BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ಉಚಿತ ಟಿಕೆಟ್ ಚರ್ಚೆ ಮಧ್ಯೆ RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!
ಕರ್ನಾಟಕದ ಶಾಸಕರಿಗೆ ಐಪಿಎಲ್ ಟಿಕೆಟ್ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಧಿವೇಶದಲ್ಲೇ ಐಪಿಎಲ್ ಟಿಕೆಟ್ಗೆ ಬೇಡಿ ಕೊನೆಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಶಾಸಕನಿಗೆ ಮೂರು ಐಪಿಎಲ್ ನೀಡಲು ಕೆಎಸ್ಸಿಎ ತೀರ್ಮಾನಿಸಿದ್ದು, ಅದರಂತೆ ಆರ್ಸಿಬಿ ಹಾಗೂ ಸಿಎಸ್ಕೆ ನಡುವೆ ಪಂದ್ಯದ ಟಿಕೆಟ್ ಗಾಗಿ ಶಾಸಕರು ಪಿಎಗಳು ಕ್ಯೂ ನಿಂತುಕೊಂಡು ಟಿಕೆಟ್ ಪಡೆದುಕೊಂಡಿದ್ದು, ಇದೀಗ ಬಿಜೆಪಿ ಶಾಸಕರು ಹಾಗೂ ಸಂಸದರು ಆರ್ಸಿಬಿ ಹಾಗೂ ಸಿಎಸ್ಕೆ ಪಂದ್ಯ ವೀಕ್ಷಣೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿದ್ದಾರೆ. ಬಿಜೆಪಿ ಸಂಸದರಾದ ಬಿವೈ ರಾಘವೇಂದ್ರ, ಡಾ ಸಿ.ಎನ್ ಮಂಜುನಾಥ್ ಹಾಗೂ ಬಿಜೆಪಿ ಶಾಸಕ ಡಾ ಅಶ್ವಥ್ ನಾರಾಯಣ ಮತ್ತು ಜೆಡಿಎಸ್ ಎಂಎಲ್ಸಿ ಶರವಣ ಅವರು ಕುಟುಂಬ ಸಮೇತ ಪಂದ್ಯ ವೀಕ್ಷಿಸುತ್ತಿದ್ದಾರೆ.
- Rachappaji Naik S
- Updated on: Apr 5, 2026
- 8:44 pm
ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ, ಹಾವೇರಿ ವಿವಿಗೆ ಹೇಳಿದಿಷ್ಟು
ಗೌರವ ಡಾಕ್ಟರೇಟ್ ಎನ್ನುವುದು ವಿಶ್ವವಿದ್ಯಾನಿಲಯ ಅಥವಾ ಕಾಲೇಜು ನೀಡುವ ಪ್ರತಿಷ್ಠಿತ ಶೈಕ್ಷಣಿಕ ಗೌರವವಾಗಿದ್ದು, ನಿರ್ದಿಷ್ಟ ಕ್ಷೇತ್ರ, ಸಮಾಜ ಅಥವಾ ಮಾನವೀಯತೆಗೆ ಗಮನಾರ್ಹ ಕೊಡುಗೆಗಳನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಅದರಂತೆ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದರೂ ಆಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಹಾವೇರಿ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಲು ಮುಂದಾಗಿದೆ. ಆದ್ರೆ, ಇದನ್ನು ಬೊಮ್ಮಾಯಿ ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದಾರೆ.
- Ramesh B Jawalagera
- Updated on: Apr 5, 2026
- 4:36 pm
ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ
ಬಾಗಲಕೋಟೆ ಉಪಚುನಾವಣಾ ಕದನದಲ್ಲಿ NSUI ಕಾರ್ಯಕರ್ತರಿಂದ ಬಿಜೆಪಿ ವಿರುದ್ಧ ಕರಪತ್ರ ಹಂಚಿಕೆ ಆರೋಪ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಐವರು NSUI ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬೆನ್ನಲ್ಲೇ ಇದೀಗ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಡಿಜಿ & ಐಜಿಪಿ ಆದೇಶ ಹೊರಡಿಸಿದ್ದಾರೆ.
- Ravi H Mooki
- Updated on: Apr 5, 2026
- 3:23 pm
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ
ಬಾಗಲಕೋಟೆ ಉಪಚುನಾವಣೆಯ ಸಂಬಂಧ NSUI ಸಂಘಟನೆಯ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ವಿರುದ್ಧ ಅಪಪ್ರಚಾರದ ಕರಪತ್ರಗಳನ್ನು ವಿತರಿಸಿದ ಆರೋಪ ಎದುರಿಸುತ್ತಿದ್ದಾರೆ. ಕೇಸರಿ ಶಾಲುಗಳನ್ನು ಧರಿಸಿದ 18 NSUI ಸದಸ್ಯರು ಕ್ಯಾಂಪಸ್ಗೆ ಪ್ರವೇಶಿಸಿ ಈ ಕರಪತ್ರಗಳನ್ನು ಹಂಚಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಿಕ್ಕಿಬಿದ್ದ ಒಬ್ಬ ವ್ಯಕ್ತಿ, ತಮ್ಮನ್ನು ಬಾಗಲಕೋಟೆಯ ಕಾಂಗ್ರೆಸ್ ಕಚೇರಿಗೆ ಕರೆದೊಯ್ಯಲಾಗಿತ್ತು ಎಂದು ಹೇಳಿದ್ದು, ಘಟನೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
- Ravi H Mooki
- Updated on: Apr 5, 2026
- 8:43 am
ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ, ಕಾಂಗ್ರೆಸ್ ನಡುವೆ ಕರಪತ್ರ ಫೈಟ್; ಸಿಪಿಐ ಕಚೇರಿ ಎದುರು ಹೈಡ್ರಾಮಾ
ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾವೇರಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕರಪತ್ರ ಯುದ್ಧ ಭುಗಿಲೆದ್ದಿದೆ. ವಿದ್ಯಾರ್ಥಿಗಳಿಗೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ವಿರುದ್ಧ ಕರಪತ್ರ ಹಂಚಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಎನ್ಎಸ್ಯುಐ ಕಾರ್ಯಕರ್ತರು ಈ ಕೃತ್ಯದಲ್ಲಿ ತೊಡಗಿದ್ದು, ಮತ ಹಾಕಿದರೆ ಜೈಲಿಗೆ ಹೋಗುತ್ತೀರಿ ಎಂಬ ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.
- Ravi H Mooki
- Updated on: Apr 4, 2026
- 10:40 pm
ಬಿಜೆಪಿಗರಿಗೆ ನಾನೇ ಟಾರ್ಗೆಟ್ ಎಂದ ಸಿಎಂ: ಕಾರಣವನ್ನೂ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
ಉಪಚುನಾವಣೆ ಪ್ರಚಾರದ ಮಧ್ಯೆ ಟಿವಿ9 ಜೊತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಡವರ ಪರ ನಿಲುವಿನ ಕಾರಣ ಬಿಜೆಪಿ ತನ್ನನ್ನು ಟಾರ್ಗೆಟ್ ಮಾಡುತ್ತಿದೆ ಎಂದು ದೂರಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಕಾರ್ಯಕ್ರಮಗಳು ಮತ್ತು ಸಾಧನೆಗಳನ್ನು ಜನರಿಗೆ ತಿಳಿಸುತ್ತಿದ್ದು, ಜನ ಅವುಗಳನ್ನು ವಿಮರ್ಶಿಸಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ಮಾಡೋದನ್ನು ಬಿಟ್ಟು ಮತ್ತೇನನ್ನು ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.
- Pramod Shastri G
- Updated on: Apr 4, 2026
- 8:27 pm
ಬೈ ಎಲೆಕ್ಷನ್: ಅಬ್ಬರದ ಕ್ಯಾಂಪೇನ್ ಮಧ್ಯೆ ಜಮೀರ್ಗೆ ಸಿಎಂ ತುರ್ತು ಬುಲಾವ್; ನಾಳೆ ಅಖಾಡಕ್ಕೆ ಸಚಿವ ಎಂಟ್ರಿ
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಪ್ರಚಾರ ಬಿರುಸುಗೊಂಡಿದೆ. ಸಿಎಂ ಸಿದ್ದರಾಮಯ್ಯ ಅಹಿಂದ ಮತಗಳನ್ನು ಕ್ರೋಢೀಕರಿಸಲು, ಸಚಿವ ಜಮೀರ್ಗೆ ತುರ್ತು ಬುಲಾವ್ ನೀಡಿದ್ದಾರೆ. ವಿವಿಧ ಸಮುದಾಯಗಳ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಕೂಡ ಕುಟುಂಬ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದೆ. ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿದೆ.
- Gangadhar Saboji
- Updated on: Apr 4, 2026
- 7:09 pm
ಸಿಎಂ ಸಿದ್ದರಾಮಯ್ಯಗೆ ಸವಾಲ್ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ
ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುರಿತು ಸವಾಲು ಹಾಕಿದ್ದಾರೆ. ಕೆಲಸವಿಲ್ಲದ ಮಂತ್ರಿ ಎಂದು ತಮ್ಮನ್ನು ಟೀಕಿಸಿರೋದಕ್ಕೆ ತಿರುಗೇಟು ನೀಡಿರುವ ಸೋಮಣ್ಣ, ಚುನಾವಣೆ ಬಳಿಕ ತಮ್ಮ ಕಚೇರಿಗೆ ಒಂದು ಗಂಟೆ ಬಂದು ಹೋಗುವಂತೆ ಆಹ್ವಾನಿಸಿದ್ದಾರೆ. ಯಾರು ಕೆಲಸ ಇಲ್ಲದ ಮಂತ್ರಿ ಎಂದು ಇದರಿಂದ ತಿಳಿಯುತ್ತದೆ ಎಂದು ಹೇಳುವ ಮೂಲಕ ಕೌಂಟರ್ ಕೊಟ್ಟಿದ್ದಾರೆ.
- Basavaraj Doddamani
- Updated on: Apr 4, 2026
- 4:33 pm
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ
ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಪ್ರತಾಪ್ ಸಿಂಹ ಅವರು ಸಿದ್ರಾಮಯ್ಯ ಅವರ ಮಾಂಸ ಸೇವನೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಯುಗಾದಿ, ದೀಪಾವಳಿ ದಿನಗಳಲ್ಲಿ ಮಾಂಸ ಸೇವನೆಯನ್ನು ಬಹಿರಂಗಪಡಿಸುವುದು ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ಸಿಂಹ ತಿಳಿಸಿದರು. ಡಾ. ಚರಂತಿ ಮಟ್ಟ ಅವರಿಗೆ ಮತ ನೀಡಿ, ಜಾತಿ ಮರೆತು ಹಿಂದೂಗಳಾಗಿ ಒಗ್ಗಟ್ಟಿನಿಂದ ಮತ ಚಲಾಯಿಸಲು ಕರೆ ನೀಡಿದರು.
- Ravi H Mooki
- Updated on: Apr 3, 2026
- 10:44 pm
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ದಾವಣಗೆರೆ ಬೈಎಲೆಕ್ಷನ್ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈ ನಡುವೆ ಬಿಜೆಪಿ ಶಾಸಕ ಶ್ರೀರಾಮುಲು ಅವರು ಇಂದು (ಏಪ್ರಿಲ್ 03) ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಸಮರ್ಥನನ್ನು ಸೋಲಿಸಲು ಕಾಂಗ್ರೆಸ್ನಲ್ಲೇ ಷಡ್ಯಂತ್ರ ನಡೆದಿದೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.
- Basavaraj Doddamani
- Updated on: Apr 3, 2026
- 8:01 pm
ನಿಮಗೆ ಸಾಬರಷ್ಟೇ ಓಟ್ ಹಾಕಿದ್ದಾರಾ ಸಿದ್ದರಾಮಯ್ಯ? ಬಾಗಲಕೋಟೆಯಲ್ಲಿ ಗುಡುಗಿದ ಯತ್ನಾಳ್
Karnataka By-Election 2026: ಬಾಗಲಕೋಟೆ ಉಪಚುನಾವಣೆಯ ಪ್ರಚಾರದಲ್ಲಿ ಶಾಸಕ ಯತ್ನಾಳ್ ಅಬ್ಬರಿಸಿದ್ದಾರೆ. ಶಿವಾಜಿ ಮಹಾರಾಜರ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಜೆಸಿಬಿ ಕ್ರಮಕ್ಕೆ ಆಗ್ರಹಿಸಿದ ಅವರು, ಸಿದ್ದರಾಮಯ್ಯ ಸರ್ಕಾರವನ್ನು ‘ಒಂದು ಸಮುದಾಯದ ಪರ’ ಎಂದು ಟೀಕಿಸಿ, ಹಿಂದೂಗಳ ಮತ ಕ್ರೂಡೀಕರಣಕ್ಕೆ ಕರೆ ನೀಡಿದರು. ಯತ್ನಾಳ್ ಬೆಂಕಿ ಭಾಷಣದ ವಿಡಿಯೋ ಇಲ್ಲಿದೆ.
- Ganapathi Sharma
- Updated on: Apr 3, 2026
- 9:21 am
ಉಪಚುನಾವಣೆ ಪ್ರಚಾರ ಅಬ್ಬರ: ದಾವಣಗೆರೆಯಲ್ಲಿ ಮಳೆಯಲ್ಲೇ ‘ಕೈ’ ನಾಯಕರ ಘರ್ಜನೆ; ಬಾಗಲಕೋಟೆಯಲ್ಲಿ ಚರಂತಿಮಠ ಪರ ಯತ್ನಾಳ್ ಮತಬೇಟೆ!
Karnataka By-Election 2026; ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಪ್ರಚಾರ ಕೊನೆಯ ಹಂತದಲ್ಲಿದೆ. ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪರ ಅಬ್ಬರಿಸಿದರೆ, ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ಕೇಸರಿ ಅಭ್ಯರ್ಥಿ ಪರ ಪ್ರಚಾರ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಮಳೆ, ಅಲ್ಪಸಂಖ್ಯಾತ ಮತಗಳ ಧ್ರುವೀಕರಣ, ಹಾಗೂ ಯತ್ನಾಳ್ ನಡೆ ಈ ಚುನಾವಣೆಗಳನ್ನು ಇನ್ನಷ್ಟು ಕುತೂಹಲಕಾರಿಯನ್ನಾಗಿಸಿವೆ.
- Ganapathi Sharma
- Updated on: Apr 3, 2026
- 6:54 am