BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ವರದಾ-ಬೇಡ್ತಿ ನದಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರು ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ ಜನ ಸಮಾವೇಶ ಮೂಲಕ ಸಾವಿರಾರು ಜನರು ಸೇರಿ ಸರ್ಕಾರದ ನಡೆ ವಿರೋಧಿಸಿದ್ದಾರೆ. ಇಂದು (ಜನವರಿ 11) ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು, ಮಠಾಧೀಶರು ಸೇರಿದಂತೆ ಸಾವಿರಾರು ಜನರು ಒಂದೆಡೆ ಸೇರಿ ಒಕ್ಕೊರಲಿನಿಂದ ಯೋಜನೆಗೆ ವಿರೋಧ ವ್ಯಕ್ತಪಡಿಸಲಾಯಿತು.
- Ramesh B Jawalagera
- Updated on: Jan 11, 2026
- 10:38 pm
ನವೀಕರಿಸಬಹುದಾದ ಇಂಧನ: 300 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಅಗತ್ಯ; ಪ್ರಲ್ಹಾದ್ ಜೋಶಿ
ಯುಎಇಯ ಅಬುಧಾಬಿಯಲ್ಲಿ ನಡೆದ 16ನೇ ಐಆರ್ಇಎನ್ಎ ಅಸೆಂಬ್ಲಿಯ ಪೂರ್ಣ ಅಧಿವೇಶನದಲ್ಲಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದರು. ಭಾರತ ನವೀಕರಿಸಬಹುದಾದ ಇಂಧನದಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದ್ದು, 266 GW ಸಾಮರ್ಥ್ಯವನ್ನು ಮೀರಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
- Web contact
- Updated on: Jan 11, 2026
- 10:24 pm
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಬಳ್ಳಾರಿ ಗಲಭೆ ಪ್ರಕರಣ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತ ಸತೀಶ್ ರೆಡ್ಡು ಬಂಧನ ಆಗ್ಬೇಕು ಎಂದು ಜನಾರ್ದನ ರೆಡ್ಡಿ, ರಾಮುಲು ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ಇದುವರೆಗೂ ಶಾಸಕ ಭರತ್ ರೆಡ್ಡಿ ಬಂಧನ ಆಗಿಲ್ಲ. ಇನ್ನು ಈ ಪ್ರಕರಣ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು,ಸಿಐಡಿ ಅಧಿಕಾರಿಗಳು ಸಹ ಸ್ಥಳಕ್ಕೆ ಎಂಟ್ರಿ ಕೊಟ್ಟು ತನಿಖೆ ಚುರುಕುಗೊಳಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಗಲಭೆಯ ಮತ್ತಷ್ಟು ವಿಡಿಯೋ ಬಿಡುಗಡೆ ಮಾಡಿದ್ದಾರೆ.
- Ramesh B Jawalagera
- Updated on: Jan 11, 2026
- 7:10 pm
ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು
ಆತ ಮಹಾನಗರ ಪಾಲಿಕೆಯ ಮಾಜಿ ಸದಸ್ಯ, ಆಸ್ತಿಯಲ್ಲಿ ಕೂಡ ಸ್ಥಿತಿವಂತ, ಸಾಕಷ್ಟು ಸಮಾಜ ಸೇವೆ ಮಾಡುವ ಮೂಲಕ ಹೆಸರು ಮಾಡಿದ್ದ ವ್ಯಕ್ತಿ, ಅಲ್ಲದೆ ಮನುಷ್ಯರಿಗೆ ಅಷ್ಟೇ ಅಲ್ಲ ಪ್ರಾಣಿ ಪಕ್ಷಗಳಿಗೂ ಕೂಡ ಅನ್ನದಾತನಾಗಿದ್ದ, ಆದರೆ ಇಂತಹ ವ್ಯಕ್ತಿ ಏಕಾಏಕಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಈ ಅತ್ಮಹತ್ಯೆ ನಿಜಕ್ಕೂ ಇಡೀ ಜಿಲ್ಲೆಯ ಜನರನ್ನು ನಿಬ್ಬೇರಗಾಗುವಂತೆ ಮಾಡಿದೆ.
- Basavaraj Doddamani
- Updated on: Jan 11, 2026
- 4:12 pm
ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಮನನೊಂದು ಬಿಜೆಪಿ ಮುಖಂಡ ಆತ್ಮಹತ್ಯೆ
ದಾವಣಗೆರೆಯಲ್ಲಿ ಬಿಜೆಪಿ ಮುಖಂಡರೊಬ್ಬರು ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ಆತ್ಮಹತ್ಯೆ ಯತ್ನದ ನಂತರ ಮನನೊಂದಿದ್ದ ಇವರು ತಮ್ಮ ಕಾರಿನಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಇನ್ನೊಂದೆಡೆ, ಕಾರವಾರದಲ್ಲಿ ಜೆಡಿಎಸ್ ನಾಯಕಿಯ ಪುತ್ರ ಕಿರುಕುಳ ನೀಡಿದ ಕಾರಣ ಯುವತಿ ಆತ್ಮಹತ್ಯೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರಾರಿಯಾಗಿದ್ದಾನೆ.
- Bhavana Hegde
- Updated on: Jan 11, 2026
- 11:40 am
ಅಕ್ರಮ ಬಾಂಗ್ಲಾ ವಲಸಿಗರ ಕುರಿತ ನಿಮ್ಮ ಕಾಳಜಿ ಕಾಸರಗೋಡಿನ ಕನ್ನಡಿಗರ ಬಗ್ಗೆ ಯಾಕಿಲ್ಲ: ಕಾಂಗ್ರೆಸ್ ಹೈಕಮಾಂಡ್ಗೆ ಅಶೋಕ್ ಪ್ರಶ್ನೆ
ಕೋಗಿಲು ಲೇಔಟ್ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ತೆರವು ಮಾಡಿದಾಗ ಮಿಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೃದಯ ಈಗ ಮಲಯಾಳ ಭಾಷೆ ಮಸೂದೆ ವಿಚಾರದಲ್ಲಿ ಕಾಸರಗೋಡಿನ ಕನ್ನಡಿಗರಿಗಾಗಿ ಏಕೆ ಮಿಡಿಯುತ್ತಿಲ್ಲ? ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವಾಗ ಇದ್ದ ಕಾಳಜಿ ಕನ್ನಡಿಗರ ಬಗ್ಗೆ ಏಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
- Ganapathi Sharma
- Updated on: Jan 10, 2026
- 12:44 pm
ರಾಜ್ಯ ರಾಜಕಾರಣದ ಮೇಲೆ ಕಣ್ಣು: ಹೇಗಿದೆ ಗೊತ್ತಾ ನಿಖಿಲ್, ಪ್ರತಾಪ್, ಸುಮಲತಾ ಪ್ಲ್ಯಾನ್?
2028ರ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ, ಪ್ರತಾಪ್ ಸಿಂಹ ಮತ್ತು ಸುಮಲತಾ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ನಿಖಿಲ್ ಮಂಡ್ಯ ಅಥವಾ ಮದ್ದೂರಿನಿಂದ ಸ್ಪರ್ಧಿಸಲು ಯೋಜಿಸುತ್ತಿದ್ದರೆ, ಪ್ರತಾಪ್ ಮೈಸೂರಿನ ಚಾಮರಾಜ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಸುಮಲತಾ ಕೂಡ ರಾಜ್ಯ ರಾಜಕಾರಣ ಪ್ರವೇಶಿಸುವ ಇರಾದೆ ಹೊಂದಿದ್ದು, ತಮ್ಮ ಭವಿಷ್ಯದ ರಾಜಕೀಯ ತಂತ್ರಗಳ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚಿಸೋದಾಗಿ ತಿಳಿಸಿದ್ದಾರೆ.
- Prasanna Hegde
- Updated on: Jan 9, 2026
- 1:14 pm
ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ: ವಿಶೇಷ ಅಧಿವೇಶನ ಕರೆಯಲು ತೀರ್ಮಾನ
ಜಾರಿ ಮಾಡಿರುವ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಈ ಸಂಬಂಧ ಇಂದಿನ ಸಚಿವ ಸಂಪುಟದ್ಲಲೂ ಸಹ ಗಂಭೀರ ಚರ್ಚೆಗಳಾಗಿವೆ. ಮನರೇಗಾ ಕಾಯಿದೆ ರದ್ದತಿ ವಿರೋಧಿಸಿ ಐದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ವಿಬಿ ಜಿ ರಾಮ್ ಜಿ ಕಾಯಿದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಲಾಗಿದೆ. ಅಲ್ಲದೇ ಕಾಂಗ್ರೆಸ್ ಶಾಸಕ ವಿಶೇಷ ಸಭೆಯಲ್ಲೂ ಸಹ ಹೋರಾಟದ ಬಗ್ಗೆ ಚರ್ಚೆ ನಡೆದಿದೆ. ಹಾಗಾದ್ರೆ, ಇಂದಿನ ಸಭೆಯಲ್ಲಿ ಏನೆಲ್ಲಾಆಯ್ತು ಎನ್ನುವ ವಿವರ ಇಲ್ಲಿದೆ.
- Prasanna Gaonkar
- Updated on: Jan 8, 2026
- 10:56 pm
ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು
ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB G RAM G) ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. ಇದಕ್ಕೆ ಬಿಜೆಪಿ ನಾಯಕರು ಸಹ ವಿಬಿಜಿ ರಾಮ್ ಜಿ ಎಂದು ಹೆಸರು ಬದಲಾವಣೆ ಮಾಡಿದ್ದಕ್ಕೆ ಸರ್ಮಥಿಸಿಕೊಳ್ಳುತ್ತಿದ್ದು, ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್ ಮಧ್ಯವರ್ತಿಗಳಿಗೆ ತೊಡಕು ಆಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.
- Ramesh B Jawalagera
- Updated on: Jan 8, 2026
- 6:47 pm
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್: ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ಮೇಲಿನ ಹಲ್ಲೆ ಪ್ರಕರಣ ಸಂಬಂಧ, ಪ್ರಲ್ಹಾದ್ ಜೋಶಿ ಪೊಲೀಸರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣಾ ಕರ್ತವ್ಯದ ವೇಳೆ ನಡೆದ ಘಟನೆ, ಪೊಲೀಸರು ಬಿಜೆಪಿ ಕಾರ್ಯಕರ್ತೆಯ ದೂರು ಸ್ವೀಕರಿಸದೆ, ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಅವರು ಖಂಡಿಸಿದ್ದಾರೆ.
- Kiran Haniyadka
- Updated on: Jan 8, 2026
- 3:51 pm
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ!
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಆಯುಕ್ತರೇ ಸ್ಪಷ್ಟನೆ ನೀಡಿದ್ದಾರೆ. ಹಾಗಿದ್ದ ಮೇಲೆ ಇದನ್ನು ರಾಜಕೀಯ ಮಾಡುವುದು ಸರಿಯಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು ಎಂದರು.
- Ganapathi Sharma
- Updated on: Jan 8, 2026
- 11:37 am
ಮೈಸೂರು ಬಿಜೆಪಿಯಲ್ಲಿ ಭಿನ್ನಮತದ ಕಿಡಿಹಚ್ಚಿದ ಪ್ರತಾಪ್ ಸಿಂಹ ಆ ಒಂದು ಹೇಳಿಕೆ!
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿದ್ದ ಒಂದು ಹೇಳಿಕೆ ಈಗ ಮೈಸೂರು ಬಿಜೆಪಿಯಲ್ಲಿ ಕಿಡಿಹೊತ್ತಿಸಿದೆ! ಇದು ಪ್ರತಾಪ್ ಸಿಂಹ ರಾಜ್ಯ ರಾಜಕಾರಣ ಪ್ರವೇಶದ ಮೇಲೂ ಪರಿಣಾಮ ಬೀರುತ್ತಾ? ಅಷ್ಟಕ್ಕೂ ಮೈಸೂರಲ್ಲಿ ಪ್ರತಾಪ್ ಹೇಳಿಕೆಗೆ ಆಕ್ಷೇಪ ವ್ಯಕ್ತವಾಗಿದ್ದು ಯಾಕೆ? ಎಲ್ಲ ವಿವರಗಳು ಇಲ್ಲಿವೆ.
- Ram
- Updated on: Jan 8, 2026
- 10:10 am