BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ಬಳ್ಳಾರಿ ಗಲಭೆ: ಪೊಲೀಸ್ ವಶದಲ್ಲಿದ್ದ 9 ಗನ್ಮ್ಯಾನ್ ಪೈಕಿ ಓರ್ವ ಅರೆಸ್ಟ್
ಬಳ್ಳಾರಿಯಲ್ಲಿ ಬ್ಯಾನರ್ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣದ ತನಿಖೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಪ್ರಮುಖವಾಗಿ ಘಟನೆ ನಡೆದಾಗ ಸ್ಥಳದಲ್ಲಿದ್ದ 9 ಗನ್ಮ್ಯಾನ್ಗಳ ಪೈಕಿ ಓರ್ವನ ಬಂಧನವಾಗಿದೆ. ಹೌದು..ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹಾರಿಸಿದ ಗುಂಡಿಗೆ ರಾಜಶೇಖರ್ ಸಾವನ್ನಪ್ಪಿರುವುದು ದೃಢಪಟ್ಟಿದೆ. ಹೀಗಾಗಿ ಗುರುಚರಣ್ ಸಿಂಗ್ ನನ್ನು ಬಂಧಿಸಿದ್ದಾರೆ.
- Ramesh B Jawalagera
- Updated on: Jan 4, 2026
- 10:21 pm
ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ
ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB G RAM G) ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. ಇದಕ್ಕೆ ಬಿಜೆಪಿ ನಾಯಕರು ಸಹ ವಿಬಿಜಿ ರಾಮ್ ಜಿ ಎಂದು ಹೆಸರು ಬದಲಾವಣೆ ಮಾಡಿದ್ದಕ್ಕೆ ಸರ್ಮಥಿಸಿಕೊಳ್ಳುತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Ramesh B Jawalagera
- Updated on: Jan 4, 2026
- 5:55 pm
ಬಳ್ಳಾರಿ ಗಲಭೆ: ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಪತ್ನಿ, ಗನ್ಮ್ಯಾನ್ಗಳ ಬಗ್ಗೆ ಜನಾರ್ದನ ರೆಡ್ಡಿ ಏನಂದ್ರು ನೋಡಿ
ಶಾಸಕ ಗಾಲಿ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 11.30ಕ್ಕೆ ಎಎಸ್ಪಿ ರವಿಕುಮಾರ್ ಜೊತೆ ನಾನು ಪೋನ್ ನಲ್ಲಿ ಮಾತಾಡಿದೆ. ನಾಲ್ಕು ಮಂದಿ ಗನ್ ಮ್ಯಾನ್ ಗಳ ಪೈಕಿ ಅದರಲ್ಲಿ ಗುರುಚರಣ್ ಅವರ ಗುಂಡು ಹಾರಿಸಿದ್ದು ಕನ್ಪರ್ಮ್ ಆಗಿದೆ. ಕಾರ್ಯಕ್ರಮ ಸಿದ್ಧತೆಗಾಗಿ ಭರತ್ ರೆಡ್ಡಿ ಶ್ರೀಮತಿ ಅವರು ಓಡಾಡಿಕೊಂಡು ಇದೋದಕ್ಕೆ ಭರತ್ ರೆಡ್ಡಿ ಜತೆಗೂ ಇವರನ್ನ ಇಟ್ಕೊಂಡಿದ್ದರು. ಸೋಷಿಯಲ್ ಮೀಡಿಯಾದ ವೀಡಿಯೋದಿಂದ ನೋಡಿದ್ದೀನಿ. ಭರತ್ ರೆಡ್ಡಿ ಅವರೇ ತಮ್ಮ ಪ್ಯಾಮಿಲಿ ಭದ್ರತೆಗಾಗಿ ಖಾಸಗಿ ಗನ್ ಮ್ಯಾನ್ ಗಳನ್ನ ಇಟ್ಕೊಂಡಿದ್ದಾರೆ. ಭರತ್ರೆಡ್ಡಿ ಗನ್ ಮ್ಯಾನ್ ಗಳನ್ನ ಸತೀಶ್ ರೆಡ್ಡಿ ಅವರು ಇಟ್ಕೊಂಡಿದ್ರು. ಹಾಗಾಗಿ ಭರತ್ ರೆಡ್ಡಿ ಅವರನ್ನ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.
- Ramesh B Jawalagera
- Updated on: Jan 4, 2026
- 4:23 pm
ಬಳ್ಳಾರಿ ಗಲಭೆ: 20 ಜನರ ಬಂಧನ, ಕಾಂಗ್ರೆಸ್ನವರೆಷ್ಟು, ಬಿಜೆಪಿಯವರೆಷ್ಟು? ರೆಡ್ಡಿಗೂ ಸಂಕಷ್ಟ
ಬಳ್ಳಾರಿ ಗಲಭೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಗಲಭೆಯ ವಿಡಿಯೋಗಳನ್ನ ಆಧಾರಿಸಿ ಖಾಕಿ ತನಿಖೆಗಿಳಿದಿದೆ. 20 ವಿಡಿಯೋಗಳನ್ನ ಸಂಗ್ರಹಿಸಿದ್ದ ಪೊಲೀಸರು, ನಿನ್ನೆ 45 ಮಂದಿಯ ವಿಚಾರಣೆ ನಡೆಸಿದ್ದರು. ಘಟನೆಯ ಇಂಚಿಂಚೂ ಮಾಹಿತಿ ಕಲೆಹಾಕಿ ಒಟ್ಟು 20 ಜನರನ್ನು ಬಂಧಿಸಿದ್ದಾರೆ. ಹಾಗಾದ್ರೆ, ಬಂಧಿತರಲ್ಲಿ ಕಾಂಗ್ರೆಸ್ನವರೆಷ್ಟು, ಬಿಜೆಪಿಯವರೆಷ್ಟು? ಎನ್ನುವ ಪಟ್ಟಿ ಇಲ್ಲಿದೆ.
- Vinayak Badiger
- Updated on: Jan 4, 2026
- 4:30 pm
ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು: ಶೋಭಾ ಕರಂದ್ಲಾಜೆ ಸ್ಫೋಟಕ ಆರೋಪ
ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಭಡ್ತಿ ಮತ್ತು ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿದೆ ಎಂದು ಅವರು ಆರೋಪಿಸಿದ್ದಾರೆ.
- Sunil MH
- Updated on: Jan 4, 2026
- 2:17 pm
Mysuru: ಚುನಾವಣಾ ರಾಜಕೀಯಕ್ಕೆ ರಾಮದಾಸ್ ನಿವೃತ್ತಿ: ಕಾರಣ ಬಿಚ್ಚಿಟ್ಟ ಮಾಜಿ ಸಚಿವ
ಚುನಾವಣಾ ರಾಜಕಾರಣದಿಂದ ದೂರ ಉಳಿಯೋದಾಗಿ ಮೈಸೂರಲ್ಲಿ ಮಾಜಿ ಸಚಿವ ಎಸ್. ಎ. ರಾಮದಾಸ್ ಘೋಷಿಸಿದ್ದಾರೆ. 30 ವರ್ಷ ರಾಜಕೀಯ ಮಾಡಿದ್ದೇನೆ. ಎಲ್ಲೂ ಕೈಯನ್ನು ಅಶುದ್ಧ ಮಾಡಿಕೊಂಡಿಲ್ಲ. ಈ ಹಿಂದೆ ರಾಮನಿಗೆ ಪಟ್ಟಾಭಿಷೇಕ ಆಗಬೇಕಿತ್ತು. ಆದರೆ ದಶರಥನ ಮೂಲಕ ರಾಮನನ್ನು ಕಾಡಿಗೆ ಕಳುಹಿಸಬೇಕಾಯಿತು. ಶ್ರೀರಾಮನೇ ಮರು ಮಾತನಾಡದೆ ಕಾಡಿಗೆ ಹೋದ. ಇನ್ನು ನಾನು ರಾಮದಾಸ, ನಾನೇನು ಮಾಡಲಿ? ಎಂದು ಪ್ರಶ್ನಿಸಿದ್ದಾರೆ.
- Ram
- Updated on: Jan 4, 2026
- 7:11 am
ಕೋಗಿಲು ನಿವಾಸಿಗಳ ಪಟ್ಟಿ ಸಿದ್ಧ: ಲೇಔಟ್ಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಕೋಗಿಲು ಲೇಔಟ್ ಅಕ್ರಮ ಒತ್ತುವರಿ ವಿವಾದ ಬೆಂಗಳೂರಿನಲ್ಲಿ ರಾಜಕೀಯ ಸಮರ ಸೃಷ್ಟಿಸಿದೆ. ಸರ್ಕಾರ ನಿರಾಶ್ರಿತ ಕುಟುಂಬಗಳಿಗೆ ಮನೆ ನೀಡಲು ಮುಂದಾಗಿದ್ದು, ಬಿಜೆಪಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಂದಾಯ ಇಲಾಖೆ 188 ಕುಟುಂಬಗಳ 1,007 ಸದಸ್ಯರನ್ನು ಒಳಗೊಂಡ ಸಂತ್ರಸ್ತರ ಪಟ್ಟಿಯನ್ನು ಸಿದ್ಧಪಡಿಸಿದೆ.
- Gangadhar Saboji
- Updated on: Jan 3, 2026
- 10:26 pm
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ವಿಡಿಯೋ ತೋರಿಸಿ ಆರೋಪ ಮಾಡಿದ ಜನಾರ್ದನ ರೆಡ್ಡಿ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರು ನಾರಾ ಭರತ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಗಾಂಜಾ ಪೆಡ್ಲರ್ ದೌಲ ಜೊತೆ ಭರತ್ ರೆಡ್ಡಿ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ವಿಡಿಯೋ ಸಾಕ್ಷಿ ಇದೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ಸತೀಶ್ ರೆಡ್ಡಿ ಮತ್ತು ಅವರ ಅಂಗರಕ್ಷಕರ ಬಂಧನಕ್ಕೆ ಆಗ್ರಹಿಸಿದ್ದಾರೆ.
- Ganapathi Sharma
- Updated on: Jan 3, 2026
- 3:44 pm
ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!
ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೆ ಯಾಕೆ ಕಣ್ರಿ.. ಗಾಳಿಯಲ್ಲಿ 12ಕ್ಕೂ ಹೆಚ್ಚು ಸುತ್ತು ಫೈರಿಂಗ್ ಮಾಡಲಾಗಿದ್ದು, ಒಂದು ಬಲೆಟ್ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎನ್ನುವರ ದೇಹ ಹೊಕ್ಕಿದೆ. ಇನ್ನೊಂದೆಡೆ ಅಧಿಕಾರ ಸ್ವೀಕರಿಸಿದ್ದ ಒಂದೇ ದಿನದಲ್ಲಿ ಬಳ್ಳಾರಿ ಎಸ್ಪಿ ತಲೆದಂಡವಾಗಿದೆ.
- Ramesh B Jawalagera
- Updated on: Jan 2, 2026
- 8:33 pm
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ, ಸದ್ಯ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ.ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಸಲುವಾಗಿ ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕಲ್ಲು ತೂರಾಟ, ಖಾರದ ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಅಲ್ಲ, ಗಾಳಿಯಲ್ಲಿ 12ಕ್ಕೂ ಹೆಚ್ಚು ಸುತ್ತು ಫೈರಿಂಗ್ ಮಾಡಲಾಗಿದೆ. ನಿನ್ನೆ (ಜನವರಿ 01) ರಾತ್ರಿ ಬಳ್ಳಾರಿಯ ಪರಿಸ್ಥಿತಿ ಅದೆಷ್ಟರ ಮಟ್ಟಿಗೆ ಉದ್ವಿಗ್ನಗೊಂಡಿತ್ತು ಅನ್ನೋದಕ್ಕೆ ಕೆಲ ದೃಶ್ಯಗಳೇ ಸಾಕ್ಷಿಯಾಗಿವೆ.
- Ramesh B Jawalagera
- Updated on: Jan 2, 2026
- 6:05 pm
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ರೆಡ್ಡಿ ಮನೆ ಎದುರು ಕಟ್ಟಿದ್ದ ಬ್ಯಾನರ್ ಅನ್ನ ಜಮಾಯಿಸಿದ್ದವರು ಹರಿದುಬಿಸಾಡಿದ್ರು. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ಶುರುವಾಯ್ತು. ಗಲಾಟೆ ಜಾಗಕ್ಕೆ ಮಾಜಿ ಸಚಿವ ಶ್ರೀರಾಮುಲು ಕೂಡ ಭೇಟಿ ನೀಡಿದ್ದಾರೆ. ಆಗ ತಳ್ಳಾಟ-ನೂಕಾಟ ಆಗಿದೆ. ಪರಸ್ಪರ ಕಲ್ಲು ತೂರಾಡಿಕೊಂಡಿದ್ದು, ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ. ಆಗ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ಮ್ಯಾನ್ಗಳು, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
- Ramesh B Jawalagera
- Updated on: Jan 2, 2026
- 5:26 pm
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್ಮ್ಯಾನ್, ವಿಡಿಯೋ ಸಾಕ್ಷಿ ಇಲ್ಲಿದೆ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಒಂದು ಸುತ್ತು ಫೈರಿಂಗ್ ಮಾಡಿದ್ದು, ಇದರಿಂದ ಜನಾರ್ದನ ರೆಡ್ಡಿ ನಿವಾಸದ ಕಿಟಕಿ ಗಾಜು ಪೀಸ್ ಪೀಸ್ ಆಗಿದೆ.
- Ramesh B Jawalagera
- Updated on: Jan 2, 2026
- 4:07 pm