Bigg Boss Kannada

Bigg Boss Kannada

ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್​ ಬಾಸ್​ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.

ಕನ್ನಡದಲ್ಲಿ ಬಿಗ್ ಬಾಸ್ 10ನೇ ಸೀಸನ್ ಆರಂಭ ಆಗಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.

ಬಿಗ್ ಬಾಸ್​ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್​ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.

ಇನ್ನೂ ಹೆಚ್ಚು ಓದಿ

ಹೊಸ ಹೋಟೆಲ್ ಆರಂಭಿಸಿದ ಮೈಕಲ್ ಅಜಯ್; ಬಿಗ್ ಬಾಸ್ ಮಂದಿಯ ಬೆಂಬಲ

ಬೆಂಗಳೂರಿನ ಎಚ್​​ಎಸ್​ಆರ್ ಲೇಔಟ್​ನಲ್ಲಿ ಮೈಕಲ್ ಅಜಯ್ ಫುಡ್ ಟ್ರಕ್ ಹೊಂದಿದ್ದಾರೆ. ಇಲ್ಲಿ ವಿವಿಧ ರೀತಿಯ ಬರ್ಗರ್​​ನ ಅವರು ತಯಾರಿಸುತ್ತಾರೆ. ಮನೆಯಲ್ಲೇ ತಯಾರಿಸಿದ ಕೆಚಪ್​ಗಳನ್ನು ಈ ಬರ್ಗರ್ ತಯಾರಿಸಲು ಬಳಕೆ ಮಾಡುತ್ತಾರೆ ಅನ್ನೋದು ವಿಶೇಷ.

Varthur Santhosh: ಬಿಗ್​ಬಾಸ್ ಸೆಲೆಬ್ರಿಟಿ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

ಬಿಗ್​ಬಾಸ್ ಮನೆಯಲ್ಲಿದ್ದಾಗ ಹುಲಿ ಉಗುರು ಪ್ರಕರಣದಿಂದ ಜೈಲು ಪಾಲಾದ ವರ್ತೂರು ಸಂತೋಷ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಾಣಿ ಸಾಗಾಟ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ಅಧಿಕಾರಿ ಹರೀಶ್ ಎಂಬುವರು ವರ್ತೂರು ಸಂತೋಷ್ ವಿರುದ್ಧ ದೂರು ನೀಡಿದ್ದಾರೆ.

ಬಿಗ್​ ಬಾಸ್​ ನಿರೂಪಕರ ಬದಲಾವಣೆ ಖಚಿತ; ಹೊಸ ಪ್ರೋಮೋ ಬಂತು ನೋಡಿ…

ಈ ಬಾರಿ ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಹೊಸ ಮೆರುಗು ಬರಲಿದೆ ಎಂದು ವೀಕ್ಷಕರು ಕಮೆಂಟ್​ ಮಾಡುತ್ತಿದ್ದಾರೆ. ನಿರೂಪಕರ ಬದಲಾವಣೆಯಿಂದ ಜನರ ನಿರೀಕ್ಷೆ ಹೆಚ್ಚಾಗಿದೆ. ಹೊಸ ಪ್ರೋಮೋ ಕೂಡ ವೈರಲ್​ ಆಗಿದೆ. ನಿರೂಪಕರ ಬದಲಾವಣೆ ಆಗಿದ್ದು ಕೆಲವರಿಗೆ ಇಷ್ಟ ಆಗಿಲ್ಲ. ಆ ಬಗ್ಗೆಯೂ ವೀಕ್ಷಕರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಇಲ್ಲಿದೆ ವಿವರ..

ಸೂಪರ್​ ಸ್ಟಾರ್​ ರಚ್ಚು ಆದ ದಿವ್ಯಾ ಉರುಡುಗ; ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಹೊಸ ಸೀರಿಯಲ್​

‘ನಿನಗಾಗಿ’ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ ಅವರು ರಚನಾ ಅಲಿಯಾಸ್​ ಲೇಡಿ ಸೂಪರ್​ ಸ್ಟಾರ್​ ರಚ್ಚು ಎಂಬ ಪಾತ್ರ ಮಾಡುತ್ತಿದ್ದಾರೆ. ಆ ಪಾತ್ರದ ಸುತ್ತವೇ ಕಥೆ ಸಾಗಲಿದೆ. ಮೇ 27ರಿಂದ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಶುರು ಆಗಲಿದೆ. ಈ ಕುರಿತು ಮಾಹಿತಿ ನೀಡಲು ‘ನಿನಗಾಗಿ’ ಟೀಮ್​ ಸುದ್ದಿಗೋಷ್ಠಿ ನಡೆಸಿತು.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕವಿತಾ ಗೌಡ-ಚಂದನ್​; ಸಿಹಿ ಸುದ್ದಿ ನೀಡಿದ ಜೋಡಿ

ನಟಿ ಕವಿತಾ ಗೌಡ ಹಾಗೂ ಚಂದನ್​ ಕುಮಾರ್​ ದಂಪತಿಯ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವುದಾಗಿ ಈ ದಂಪತಿ ತಿಳಿಸಿದ್ದಾರೆ. ಈ ಜೋಡಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಚಂದನ್​ ಕುಮಾರ್​ ಮತ್ತು ಕವಿತಾ ಗೌಡ ಅವರು ಜನಪ್ರಿಯತೆ ಹೊಂದಿದ್ದಾರೆ.

ರೂಪೇಶ್​ ಶೆಟ್ಟಿ ನಟನೆಯ ‘ಅಧಿಪತ್ರ’ ಸಿನಿಮಾದ ಆಡಿಯೋ ಹಕ್ಕು ಪಡೆದ ಲಹರಿ ಸಂಸ್ಥೆ

‘ಅಧಿಪತ್ರ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ತೆರೆಗೆ ಬರಲು ಸಜ್ಜಾಗುತ್ತಿರುವ ಈ ಸಿನಿಮಾದ ಝಲಕ್ ತೋರಿಸಲು ಚಿತ್ರತಂಡ ರೆಡಿ ಆಗಿದೆ. ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಮೇ 10ರಂದು ‘ಲಹರಿ ಮ್ಯೂಸಿಕ್​’ ಮೂಲಕ ಟೀಸರ್​ ಅನಾವರಣ ಆಗಲಿದೆ. ಆ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಇನ್ನಷ್ಟು ಮಾಹಿತಿ ಸಿಗಲಿದೆ.

‘ಸ್ಥಳೀಯ ಕಲಾವಿದರಿಗೆ ಮೊದಲ ಆದ್ಯತೆ ನೀಡಿ’; ವಿನಯ್ ಗೌಡ ವಿಶೇಷ ಮನವಿ

ವಿನಯ್ ಗೌಡ ಅವರು ಈಗ ಮೂರು ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈ ಪೈಕಿ ಎರಡು ಸಿನಿಮಾಗಳು ಕನ್ನಡದ್ದು. ಬಿಗ್ ಬಜೆಟ್ ಸಿನಿಮಾ ಇದಾಗಿದ್ದು, ಇವುಗಳಲ್ಲಿ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ. ಎರಡೂ ಸಿನಿಮಾಗಳಲ್ಲಿ ಕನ್ನಡದ ಬಿಗ್ ಸ್ಟಾರ್ಸ್ ನಟಿಸುತ್ತಿದ್ದಾರೆ.

ಬ್ಯಾಕ್​ ಟು ಬ್ಯಾಕ್ ಮೂರು ಚಿತ್ರಕ್ಕೆ ವಿನಯ್ ಗೌಡ ಸಹಿ; ಸ್ಟಾರ್ ಹೀರೋಗೆ ಖಡಕ್ ವಿಲನ್

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಸಾಕಷ್ಟು ಆಫರ್​ಗಳು ಬರುತ್ತವೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ವಿನಯ್ ಗೌಡ ಅವರನ್ನು ಅರಸಿ ಸಾಕಷ್ಟು ಸಿನಿಮಾ ಆಫರ್​ಗಳು ಬಂದಿವೆ. ಈ ಪೈಕಿ ಮೂರು ಸಿನಿಮಾಗಳಿಗೆ ವಿಲನ್ ಆಗಿ ಅವರು ಸಹಿ ಹಾಕಿದ್ದಾರೆ.

Namratha Gowda: ‘ಬಿಗ್ ಬಾಸ್’ ಬಳಿಕ ನಮ್ರತಾ ಗೌಡ ಜೀವನದಲ್ಲಿ ಆದ ಬದಲಾವಣೆ ಒಂದೆರಡಲ್ಲ; ವಿವರಿಸಿದ ನಟಿ

‘ಬಿಗ್ ಬಾಸ್ ಕನ್ನಡ ಸೀಸನ್ 10’ ಪೂರ್ಣಗೊಂಡು ಮೂರು ತಿಂಗಳು ಪೂರ್ಣಗೊಂಡಿದೆ. ಇದರಲ್ಲಿ ಭಾಗಿ ಆದ ಸ್ಪರ್ಧಿಗಳು ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಇದರಲ್ಲಿ ನಮ್ರತಾ ಗೌಡ ಕೂಡ ಹೊರತಾಗಿಲ್ಲ. ಅವರ ಬದುಕು ಸಾಕಷ್ಟು ಬದದಲಾಗಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

karthik Mahesh: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು