AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada

Bigg Boss Kannada

ಅತಿ ದೊಡ್ಡ ರಿಯಾಲಿಟಿ ಶೋಗಳ ಪೈಕಿ ಬಿಗ್​ ಬಾಸ್​ಗೆ ಸ್ಥಾನ ಇದೆ. ಭಾರತದಲ್ಲಿ ಬಿಗ್ ಬಾಸ್ ಮೊದಲು ಆರಂಭ ಆಗಿದ್ದು ಹಿಂದಿಯಲ್ಲಿ. ಆ ಬಳಿಕ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆರಂಭಿಸಲಾಯಿತು.

ಕನ್ನಡದಲ್ಲಿ ಬಿಗ್ ಬಾಸ್ 12 ಸೀಸನ್ ಪೂರೈಸಿದೆ. ಒಂದು ಒಟಿಟಿ ಹಾಗೂ ಒಂದು ಮಿನಿ ಸೀಸನ್ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ ನಡೆಸಿಕೊಡುತ್ತಿದ್ದಾರೆ. 17-18 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಾರೆ. 100 ದಿನಗಳ ಕಾಲ ಈ ರಿಯಾಲಿಟಿ ಶೋ ನಡೆಯುತ್ತದೆ.

ಬಿಗ್ ಬಾಸ್​ ಒಳಗೆ ಹೋದ ಬಳಿಕ ಹೊರ ಜಗತ್ತಿನ ಜೊತೆಗಿನ ಸಂಪರ್ಕ ಕಳೆದು ಹೋಗುತ್ತದೆ. ಬಿಗ್ ಬಾಸ್​ನಲ್ಲಿ ಸಾಕಷ್ಟು ವಿವಾದಗಳು ನಡೆದಿವೆ. ಯಾರ ಮೇಲಾದರೂ ಕೈ ಮಾಡಿದರೆ ಅಂಥ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಲಾಗುತ್ತದೆ. ಗೆದ್ದ ಸ್ಪರ್ಧಿಗೆ ಟ್ರೋಫಿ ಹಾಗೂ 50 ಲಕ್ಷ ರೂಪಾಯಿ ಸಿಗುತ್ತದೆ. ಸುದೀಪ್ ನಿರೂಪಣೆಯಿಂದ ಬಿಗ್ ಬಾಸ್ ಕನ್ನಡದ ರಂಗು ಹೆಚ್ಚಿದೆ.

ಇನ್ನೂ ಹೆಚ್ಚು ಓದಿ

ಉಗ್ರರೂಪ ತೋರಿದ ಸುದೀಪ್: ಮಂಕಾದ ಮಹಾಕವಿ ಮಂಜ

ಎರಡನೇ ವಾರ ಬಿಗ್​​ಬಾಸ್ ಮನೆಯಲ್ಲಿ ನಡೆದ ಘಟನೆಗಳು ಸ್ಪರ್ಧಿಗಳಿಗೆ ಮಾತ್ರವಲ್ಲ, ವೀಕ್ಷಕರಿಗೂ ಸಹ ಕಿರಿ-ಕಿರಿ ತಂದಿತ್ತು. ಮಂಜ ಸೇರಿದಂತೆ ಕೆಲ ಸ್ಪರ್ಧಿಗಳು ಆಡಲು ಅಲ್ಲ ತಮ್ಮ ರೌಡಿತನ ತೋರಲು ಮನೆ ಸೇರಿದಂತೆ ವರ್ತಿಸಿದ್ದರು. ಹಾಗಾಗಿ ಸುದೀಪ್ ಅವರು ಅಂಥಹವರಿಗೆ ಅವರಿಗೆ ತಕ್ಕದಾದ ಭಾಷೆಯಲ್ಲಿಯೇ ಉತ್ತರ ನೀಡಿದರು. ವಿಶೇಷವಾಗಿ ಮಹಾಕವಿ ಮಾಡರ್ನ್ ಮಂಜನಿಗೆ.

ಕಿಚ್ಚ ಕ್ಲಾಸಿಗೆ ಸುಸ್ತು, ಕೈಮುಗಿದು ಕ್ಷಮೆ ಕೇಳಿದ ಶಾಸ್ತ್ರಿ

ಸಾಮಾನ್ಯರ ಖೋಟಾದಿಂದ ಒಳಗೆ ಹೋಗಿರುವ ಮಂಜ, ಕಿರಣ್, ಲಿಖಿತ್ ಮತ್ತು ಧನುಶ್ ಅವರ ಆಟೋಟೋಪಕ್ಕೆ ಮಿತಿಯೇ ಇಲ್ಲದಂತಾಗಿದೆ. ಅದರಲ್ಲೂ ಕಿರಣ್ ಶಾಸ್ತ್ರಿ ಅಂತೂ ಮನೆಯ ಯಾರಿಗೂ ಕನಿಷ್ಟ ಗೌರವವನ್ನು ಸಹ ನೀಡದೆ ತನಗೆ ತೋಚಿದಂತೆ ವಾದ ಮಾಡುತ್ತಾರೆ. ಕಳೆದ ವಾರ ಟಾಸ್ಕ್​ಗೆ ಸಂಬಂಧಿಸಿದಂತೆ ಸೋತ ಬಳಿಕ ಉಸ್ತುವಾರಿಗಳಾದ ತಾಂಡವ್, ಗಗನ್ ಇನ್ನೂ ಕೆಲವರ ಮೇಲೆ ತೀರ ಅಗೌರವದಿಂದ, ಅವಾಚ್ಯವಾಗಿ ಮಾತನಾಡಿದರು. ಇದೀಗ ಕಿರಣ್ ಆಡಿದ ಪ್ರತಿ ಮಾತಿಗೂ ಸುದೀಪ್ ಸರಿಯಾಗಿ ಉತ್ತರ ನೀಡಿದ್ದಾರೆ.

ಮುಂದಿನ ವರ್ಷದಿಂದ ಬಿಗ್ ಬಾಸ್ ಅಗ್ನಿಪರೀಕ್ಷೆ ಬೇಡ; ನೇರವಾಗಿ ಹೇಳಿದ ಸುದೀಪ್

ಬಿಗ್ ಬಾಸ್ ಕನ್ನಡ 13ರ ವೀಕೆಂಡ್‌ನಲ್ಲಿ ಕಿಚ್ಚ ಸುದೀಪ್ ಕೋಪಗೊಂಡಿದ್ದಾರೆ. ಮಂಜು, ಕಿರಣ್, ಧನುಷ್ ಹಾಗೂ ಲಿಖಿತ್ ಮಾಡಿದ ತಪ್ಪುಗಳಿಂದ ಬೇಸತ್ತ ಸುದೀಪ್, ಮುಂದಿನ ಸೀಸನ್‌ನಿಂದ ಕಾಮನ್ ಮ್ಯಾನ್ ಆಯ್ಕೆ ಮಾಡುವ ಅಗ್ನಿಪರೀಕ್ಷೆ ಪ್ರಕ್ರಿಯೆಯೇ ಬೇಡ ಎಂದು ಕಲರ್ಸ್ ಕನ್ನಡ ವಾಹಿನಿಗೆ ಖಡಕ್ ಆಗಿ ಮನವಿ ಮಾಡಿದ್ದಾರೆ.

ಕ್ಯಾಪ್ಟನ್ ಆದ ಸಂಗೀತಾಗೆ ಕಿಚ್ಚ ಸುದೀಪ್ ಕ್ಲಾಸ್; ಮಾಡಿದ ತಪ್ಪೇನು?

ಬಿಗ್ ಬಾಸ್ ಕನ್ನಡ ಸೀಸನ್ 13ರ ವೀಕೆಂಡ್ ಪಂಚಾಯ್ತಿಯಲ್ಲಿ ಕ್ಯಾಪ್ಟನ್ ಸಂಗೀತಾ ಭಟ್‌ಗೆ ಕಿಚ್ಚ ಸುದೀಪ್ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಲೇಡೀಸ್ ಬಾತ್‌ರೂಮ್‌ನಲ್ಲಿ ನೀರು ಪೋಲಾಗುತ್ತಿದ್ದ ವಿಷಯದಲ್ಲಿ ಜಗ್ಗಿ ಧ್ವನಿ ಎತ್ತಿದಾಗ, ಸಮಸ್ಯೆ ಪರಿಹರಿಸುವ ಬದಲು ಸಂಗೀತಾ ಕೂಗಾಡಬೇಡಿ ಎಂದಿದ್ದಕ್ಕೆ ಸುದೀಪ್ ಗರಂ ಆಗಿ ಸರಿಯಾದ ಪಾಠ ಕಲಿಸಿದ್ದಾರೆ.

ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ

ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಕಿಚ್ಚ ಸುದೀಪ್ ಅವರು ಈ ವಾರ ಖಡಕ್ ಆಗಿ ಕ್ಲಾಸ್ ತೆಗೆದುಕೊಳ್ಳುತ್ತಾರೆ ಎಂಬುದು ಸ್ಪಷ್ಟವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರೋಮೋ ರಿಲೀಸ್ ಆಗಿದೆ. ಇದಕ್ಕೆ ಸುದೀಪ್ ಅವರು ಖಡಕ್ ಆಗಿ ಉತ್ತರ ಕೊಡುವ ಸೂಚನೆ ಕೊಟ್ಟಿದ್ದಾರೆ. ಈ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್ ಬಾಸ್​ನಲ್ಲಿ ಈ ವಾರ ಪ್ರ್ಯಾಂಕ್ ಎಲಿಮಿನೇಷನ್? ಮಂಜು ಮೇಲೆ ಪ್ರಯೋಗ?

ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ನಾಮಿನೇಷನ್ ನಡೆದಿದ್ದರೂ ವೋಟಿಂಗ್ ಲೈನ್ಸ್ ಓಪನ್ ಆಗಿಲ್ಲ. ಓಂ ಪ್ರಕಾಶ್ ರಾವ್ ಅನಾರೋಗ್ಯದಿಂದ ಅರ್ಧಕ್ಕೇ ಹೊರಬಂದಿದ್ದರಿಂದ ಈ ವಾರ ನೋ ಎಲಿಮಿನೇಷನ್ ವೀಕ್ ಘೋಷಿಸಲಾಗಿದೆ. ಈ ಮಧ್ಯೆ ಅಗ್ನಿಪರೀಕ್ಷೆಯ ಕಾಮನ್ ಮ್ಯಾನ್ ಸ್ಪರ್ಧಿಗಳ ಮೇಲೆ ಪ್ರ್ಯಾಂಕ್ ಎಲಿಮಿನೇಷನ್ ನಡೆಯುವ ಸಾಧ್ಯತೆ ದಟ್ಟವಾಗಿದೆ.

‘ಒಬ್ಬರನ್ನು ಮನೆಗೆ ಕಳುಹಿಸಿಯೇ ಹೋಗೋದು’; ಲಿಖಿತ್-ಮಂಜು ವಿರುದ್ಧ ತೊಡೆತಟ್ಟಿದ ಧನುಷ್

ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಕಾಮನ್ ಮ್ಯಾನ್ ಸ್ಪರ್ಧಿಗಳ ಆಪ್ತತೆಯಲ್ಲಿ ಬಿರುಕು ಮೂಡಿದೆ. ಆಸಿಯಾ ಕಿವಿಮಾತಿನ ಬಳಿಕ ಜಾಗೃತರಾದ ಧನುಷ್, ಮಂಜು ಮತ್ತು ಲಿಖಿತ್ ವಿರುದ್ಧ ಸಮರ ಸಾರಿದ್ದಾರೆ. ಇಬ್ಬರಲ್ಲಿ ಒಬ್ಬರನ್ನು ಮನೆಗೆ ಕಳುಹಿಸಿಯೇ ನಾನು ಹೊರಹೋಗುವುದು ಎಂದು ಧನುಷ್ ಓಪನ್ ಚಾಲೆಂಜ್ ಹಾಕಿರುವುದು ಮನೆಯಲ್ಲಿ ಸಂಚಲನ ಮೂಡಿಸಿದೆ.

ಬಿಗ್ ಬಾಸ್​ಗೂ ಗೌರವ ಕೊಡದ ಕಾಮನ್ ಮ್ಯಾನ್ ಸ್ಪರ್ಧಿಗಳು; ಶುರುವಾಯ್ತು ಚರ್ಚೆ

ಬಿಗ್ ಬಾಸ್ ಕನ್ನಡ ಸೀಸನ್ 13ರ ಕಾಮನ್ ಮ್ಯಾನ್ ಸ್ಪರ್ಧಿಗಳ ನಡೆಗೆ ಭಾರೀ ಅಸಮಾಧಾನ ವ್ಯಕ್ತವಾಗಿದೆ. ನಿರಂತರ ಜಗಳ ಹಾಗೂ ಬಿಗ್ ಬಾಸ್ ನಿಯಮಗಳನ್ನು ಗಾಳಿಗೆ ತೂರಿ ನಡೆದುಕೊಳ್ಳುತ್ತಿರುವ ಶೈಲಿ ಚರ್ಚೆಗೆ ಗ್ರಾಸವಾಗಿದೆ. ಶಿಕ್ಷೆಯ ನಡುವೆಯೂ ಬೆಡ್‌ಶೀಟ್ ಹೊದ್ದು ಮಲಗಿದ ಲಿಖಿತ್ ಹಾಗೂ ಕಿರಣ್ ಶಾಸ್ತ್ರಿಗೆ ಕಠಿಣ ಶಿಕ್ಷೆ ಕಾಯುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ತಾಳ್ಮೆ, ಧೈರ್ಯ, ಸಹೃದಯತೆಗೆ ಒಲಿದ ಬಿಗ್​​ಬಾಸ್ ಮನೆಯ ಮೊದಲ ಕ್ಯಾಪ್ಟನ್ಸಿ ಪಟ್ಟ

ಬಿಗ್​ಬಾಸ್ ಮನೆಯ ಕ್ಯಾಪ್ಟನ್ ಆಗಲು ಮನೆಯ ಎಲ್ಲ ಮಂದಿ ಪ್ರಯತ್ನಿಸಿದರು. ಕೆಲವರು ಅಡ್ಡ ಹಾದಿ ಹಿಡಿದರು. ವಸ್ತುಗಳನ್ನು ಸಂಗ್ರಹಿಸುವ ಟಾಸ್ಕ್​ ಬಂದಾಗ ಕೆಲವರು ಕಳ್ಳತನ ಮಾಡಿದರೆ, ಕೆಲವರು ದೌರ್ಜನ್ಯ ಮಾಡಿದರು. ಕೆಲವರು ಬಿಗ್​​ಬಾಸ್​ ನಿಯಮವನ್ನೇ ಮುರಿದು, ತಮಗೆ ತೋಚಿದಂತೆ ಆಡಿದರು. ಆದರೆ ಸಂಗೀತಾ ಎಲ್ಲೂ ಸಹ ನಿಯಮ ಮುರಿಯದೆ, ಅಡ್ಡದಾರಿ ಹಿಡಿಯದೆ ಮುಖ್ಯವಾಗಿ ತಾಳ್ಮೆ ಕಳೆದುಕೊಳ್ಳದೆ, ನ್ಯಾಯಯುತವಾಗಿ ಆಟ ಆಡಿ ಫೈನಲ್ ಪ್ರವೇಶ ಮಾಡಿದರು.

ಮನೆಗೆ ಹೊರಡಲು ರೆಡಿಯಾದ ಅವಿನಾಶ್ ಅನ್ನು ತಡೆದಿದ್ದು ಯಾರು?

ಬಿಗ್​ಬಾಸ್ ಮನೆಯಲ್ಲಿ ಎರಡನೇ ವಾರ ಜಗಳಗಳು ಬಲು ಜೋರಾಗಿ ನಡೆಯುತ್ತಿದೆ. ಅದರಲ್ಲೂ ಸಾಮಾನ್ಯರು, ಬಿಗ್​​ಬಾಸ್ ನಿಯಮ ಮುರಿಯುತ್ತಾ, ಉದ್ದೇಶಪೂರ್ವಕವಾಗಿ ಕಿರಿಕಿರಿ ಮಾಡುತ್ತಾ ಪದೇ ಪದೇ ಜಗಳಕ್ಕೆ ಕಾರಣ ಆಗುತ್ತಿದ್ದಾರೆ. ಅದರಲ್ಲೂ ಮಂಜನ ವರ್ತನೆಯಂತೂ ರೌಡಿಗಳನ್ನು ನೆನಪಿಸುತ್ತಿದೆ. ಅವಿನಾಶ್, ಮಂಜನ ಜೊತೆ ಜಗಳ ಮಾಡಿಕೊಂಡು ಮನೆಯಿಂದ ಹೊರಗೆ ಹೋಗಲು ಸಜ್ಜಾಗಿದ್ದರು.

ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ

ಬಿಗ್ ಬಾಸ್ ಮನೆಯ ಟಾಸ್ಕ್ ಒಂದರಲ್ಲಿ ಬಜರ್ ಒತ್ತುವ ವಿಚಾರಕ್ಕೆ ದೊಡ್ಡ ಗಲಾಟೆ ನಡೆದಿದೆ. ಸಂಚಾಲಕಿ ವೈಷ್ಣವಿ ನೀಡಿದ ತೀರ್ಪನ್ನು ಪ್ರಶ್ನಿಸಿದ ಗಗನ್ ಚಿನ್ನಪ್ಪ ಹಾಗೂ ತಾಂಡವ್ ರಾಮ್, ತಾವೇ ಮೊದಲು ಬಜರ್ ಒತ್ತಿದ್ದಾಗಿ ಆಕ್ರೋಶದ ವಾದ ಮಂಡಿಸಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಇದು ಹಲವು ಚರ್ಚೆ ಹುಟ್ಟುಹಾಕಿದೆ. 

ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು

ಬಿಗ್ ಬಾಸ್ ಮನೆಯಲ್ಲಿ ಆಸಿಯಾ ಹಾಗೂ ಕಿರಣ್ ಶಾಸ್ತ್ರಿ ನಡುವೆ ಕಟು ಮಾತುಗಳ ಸಮರ ನಡೆದಿದೆ. ಶಾಸ್ತ್ರಿ ಕೆರಳಿಸುವ ಮಾತುಗಳಿಗೆ ಆಸಿಯಾ ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ. ಈ ಇಬ್ಬರ ನಡುವಿನ ಮಾತಿನ ಚಕಮಕಿ ಮನೆಯಲ್ಲಿ ದೊಡ್ಡ ಗಲಾಟೆಗೆ ಕಾರಣವಾಗಿದ್ದು, ವೀಕ್ಷಕರ ಗಮನ ಸೆಳೆದಿದೆ.

ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ