AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada

Bigg Boss Kannada

ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್​ ಬಾಸ್​ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.

ಕನ್ನಡದಲ್ಲಿ ಬಿಗ್ ಬಾಸ್ 12ನೇ ಸೀಸನ್ ಆರಂಭ ಆಗಲಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.

ಬಿಗ್ ಬಾಸ್​ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್​ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.

ಇನ್ನೂ ಹೆಚ್ಚು ಓದಿ

‘ದುಡ್ಡಿದ್ದವ್ರನ್ನ ಮೀಟ್ ಮಾಡ್ತಾರೆ’; ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ

ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಅಭಿಮಾನಿಗಳು ಅತಿಯಾದ ಪ್ರೀತಿ ತೋರಿದ್ದಾರೆ. ಕೆಲವರು ಟ್ಯಾಟೂ ಸಹ ಹಾಕಿಸಿಕೊಂಡಿದ್ದಾರೆ. ಆದರೆ, ಭೇಟಿಯ ಭರವಸೆ ಈಡೇರಿಸದ ಕಾರಣ, ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಗಿಲ್ಲಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಿಲ್ಲಿ ದುಡ್ಡಿದ್ದವರನ್ನಷ್ಟೇ ಭೇಟಿ ಮಾಡುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಅತಿಯಾದ ಅಭಿಮಾನವೇ ಗಿಲ್ಲಿಗೆ ಮುಳುವಾಗುವ ಸಂಕೇತ ಕಂಡುಬರುತ್ತಿದ್ದು.

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟನಿಗೆ ಅಭಿಮಾನಿಯಿಂದ ಗಂಭೀರ ಆರೋಪ ಎದುರಾಗಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ‘ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ, ಭೇಟಿ ಮಾಡುವ ಭರವಸೆ ಉಳಿಸಿಕೊಳ್ಳಲಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣ, ಗಿಲ್ಲಿಯ ಅಗಾಧ ಜನಪ್ರಿಯತೆ ಈಗ ಅವರಿಗೆ ಮುಳುವಾಯಿತೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ರಾಯ್ ನಿಧನಕ್ಕೆ ಸಿಂಗರ್ ಹನುಮಂತ ಸಂತಾಪ: ಕುರಿಗಾಯಿಗೆ ಈ ಕೋಟ್ಯಾಧಿಪತಿ ಹೇಗೆ ಪರಿಚಯ?

ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ಕಾನ್ಫಿಡೆಂಟ್ ಗ್ರೂಪ್‌ ಚೇರ್ಮನ್ ಸಿ.ಜೆ. ರಾಯ್ ಅವರು ಪಿಸ್ತೂಲ್​​ನಿಂದ ಗನ್‌ನಿಂದ ಶೂಟ್‌ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಐಟಿ ದಾಳಿಗೆ ಬೇಸತ್ತು ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ದಿಗ್ಗಜ ಉದ್ಯಮಿ ನಿಧನಕ್ಕೆ ಸಿಂಗರ್ ಹನುಮಂತ ಸಂತಾಪ ಸೂಚಿಸಿದ್ದಾರೆ. ಅರೇ ಇದೇನಿದು ಕೋಟ್ಯಾಧೀಪತಿ ಸಿಜೆ ರಾಯ್ ಹಾಗೂ ಹನುಮಂತನಿಗಿರುವ ನಂಟು ಏನು ಅಂತೀರಾ? ಇಲ್ಲಿದೆ ನೋಡಿ

ಭರ್ಜರಿ ಟಿಆರ್​​ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1

ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಭರ್ಜರಿ 16.8 ಟಿವಿಆರ್ ಗಳಿಸಿ ಹೊಸ ದಾಖಲೆ ಬರೆದಿದೆ. ಈ ಅಭೂತಪೂರ್ವ ಯಶಸ್ಸಿನಿಂದ ಕಲರ್ಸ್ ಕನ್ನಡ ವಾಹಿನಿ ಜೀ ಕನ್ನಡವನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದೆ. ಫಿನಾಲೆಗೆ 'ಗಿಲ್ಲಿ ನಟ'ರ ಗೆಲುವು ಪ್ರಮುಖ ಆಕರ್ಷಣೆಯಾಗಿತ್ತು. 'ಲಕ್ಷ್ಮೀ ನಿವಾಸ' ಧಾರಾವಾಹಿ ಪ್ರಥಮ ಸ್ಥಾನದಲ್ಲಿದೆ.

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ

ಗಿಲ್ಲಿ ನಟನಿಗೆ ಎಲ್ಲರೂ ಕರೆದು ಸನ್ಮಾನ ಮಾಡುತ್ತಿದ್ದಾರೆ. ಇದಕ್ಕೆ ಕಾರಣ ಅವರ ಬಿಗ್ ಬಾಸ್ ಗೆಲುವು. ಈಗ ನಟ ಜಗ್ಗೇಶ್ ಅವರು ಗಿಲ್ಲಿ ನಟನ ಕರೆದು ಸನ್ಮಾನಿಸಿದ್ದಾರೆ. ಜಗ್ಗೇಶ್ ಹೇಳಿದ ಮಾತನ್ನು ಸಾಬೀತು ಮಾಡಿದ ಬಳಿಕವೇ ಗಿಲ್ಲಿ, ಅವರ ಎದುರು ಹೋಗಿ ನಿಂತಿದ್ದಾರೆ ಎಂಬುದು ಮತ್ತೊಂದು ವಿಶೇಷ. ಆ ಬಗ್ಗೆ ಇಲ್ಲಿದೆ ವಿವರ.

ಕುಡಿದ ನಶೆಯಲ್ಲಿ ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ ಎಂದಿದ್ದೆ ಅಷ್ಟೇ; ಸ್ಪಷ್ಟನೆ ಕೊಟ್ಟ ಸತೀಶ್

ಡಾಗ್ ಬ್ರೀಡರ್ ಸತೀಶ್ ಕ್ಯಾಡಾಬಾಮ್, ಗಿಲ್ಲಿ ಬಗ್ಗೆ ತಾನು ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. 'ಗಿಲ್ಲಿ ಗೆಲ್ಲಲ್ಲ' ಎಂದು ಕುಡಿದ ನಶೆಯಲ್ಲಿ ಹೇಳಿದ್ದೇ ಹೊರತು, ಅದು ಭವಿಷ್ಯವಲ್ಲ ಎಂದಿದ್ದಾರೆ. ಬಿಗ್ ಬಾಸ್‌ನಲ್ಲಿ ಗಿಲ್ಲಿಯಿಂದ ತನಗೆ ಹಿಂಸೆಯಾಗಿತ್ತು ಎಂದು ಆರೋಪಿಸಿದ್ದ ಸತೀಶ್, ಈಗ ಅಭಿಮಾನಿಗಳ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ.

ವಿಶೇಷ ಅಧಿವೇಶನದಲ್ಲೂ ಚರ್ಚೆ ಆಯ್ತು ಗಿಲ್ಲಿ ನಟನ ಹೆಸರು; ಪ್ರಸ್ತಾಪಿಸಿದ್ದು ಯಾರು? ಕಾರಣವೇನು?

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ಹೆಸರು ಇಂದಿಗೂ ಎಲ್ಲೆಡೆ ಚರ್ಚೆಯಲ್ಲಿದೆ. ಅವರ ಜನಪ್ರಿಯತೆ ಹೆಚ್ಚಿದೆ. ಆದರೆ, ಅವರ ಬಹುಮಾನದ 50 ಲಕ್ಷ ರೂಪಾಯಿಗಳ ತೆರಿಗೆ ಲೆಕ್ಕಾಚಾರ ರಾಜ್ಯ ಅಧಿವೇಶನದಲ್ಲೂ ಚರ್ಚೆಯಾಗಿದೆ. ಶಾಸಕ ಪ್ರದೀಪ್ ಈಶ್ವರ್, ಗಿಲ್ಲಿಗೆ ಸಿಕ್ಕ 50 ಲಕ್ಷದಲ್ಲಿ ಅರ್ಧಕ್ಕಿಂತ ಹೆಚ್ಚು ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ ಎಂದು ವಿವರಿಸಿದ್ದಾರೆ. ಇದರಿಂದ ನಿಜವಾದ ವಿನ್ನರ್ ನಿರ್ಮಲಾ ಸೀತಾರಾಮನ್ ಎಂದಿದ್ದಾರೆ.

ಗಿಲ್ಲಿ ಫ್ಯಾನ್ಸ್ ಹೊಡೆದು ಸಾಯಿಸ್ತೀನಿ ಅಂತ ಬೆದರಿಕೆ ಹಾಕ್ತಿದ್ದಾರೆ ಎಂದ ಸತೀಶ್

Gilli Nata: ಗಿಲ್ಲಿ ಅಭಿಮಾನಿಗಳು ಹೊಡೆದು ಸಾಯಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದಾರೆ ಎಂಬುದಾಗಿ ಸತೀಶ್ ಅವರು ಆರೋಪಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಆ ಸಂದರ್ಭದ ವಿಡಿಯೋ ಮೇಲೆ ಇದೆ ನೋಡಿ.

ಸುದೀಪ್​​ಗೆ ನಾನೇ ಫೇವರಿಟ್; ಹೆಮ್ಮೆಯಿಂದ ಹೇಳಿಕೊಂಡ ಸತೀಶ್

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಡಾಗ್ ಸತೀಶ್ ಫಿನಾಲೆ ದಿನ ಸುದೀಪ್ ತಮ್ಮನ್ನು ಹೆಚ್ಚು ಮಾತನಾಡಿಸಿದ್ದಾಗಿ ಹೇಳಿ ಸುದ್ದಿಯಲ್ಲಿದ್ದಾರೆ. ಸುದೀಪ್‌ಗೆ ತಾನೇ ಅಚ್ಚುಮೆಚ್ಚಿನ ಸ್ಪರ್ಧಿ ಎಂಬರ್ಥದಲ್ಲಿ ಅವರು ಮಾತಾಡಿದ್ದಾರೆ. ಸುದೀಪ್ ವ್ಯಂಗ್ಯವಾಗಿ ಹೇಳಿದ್ದನ್ನೂ ಸತೀಶ್ ಸಕಾರಾತ್ಮಕವಾಗಿ ತೆಗೆದುಕೊಂಡು ಪ್ರಚಾರ ಪಡೆಯಲು ಯತ್ನಿಸಿದ್ದಾರೆ.

ಸುದೀಪ್ ವ್ಯಂಗ್ಯವಾಗಿ ಹೇಳಿದ್ದನ್ನೇ ಇಟ್ಟುಕೊಂಡು ಬಡಾಯಿಕೊಚ್ಚಿಕೊಂಡ ಸತೀಶ್

ಬಿಗ್ ಬಾಸ್ ಕನ್ನಡದಿಂದ ಹೊರಬಂದ ಸತೀಶ್ ತಮ್ಮ ಬಡಾಯಿಕೊಚ್ಚಿಕೊಳ್ಳುವಿಕೆಯಿಂದ ಸುದ್ದಿಯಲ್ಲಿದ್ದಾರೆ. ಸುದೀಪ್ ಫಿನಾಲೆಯಲ್ಲಿ ವ್ಯಂಗ್ಯವಾಗಿ ಮಾತನಾಡಿದ್ದನ್ನು ಸತೀಶ್ ಗಂಭೀರವಾಗಿ ಸ್ವೀಕರಿಸಿದ್ದಾರೆ. ಸುದೀಪ್ ತಮ್ಮ ಗ್ಲಾಸ್ ಕೇಳಿದ್ದಾಗ ನಿರಾಕರಿಸಿದ್ದಾಗಿ ಹೇಳಿದ್ದಾರೆ. ಸತೀಶ್ ಅವರ ಈ ಮಾತುಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ಮತ್ತು ಟೀಕೆಗೆ ಗುರಿಯಾಗಿವೆ.

ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಗಿದ ಬಳಿಕ ಸ್ಪರ್ಧಿಗಳೆಲ್ಲರೂ ಕಿಚ್ಚ ಸುದೀಪ್ ಜೊತೆ ಪಾರ್ಟಿ ಮಾಡಿದ್ದರು. ಅಲ್ಲಿ ನಡೆದ ಮಾತುಕಥೆ ಬಗ್ಗೆ ಸತೀಶ್ ಅವರು ಮಾತನಾಡಿದ್ದಾರೆ. ಸತೀಶ್ ಧರಿಸುವ ಬಟ್ಟೆ, ಕೂಲಿಂಗ್ ಕ್ಲಾಸ್ ಇತ್ಯಾದಿ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ಆಗುತ್ತದೆ.

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್

ಮಾತಿನ ಮಲ್ಲಮ್ಮ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸಿದ ಬಳಿಕ ಹೆಚ್ಚು ಜನಪ್ರಿಯತೆ ಪಡೆದುಕೊಂಡರು. ಈಗ ಅವರಿಗೆ ಸಿನಿಮಾಗಳಿಂದ ಅವಕಾಶಗಳು ಸಿಗುತ್ತಿವೆ. ಅಲ್ಲದೇ, ಧಾರಾವಾಹಿಗಳಲ್ಲಿ ನಟಿಸುವ ಆಫರ್ ಕೂಡ ಬಂದಿದೆ. ಆ ಬಗ್ಗೆ ಅವರು ಟಿವಿ9 ಜತೆಗೆ ಮಾತನಾಡಿದ್ದಾರೆ.

ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು