AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP

BJP

ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್​​ಎಸ್​ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.​​

ಇನ್ನೂ ಹೆಚ್ಚು ಓದಿ

ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ

ಬಹ್ರೈಚ್ ನಗರದಲ್ಲಿ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸುವಾಗ ಬಿಜೆಪಿ ಶಾಸಕಿಯೊಬ್ಬರು ಗಾಯಗೊಂಡಿದ್ದಾರೆ. ಪ್ರತಿಕೃತಿ ಸುಡುವಾಗ ಸುಟ್ಟ ಗಾಯಗಳಿಗೆ ಒಳಗಾದಾಗ ಗದ್ದಲ ಭುಗಿಲೆದ್ದಿತು. ಅವರನ್ನು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ. ಈ ಘಟನೆಯ ವಿಡಿಯೋ ಇಲ್ಲಿದೆ.

ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ದಾಖಲೆಯ ರಿಸಲ್ಟ್​​ ಬಗ್ಗೆ ವಿಶ್ವನಾಥ್ ಅನುಮಾನ

ಎಸ್​ಎಸ್​​ಎಲ್​​ಸಿ ಪರೀಕ್ಷೆ 1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಶೇ.94.1ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕರ್ನಾಟಕ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ದಾಖಲೆಯ ಫಲಿತಾಂಶ ಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಖುಷಿಯಿಂದಲೇ ಹೇಳಿಕೊಂಡಿದ್ದಾರೆ. ಆದ್ರೆ, ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿನ ಅನಿರೀಕ್ಷಿತ ಏರಿಕೆಯ ಕುರಿತು ಮಾಜಿ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ತೀವ್ರ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • Ram
  • Updated on: Apr 25, 2026
  • 5:20 pm

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್; ಸಿಹಿ ತಿನ್ನಿಸಿದ ನಿತಿನ್ ನಬಿನ್

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದರಿಂದ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ಗೆ ಭಾರಿ ಆಘಾತವಾಗಿದೆ. ಇದೀಗ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಠಕ್ ಮತ್ತು ಮಿತ್ತಲ್ ಜೊತೆಗಿದ್ದ ರಾಘವ್ ಚಡ್ಡಾ, ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದರಲ್ಲಿ ಮೂರನೇ ಎರಡರಷ್ಟು ಜನರು ಪಕ್ಷವನ್ನು ತೊರೆದಿದ್ದಾರೆ ಮತ್ತು ಒಂದು ಬಣವಾಗಿ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಿದರು.

ಬಿಜೆಪಿಯಿಂದ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ; ರಾಘವ್ ಚಡ್ಡಾ ಸೇರಿ 7 ಸಂಸದರ ರಾಜೀನಾಮೆಗೆ ಕೇಜ್ರಿವಾಲ್ ಪ್ರತಿಕ್ರಿಯೆ

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಸೇರಿದಂತೆ ಒಟ್ಟು 78 ರಾಜ್ಯಸಭಾ ಸಂಸದರು ಆಪ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಅತೃಪ್ತರ ಬಣದ ಈ ನಿರ್ಧಾರದ ಬಗ್ಗೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಾಘವ್ ಚಡ್ಡಾ ಅವರನ್ನು ರಾಜ್ಯಸಭಾ ಉಪನಾಯಕ ಸ್ಥಾನದಿಂದ ಕೆಳಗಿಳಿಸಿದ ನಂತರ ಪಕ್ಷದಲ್ಲಿ ಅತೃಪ್ತಿ ಹೆಚ್ಚಾಗಿತ್ತು. ರಾಘವ್ ಚಡ್ಡಾ ಅವರಿಗೆ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಕೇಜ್ರಿವಾಲ್​ಗೆ ಭಾರೀ ಹೊಡೆತ; 6 ಸಂಸದರೊಂದಿಗೆ ಆಮ್ ಆದ್ಮಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಘವ್ ಚಡ್ಡಾ

ಈ ಬಾರಿ ಅಧಿವೇಶನದ ವೇಳೆ ಆಮ್ ಆದ್ಮಿ ಪಕ್ಷ ತನ್ನ ಪಕ್ಷದ ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ರಾಘವ್ ಚಡ್ಡಾ ಅವರನ್ನು ವಜಾಗೊಳಿಸಿತ್ತು. ರಾಜ್ಯಸಭೆಯಲ್ಲಿ ನಾನಾ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಿದರೂ ಪಕ್ಷ ತೆಗೆದುಕೊಂಡ ಈ ನಿರ್ಧಾರದಿಂದ ರಾಘವ್ ಚಡ್ಡಾ ಬೇಸರಕ್ಕೊಳಗಾಗಿದ್ದರು. ಇದೀಗ ರಾಘವ್ ಛಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಸೇರಿ ಒಟ್ಟು 7 ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೇ, ಅವರು ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದಾರೆ.

ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್​​ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಮುಖ್ಯಮಂತ್ರಿ ಆಗಬೇಕು ಅಂತ ಜಿ.ಪರಮೇಶ್ವರ್ ರೇಸ್​ನಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಕೂಡ ಮುಖ್ಯಮಂತ್ರಿ ರೇಸ್​ನಲ್ಲಿ ಇದ್ದಾರೆ. ಅತ್ತ ಎಂ.ಬಿ.ಪಾಟೀಲ್ ಸಹ ಮುಖ್ಯಮಂತ್ರಿ ಆಗಬೇಕು ಅಂತಿದ್ದಾರೆ. ಡಿ.ಕೆ.ಶಿವಕುಮಾರ್​ ಈಗಾಗಲೇ ಮುಖ್ಯಮಂತ್ರಿ ಆಗೋಗಿದ್ದಾರೆ. ಮೇ 10ಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ ಎಂದು ಹೇಳಿದರು.

ಕಲಬುರಗಿ ಮಕ್ಕಳ ಅಪಹಾಸ್ಯವೇಕೆ? ವಿಪಕ್ಷಗಳಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಪ್ರಸಕ್ತ ಸಾಲಿನ ಕರ್ನಾಟಕ ಎಸ್​​ಎಸ್​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಕಳೆದ ವರ್ಷ 80.04ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ ಈ ವರ್ಷ ಶೇ‌.94.01ರಷ್ಟು ಫಲಿತಾಂಶದೊಂದಿಗೆ ಶೇ.14ರಷ್ಟು ಫಲಿತಾಂಶ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಕಲಬುರಗಿ ಕೊನೆ ಸ್ಥಾನದಲ್ಲಿದ್ದು, ಇದು ರಾಜಕೀಯ ವಾಗ್ಯುದ್ಧ ಕಾರಣವಾಗಿದೆ. ವಿಪಕ್ಷಗಳ ಟೀಕೆ, ವ್ಯಂಗ್ಯಗಳಿಗೆ ಖರ್ಗೆ ಕೌಂಟರ್ ಕೊಟ್ಟಿದ್ದಾರೆ.

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಪಶ್ಚಿಮ ಬಂಗಾಳದಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ಸಮಯದಲ್ಲಿ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರ ಮೇಲೆ ಹಲವಾರು ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವೈರಲ್ ವೀಡಿಯೊದಲ್ಲಿ, ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸರ್ಕಾರ್ ಅವರನ್ನು ಗದರಿಸುತ್ತಿರುವುದನ್ನು ಕಾಣಬಹುದು.

ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ದೋಖಾ: ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಕೋರ್ಟ್

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನಲ್ಲಿ (Puttur) ಬಿಜೆಪಿ (BJP) ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿದ್ದ ಪ್ರಕರಣ ಜಟಿಲಗೊಂಡಿದೆ. ಇನ್ನೊಂದೆಡೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್, ಹೈಕೋರ್ಟ್ ಮೆಟ್ಟಿಲೇರಿದ್ದು, ಈ ವೇಳೆ ಕೋರ್ಟ್ ಕೆಲ ಸಲಹೆ ಸೂಚನೆಗಳನ್ನ ನೀಡಿದೆ.

ಮೋದಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

ಬೀದರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ಖರ್ಗೆಗೆ ವ್ಯತ್ಯಾಸ ತಿಳಿಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಮೋದಿಗೆ ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯೋತ್ಪಾದಕ ಎಂದು ಕರೆದಿದ್ದನ್ನು ವಿರೋಧಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಬಿಜೆಪಿ ಕೋರಿದೆ. ಅಣ್ಣಾದೊರೈ ಅವರ ಫೋಟೋ ಹಾಕುವ ಈ ಎಐಎಡಿಎಂಕೆ ಜನರು ಮೋದಿಯೊಂದಿಗೆ ಹೇಗೆ ಕೈಜೋಡಿಸುತ್ತಾರೆ? ಎಐಎಡಿಎಂಕೆ ಮೋದಿಯೊಂದಿಗೆ ಹೇಗೆ ಕೈ ಜೋಡಿಸಿದರು? ಅವರೊಬ್ಬ ಭಯೋತ್ಪಾದಕ. ಅವರು ಸಮಾನತೆಯನ್ನು ನಂಬುವುದಿಲ್ಲ. ಅವರ ಪಕ್ಷವೆಂದೂ ಸಮಾನತೆ ಮತ್ತು ನ್ಯಾಯವನ್ನು ನಂಬುವುದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು.

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ಖರ್ಗೆಗೆ ಯಡಿಯೂರಪ್ಪ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯಿಂದ ತೀರಾ ಕೆಳಮಟ್ಟದ ಹಾಗೂ ದುರಹಂಕಾರದ ಪರಮಾವಧಿ ಮಾತ್ರವಲ್ಲ ಕೊಳಕು ಹಾಗೂ ವಿಷಕಾರಿ ಮನಸ್ಥಿತಿ ಅನಾವರಣವಾಗಿದೆ ಎಂದಿದ್ದಾರೆ.

ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್