BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ಇನ್ನೂ ಹೆಚ್ಚು ಓದಿವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಸಿಎಂ ಇದ್ದ ವೇದಿಕೆ ಮೇಲೆಯೇ ಬಿಜೆಪಿ ಅಸಮಾಧಾನ: ಕೆಲಕಾಲ ಗೊಂದಲ
ತೀರ್ಥಹಳ್ಳಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ವಂದೇ ಮಾತರಂ ಹಾಡನ್ನು ಎರಡು ಚರಣ ಹಾಡಲಾಗಿದೆ. ಇದಕ್ಕೆ ಬಿಜೆಪಿ ಶಾಸಕ ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ಪೂರ್ಣ ಹಾಡು ಅವಕಾಶ ಮಾಡಿಕೊಡಿ ಎಂದು ವೇದಿಕೆ ಮೇಲೆಯೇ ಮೈಕ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಬಳಿ ಮನವಿ ಮಾಡಿಕೊಂಡಿರುವ ಪ್ರಸಂಗ ನಡೆಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಕೆಲಕಾಲ ಗೊಂದಲ ನಿರ್ಮಾಣವಾಗಿತ್ತು. ಬಳಿಕ ಮುಖಂಡರು ಬಂದು ಚನ್ನಬಸಪ್ಪ ಅವರನ್ನು ಮನವೊಲಿಸಿ ಕರೆದುಕೊಂಡು ಹೋದರು. ಈ ವೇಳೆ ವೇದಿಕೆ ಮುಂಭಾಗದಲ್ಲಿ ಕುಳಿತ್ತಿದ್ದ ಜನರು, ಯಾಕೆ ರಾಜಕೀಯ ಮಾಡ್ತೀರಾ ಎಂದು ಡಿಕೆ ಡಿಕೆ ಎಂದು ಕೂಗಿದರು.
- Basavaraj Yaraganavi
- Updated on: Sep 19, 2026
- 2:44 pm
ನಾನು ಈಗ ವೆಜ್ಟೇರಿಯನ್, ಅಶೋಕಣ್ಣಂಗೆ ಇಲ್ಲಿಂದಲೇ ಫ್ರೆಶ್ ಮೀನು ಕಳಿಸ್ತೀನಿ: ಅಶೋಕ್ ಟೀಕೆಗೆ ಸಿಎಂ ಡಿಕೆಶಿ ತಿರುಗೇಟು
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರಿನ ಮೀನುಗಾರಿಕೆ ದಕ್ಕೆಗೆ ಬೆಳಿಗ್ಗೆ ಭೇಟಿ ನೀಡಿ, ಡ್ರೆಡ್ಜಿಂಗ್ ಸಮಸ್ಯೆಗಳನ್ನು ಪರಿಶೀಲಿಸಿದರು. ಹೂಳೆತ್ತುವಿಕೆ ಮತ್ತು ಮೂಲಸೌಕರ್ಯಗಳ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ವಿಪಕ್ಷ ನಾಯಕ ಆರ್ ಅಶೋಕ ಅವರ ಮೀನು ಊಟ ಟೀಕೆಗೆ ತಿರುಗೇಟು ನೀಡಿದರು.
- Pruthviraj
- Updated on: Sep 19, 2026
- 10:48 am
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ.ನರಸೀಪುರದಲ್ಲಿ ಗಣೇಶ ಮೆರವಣಿಗೆ ಮಸೀದಿ ಎದುರೇ ಸಾಗಿದ್ದು, ಪಟಾಕಿ ಸಿಡಿಸಿ ಸಂಭ್ರಮಾಚರಿಸಲಾಗಿದೆ. ಮೆರವಣಿಗೆ ಹೋಗದಂತೆ ಹಾಗೂ ಪಟಾಕಿ ಸಿಡಿಸದಂತೆ ಇನ್ಸ್ಪೆಕ್ಟರ್ ಧನಂಜಯ್ ಎಚ್ಚರಿಕೆ ನೀಡಿದ್ದರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧನಂಜಯ್ ಅವರನ್ನು ಅಯೋಗ್ಯ ಎಂದು ಏಕವಚನದಲ್ಲಿ ನಿಂದಿಸಿ, ಭವಿಷ್ಯದಲ್ಲಿ ಲೆಕ್ಕ ಚುಕ್ತ ಮಾಡುವ ಎಚ್ಚರಿಕೆ ನೀಡಿದ್ದಾರೆ.
- Ram
- Updated on: Sep 19, 2026
- 7:09 am
ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಇಂದು ಕರ್ನಾಟಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದು, ಇಂದು ಕೆಎಲ್ಇ ನೂತನ ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಮತ್ತು ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಬಳಿಕ ಕೊಲ್ಲಾಪುರ ಮೂಲಕ ಚಿಕ್ಕೋಡಿ ತಾಲೂಕಿನ ಎಕ್ಸಂಬಾಗೆ ತೆರಳಿ ಬಿರೇಶ್ವರ ಕೋಆಪರೇಟಿವ್ ಕ್ರೆಡಿಟ್ ಸೊಸೈಟಿ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ.
- Sanjayya Chikkamath
- Updated on: Sep 19, 2026
- 6:42 am
‘ಪ್ರಜಾಪ್ರಭುತ್ವದ ಕೊಲೆ’; ನಂದಿಗ್ರಾಮದ ಅಭ್ಯರ್ಥಿ ಬಂಧನಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆ ಅಖಾಡದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರ ದಿಢೀರ್ ಬಂಧನವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿಯ ಈ ನಡೆಯನ್ನು "ರಾಜಕೀಯ ಸೇಡಿನ ಕೃತ್ಯ ಮತ್ತು ಪ್ರಜಾಪ್ರಭುತ್ವದ ಕೊಲೆ" ಎಂದು ಟೀಕಿಸಿದ್ದಾರೆ. ಇಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಬಣವು ನಂದಿಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರಿಗೆ ಪೂರ್ಣ ಬೆಂಬಲ ಘೋಷಿಸಿತ್ತು. ಆದರೆ, ಈ ಪ್ರಕಟಣೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಮಿಲನ್ ಪ್ರಧಾನ್ ಅವರನ್ನು ಬಂಧಿಸಿದ್ದಾರೆ.
- Sushma Chakre
- Updated on: Sep 18, 2026
- 11:08 pm
ಕಸ್ತೂರಿರಂಗನ್ ವರದಿ: ಜನರ ಸಮಸ್ಯೆ ಆಲಿಸಿದ ಸಿಎಂ; ಪಕ್ಷಭೇದ ಮರೆತು ಬೆಂಬಲ ಎಂದ ವಿಪಕ್ಷ ನಾಯಕರು!
ಉಡುಪಿ ಜಿಲ್ಲೆಯ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಸಿಎಂ ಡಿಕೆ ಶಿವಕುಮಾರ್ ಸಾರ್ವಜನಿಕರೊಂದಿಗೆ ನೇರವಾಗಿ ಸಭೆ ಮಾಡಿದರು. ಈ ವೇಳೆ ಕಸ್ತೂರಿ ರಂಗನ್ ವರದಿಯ ಕುರಿತು ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿದರು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Prajwal Amin
- Updated on: Sep 18, 2026
- 8:41 pm
ನಂದಿಗ್ರಾಮ ಉಪಚುನಾವಣೆ; ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಬಂಧನ!
ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮದ ಉಪಚುನಾವಣೆ ಕಣದಲ್ಲಿ ಇಂದು ಒಂದರ ಮೇಲೊಂದರಂತೆ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಟಿಎಂಸಿ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ತಮ್ಮ ನಾಮಪತ್ರ ಹಿಂಪಡೆದ ಬೆನ್ನಲ್ಲೇ, 'ಇಂಡಿಯಾ' ಮೈತ್ರಿಕೂಟದ ಭಾಗವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ್ದರು. ಆದರೆ ಈ ಬೆಂಬಲ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದು ತೀವ್ರ ಚರ್ಚೆಗೆ ಕಾರಣವಾಗಿದ್ದು, ಈ ಬೆಳವಣಿಗೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ವಿಪಕ್ಷಗಳು ಆರೋಪಿಸಿವೆ.
- Sushma Chakre
- Updated on: Sep 18, 2026
- 8:02 pm
ದೈವಾರಾಧನೆಯ ಪವಿತ್ರ ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಿಸುವುದು ಸಲ್ಲ: ಬಿಜೆಪಿ ಆಕ್ಷೇಪ
ಸಿಎಂ ಡಿಕೆ ಶಿವಕುಮಾರ್ ಅವರ ಮಂಗಳೂರು ಡಿನ್ನರ್ ಮೀಟಿಂಗ್ನಲ್ಲಿ ಗಗ್ಗರ ಪ್ರದರ್ಶನದಿಂದ ವಿವಾದ ಸೃಷ್ಟಿಯಾಗಿದೆ. ತುಳುನಾಡಿನ ದೈವಾರಾಧನೆಯ ಪವಿತ್ರ ವಸ್ತುವಾದ ಗಗ್ಗರವನ್ನು ಮನೋರಂಜನೆಯಂತೆ ಪ್ರದರ್ಶಿಸಿದ್ದು, ಚಪ್ಪಲಿ ಧರಿಸಿ ವೀಕ್ಷಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಆಕ್ಷೇಪಕ್ಕೆ ಕಾರಣವಾಗಿದೆ. ಇದು ತುಳುನಾಡ ಜನರ ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಬಿಜೆಪಿ ಕಿಡಿಕಾರಿದೆ.
- Pruthviraj
- Updated on: Sep 18, 2026
- 11:10 am
ಮಂಗಳೂರಿನಲ್ಲಿ 2 ಗಂಟೆಗಳ ಕಾಲ ಡಿನ್ನರ್ ಮೀಟಿಂಗ್ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್: ಬಿಜೆಪಿ ಶಾಸಕರ ಗೈರು
ಮಂಗಳೂರಿನ ತಣ್ಣೀರು ಬಾವಿ ಕಡಲಕಿನಾರೆ ಬಳಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಎರಡು ಗಂಟೆಗಳ ಕಾಲ ಡಿನ್ನರ್ ಸಭೆ ನಡೆಸಿದರು. ಡಿಸಿಎಂ ಡಾ. ಜಿ. ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಭಾಗವಹಿಸಿದ್ದರು. ಕರಾವಳಿ ಭಾಗದ ಅಭಿವೃದ್ಧಿ ಕಾರ್ಯಗಳು ಹಾಗೂ ಜನರ ಕುಂದುಕೊರತೆಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಭೆಯಲ್ಲಿ ಯಾವುದೇ ಬಿಜೆಪಿ ಶಾಸಕರು ಹಾಜರಿರಲಿಲ್ಲ.
- Pruthviraj
- Updated on: Sep 18, 2026
- 6:25 am
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳ ಮಹಾಪೂರ: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಕಲಬುರಗಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ವಾರ್ಷಿಕ 5000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಕೈಗಾರಿಕಾ ಬೆಳವಣಿಗೆ, ಹೊಸ ಉದ್ಯಮಗಳ ಸ್ಥಾಪನೆ, ಪ್ರವಾಸೋದ್ಯಮ ಉತ್ತೇಜನ ಹಾಗೂ ರೈತರ ಆದಾಯ ಹೆಚ್ಚಿಸಲು ಒತ್ತು ನೀಡಲಾಗುವುದು. ಬಡವರಿಗೆ 50,000 ನಿವೇಶನ, ಉದ್ಯೋಗ ಸೃಷ್ಟಿಗೆ ರಿಯಾಯಿತಿ ದರದಲ್ಲಿ ಭೂಮಿ, ಕ್ರೀಡಾ ನಗರಿ ಮತ್ತು ಎಐ ಸಿಸಿಟಿವಿ ಅಳವಡಿಕೆ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ.
- Dattatraya Patil
- Updated on: Sep 17, 2026
- 4:10 pm
ಉಮರ್ ಖಾಲಿದ್ ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು: ಬಿ.ಕೆ. ಹರಿಪ್ರಸಾದ್
ಎನ್ಎಲ್ಎಸ್ಐಯುನಲ್ಲಿ ಉಮರ್ ಖಾಲಿದ್ ಡಾಕ್ಯುಮೆಂಟರಿ ವಿವಾದಕ್ಕೆ ಸಂಬಂಧಿಸಿದಂತೆ ಖಾಲಿದ್ ಪರ ಮತ್ತೆ ಬ್ಯಾಟ್ ಬೀಸಿರುವ ಬಿ.ಕೆ. ಹರಿಪ್ರಸಾದ್, ವಿದ್ಯಾವಂತ ಚಳವಳಿಗಾರ ಉಮರ್ ಖಾಲಿದ್ನನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು ಎಂದು ಬಿಜೆಪಿ ವಿರುದ್ಧ ಹರಿದಾಯ್ದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ರಾಜಕೀಯವಾಗಿ ಉತ್ತರ ಕೊಡಬೇಕಾದ ಪ್ರಶ್ನೆಗಳಿಗೆ ‘ದೇಶದ್ರೋಹ’ ಎಂಬ ಪದವನ್ನು ಬಳಸುತ್ತಿದ್ದಾರೆ. ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಪ್ರತಿಯೊಬ್ಬರನ್ನೂ ದೇಶದ್ರೋಹಿ ಎಂದು ಕರೆಯುವುದು ಪ್ರಜಾಪ್ರಭುತ್ವದ ಭಾಷೆಯಲ್ಲ ಎಂದವರು ಕಿಡಿ ಕಾರಿದ್ದಾರೆ.
- Prasanna Gaonkar
- Updated on: Sep 17, 2026
- 1:06 pm
ಪ್ರಧಾನಿ ಮೋದಿ ಹುಟ್ಟುಹಬ್ಬ: ತುಮಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬ ಹಾಗೂ 25 ವರ್ಷಗಳ ಸಾರ್ವಜನಿಕ ಸೇವಾ ಸಾಧನೆಯ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರು ತುಮಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ, ಅವರು ತುಮಕೂರು ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ, ಸಾರ್ವಜನಿಕರನ್ನು ಸ್ವಚ್ಛತೆಗೆ ಪ್ರೇರೇಪಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಅವರಿಗೆ ಭವ್ಯ ಸ್ವಾಗತ ನೀಡಿದರು.
- Jagadisha B
- Updated on: Sep 17, 2026
- 12:21 pm