AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP

BJP

ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್​​ಎಸ್​ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.​​

ಇನ್ನೂ ಹೆಚ್ಚು ಓದಿ

ಅದು ನನಗೆ ಗೊತ್ತಿದೆ: ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ

ಅಧಿವೇಶನ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು,  2024ರ ಫೆಬ್ರವರಿ, ಮಾರ್ಚ್​​​ ತಿಂಗಳ ಹಣ ಹಾಕಿಲ್ಲ. ಅದು ನಿಜ ನನಗೆ ಗೊತ್ತಿದೆ. ಆದ್ರೆ ಮಾಹಿತಿ ಕೊರತೆಯಿಂದ ಕಣ್ತಪ್ಪಿನಿಂದ ಸಚಿವರು ಕೊಟ್ಬಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಅದನ್ನ ಸಚಿವರು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸೌಜನ್ಯಯುತವಾಗಿ ಒಪ್ಪಿಕೊಂಡೊದ್ದಾರೆ. ಅದನ್ನು ವಿರೋಧ ಪಕ್ಷದವರು ಅರ್ಥ ಮಾಡಿಕೊಳ್ಳಬೇಕು ಎಂದರು.

ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ

ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕ ಕುರಿತ ಚರ್ಚೆ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದರು. ಸದನದಲ್ಲಿ ಯತ್ನಾಳ್ ಮಾತಿನ ದಾಟಿಯ ವಿಡಿಯೋ ಇಲ್ಲಿದೆ.

ಕರಾವಳಿಗರು ಬೆಂಕಿ ಹಚ್ಚೋರು ಎಂದ ಸಚಿವ ಭೈರತಿ ಸುರೇಶ್ ವಿರುದ್ಧ ಭುಗಿಲೆದ್ದ ಆಕ್ರೋಶ

ಬಿಜೆಪಿ ಸದಸ್ಯರ‌ ತೀವ್ರ ವಿರೋಧ ಮತ್ತು ಪ್ರತಿಭಟನೆ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಇಂದು ಅಂಗೀಕಾರಗೊಂಡಿತು. ಇದರ ನಡುವೆ ಸಚಿವ ಭೈರತಿ ಸುರೇಶ್ 'ನೀವು ಕರಾವಳಿಯವರು ಬೆಂಕಿ ಹಚ್ಚುವವರು' ಎಂಬ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದು, ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಭೂಮಿ ಎಲ್ಲಿ? ಹೇಗಿದೆ ನೋಡಿ

ಬೆಂಗಳೂರಿನ ಬ್ಯಾಟರಾಯನಪುರ ಕಾಂಗ್ರೆಸ್‌ ಶಾಸಕ, ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕದ ಕ್ಲೀನ್‌ ಇಮೇಜ್‌ ರಾಜಕಾರಣಿ. ಆದ್ರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೀಗ ಸುತ್ತಿಕೊಂಡಿದೆ.ಹೌದು..ಕೋಲಾರ ತಾಲೂಕಿನ ಗರುಡಪಾಳ್ಯ ಸಚಿವ ಕೃಷ್ಣಭೈರೇಗೌಡರ ಹುಟ್ಟೂರು. ನರಸುಪುರ ಹೋಬಳಿಯ ಗರುಡಪಾಳ್ಯದಲ್ಲಿ 200ಎಕರೆಗೂ ಹೆಚ್ಚು ಜಾಗವಿದೆ. ಇಲ್ಲಿನ ಸರ್ವೆ ನಂಬರ್‌ 46 ಮತ್ತು 47ರಲ್ಲಿ . ಇದೇ ಸರ್ವೇ ನಂಬರ್‌ನಲ್ಲೇ ಸಚಿವರ ಹೆಸರಿನಲ್ಲಿ 21 ಎಕರೆ ಜಮೀನಿದೆ. ಆದ್ರೆ, ಇದು ಸ್ಮಶಾನ ಮತ್ತು ಕೆರೆ ಭೂಮಿಯಾಗಿದ್ದು, ನಕಲಿ ದಾಖಲೆಗಳನ್ನ ಸೃಷ್ಟಿಸಿ ಸಚಿವರು ಅದನ್ನ ಕಬಳಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮೊದಲ ಬಾರಿಗೆ ಡಿಕೆಶಿ ವಿರುದ್ಧ ಅಬ್ಬರಿಸಿ ತೊಡೆ ತಟ್ಟಿದ ವಿಜಯೇಂದ್ರ, ಡಿಸಿಎಂ ತಾಕತ್ತಿಗೆ ಸವಾಲ್

ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಕದನಕ್ಕೆ ಅಲ್ಪವಿರಾಮದ ಹೊತ್ತಿನಲ್ಲೇ ಸಿಎಂ ಸಿದ್ದರಾಮಯ್ಯಗೆ ಔಟ್​ಗೋಯಿಂಗ್ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದು, ಸಿಎಂ ಆಪ್ತರನ್ನ ಕೆರಳಿಸುವಂತೆ ಮಾಡಿದೆ. ಇದರ ನಡುವೆ ವಿಜಯೇಂದ್ರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಉಭಯ ನಾಯಕರು ವೈಯಕ್ತಿಕ ದಾಳಿಗೆ ಇಳಿದಿದ್ದಾರೆ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಇಡೀ ರಾತ್ರಿ ಕೋಲಾರ ತಾಲೂಕು ಕಚೇರಿ ಕಾವಲಿಗೆ ಕುಳಿತ BJP ಕಾರ್ಯಕರ್ತರು!

ಬಿಜೆಪಿ ಶಾಸಕ ಛಲವಾದಿ ನಾರಾಯಣಸ್ವಾಮಿ ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಜಮಾಯಿಸಿ ದಾಖಲೆಗಳನ್ನು ರಕ್ಷಿಸುವ ಉದ್ದೇಶದಿಂದ ಇಡೀ ರಾತ್ರಿ ಕಾವಲು ಕಾದಿದ್ದಾರೆ.

ಗೃಹ’ಲಕ್ಷ್ಮೀ’ ವಿವಾದ: ಹಣ ಪಾವತಿ ಆಗದಿರೋದ್ಯಾಕೆ? ಬಾಕಿ ಮೊತ್ತ ಜಮೆ ಯಾವಾಗ?; ಇಲ್ಲಿದೆ ಮಾಹಿತಿ

ಗೃಹಲಕ್ಷ್ಮೀ ಯೋಜನೆ ಹಣ ಪಾವತಿ ವಿಳಂಬದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನಕ್ಕೆ ತಾವು ನೀಡಿದ್ದ ಮಾಹಿತಿ ವಿಚಾರವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಆದ್ರೆ ವಿಪಕ್ಷ ಬಿಜೆಪಿ ಅವರ ಕ್ಷಮೆಗೆ ಪಟ್ಟು ಹಿಡಿದ ಕಾರಣ ವಿಧಾನಸಭೆಯಲ್ಲಿ ಕೋಲಾಹಲವೇ ನಡೆದಿದೆ. ಅಷ್ಟಕ್ಕೂ ಎರಡು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗದಿರೋದ್ಯಾಕೆ? ಬಾಕಿ ಮೊತ್ತವನ್ನು ಸರ್ಕಾರ ಯಾವಾಗ ಪಾವತಿ ಮಾಡುತ್ತೆ? ಎಂಬ ಮಾಹಿತಿ ಇಲ್ಲಿದೆ.

ಸಚಿವ ಕೃಷ್ಣಭೈರೇಗೌಡ ವಿರುದ್ಧ 21 ಎಕರೆ ಜಮೀನು ಕಬಳಿಕೆ ಆರೋಪ: ಬಿಜೆಪಿಯಿಂದ ದಾಖಲೆ ಬಿಡುಗಡೆ

ಕಂದಾಯ ಸಚಿವ ಕೃಷ್ಣಭೈರೇಗೌಡ ಒಂದ ರೀತಿಯ ವೈಟ್ ಕಾಲರ್ ರಾಜಕಾರಣಿ. ಅವರ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪಗಳು ಇಲ್ಲ. ಹೀಗಾಗಿ ಅವರ ಕಾರ್ಯ ವೈಖರಿ ಬಗ್ಗೆ ಸಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ. ಹಾಸನಾಂಬೆ ಉತ್ಸದಲ್ಲಿ ಖುದ್ದು ಮೈಕ್ ಹಿಡಿದು ಓಡಾಡಿದ್ದು, ಅಭಿವೃದ್ಧಿ ಕೆಲಸ, ಇಲಾಖೆ ಕಾರ್ಯದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಬಗ್ಗೆ ಶ್ಲಾಘನೆಗಳು ವ್ಯಕ್ತವಾಗಿವೆ. ಆದ್ರೆ, ಇದೀಗ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿದದೆ. ಇನ್ನು ಇದಕ್ಕೆ ಸಚಿವರು ಸಹ ಸ್ಪಷ್ಟನೆ ನೀಡಿದ್ದಾರೆ.

ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ಸದನದಲ್ಲಿ ವಿಷಾದ ವ್ಯಕ್ತಪಡಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಕ್ಷಮೆಗೆ ಪ್ರತಿಪಕ್ಷ ಪಟ್ಟು

ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರೊಂದಿಗೆ ಚರ್ಚಿಸಿ ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹಣ ಬೇರೆಡೆಗೆ ವರ್ಗಾಯಿಸಿಲ್ಲ ಎಂದು ಸ್ಪಷ್ಟಪಡಿಸಿ, ಯಾವುದೇ ತಪ್ಪು ಉದ್ದೇಶವಿರಲಿಲ್ಲ ಎಂದು ಹೇಳಿದ್ದಾರೆ.

ಬಿ.ವೈ. ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಎಲ್ಲಾ ಬಿಚ್ಚಿಡ್ತೀನಿ ಎಂದಿದ್ದೇಕೆ ವಿಜಯಪುರ ಶಾಸಕ?

ಮಾನನಷ್ಟ ಮೊಕದ್ದಮೆ ಹಾಕುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಸವಾಲು ಹಾಕಿದ್ದಾರೆ. ತಂದೆಯ ಹೆಸರಿನಲ್ಲಿ ಅಧಿಕಾರ ಪಡೆಯುವ ಪದ್ಧತಿ ಪ್ರಜಾಪ್ರಭುತ್ವದಲ್ಲಿ ಸರಿಯಲ್ಲ ಎಂದು ಟೀಕಿಸಿರುವ ಅವರು, ಬಿಜೆಪಿ ಭ್ರಷ್ಟಾಚಾರ ರಹಿತ ಮತ್ತು ಪ್ರಾಮಾಣಿಕ ನಾಯಕರನ್ನು ಬಯಸುತ್ತದೆ ಎಂದಿದ್ದಾರೆ. ಆ ಮೂಲಕ ಬಿಎಸ್​​ವೈ ಮತ್ತು ಅವರ ಕುಟುಂಬದ ವಿರುದ್ಧ ಯತ್ನಾಳ್​​ ಹೋರಾಟ ಇನ್ನಷ್ಟು ತೀವ್ರಗೊಂಡಿದೆ.

Karnataka Winter Session: ವಿಧಾನ ಪರಿಷತ್ತಿನಲ್ಲೂ ‘ಆಜಾನ್’ ಕೂಗು! ನಡೆಯಿತು ಬಿಸಿಬಿಸಿ ಚರ್ಚೆ

ಮಸೀದಿಗಳಲ್ಲಿ ‘ಆಜಾನ್’ ಧ್ವನಿವರ್ಧಕಗಳ ಡೆಸಿಬಲ್ ಮಿತಿ ಕುರಿತು ವಿಧಾನ ಪರಿಷತ್‌ನಲ್ಲಿ ಮಂಗಳವಾರ ತೀವ್ರ ಚರ್ಚೆ ನಡೆಯಿತು. ಬಿಜೆಪಿಯ ಡಿಎಸ್ ಅರುಣ್ ಶಬ್ದ ಮಾಲಿನ್ಯ ನಿಯಂತ್ರಣದ ಬಗ್ಗೆ ಧ್ವನಿ ಎತ್ತಿದಾಗ, ಸಚಿವ ಈಶ್ವರ್ ಖಂಡ್ರೆ ರಾಜಕೀಯ ಆರೋಪ ಮಾಡಿರುವುದಾಗಿ ಆಕ್ಷೇಪಿಸಿದರು. ಕೇಳಿದ ಪ್ರಶ್ನೆಗೆ ಉತ್ತರ ಕೊಡಿ ಎಂದು ಸಭಾಪತಿ ಹೇಳಿದ ಬಳಿಕ ಖಂಡ್ರೆ ಉತ್ತರ ಕೊಟ್ಟರು. ಆಗ ಸದನದಲ್ಲಿ ಕಾವೇರಿತು.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ಕರ್ನಾಟಕ ಕೇಸರಿ ಪಾಳಯದಲ್ಲಿ ಮಹತ್ವದ ಬೆಳವಣಿಗೆ: ಅಧಿವೇಶ ಬಿಟ್ಟು ದಿಲ್ಲಿಗೆ ಹಾರಿದ ವಿಜಯೇಂದ್ರ

ಬಹುದಿನಗಳಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯನ್ನು ಮುಂದೂಡುತ್ತಲೇ ಬರಲಾಗಿದೆ. ಆದರೆ, ಈಗ ದಿಢೀರ್‌ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರ (working president) ನೇಮಕವಾಗಿದೆ. ಅದರಲ್ಲೂ ಅಚ್ಚರಿ ಎಂಬಂತೆ ಮೋದಿ ಹಾಗೂ ಅಮಿತ್‌ ಶಾ ಸೇರಿಕೊಂಡು ಅಚ್ಚರಿ ಎಂಬಂತೆ 45 ವರ್ಷದ ನಿತಿನ್‌ ನವೀನ್‌ (Nitin Nabin) ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಬಿಜೆಪಿಯ ನೂತನ ಕಾರ್ಯಾಧ್ಯಕ್ಷನಿತಿನ್ ನಬಿನ್, ಪಕ್ಷದ ಇತಿಹಾಸದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ವ್ಯಕ್ತಿಯಾಗಿದ್ದಾರೆ. ಇದಕ್ಕೂ ಮೊದಲು ಬಿಜೆಪಿಯ ಹಾಲಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಹೀಗಾಗಿ ನಿತಿನ್ ನಬಿನ್​​ ಅವರೇ ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಎನ್ನಲಾಗಿದೆ. ಹೀಗಾಗಿ ಅವರನ್ನು ಮೊದಲಿಗೆ ಕಾರ್ಯಾಧ್ಯಕ್ಷರನ್ನಾಗಿ ಮಾಡಿ ಬಳಿಕ ನಡ್ಡಾ ಅವರ ಸ್ಥಾನಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.