BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ದರ್ಗಾ ಸಮೀಪ ಕಾರ್ತಿಕ ದೀಪ ಹಚ್ಚಲು ಅನುಮತಿ: ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕದ ಕೈ ಸಂಸದರು
ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿ ಕೋರ್ಟ್ ಅನುಮತಿ ನೀಡಿದ್ದು, ಇದರು ಭಾರೀ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆದೇಶ ನೀಡಿದ ನ್ಯಾಯಮೂರ್ತಿಯನ್ನು ಪದಚ್ಯುತಿಗೊಳಿಸಬೇಕೆಂಬ ಆಗ್ರಹ ವ್ಯಕ್ತವಾಗಿದ್ದು, ಮಹಾಭಿಯೋಗ ನೋಟೀಸ್ಗೆ ಕರ್ನಾಟಕ ಕಾಂಗ್ರೆಸ್ನ ಮೂವರು ಸಂಸದರು ಸಹಿ ಹಾಕಿದ್ದಾರೆ.ಈ ಮೂಲಕ ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಏನಿದು ಪ್ರಕರಣ? ಸಹಿ ಹಾಕಿದ ಕರ್ನಾಟಕದ ಸಂಸದರು ಯಾರು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Ramesh B Jawalagera
- Updated on: Dec 12, 2025
- 7:46 pm
ಗೃಹ ಲಕ್ಷ್ಮೀ ಯೋಜನೆ ಬಗ್ಗೆ ತಪ್ಪು ಲೆಕ್ಕ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್: 5 ಸಾವಿರ ಕೋಟಿ ಹಣ ಎಲ್ಲಿ ಹೋಯ್ತು?
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ವೇಳೆ ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಪ್ಪು ಲೆಕ್ಕ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. 2025ರ ಆಗಸ್ಟ್ ತಿಂಗಳ ವರೆಗೂ ಗೃಹ ಲಕ್ಷ್ಮೀ ಹಣವನ್ನು ಫಲಾನುಭಿಗಳ ಖಾತೆಗಳಿಗೆ ಹಾಕಲಾಗಿದೆ ಎಂದಿದ್ದಾರೆ. ಆದ್ರೆ, ಹಣ ಮಾತ್ರ ಖಾತೆಗಳಿಗೆ ಜಮೆ ಆಗಿಲ್ಲ. ಈ ಬಗ್ಗೆ ಬಿಜೆಪಿ ಶಾಸಕ ದಾಖಲೆ ಬಿಡುಗಡೆ ಮಾಡಿದ್ದು, 5 ಸಾವಿರ ಕೋಟಿ ರೂ. ಹಣದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
- Ramesh B Jawalagera
- Updated on: Dec 12, 2025
- 5:26 pm
ಯತ್ನಾಳ್ ಘರ್ ವಾಪ್ಸಿ ಚರ್ಚೆ: ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಹಿಂದೂ ಹುಲಿ
ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದರಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶಗೊಂಡಿದ್ದರು. ಅಲ್ಲದೇ ಹೋದಲ್ಲಿ ಬಂದಲ್ಲಿ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಲೇ ಇದ್ದರು. ಅಲ್ಲದೇ ಕೆಲ ಗಂಭೀರ ಆರೋಪಗಳನ್ನು ಮಾಡುತ್ತಿದ್ದರು. ಇದರಿಂದ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಆರೋಪ ಮೇಲೆ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದು, ಇದೀಗ ಅವರನ್ನ ಘರ್ ವಾಪಸ್ಸಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಪೂರಕವೆಂಬಂತೆ ಸುವರ್ಣಸೌಧದಲ್ಲಿರುವ ವಿಪಕ್ಷ ನಾಯಕರ ಕಚೇರಿಯಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದು, ಈ ವೇಳೆ ಯತ್ನಾಳ್ ಅವರನ್ನು ವಾಪಸ್ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಸ್ವತಃ ಯತ್ನಾಳ್ ಅವರೇ ಮಾಧ್ಯಮಗಳ ಮುಂದೆ ಹೇಳಿದ್ದಾರೆ.
- Ramesh B Jawalagera
- Updated on: Dec 12, 2025
- 8:03 pm
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್: ಅಮಿತ್ ಶಾ ಮುಂದೇನಾಯ್ತು? ಎಳೆ ಎಳೆಯಾಗಿ ಬಿಚ್ಚಿಟ್ಟ ಯತ್ನಾಳ್
ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ನಿಯಂತ್ರಣಕ್ಕೆ ಸಿಗದಂತೆ ಭುಗಿಲೆದ್ದಿರುವ ಸಿಎಂ ಕುರ್ಚಿ ಕಿತ್ತಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಧಿವೇಶನಕ್ಕೂ ಮುನ್ನ ಹೈಕಮಾಂಡ್ ಏನೋ ತೇಪೆ ಹಾಕಿತ್ತು. ಆದ್ರೆ ಅಧಿವೇಶನ ನಡೆಯುತ್ತಿರುವಾಗಲೇ ಪಟ್ಟದ ಫೈಟ್ ಜ್ವಾಲಾಮುಖ ಸ್ಫೋಟಿಸಿದೆ. ಈ ಬೆಳವಣಿಗೆಗಳ ನಡುವೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ್ (Basangowda Patil Yatnal) ಸ್ಫೋಟಕ ತಿರುವು ಕೊಟ್ಟಿದ್ದಾರೆ.
- Ramesh B Jawalagera
- Updated on: Dec 12, 2025
- 3:56 pm
ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಬಿಜೆಪಿ ಇಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ. ಲೋಕಸಭಾ ಅಧಿವೇಶನದ ವೇಳೆ ವಿದೇಶಕ್ಕೆ ಹೋಗುತ್ತಾರೆ, ಆಮೇಲೆ ಬಂದು ನನಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ ಎನ್ನುತ್ತಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರೆ ಎನ್ನುವ ಮೂಲಕ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 10, 2025
- 6:13 pm
ಮೇಕ್ ಇನ್ ಇಂಡಿಯಾ ಬಲಪಡಿಸಲು ಮೈಸೂರಿನಲ್ಲಿ ನಿರ್ಮಾಣವಾಗುತ್ತಿದ್ದ ಯೂನಿಟಿ ಮಾಲ್ಗೆ ವಿಘ್ನ
ಸ್ಥಳೀಯವಾಗಿ ಉತ್ಪಾದನೆಯಾಗುವ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ’ಯೂನಿಟಿ ಮಾಲ್’ ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಕರ್ನಾಟಕ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಸರ್ವೇ ನಂ.1ರ 6.5 ಎಕರೆ ಪ್ರದೇಶದಲ್ಲಿ ‘ಯೂನಿಟಿ ಮಾಲ್‘ ನಿರ್ಮಾಣಕ್ಕೆ ಕೆಲ ತಿಂಗಳುಗಳ ಹಿಂದಷ್ಟೆ ಚಾಲನೆ ನೀಡಲಾಗಿತ್ತು.
- Ram
- Updated on: Dec 10, 2025
- 6:13 pm
ಪ್ರವಾಸದ ನಾಯಕ; ರಾಹುಲ್ ಗಾಂಧಿಯ ಜರ್ಮನಿ ಭೇಟಿಗೆ ಬಿಜೆಪಿ ಲೇವಡಿ
ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬಿಜೆಪಿ ನಾಯಕರು ರಾಹುಲ್ ಗಾಂಧಿಯನ್ನು ಪ್ರವಾಸದ ನಾಯಕ ಎಂದು ಲೇವಡಿ ಮಾಡಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದೀಗ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಸಮಯದಲ್ಲಿಯೇ ಜರ್ಮನಿಗೆ ಪ್ರಯಾಣಿಸಲಿದ್ದಾರೆ. ಆಗಾಗ ವಿದೇಶ ಪ್ರವಾಸ ಮಾಡುವ ಮೂಲಕ ಅವರು ತಮ್ಮ ಕರ್ತವ್ಯಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
- Sushma Chakre
- Updated on: Dec 10, 2025
- 4:52 pm
500ಕ್ಕೂ ಹೆಚ್ಚು RSS ಕಾರ್ಯಕ್ರಮ, ಪಥಸಂಚಲನ: ಒಂದೇ ಒಂದು ಕಡೆಯೂ ಗಲಾಟೆ, ದೊಂಬಿ ಆಗಿಲ್ಲವೆಂದ ಕಾಂಗ್ರೆಸ್ ಸರ್ಕಾರ!
ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗಬಹುದೆಂಬ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ಆರ್ಎಸ್ಎಸ್ ಪಥಸಂಚಲನವನ್ನು ವಿರೋಧಿಸಿದ್ದರು. ಆದರೆ, ಅದೇ ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕ ಸರ್ಕಾರ, ರಾಜ್ಯಾದ್ಯಂತ 518 ಆರ್ಎಸ್ಎಸ್ ಪಥಸಂಚಲನಗಳು ಶಾಂತಿಯುತವಾಗಿ ನಡೆದಿವೆ ಎಂದು ವಿಧಾನಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದೆ. ಯಾವುದೇ ಗಲಾಟೆ ಅಥವಾ ಕಾನೂನು ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.
- Ganapathi Sharma
- Updated on: Dec 10, 2025
- 11:48 am
ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಬೆಳಗಾವಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಬಿಜೆಪಿ ನಾಯಕರು ಹಾಗೂ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ವಿಡಿಯೋ ಇಲ್ಲಿದೆ.
- Ganapathi Sharma
- Updated on: Dec 9, 2025
- 2:24 pm
ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ ಸದ್ದು: ಆಡಳಿತಾರೂಢ ಕಾಂಗ್ರೆಸ್ ನಡೆಗೆ ವಿಪಕ್ಷ ಬಿಜೆಪಿ ಕಿಡಿ
ಕರ್ನಾಟಕದಲ್ಲಿ ಟಿಪ್ಪು ಜಯಂತಿ ಆಚರಣೆಯ ಕುರಿತ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್ ಅವರು ವಿಧಾನಸಭೆಯಲ್ಲಿ ಟಿಪ್ಪು ಜಯಂತಿಯನ್ನು ಪುನರಾರಂಭಿಸಲು ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಆರ್. ಅಶೋಕ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ಹಿಂಸಾಚಾರಕ್ಕೂ ಕಾರಣವಾಗಿದ್ದ ಈ ಆಚರಣೆ ಈಗ ಮತ್ತೊಮ್ಮೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
- Prasanna Hegde
- Updated on: Dec 9, 2025
- 12:45 pm
ನಾಶ ಆಗಬೇಕಂದ್ರೆ ಟಿಪ್ಪು ಜಯಂತಿ ಪ್ರಾರಂಭಿಸಲಿ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಸನಗೌಡ ಯತ್ನಾಳ್ ಗರಂ
ಬಸನಗೌಡ ಪಾಟೀಲ್ ಯತ್ನಾಳ್ ಅವರು ದ್ವೇಷ ಭಾಷಣ ವಿಧೇಯಕ, ಗೋಹತ್ಯೆ ನಿಷೇಧ ಕಾಯ್ದೆ ಸಡಿಲೀಕರಣ ಮತ್ತು ಟಿಪ್ಪು ಜಯಂತಿ ಪುನರಾರಂಭದ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಚೋದನಕಾರಿ ಭಾಷಣಕ್ಕೆ ಸರ್ಕಾರವೇ ಹೊಣೆ ಎಂದು ಆರೋಪಿಸಿ, ಟಿಪ್ಪು ಜಯಂತಿ ಪುನರಾರಂಭ ವಿರೋಧಿಸಿ ಚುನಾವಣಾ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದರು.
- Kiran Haniyadka
- Updated on: Dec 9, 2025
- 12:16 pm
ಬೆಳಗಾವಿ ಅಧಿವೇಶನದಲ್ಲಿ ಇಂದಿನಿಂದ ಅಸಲಿ ಕದನ: 20 ಸಾವಿರ ರೈತರೊಂದಿಗೆ ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಸಜ್ಜು
Karnataka Winter Session; ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ರೈತರ ಸಮಸ್ಯೆಗಳ ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.
- Sahadev Mane
- Updated on: Dec 9, 2025
- 8:42 am