
Bigg Boss Kannada
ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.
ಕನ್ನಡದಲ್ಲಿ ಬಿಗ್ ಬಾಸ್ 10ನೇ ಸೀಸನ್ ಆರಂಭ ಆಗಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.
ಬಿಗ್ ಬಾಸ್ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.
Kichcha Sudeep: ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ನಿರೂಪಣೆ ಬಗ್ಗೆ ನಿಲುವು ತಿಳಿಸಿದ ಸುದೀಪ್
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 11 ರ ನಂತರ ಕಿಚ್ಚ ಸುದೀಪ್ ಅವರು ನಿರೂಪಣೆಯಿಂದ ಹಿಂದೆ ಸರಿದಿದ್ದರು. ಆದರೆ, 12ನೇ ಸೀಸನ್ಗೆ ಅವರು ಮರಳುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಸುದೀಪ್ ಅವರು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ ಎಂಬ ವದಂತಿಗಳಿವೆ. ಇತ್ತೀಚಿನ ಸಂದರ್ಶನದಲ್ಲಿ, ಈ ವಿಷಯದ ಬಗ್ಗೆ ಅವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
- Rajesh Duggumane
- Updated on: Jun 20, 2025
- 10:33 am
ಲಕ್ಷಾಂತರ ರೂಪಾಯಿ ವಂಚನೆ ಆರೋಪಕ್ಕೆ ಸ್ಪಷ್ಟನೆ ನೀಡಿದ ಗೋಲ್ಡ್ ಸುರೇಶ್
ಹಲವು ವರ್ಷಗಳ ಹಿಂದಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಗೋಲ್ಡ್ ಸುರೇಶ್ ವಿರುದ್ಧ ಆರೋಪ ಕೇಳಿಬಂದಿದೆ. ಲಕ್ಷಾಂತರ ರೂಪಾಯಿ ಹಣ ವಾಪಸ್ ನೀಡದೇ ಸತಾಯಿಸಿದ್ದಾರೆ ಎಂದು ಮೈನುದ್ದಿನ್ ಎಂಬುವವರು ಆರೋಪ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಲು ಗೋಲ್ಡ್ ಸುರೇಶ್ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..
- Madan Kumar
- Updated on: Jun 18, 2025
- 8:51 pm
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಬಿಗ್ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಕೇಬಲ್ ಚಾನೆಲ್ ಸೆಟ್ ಅಪ್ ಮಾಡಿ ಕೊಡೋದಾಗಿ ಹೇಳಿ ವಂಚನೆ ಮಾಡಿದ್ದಾಗಿ ತಿಳಿದು ಬಂದಿದೆ. ಗೋಲ್ಡ್ ಸುರೇಶ್ ಆದರೂ ಹಣ ವಾಪಸ್ ನೀಡದೆ ಅವರು ಸತಾಯಿಸುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
- Rajesh Duggumane
- Updated on: Jun 18, 2025
- 11:47 am
ಕಿರುತೆರೆ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ; ಇಲ್ಲಿದೆ ಮೊದಲ ಫೋಟೋ
‘ಅಗ್ನಿಸಾಕ್ಷಿ’, ‘ಸೀತಾ ರಾಮ’ ಸೀರಿಯಲ್ ಖ್ಯಾತಿಯ ನಟಿ ವೈಷ್ಣವಿ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಏರ್ ಫೋರ್ಸ್ ಆಫೀಸರ್ ಅನುಕೂಲ್ ಮಿಶ್ರಾ ಜೊತೆ ವೈಷ್ಣವಿ ಗೌಡ ಮದುವೆ ನೆರವೇರುತ್ತಿದೆ. ವಿವಾಹಪೂರ್ವ ಶಾಸ್ತ್ರಗಳು ಈಗಾಗಲೇ ಆರಂಭ ಆಗಿದ್ದು, ಫೋಟೋಗಳನ್ನು ವೈಷ್ಣವಿ ಗೌಡ ಅವರು ಹಂಚಿಕೊಂಡಿದ್ದಾರೆ.
- Madan Kumar
- Updated on: Jun 2, 2025
- 4:14 pm
‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಬಿಗ್ ಬಾಸ್ ಶೈನ್ ಶೆಟ್ಟಿ
ಪ್ರವೀರ್ ಶೆಟ್ಟಿ ನಟನೆಯ ‘ನಿದ್ರಾದೇವಿ ನೆಕ್ಸ್ಟ್ ಡೋರ್’ ಸಿನಿಮಾದಲ್ಲಿ ಶೈನ್ ಶೆಟ್ಟಿ ಕೂಡ ಅಭಿನಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರವೀರ್ ಶೆಟ್ಟಿಯ ತಯಾರಿ ಮತ್ತು ಬದ್ಧತೆಯ ಬಗ್ಗೆ ಶೈನ್ ಶೆಟ್ಟಿ ಹೊಗಳಿದ್ದಾರೆ. ಈ ಚಿತ್ರದ ಹೊಸ ಹಾಡು ಬಿಡುಗಡೆ ಆಗಿದೆ. ಚಿತ್ರತಂಡದವರು ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದಾರೆ.
- Madan Kumar
- Updated on: May 20, 2025
- 10:51 pm
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ಎಲ್ಲವನ್ನೂ ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ವಿರುದ್ಧ ಅವರ ತಂದೆಯೇ ಕಿಡಿಕಾರಿದ್ದಾರೆ. ಆ ಬಗ್ಗೆ ಈಗ ಅವರ ತಾಯಿ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಅನೇಕ ಆರೋಪಗಳನ್ನು ಹೊರಿಸಿರುವುದು ಏಕೆ ಎಂಬುದನ್ನು ತಾಯಿ ವಿವರಿಸಿದ್ದಾರೆ. ವಿಡಿಯೋ ಮೂಲಕ ಅವರು ಹಲವು ವಿಷಯಗಳನ್ನು ತಿಳಿಸಿದ್ದಾರೆ.
- Madan Kumar
- Updated on: May 15, 2025
- 10:45 pm
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ ಮೇಲೆ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ಹಲವು ಆರೋಪ ಮಾಡಿದ್ದಾರೆ. ಆ ನಂತರ ‘ನಮ್ಮ ತಂದೆ ಕುಡುಕ’ ಎಂದು ಚೈತ್ರಾ ಕುಂದಾಪುರ ಅವರು ತಿರುಗೇಟು ನೀಡಿದರು. ಆ ಮಾತಿಗೆ ಈಗ ಬಾಲಕೃಷ್ಣ ನಾಯ್ಕ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
- Prajwal Amin
- Updated on: May 15, 2025
- 9:49 pm
ಮದುವೆ ವೇಳೆ ಚೈತ್ರಾ ಕುಂದಾಪುರ 5 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಳು: ತಂದೆ ಆರೋಪ
ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಕಶ್ಯಪ್ ಮದುವೆಯ ಬೆನ್ನಲ್ಲೇ ಹೊಸ ವಿವಾದ ಶುರುವಾಗಿದೆ. ಚೈತ್ರಾ ತಂದೆ ಬಾಲಕೃಷ್ಣ ನಾಯಕ್ ಅವರು ಒಂದಷ್ಟು ಆರೋಪಗಳನ್ನು ಹೊರಿಸಿದ್ದಾರೆ. ತಮ್ಮನ್ನು ಮದುವೆಗೆ ಸರಿಯಾಗಿ ಆಹ್ವಾನಿಸಿಲ್ಲ ಎಂದು ಅವರು ಹೇಳಿದ್ದಾರೆ. ದುಡ್ಡಿಗಾಗಿ ಬೇಡಿಕೆ ಇಡಲಾಗಿತ್ತು ಎಂದು ಕೂಡ ಅವರು ಹೇಳಿದ್ದಾರೆ.
- Prajwal Amin
- Updated on: May 15, 2025
- 7:38 pm
ಮದುವೆಗೆ 4 ದಿನ ಇರುವಾಗ ಆಹ್ವಾನಿಸಲು ಬಂದ ಚೈತ್ರಾ ₹ 5 ಲಕ್ಷಗಳಿಗೆ ಬೇಡಿಕೆಯಿಟ್ಟಳು: ಬಾಲಕೃಷ್ಣ ನಾಯ್ಕ್, ಚೈತ್ರಾ ತಂದೆ
ಯಾರಿಗೋ ₹ 5 ಕೋಟಿ ವಂಚನೆ ಮಾಡಿ ಚೈತ್ರಾ ತನ್ನ ತಂದೆಯ ಮಾನ ಕಳೆದಳು ಮತ್ತು ತನ್ನ ಮಾನವನ್ನೂ ಮಣ್ಣುಪಾಲು ಮಾಡಿದಳು ಎಂದು ಬಾಲಕೃಷ್ಣ ಹೇಳುತ್ತಾರೆ. ತಮ್ಮ ಕತೆ ಹಾಗಿರಲಿ, ಚೈತ್ರಾ ತನ್ನ ಕೃತ್ಯಗಳಿಂದ ಮದುವೆಯಾಗಿ ಗಂಡನೊಂದಿಗೆ ಸುಖವಾಗಿ ಮತ್ತು ನೆಮ್ಮದಿಯೊಂದಿಗೆ ಸಂಸಾರ ಮಾಡಿಕೊಂಡಿದ್ದ ತನ್ನಕ್ಕನ ಬದುಕನ್ನೂ ಸರ್ವನಾಶ ಮಾಡಿದಳು ಎಂದು ಬಾಲಕೃಷ್ಣ ಹೇಳುತ್ತಾರೆ.
- Arun Belly
- Updated on: May 15, 2025
- 1:15 pm
ಮದುವೆ ವಿಚಾರದಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತಿನಂತೆ ನಡೆದುಕೊಂಡ ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಕನ್ನಡದಲ್ಲಿ ಭಾಗವಹಿಸಿದ್ದ ಸಮಯದಲ್ಲಿ ಸುದೀಪ್ ಅವರು ಮಾಡಿದ ಭವಿಷ್ಯವಾಣಿ ನಿಜವಾಗಿದೆ. ಅವರು ಒಬ್ಬ ಸಂಸ್ಕಾರವಂತ ವ್ಯಕ್ತಿಯನ್ನು ಮದುವೆಯಾಗುತ್ತಿದ್ದಾರೆ. ಅವರು ದೇವಸ್ಥಾನದ ಅರ್ಚಕರಂತೆ ಕಂಡು ಬಂದಿದೆ. ಅವರ ವಿವಾಹದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
- Rajesh Duggumane
- Updated on: May 9, 2025
- 7:04 am