AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP

BJP

ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್​​ಎಸ್​ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.​​

ಇನ್ನೂ ಹೆಚ್ಚು ಓದಿ

ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಸಿಎ ನಿವೇಶನಗಳ ಹಂಚಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ಸಾರ್ವಜನಿಕ ಮೂಲಸೌಕರ್ಯಗಳಿಗೆ ಮೀಸಲಾದ ಸಿಎ ನಿವೇಶನಗಳನ್ನು ಕಾಂಗ್ರೆಸ್ ಕಚೇರಿಗಳಿಗೆ ಹಂಚಿಕೆ ಮಾಡಿರುವುದು ಭ್ರಷ್ಟಾಚಾರದ ಪರಮಾವಧಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಕೆಂಡ ಕಾರಿದ್ದಾರೆ. ಬಡವರಿಗೆ ನಿವೇಶನ ಇಲ್ಲವೆಂದ ಸರ್ಕಾರ ತನ್ನ ಪಕ್ಷದ ಹಿತಕ್ಕಾಗಿ ಕೋಟ್ಯಾಂತರ ರೂ. ಮೌಲ್ಯದ ಸಾರ್ವಜನಿಕ ಆಸ್ತಿಯನ್ನು ಕಬಳಿಸುತ್ತಿದೆ ಎಂದು ಆರೋಪಿಸಿದ್ದು, ಹಂಚಿಕೆ ಹಿಂಪಡೆಯದಿದ್ದರೆ ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

50 ಎಕರೆ ಸವಾಲು ಹಾಕಿದ ಬಿಜೆಪಿ ಮಾಜಿ ಶಾಸಕರಿಗೆ ವಿಡಿಯೋ ಬಿಡ್ಲಾ ಎಂದ ಸಚಿವ ತಂಗಡಗಿ

ಬಿಜೆಪಿ ಮಾಜಿ ಶಾಸಕ ಬಸವರಾಜ್ ಬಸವರಾಜ ದಡೇಸುಗೂರು ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿದೆ. ನಾನು ರಕ್ತದಲ್ಲಿ ಬರೆದುಕೊಡ್ತೀನಿ ಈ ಬಾರಿ ತಂಗಡಗಿ ಸೋಲುತ್ತಾನೆ. ಇದಕ್ಕೆ 50 ಎಕರೆ ಜಮೀನು ಕೊಡುತ್ತೇನೆ. ಅಕಸ್ಮಾತ್ ನಾನು ಗೆದ್ರೆ ತಂಗಡಗಿ 50 ಎಕರೆ ಜಮೀನು ಕೊಡಬೇಕು ಎಂದು ಬಸವರಾಜ ದಡೇಸುಗೂರು ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಿನ್ನ ಹತ್ರ ಏನೂ ಇಲ್ಲ ಅಂತಿದ್ದಿ. ಐವತ್ತು ಎಕರೆ ಜಮೀನು ಹೇಗೆ ಬಂತು? ನೂರು ಎಕರೆ ಜಮೀನು ಹೇಗೆ ಬಂತು? ನನ್ನ ಬಗ್ಗೆ ಮಾತಾಡೋ ಮುನ್ನ ನಿನ್ನ ಇತಿಹಾಸ ತಿಳಿದುಕೋ ಪುಣ್ಯಾತ್ಮ. ದೇವದಾಸಿಯರಿಗೆ ಚಪ್ಪಲಿಯಿಂದ ಹೊಡೆದಿದ್ದು ಯಾರು? ಶಿವರಾಜ್ ತಂಗಡಗಿ ಏನೂ ಅಂತಾ ಕ್ಷೇತ್ರದ ಜನರಿಗೆ ಗೊತ್ತಿದೆ. ನಿನ್ನೆ ವಿಡಿಯೋ ಅದನ್ನು ಬಿಡ್ಲಾ ಎಂದು ತಿರುಗೇಟು ನೀಡಿದ್ದಾರೆ.

ಬಾಗಲಕೋಟೆ ಉಪಚುನಾವಣೆ ಮುನ್ನ ಅಕ್ರಮ ಮತದಾರರ ಸದ್ದು: ದಾಖಲೆ‌ ಸಮೇತ ಬಯಲು ಮಾಡಿದ ಮಾಜಿ ಶಾಸಕ

ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇನ್ನೇನು ಕೆಲ ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ‌. ಈ ಮಧ್ಯೆ ಅಕ್ರಮ ವೋಟ್​ ಹಾವಳಿ ಹೆಚ್ಚಾಗಿದೆ. ಒಂದೇ ಕ್ಷೇತ್ರದಲ್ಲಿ 7 ಸಾವಿರಕ್ಕೂ ಅಧಿಕ ಡಬಲ್​​ ಮತದಾರರ ಆರೋಪ ಕೇಳಿಬಂದಿದೆ. ಹಾಗಾದರೆ ಏನಿದು ಸ್ಟೋರಿ ಅಂತ ತಿಳಿಯಲು ಲೇಖನ ಓದಿ.

ಕಾಂಗ್ರೆಸ್​​ ಕಚೇರಿಗಳಿಗಾಗಿ ಕರ್ನಾಟಕದಲ್ಲಿ ಸಿಎ ಸೈಟ್​​ಗಳ ಬಳಕೆ: ದೆಹಲಿಯಲ್ಲೂ ಸದ್ದು ಮಾಡಿದ ವಿವಾದ

ಕರ್ನಾಟಕದಲ್ಲಿ ಕಾಂಗ್ರೆಸ್ ಕಚೇರಿಗಳಿಗಾಗಿ ಸಿಎ ಸೈಟ್‌ಗಳ ಬಳಕೆ ವಿಚಾರ ವಿವಾದ ಸೃಷ್ಟಿಸಿದೆ. ಬಿಜೆಪಿ ನಾಯಕರು 48 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ದೆಹಲಿಯಲ್ಲೂ ಧ್ವನಿ ಎತ್ತಿದ್ದಾರೆ. ಸಾರ್ವಜನಿಕ ಉಪಯೋಗಕ್ಕೆ ಮೀಸಲಾಗಿದ್ದ 24 ಸೈಟ್‌ಗಳನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ವರ್ಗಾಯಿಸಲಾಗಿದೆ ಎಂಬುದು ಪ್ರಮುಖ ಆರೋಪವಾಗಿದೆ. ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದು, ಹಿಂದಿನ ಬಿಜೆಪಿ ಸರ್ಕಾರ ನೀಡಿರುವ ಜಾಗದ ಲೆಕ್ಕ ಹೇಳಿದ್ದಾರೆ.

ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ: ‘ಕೈ’ ಸರ್ಕಾರಕ್ಕೆ ಅಶೋಕ್ ಪ್ರಶ್ನೆ

ಗುತ್ತಿಗೆದಾರರ ಸಂಘ ಮಾಡಿರುವ 80 ಪರ್ಸೆಂಟ್ ಕಮಿಷನ್ ಆರೋಪ ಮತ್ತು ಕಸದ ಟೆಂಡರ್​ಗೆ ಕಮಿಷ್​ ಕೊಡಬೇಕೆಂಬ ಆರೋಪಗಳ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ ಎಂದು ಪ್ರಶ್ನಿಸಿರುವ ಅವರು, ಕಮಿಷನ್ ಆರೋಪ ಸುಳ್ಳಾದ್ರೆ ಮೊಕದ್ದಮೆ ಹೂಡಿ ಎಂದು ಸವಾಲು ಹಾಕಿದ್ದಾರೆ.

ಸಾವಿರ ದಿನಗಳ ಸಂಭ್ರಮವಲ್ಲ, 1000 ದಿನಗಳ ಸುಳ್ಳಿನ ಸರಮಾಲೆಗಳ ಸಂಭ್ರಮ: ಬಿಜೆಪಿ ವ್ಯಂಗ್ಯ

ರಾಜ್ಯ ಕಾಂಗ್ರೆಸ್​ ಸರ್ಕಾರ (Congress Government) ಸಾವಿರ ದಿನ ಪೂರೈಸಿದೆ. ಈ ಹಿನ್ನೆಲೆ ಸರ್ಕಾರ ಹಾವೇರಿಯಲ್ಲಿ ಶಕ್ತಿ ಪ್ರದರ್ಶನ ಮಾಡಿತು. ಹಾವೇರಿ ಪಟ್ಟಣದ ಹೊರವಲಯದಲ್ಲಿ ಕಂದಾಯ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸಹಯೋಗದಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ, ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಒಂದು ಲಕ್ಷ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಹಕ್ಕುಪತ್ರ ವಿತರಣೆ ಮಾಡಿದರು. ಇದಕ್ಕೆ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗದ ರಿಲೀಫ್ ದೊರೆತಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ ಆದೇಶ ನೀಡಿದೆ. ಪ್ರಕರಣದಲ್ಲಿ ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ರಾಹುಲ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸರ್ಕಾರದಿಂದಲೇ ಭೂಕಬಳಿಕೆ: ಜಿಲ್ಲೆಜಿಲ್ಲೆಗಳಲ್ಲಿ ಕಾಂಗ್ರೆಸ್​ ಭವನಕ್ಕೆ ಭೂಮಿ ನೀಡಿದ ದಾಖಲೆ ಸಮೇತ ಬಿಜೆಪಿ ಗಂಭೀರ ಆರೋಪ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಿಂದ ಆರ್​ಎಸ್​ಎಸ್​ಗೆ ಫಂಡ್ ಹೋಗಿದೆ ಎಂಬ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಬಿಜೆಪಿ ತೀಕ್ಷ್ಣ ತಿರುಗೇಟು ನೀಡಿದೆ. ಕಾಂಗ್ರೆಸ್ ಸರ್ಕಾರವೇ ಪಕ್ಷದ ಕಚೇರಿಗಳಿಗಾಗಿ ಪಂಚಾಯಿತಿ ಮಟ್ಟದಲ್ಲಿಯೂ ಭೂಕಬಳಿಕೆ ಮಾಡಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಜತೆಗೆ, ಪೂರಕ ದಾಖಲೆಗಳನ್ನೂ ಬಿಡುಗಡೆ ಮಾಡಿದೆ.

ಹಿಂದೂಗಳ ಮನೆಯನ್ನೇ ಗುರಿಯಾಗಿಸಿ ಕಲ್ಲು ತೂರಾಟ ಮಾಡ್ತಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಗಂಭೀರ ಆರೋಪ

ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಮನೆಯೊಂದರ ಮೇಲೆ ಒಂದು ವಾರದಿಂದ ಕಲ್ಲುತೂರಾಟ ನಡೆಯುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರ ನಿಷ್ಕ್ರಿಯತೆ ಆರೋಪಿಸಿ ಬಿಜೆಪಿ ಹಾಗೂ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕ​​ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು?

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಆಸ್ತಿ ವಿವರಗಳನ್ನು ಮುಚ್ಚಿಟ್ಟು, ಜಿಎಸ್‌ಟಿ ವಂಚನೆ ಮತ್ತು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪದಡಿ ತೀರ್ಪು ನೀಡಲಾಗಿದೆ. ದೂರುದಾರ ಬಿಜೆಪಿ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ನ್ಯಾಯಾಲಯದ ತೀರ್ಪಿನಿಂದ ತಮಗೆ ನ್ಯಾಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರ ವಿರುದ್ಧ ದಾಖಲಾಗಿರುವ ಚುನಾವಣಾ ತಕರಾರು ಅರ್ಯಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಶಾಸಕ ಸುಬ್ಬಾರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಉಂಟಾಗಿದೆ. ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಇನ್ನೊಂದೆಡೆ ದೂರುದಾರ ಬಿಜೆಪಿ ಅಭ್ಯರ್ಥಿಗೂ ನಿರಾಸೆಯಾಗಿದೆ.

ಹೂಡಿಕೆ ಬಾರದ್ದಕ್ಕೆ ಕೋಮುವಾದ ಕಾರಣ ಎಂದು ಹೇಳಿ ಪೇಚಿಗೆ ಸಿಲುಕಿದ ಪ್ರಿಯಾಂಕ್​ ಖರ್ಗೆ: ಬಿಜೆಪಿ ಕೌಂಟರ್​​ ನೋಡಿ

ಕರಾವಳಿಯಲ್ಲಿ ಕೋಮುವಾದದಿಂದ ಐಟಿ-ಬಿಟಿ ಕಂಪನಿಗಳು ಬಂಡವಾಳ ಹಾಕಲು ಹಿಂಜರಿಯುತ್ತದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಿ.ವೈ. ವಿಜಯೇಂದ್ರ ಅವರು, ಕರಾವಳಿ ತನ್ನ ಶಕ್ತಿಯಿಂದ ಅಭಿವೃದ್ಧಿ ಹೊಂದಿದ್ದು, ಖರ್ಗೆ ತಮ್ಮ ಕಲಬುರಗಿ ಜಿಲ್ಲೆಯತ್ತ ಗಮನ ಹರಿಸಿ. ನಿಮ್ಮ ಆಡಳಿತದ ಅಸಮರ್ಥತೆಯಿಂದ ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ ಎಂದು ತಿರುಗೇಟು ನೀಡಿದ್ದಾರೆ.