Bigg Boss Kannada
ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.
ಕನ್ನಡದಲ್ಲಿ ಬಿಗ್ ಬಾಸ್ 12ನೇ ಸೀಸನ್ ಆರಂಭ ಆಗಲಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.
ಬಿಗ್ ಬಾಸ್ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.
ಅಂದುಕೊಂಡಂತೆಯೇ ‘ಪಳಾರ್’ ಆದ ಗಿಲ್ಲಿ ನಟ; ಹೊಸ ಸಿನಿಮಾಗೆ ಇದೇ ಟೈಟಲ್
ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರ ಸಿನಿಮಾಗೆ ‘ಪಳಾರ್’ ಎಂದು ಶೀರ್ಷಿಕೆ ಇಡಲಾಗಿದೆ. ನವೀನ್ ಮತ್ತು ಹರೀಶ್ ನಿರ್ಮಾಣದ ಈ ಚಿತ್ರಕ್ಕೆ ಚಂದ್ರಮೋಹನ್ ನಿರ್ದೇಶನ ಮಾಡುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಚಂದ್ರಶೇಖರನ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ಬಿ. ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.
- Madan Kumar
- Updated on: Jun 21, 2026
- 10:05 am
ಈ ವರ್ಷದ ಬಿಗ್ ಬಾಸ್ ಟಿಆರ್ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
‘ಬಿಗ್ ಬಾಸ್ ಕನ್ನಡ 13’ ಆರಂಭಕ್ಕೆ ತಯಾರಿ ನಡೆದಿದೆ. ಮಾಜಿ ಸ್ಪರ್ಧಿ ತುಕಾಲಿ ಸಂತು ಈ ಬಗ್ಗೆ ಮಾತನಾಡಿದ್ದಾರೆ. ‘ಜನರೆಲ್ಲ ಕುತೂಹಲದಿಂದ ಕಾಯುತ್ತಿದ್ದಾರೆ. ಕಳೆದ ಸಲ 18ರ ತನಕ ಟಿಆರ್ಪಿ ಬಂದಿತ್ತು. ಈ ಬಾರಿ 30 ಮುಟ್ಟುತ್ತಾ ಅಂತ ನನಗೆ ಭಯ ಆಗುತ್ತಿದೆ’ ಎಂದು ಸಂತು ಹೇಳಿದ್ದಾರೆ.
- Mangala RR
- Updated on: Jun 17, 2026
- 8:21 pm
ಹೀರೋ ಆದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ; ಕೈ ಜೋಡಿಸಿದ ‘ಕೆವಿಎನ್ ಪ್ರೊಡಕ್ಷನ್ಸ್’
ಗಿಲ್ಲಿ ನಟ ಅವರಿಂದ ದೊಡ್ಡ ಸುದ್ದಿ ಸಿಕ್ಕಿದೆ. ಅವರು ಹೀರೋ ಆಗಿ ನಟಿಸುತ್ತಿರುವ ಸಿನಿಮಾಗೆ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಸಾಥ್ ನೀಡಿದೆ. ಚಂದ್ರಮೋಹನ್ ನಿರ್ದೇಶನ ಮಾಡಲಿರುವ ಈ ಸಿನಿಮಾಗೆ ಗಿಲ್ಲಿ ಜನ್ಮದಿನದಂದೇ ಮುಹೂರ್ತ ನಡೆಯಲಿದೆ. ಗಿಲ್ಲಿ ನಟ ಅವರನ್ನು ಹೀರೋ ಆಗಿ ದೊಡ್ಡ ಪರದೆಯಲ್ಲಿ ನೋಡಲು ಅಭಿಮಾನಿಗಳು ಕಾದಿದ್ದಾರೆ.
- Madan Kumar
- Updated on: Jun 16, 2026
- 7:09 pm
ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ
ಬಿಗ್ ಬಾಸ್ ಕನ್ನಡ ಸೀಸನ್ 13ರ ಆಡಿಷನ್ ಆರಂಭವಾಗಿದೆ. ಮನೆಗೆ ಹೋಗಲು ಬಯಸುವ ಸ್ಪರ್ಧಿಗಳು ಆಡಿಷನ್ ವಿಡಿಯೋ ಮಾಡುವಾಗ ಸಾಮಾನ್ಯ ತಪ್ಪುಗಳನ್ನು ತಪ್ಪಿಸಬೇಕು. 3 ನಿಮಿಷದ ಸ್ಪಷ್ಟ, ಉತ್ತಮ ಗುಣಮಟ್ಟದ ವಿಡಿಯೋ ಮಾಡಿ. ನಿಮ್ಮ ವ್ಯಕ್ತಿತ್ವ ಹಾಗೂ ಅರ್ಹತೆಯನ್ನು ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಿ. ಸರಿಯಾದ ವೆಬ್ಸೈಟ್ನಲ್ಲಿ ಮಾತ್ರ ಅಪ್ಲೋಡ್ ಮಾಡಿ, ನಿಮ್ಮ ಬಿಗ್ ಬಾಸ್ ಕನಸು ನನಸಾಗಿಸಿಕೊಳ್ಳಿ.
- Rajesh Duggumane
- Updated on: Jun 9, 2026
- 2:04 pm
ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋದಲ್ಲಿದೆ ಪೂರ್ತಿ ವಿವರ..
Bigg Boss Kannada Season 13: ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ.
- Madan Kumar
- Updated on: Jun 7, 2026
- 12:51 pm
‘ಬಿಗ್ ಬಾಸ್ ಕನ್ನಡ 13’ ಆಡಿಷನ್: ಈ ಸಲ ಸಾಮಾನ್ಯ ಜನರಿಗೂ ಸಿಗಲಿದೆ ಅವಕಾಶ
Bigg Boss Kannada 13 Audition: ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಆಸೆ ಇದ್ದವರು ಆಡಿಷನ್ ಮೂಲಕ ಆಯ್ಕೆ ಆಗಬಹುದು. ಈ ಬಾರಿ ಜನಸಾಮಾನ್ಯರಿಗೆ ಅವಕಾಶ ಸಿಗಲಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ಆಡಿಷನ್ ಬಗ್ಗೆ ‘ಕಲರ್ಸ್ ಕನ್ನಡ’ ವಾಹಿನಿಯು ಅಪ್ಡೇಟ್ ನೀಡಿದೆ. ಆ ಕುರಿತು ಇಲ್ಲಿದೆ ವಿವರ..
- Madan Kumar
- Updated on: Jun 7, 2026
- 10:32 am
ಹೊಸ ಕಾರು ಖರೀದಿ ಮಾಡಿದ ಮಲ್ಲಮ್ಮ; ಅನೇಕರಿಗೆ ಮಾದರಿಯಾದ ಬಿಗ್ ಬಾಸ್ ಸ್ಪರ್ಧಿ
ಬಿಗ್ ಬಾಸ್ ಖ್ಯಾತಿಯ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಮಲ್ಲಮ್ಮ ತಮ್ಮ ಕಠಿಣ ಪರಿಶ್ರಮದಿಂದ ಹೊಸ ಮಾರುತಿ ಸುಜುಕಿ ಡಿಸೈರ್ ಕಾರು ಖರೀದಿಸಿದ್ದಾರೆ. ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದ ಅವರು, ಸಾಮಾಜಿಕ ಜಾಲತಾಣಗಳು ಮತ್ತು ಬಿಗ್ ಬಾಸ್ ಮೂಲಕ ಜನಪ್ರಿಯತೆ ಗಳಿಸಿ, ಈಗ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದಾರೆ. ಅವರ ಈ ಸಾಧನೆ ಅನೇಕರಿಗೆ ಪ್ರೇರಣೆ ನೀಡಿದ್ದು, ಕನಸುಗಳನ್ನು ಬೆನ್ನಟ್ಟಿದರೆ ಯಶಸ್ಸು ಖಂಡಿತ ಎಂಬುದು ಮಲ್ಲಮ್ಮ ಕಥೆಯಿಂದ ಸ್ಪಷ್ಟವಾಗಿದೆ.
- Rajesh Duggumane
- Updated on: Jun 5, 2026
- 7:46 am
ಬಂದೇ ಬಿಡ್ತು ಬಿಗ್ ಬಾಸ್ ಹೊಸ ಸೀಸನ್: ಸರ್ಪ್ರೈಸ್ ನೀಡಿದ ‘ಕಲರ್ಸ್ ಕನ್ನಡ’
‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋ ಆರಂಭದ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ಹೊಸ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಅಚ್ಚರಿ ನೀಡಲಾಗಿದೆ. ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋನ ಹೊಸ ಸೀಸನ್ ಈ ವರ್ಷ ಸ್ವಲ್ಪ ಬೇಗ ಶುರುವಾಗಲಿದೆ ಎಂಬುದು ಖಚಿತವಾಗಿದೆ.
- Madan Kumar
- Updated on: Jun 3, 2026
- 7:49 pm
‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’
ಗ್ರಾಮೀಣ ಭಾಗದ ಕಹಾನಿಯನ್ನು ಹೊಂದಿರುವ ‘ಸರ್ವೇ ನಂಬರ್ 45’ ಸಿನಿಮಾದಲ್ಲಿ ಗಿಲ್ಲಿ ನಟ ಅವರು ಅಭಿನಯಿಸಿದ್ದಾರೆ. ಅವರ ಗೆಟಪ್ ಗಮನ ಸೆಳೆಯುತ್ತಿದೆ. ನಿಜ ಜೀವನದಲ್ಲಿ ಹಳ್ಳಿ ಹೈದನಾಗಿರುವ ಗಿಲ್ಲಿ ನಟ ಅವರು ಈ ಸಿನಿಮಾದಲ್ಲೂ ಅಂಥದ್ದೇ ಪಾತ್ರವನ್ನು ಮಾಡಿದ್ದಾರೆ. ಸಿನಿಮಾದ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: May 20, 2026
- 3:10 pm
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ.
- Madan Kumar
- Updated on: Mar 9, 2026
- 8:53 pm
‘ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ’: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋಗೆ ‘ಮಾರ್ಕ್’ ಸಿನಿಮಾದ ಹಾಡು ಬಳಸಿದ್ದಕ್ಕೆ ಡಾಗ್ ಸತೀಶ್ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವಿನಯ್ ಗೌಡ, ರಜತ್ ಮುಂತಾದವರು ಸತೀಶ್ ಮೇಲೆ ಗರಂ ಆಗಿದ್ದರು. ಈ ಪ್ರಕರಣ ಇಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಆ ಬಗ್ಗೆ ಸತೀಶ್ ಮಾತಾಡಿದ್ದಾರೆ.
- Mangala RR
- Updated on: Mar 8, 2026
- 2:17 pm
ಸುದೀಪ್ ನಟ ಆದ್ರೆ ತಲೆ ಮೇಲೆ ಕೊಂಬು ಇರುತ್ತಾ? ಡಾಗ್ ಸತೀಶ್ ಗರಂ
ಡಾಗ್ ಸತೀಶ್ ಅವರ ಒಂದು ವಿಡಿಯೋದಲ್ಲಿ ಸುದೀಪ್ ಹಾಡು ಬಳಸಿದ್ದಕ್ಕೆ ವಿವಾದ ಸೃಷ್ಟಿಯಾಗಿದೆ. ರಜತ್, ವಿಜಯ್ ಗೌಡ ಅವರು ಸತೀಶ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಅದಕ್ಕೆ ಸತೀಶ್ ಪ್ರತಿಕ್ರಿಯಿಸಿದ್ದಾರೆ. ತಾವು ಮಾಡಿದ್ದರಲ್ಲಿ ತಪ್ಪೇ ಇಲ್ಲ ಎಂದು ಹೇಳುತ್ತಿರುವ ಸತೀಶ್ ಅವರು ಸುದೀಪ್ ಬಗ್ಗೆಯೂ ಮಾತಾಡಿದ್ದಾರೆ.
- Mangala RR
- Updated on: Mar 8, 2026
- 8:17 am