AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada

Bigg Boss Kannada

ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್​ ಬಾಸ್​ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.

ಕನ್ನಡದಲ್ಲಿ ಬಿಗ್ ಬಾಸ್ 12ನೇ ಸೀಸನ್ ಆರಂಭ ಆಗಲಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.

ಬಿಗ್ ಬಾಸ್​ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್​ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.

ಇನ್ನೂ ಹೆಚ್ಚು ಓದಿ

ಮೊದಲ ಬಾರಿ ಕಾವ್ಯಾ ವಿರುದ್ಧ ಗಿಲ್ಲಿ ಅಸಮಾಧಾನ; ರಕ್ಷಿತಾಗೆ ಹೊಡೆಯೋದೊಂದೇ ಬಾಕಿ

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ-ಕಾವ್ಯಾ ನಡುವೆ ಭಾರಿ ಗಲಾಟೆ ನಡೆದಿದೆ. ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಕಾವ್ಯಾ ಮಾಡಿದ ನಿರ್ಧಾರಗಳಿಂದ ತಂಡ ಸೋಲನುಭವಿಸಿತು. ಚಿಕ್ಕ ಬಾಲ್​ಗಳಿಗಾಗಿ ಹಟ ಹಿಡಿದ ಕಾವ್ಯಾ ನಿರ್ಧಾರ ಗಿಲ್ಲಿಗೆ ಅಸಮಾಧಾನ ತಂದಿದೆ. ಕ್ಯಾಪ್ಟನ್ ಆಗುವ ಅವಕಾಶ ಕಳೆದುಕೊಂಡ ಗಿಲ್ಲಿ ಅವರು ಕಾವ್ಯಾ ವಿರುದ್ಧ ನೇರವಾಗಿ ಸಿಟ್ಟು ಹೊರಹಾಕಿದ್ದಾರೆ.

ಅರ್ಹತೆ ಪಡೆಯದಿದ್ದರೂ ಅನುಭವಿಸೋ ಹಂಬಲ; ಗಿಲ್ಲಿ ನಟ ತಿದ್ದಿಕೊಳ್ಳೋದು ಯಾವಾಗ?

ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟ, ಕ್ಯಾಪ್ಟನ್ ಅರ್ಹತೆ ಇಲ್ಲದಿದ್ದರೂ ಕ್ಯಾಪ್ಟನ್ ರೂಂ ಬಳಸಿದ್ದಾರೆ. ಇದು ಬಿಗ್ ಬಾಸ್ ನಿಯಮಗಳ ಉಲ್ಲಂಘನೆಯಾಗಿದ್ದು, ವೀಕೆಂಡ್‌ನಲ್ಲಿ ಕಿಚ್ಚ ಸುದೀಪ್ ಅವರಿಂದ ಪಾಠ ಕಲಿಯುವ ಸಾಧ್ಯತೆಯಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯರಾದ ಗಿಲ್ಲಿ ನಟ, ಸುದೀಪ್ ಹೊರತುಪಡಿಸಿ ಬೇರೆ ಯಾರ ಮಾತನ್ನೂ ಕೇಳುವುದಿಲ್ಲ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಮಾಡುವ ಕಾಮಿಡಿಗೆ ನಕ್ಕು ಸುಸ್ತಾದ ರಜತ್

ಗಿಲ್ಲಿ ನಟ ಅವರ ಮಾತಿಗೆ ಬಿಗ್ ಬಾಸ್ ಮನೆಯ ಬಹುತೇಕ ಎಲ್ಲ ಸದಸ್ಯರು ನಕ್ಕು ಹಗುರಾಗುತ್ತಿದ್ದಾರೆ. ಅದರಲ್ಲೂ ರಜತ್ ಅವರಿಗೆ ಗಿಲ್ಲಿ ಮಾತಿನಿಂದ ಭರ್ಜರಿ ಮನರಂಜನೆ ಸಿಗುತ್ತಿದೆ. ಅವರು ಎಂಜಾಯ್ ಮಾಡುತ್ತಿದ್ದಾರೆ. ಧ್ರುವಂತ್ ಬಗ್ಗೆ ಗಿಲ್ಲಿ ಮಾಡಿದ ಕಾಮಿಡಿಯನ್ನು ನೋಡಿ ರಜತ್ ಅವರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ ಉತ್ತರ

ಬಿಗ್ ಬಾಸ್ ಮನೆಯಿಂದ ಹೊರಗೆ ನಟ ಧ್ರುವಂತ್ ಹೋಗಲು ನಿರ್ಧರಿಸಿದ್ದಾರೆ. ಹಾಗಾಗಿ ಇದೇ ವಿಷಯವನ್ನು ಇಟ್ಟುಕೊಂಡು ಅವರನ್ನು ಹಲವರು ನಾಮಿನೇಟ್ ಮಾಡಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋನಲ್ಲಿ ಇಷ್ಟು ದಿನ ಧ್ರುವಂತ್ ಕಳೆದ ದಿನಗಳ ಬಗ್ಗೆ ಗಿಲ್ಲಿ ಒಂದಷ್ಟು ಪ್ರಶ್ನೆ ಕೇಳಿದ್ದಾರೆ.

ಈ ವಾರ ಬಿಗ್ ಬಾಸ್​ನಿಂದ ಹೋಗೋ ವಿಚಾರವನ್ನು ಬಾಯ್ತಪ್ಪಿ ಹೇಳಿದ ರಜತ್?

ಬಿಗ್ ಬಾಸ್ ಕನ್ನಡ ಸೀಸನ್ 12ರ ವೈಲ್ಡ್ ಕಾರ್ಡ್ ಸ್ಪರ್ಧಿಗಳಾದ ರಜತ್ ಹಾಗೂ ಚೈತ್ರಾ ಕುಂದಾಪುರ, ಮನೆಯಿಂದ ಹೊರ ಹೋಗುವ ಬಗ್ಗೆ ವದಂತಿಗಳಿವೆ. ಟಾಸ್ಕ್ ಒಂದರಲ್ಲಿ ಸೋತ ನಂತರ ರಕ್ಷಿತಾ ಮಾತಿಗೆ ರಜತ್, "ಇದೇ ವಾರ ನಾವು ಹೋದರೆ?" ಎಂದು ಪ್ರಶ್ನಿಸಿದ್ದು, ಈ ಊಹಾಪೋಹಗಳಿಗೆ ಕಾರಣ. ನಾಮಿನೇಟ್ ಆಗದಿದ್ದರೂ, ಇವರ ನಿರ್ಗಮನದ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ.

ಗಿಲ್ಲಿ ನಿಜವಾದ ಎಂಟರ್​ಟೇನರ್​; ಬಾಯ್ತುಂಬ ಹೊಗಳಿದ ಶಿವಣ್ಣನ ವಿಡಿಯೋ ವೈರಲ್

ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿ ಗಿಲ್ಲಿ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಶಿವರಾಜ್​ಕುಮಾರ್ ಅವರು ಗಿಲ್ಲಿಯನ್ನು "ನಿಜವಾದ ಎಂಟರ್​ಟೇನರ್" ಎಂದು ಬಣ್ಣಿಸಿದ ಹಳೆಯ ವಿಡಿಯೋ ವೈರಲ್ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿಯ ಮನರಂಜನೆ ಗಮನ ಸೆಳೆಯುತ್ತಿದೆ. ಅವರು ಈ ಸೀಸನ್‌ನ ಪ್ರಬಲ ಸ್ಪರ್ಧಿ. ಶಿವಣ್ಣನ ಪ್ರಶಂಸೆ ಅಭಿಮಾನಿಗಳನ್ನು ಮತ್ತಷ್ಟು ಆಕರ್ಷಿಸಿದೆ.

ಟಾಯ್ಲೆಟ್ ಅಲ್ಲೇ ಗಂಟೆಗಟ್ಟಲೆ ನಿದ್ದೆ; ರಕ್ಷಿತಾಗೆ ಬಿಗ್ ಬಾಸ್ ಎಚ್ಚರಿಕೆ

ಬಿಗ್ ಬಾಸ್ ಮನೆಯ ನಿಯಮಗಳನ್ನು ಮೀರಿ ರಕ್ಷಿತಾ ಶೆಟ್ಟಿ ಶೌಚಾಲಯ ಮತ್ತು ಚೇಂಜಿಂಗ್ ರೂಂಗಳಲ್ಲಿ ನಿದ್ರಿಸುತ್ತಿದ್ದರು. ಹಲವು ಬಾರಿ ಅನುಮಾನದ ಬಳಿಕ ಬಿಗ್ ಬಾಸ್ ಎಚ್ಚರಿಕೆ ನೀಡಿದ್ದಾರೆ. ಮೊದಲು ನಿರಾಕರಿಸಿದ ರಕ್ಷಿತಾ ನಂತರ ತಮ್ಮ ನಿದ್ದೆ ತಂತ್ರವನ್ನು ಒಪ್ಪಿಕೊಂಡಿದ್ದಾರೆ. ನಿದ್ರೆ ಮಾಡಿದ ತಪ್ಪಿಗೆ ಕ್ಯಾಪ್ಟನ್ ಧನುಷ್ ಅವರಿಂದ ಶಿಕ್ಷೆಗೂ ಒಳಗಾಗಿದ್ದಾರೆ.

ಎಲ್ಲರೂ ಮೆಚ್ಚುವ ಕೆಲಸ ಮಾಡಿದ ಧ್ರುವಂತ್; ಈ ವಾರ ಕಿಚ್ಚನ ಚಪ್ಪಾಳೆ ಫಿಕ್ಸ್?

ಬಿಗ್ ಬಾಸ್ ಮನೆಯಲ್ಲಿ ಏಕಾಂಗಿಯಾಗಿರೋ ಧ್ರುವಂತ್, ಜೋಡಿ ಟಾಸ್ಕ್‌ಗೆ ಯಾರೂ ಆಯ್ಕೆ ಮಾಡದಿದ್ದರೂ ಕುಗ್ಗಲಿಲ್ಲ. ಬದಲಿಗೆ, 'ರಿಂಗ ರಿಂಗ' ಟಾಸ್ಕ್ ಅನ್ನು ಶ್ರದ್ಧೆಯಿಂದ ನಿರ್ವಹಿಸಿ ಎಲ್ಲರ ಮೆಚ್ಚುಗೆ ಗಳಿಸಿದರು. ಕಣ್ಣು ಮುಚ್ಚಿ ರಿಂಗ್ ಎಸೆದು ಪ್ರಾಮಾಣಿಕತೆ ತೋರಿದ್ದರಿಂದ, ಈ ವಾರ ಅವರಿಗೆ ಕಿಚ್ಚನ ಚಪ್ಪಾಳೆ ಖಚಿತ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದು ಅವರ ಪರಿಶ್ರಮಕ್ಕೆ ಸಿಕ್ಕ ಫಲ.

ರಕ್ಷಿತಾನ ತಬ್ಬಿಕೊಳ್ಳಲು ಹೋದ ಗಿಲ್ಲಿಗೆ ಖಡಕ್ ವಾರ್ನಿಂಗ್ ನೀಡಿದ ಕಾವ್ಯ

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಲ್ಲಿ 66 ದಿನಗಳು ಕಳೆದಿವೆ. ಆಟದ ತೀವ್ರತೆ ಹೆಚ್ಚಿದೆ. ಗಿಲ್ಲಿ ನಟ ಅವರು ಎಲ್ಲ ಸಂದರ್ಭದಲ್ಲೂ ಕಾಮಿಡಿ ಮಾಡುತ್ತಾರೆ ಎಂಬುದಕ್ಕೆ ಕಾವ್ಯ ಗರಂ ಆಗಿದ್ದಾರೆ. ಆದರೆ ಈಗಾಗಲೇ ಹಲವು ಬಾರಿ ಕಾವ್ಯ ಬುದ್ಧಿ ಹೇಳಿದ್ದರೂ ಕೂಡ ಗಿಲ್ಲಿ ಅವರು ಕಿಂಚಿತ್ತೂ ಬದಲಾಗಿಲ್ಲ.

ಬಿಗ್ ಬಾಸ್ ಮನೆಯಲ್ಲಿ ಅಳುತ್ತಾ ಕುಳಿತ ಸ್ಪಂದನಾ: ಸಮಾಧಾನ ಮಾಡಲು ಗಂಡ್ಮಕ್ಕಳ ಡ್ಯಾನ್ಸ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈಗಾಗಲೇ 65 ದಿನಗಳ ಕಳೆದಿವೆ. ಡಿಸೆಂಬರ್ 3ರ ಸಂಚಿಕೆಯಲ್ಲಿ ಸ್ಪಂದನಾ ಸೋಮಣ್ಣ ಅವರು ಅಳುತ್ತಾ ಕುಳಿತಿದ್ದಾರೆ. ಅವರನ್ನು ಸಮಾಧಾನ ಮಾಡಲು ಧನುಷ್, ಅಭಿಷೇಕ್ ಹಾಗೂ ಸೂರಜ್ ಸಿಂಗ್ ಅವರು ಡ್ಯಾನ್ಸ್ ಮಾಡಿದ್ದಾರೆ. ಪ್ರೋಮೋ ನೋಡಿ..

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ