರಂ ಮಂಜು ನಡುವೆ ಜಗಳ ನಡೆದಿದೆ. ಈಗ ಜಗಳ ಮಿತಿಮೀರಿದೆ.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ

ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಈಗ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ.

ಬಿಗ್​ ಬಾಸ್​ನಲ್ಲಿ ಪಾತ್ರೆ ತೊಳೆದ ಪರಿಣಾಮ; ಲಾಯರ್ ಜಗದೀಶ್​ಗೆ ಮನೆಯಲ್ಲಿ ಎಂಥಾ ಸ್ಥಿತಿ

ಬಿಗ್ ಬಾಸ್ ಮನೆಯಲ್ಲಿ ಹಗಲು ರಾತ್ರಿ ಎನ್ನದೆ ಸಿಕ್ಕ ಸಿಕ್ಕಾಗಲೆಲ್ಲ ಜಗದೀಶ್ ಅವರು ಅಡುಗೆ ಮನೆಯ ವಾಶ್ ಬೇಸ್​ನಲ್ಲಿ ನಿಲ್ಲುತ್ತಿದ್ದರು. ಇದು ಅವರ ಪತ್ನಿಯ ಗಮನಕ್ಕೆ ಬಂದಿದೆ. ಈಗ ಅವರು ಮನೆಯಲ್ಲೂ ಪಾತ್ರೆ ತೊಳೆಯೋ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ.

‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

ಜಗದೀಶ್ ಅವರು ಅವಾಚ್ಯ ಪದಗಳನ್ನು ಬಳಸುತ್ತಾರೆ ಎಂದು ಎಲ್ಲರೂ ಆರೋಪಿಸಿದ್ದರು. ಹಾಗಂತ ಚೈತ್ರಾ ಕುಂದಾಪುರ ಅವರ ಮಾತು ಸರಿ ಇದೆಯಾ ಎಂದು ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದರು. ಸುದೀಪ್ ಅವರು ಬುದ್ಧಿ ಹೇಳಿದ ನಂತರವೂ ಚೈತ್ರಾ ಅವರ ಮಾತಿನ ವರಸೆ ಬದಲಾಗಿಲ್ಲ. ‘ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ’ ಎಂಬ ಮಾತು ಅವರಿಂದ ಬಂದಿದೆ.

ಜಗದೀಶ್ ಇದ್ದಾಗ ಜಗಳ, ಹನುಮಂತ ಬಂದ್ಮೇಲೆ ನಗು: ಬದಲಾಯ್ತು ಬಿಗ್ ಬಾಸ್ ಮನೆ

ಹನುಮಂತ ಬಂದ ನಂತರ ಬಿಗ್ ಬಾಸ್ ಮನೆಯಲ್ಲಿ ನಗು ತುಂಬಿದೆ. ದೊಡ್ಮನೆಯ ವಾತಾವರಣ ಬದಲಾಗಿದೆ. ಜಗದೀಶ್ ಇದ್ದಾಗ ಕೇವಲ ಜಗಳವೇ ಆವರಿಸಿತ್ತು. ಆದರೆ ಹನುಮಂತ ಅವರ ಮುಗ್ಧತೆಯಿಂದ ಇನ್ನುಳಿದ ಸ್ಪರ್ಧಿಗಳ ಮುಖದಲ್ಲಿ ನಗು ಮೂಡುವಂತಾಗಿದೆ. ಮುಂದಿನ ದಿನಗಳಲ್ಲಿ ಹನುಮಂತ ಯಾವ ರೀತಿ ಇರುತ್ತಾರೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದಾರೆ.

ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್

ಗಾಯಕ ಹನುಮಂತ ಈಗ ಬಿಗ್ ಬಾಸ್ ಸ್ಪರ್ಧಿ. ಆತನ ಮುಗ್ಧತೆ ಕಂಡು ಧನರಾಜ್ ಸಹಾಯಕ್ಕೆ ಬಂದಿದ್ದಾರೆ. ವೆಸ್ಟರ್ನ್ ಟಾಯ್ಲೆಟ್ ಬಳಸುವುದು ಹೇಗೆ ಎಂದು ಹನುಮಂತನಿಗೆ ಧನರಾಜ್ ಹೇಳಿಕೊಟ್ಟಿದ್ದಾರೆ. ಈ ಟಾಯ್ಲೆಟ್​ ಪಾಠ ಮಧ್ಯರಾತ್ರಿಯಲ್ಲಿ ನಡೆದಿದೆ. ಅದರ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ.

ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ

ಜಗದೀಶ್ ಅವರು ಎಲಿಮಿನೇಟ್ ಆದ ಬಳಿಕ ಬಿಗ್ ಬಾಸ್​ ಮನೆ ಸೈಲೆಂಟ್ ಆಗಿತ್ತು. ಆದರೆ ಈಗ ಮತ್ತೆ ಜಗಳ ಶುರುವಾಗಿದೆ. ಕ್ಯಾಪ್ಟನ್ ಆಗಲು ಬಿಗ್ ಬಾಸ್ ನೀಡಿದ್ದ ಟಾಸ್ಕ್ ಆಡುವ ವೇಳೆ ಶಿಶಿರ್ ಮತ್ತು ಉಗ್ರಂ ಮಂಜು ಅವರು ಬಡಿದಾಡಿಕೊಂಡಿದ್ದಾರೆ. ಇದರ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಇಂದು (ಅ.21) ಈ ಸಂಚಿಕೆ ಪ್ರಸಾರ ಆಗಲಿದೆ.

ಸುದೀಪ್ ಎಚ್ಚರಿಕೆ ನೀಡಿದ ಮೇಲೂ ಉದ್ಧಟತನ ಮುಂದುವರಿಸಿದ ಚೈತ್ರಾ ಕುಂದಾಪುರ

ಹೆಣ್ಮಕ್ಕಳಿಗೆ ಗೌರವ ಕೊಡಬೇಕು ಎಂದು ಭಾಷಣ ಹೊಡೆಯುವ ಚೈತ್ರಾ ಕುಂದಾಪುರ ಅವರು ಮಾತಿನ ಭರದಲ್ಲಿ ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಹೇಳಿದ್ದನ್ನು ಸುದೀಪ್ ಟೀಕಿಸಿದ್ದಾರೆ. ಅದಕ್ಕಾಗಿ ಚೈತ್ರಾ ಕ್ಷಮೆ ಕೇಳಿದರೂ ಕೂಡ ನಂತರ ತಮ್ಮನ್ನು ತಾವು ಸಮರ್ಥನೆ ಮಾಡಿಕೊಳ್ಳುವುದನ್ನು ಮುಂದುವರಿಸಿದರು. ಆ ಮೂಲಕ ಉದ್ಧಟತನ ತೋರಿಸಿದ್ದಾರೆ.

‘ನಾನು ಬರ್ತಾನೇ ಇರಲಿಲ್ಲ’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್

ಬಿಗ್ ಬಾಸ್ ಮನೆಯಲ್ಲಿ ಗಾಯಕ ಹನುಮಂತ ಅವರ ಆಗಮನ ಆಗಿದೆ. ಹನುಮಂತ ಅವರು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಜೀ ಕನ್ನಡ ‘ಸರೆಗಮಪ..’ರಿಯಾಲಿಟಿ ಶೋಗೆ ಬಂದಿದ್ದ ಅವರು ನಂತರ ಸಾಕಷ್ಟು ಜನಪ್ರಿಯತೆ ಪಡೆದರು. ಈಗ ಅವರು ಮೊದಲ ದಿನವೇ ಸುಸ್ತ್ ಆಗಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್