BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ದಸರಾ ಕಂಬಳಕ್ಕೆ 8 ಕೋಟಿ ಕೊಡೋದಾದ್ರೆ, ಕರಾವಳಿ ಕಂಬಳಕ್ಕೆ 25 ಲಕ್ಷ ಕೊಡಿ: ಸುನೀಲ್ ಕುಮಾರ್ ಆಗ್ರಹ
ಮೈಸೂರು ದಸರಾ ಕಂಬಳಕ್ಕೆ 8 ಕೋಟಿ ರೂ. ಖರ್ಚು ಮಾಡುವ ಬದಲು, ದಕ್ಷಿಣ ಕನ್ನಡ ಮತ್ತು ಉಡುಪಿಯ 20ಕ್ಕೂ ಹೆಚ್ಚು ಕರಾವಳಿ ಕಂಬಳಗಳಿಗೆ ತಲಾ 25 ಲಕ್ಷ ರೂ. ಅನುದಾನ ನೀಡುವಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
- Harish GR
- Updated on: Jul 16, 2026
- 2:55 pm
ಸಿಎಂ ಡಿಕೆಶಿ ‘ಜೈಲು’ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೌಂಟರ್: ಅನುಕಂಪದ ಯತ್ನ ಎಂದು ಕಿಡಿ
Karnataka Politics: ಬಿಡದಿ ಟೌನ್ಶಿಪ್ ವಿವಾದ ಹಾಗೂ ಜೈಲು ಹೇಳಿಕೆ ಕುರಿತು ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ಇದು ಅನುಕಂಪ ಗಿಟ್ಟಿಸಿಕೊಳ್ಳುವ ಯತ್ನ ಎಂದು ಕೌಂಟರ್ ನೀಡಿದ್ದಾರೆ. ಇದೇ ವೇಳೆ ದೇಶದ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಳೆದ 25 ದಿನಗಳಿಂದ ಎಲ್ಲಿದ್ದಾರೆ ಎಂದೂ ಪ್ರಶ್ನಿಸಿರುವ ಅವರು, ಬರದ ವಿಚಾರದಲ್ಲಿಯೂ ರಾಜಕೀಯ ಮಾಡುವುದನ್ನು ಇವರು ಮೊದಲು ಬಿಡಬೇಕು ಎಂದು ಕಿಡಿ ಕಾರಿದ್ದಾರೆ.
- Kiran Haniyadka
- Updated on: Jul 16, 2026
- 2:21 pm
ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಜಾ
ವಿಧಾನ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದರೊಂದಿಗೆ, ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಮಾನ್ಯತೆ ಕುರಿತು ನಡೆದ ಕಾನೂನು ಹೋರಾಟದಲ್ಲಿ ಅವರಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಭಾರಿ ಹಿನ್ನಡೆಯಾದಂತಾಗಿದೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
- Mahesha E
- Updated on: Jul 16, 2026
- 12:51 pm
ನಿಮ್ಮ ಅಂತ್ಯ ನೋಡುವವರೆಗೂ ನಾನು ಸಾಯೋದಿಲ್ಲ; ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು!
ತೃಣಮೂಲ ಕಾಂಗ್ರೆಸ್ ತೊರೆದು ಹೋಗುತ್ತಿರುವ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿರುವ ತಮ್ಮ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಮಮತಾ ಬ್ಯಾನರ್ಜಿ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಪಕ್ಷಾಂತರ ಮಾಡಿದ ನಾಯಕರನ್ನು "ದ್ರೋಹಿಗಳು" ಎಂದು ಕರೆದಿರುವ ಮಮತಾ, ರಾಜಕೀಯ ಉಳಿವಿಗಾಗಿ ತಾನಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯರಾಗಲಿ ಎಂದಿಗೂ ಯಾರೊಂದಿಗೂ ರಾಜಿ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದಲ್ಲಿ ಎದುರಾಗಿರುವ ಇತ್ತೀಚಿನ ಬಿಕ್ಕಟ್ಟಿಗೆ ಅಭಿಷೇಕ್ ಬ್ಯಾನರ್ಜಿ ಅವರೊಬ್ಬರನ್ನೇ ಗುರಿ ಮಾಡುತ್ತಿರುವುದಕ್ಕೆ ಮಮತಾ ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.
- Sushma Chakre
- Updated on: Jul 15, 2026
- 7:36 pm
ಕಲಬುರಗಿ ಜೈಲಿಂದ ಕೈದಿಗಳು ಪರಾರಿ ಕೇಸ್: ಪ್ರಿಯಾಂಕ್-ವಿಜಯೇಂದ್ರ ನಡುವೆ ಸೋಷಿಯಲ್ ಮೀಡಿಯಾ ಪೋಸ್ಟ್ ವಾರ್
Karnataka Politcs: ಕಲಬುರಗಿ ಜೈಲಿನಿಂದ ಕೈದಿಗಳು ಪರಾರಿಯಾದ ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಗಳಿಗೆ ಕಾರಣವಾಗಿದೆ. ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪರಸ್ಪರ ವಾಗ್ದಾಳಿ ನಡೆಸಿದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Prasanna Hegde
- Updated on: Jul 15, 2026
- 7:37 pm
ಭ್ರಷ್ಟಾಚಾರದ ವಿರುದ್ಧ ವಿಜಯ್ ಕರೆ ನೀಡಿದ ಬೆನ್ನಲ್ಲೇ ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಜುಲೈ 10 ರಂದು ಕರೂರ್ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ವಿಜಯ್ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದರು. ತಮ್ಮ ಆಡಳಿತದಲ್ಲಿ ಲಂಚ ಪಡೆಯುವ ಅಥವಾ ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಯಾವುದೇ ವ್ಯಕ್ತಿಗೆ ಅವಕಾಶ ನೀಡುವುದಿಲ್ಲ. ಅಂತಹ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಅವರು ಭರವಸೆ ನೀಡಿದ್ದರು. ಹಾಗೇ, ಯಾರಾದರೂ ನಿಮ್ಮ ಬಳಿ ಲಂಚ ಕೇಳಿದರೆ ಕೊಡುವುದಿಲ್ಲ ಎಂದು ಹೇಳಿ ಎಂದಿದ್ದರು. ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿಯನ್ನೂ ಬಿಡುಗಡೆ ಮಾಡಿದ್ದರು. ಅದರ ಬೆನ್ನಲ್ಲೇ ಈ ಲಂಚದ ವಿಡಿಯೋ ಬಹಿರಂಗವಾಗಿರುವುದು ವಿಜಯ್ ಅಭಿಮಾನಿಗಳಿಗೆ ಮತ್ತು ಪಕ್ಷಕ್ಕೆ ಮುಜುಗರ ತಂದಿಟ್ಟಿದೆ.
- Sushma Chakre
- Updated on: Jul 15, 2026
- 5:17 pm
ಚಿನ್ನಸ್ವಾಮಿ ಸ್ಟೇಡಿಯಲ್ಲಿ ಕಾಲ್ತುಳಿತ ದುರಂತ: 11 ಜನರ ಸಾವಿಗೆ ಹೊಣೆ ಯಾರು? ಅಶೋಕ್ ಪ್ರಶ್ನೆ
Chinnaswamy stadium stampede: ಕಾಲ್ತುಳಿತ ದುರಂತದಲ್ಲಿ ಅಧಿಕಾರಿಗಳಿಗೆ ಕ್ಲೀನ್ ಚಿಟ್ ಸಂಬಂಧ ಪ್ರತಿಕ್ರಿಯಸಿರುವ ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 11 ಮಂದಿ ಅಮಾಯಕರ ಸಾವಿಗೆ ನ್ಯಾಯ ಎಲ್ಲಿದೆ? ಕಾಂಗ್ರೆಸ್ ಸರ್ಕಾರ ಘಟನೆಯನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದು, ಇಲ್ಲಿ ಅಪರಾಧಿಗಳು ಹಾಗಿದ್ದರೆ ಯಾರು ಎಂದವರು ಪ್ರಶ್ನಿಸಿದ್ದಾರೆ. ನಮ್ಮ ಸರ್ಕಾರ ಬಂದರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡ್ತೇವೆ ಎಂದೂ ಅವರು ತಿಳಿಸಿದ್ದಾರೆ.
- Kiran Haniyadka
- Updated on: Jul 15, 2026
- 3:30 pm
ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ನಿರ್ಧಾರವು ಅಕ್ರಮ ಬಾಂಗ್ಲಾದೇಶೀಯರನ್ನು ಮತದಾರರನ್ನಾಗಿ ಮಾಡುವ ಹುನ್ನಾರವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಅಪಾಯ ತರುತ್ತದೆ ಎಂದು ಅಶೋಕ್ ಆರೋಪಿಸಿದ್ದಾರೆ. ಇದನ್ನು ತಕ್ಷಣವೇ ರದ್ದುಪಡಿಸುವಂತೆ ಅವರು ಆಗ್ರಹಿಸಿದ್ದಾರೆ.
- Ganapathi Sharma
- Updated on: Jul 15, 2026
- 2:04 pm
TV9 Kannada News Highlights: ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ: ಬಾಡಿಗೆದಾರರು ಬದಲಾದ್ರೂ ಸಿಗುತ್ತೆ ಫ್ರೀ ಕರೆಂಟ್
Karnataka News Today Highlights: ಸಿಎಂ ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಜುಲೈ 17 ರ ನಂತರ ಮುಖ್ಯಮಂತ್ರಿಗಳು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿರ್ವಹಣೆಗೆ ಹೊಸ ಕಾನೂನು ತರುವ ಬಗ್ಗೆ ಸಿಎಂ ನೇತೃತ್ವದಲ್ಲಿ ಸಂವಾದ, ಬಿಡದಿ ರೈತರ ಪ್ರತಿಭಟನೆ ಸೇರಿದಂತೆ ಇಂದಿನ ಎಲ್ಲ ಸುದ್ದಿ ಬೆಳವಣಿಗೆಗಳ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿ ಲಭ್ಯ.
- Ganapathi Sharma
- Updated on: Jul 15, 2026
- 10:53 pm
ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ಸ್ಫೋಟಕ ಆರೋಪ: ಮಂತ್ರಿ ಸ್ಥಾನಕ್ಕೆ ಕೊಡಬೇಕಾ ಕೋಟಿ ಕೋಟಿ?
Karnataka Politics: ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ. ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ನೀಡಬೇಕಾದ ಸ್ಥಿತಿ ಕಾಂಗ್ರೆಸ್ನಲ್ಲಿದೆ. ಇದೇ ರೀತಿ ರೈತರ ಹೋರಾಟಗಳು ನಡೆದಲ್ಲಿ ಈ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿಯನ್ನೂ ನಾವು ಕಾಣುವ ಸಾಧ್ಯತೆ ಇದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
- Kiran Haniyadka
- Updated on: Jul 14, 2026
- 4:54 pm
ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ ನಿಧನ: ಬಿ.ಎಸ್. ಯಡಿಯೂರಪ್ಪ ಸಂತಾಪ
ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ (88) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜನಸಂಘದ ದಿನಗಳಿಂದಲೂ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೌಡರ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
- Bhavana Hegde
- Updated on: Jul 14, 2026
- 11:37 am
ಹೊಳೆ ದಾಟೋಕೆ ದೊಣ್ಣೆನಾಯಕನ ಅಪ್ಪಣೆ ಬೇಕೆ: ಪ್ರಿಯಾಂಕ್ ಖರ್ಗೆಗೆ ಪ್ರಲ್ಹಾದ್ ಜೋಶಿ ತಿರುಗೇಟು
ಆರ್ಎಸ್ಎಸ್ ಸಭೆಗಳ ನಂತರ ಗಲಭೆಗಳು ಸಂಭವಿಸುತ್ತವೆ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಲವಾಗಿ ಖಂಡಿಸಿದ್ದಾರೆ. ಖರ್ಗೆಯವರ ಹೇಳಿಕೆಯನ್ನು ಮಕ್ಕಳಾಟಿಕೆ ಎಂದು ಕರೆದ ಜೋಶಿ, ಆಡಳಿತ ಪಕ್ಷವು ರಾಜ್ಯದ ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಅನಗತ್ಯ ವಿಷಯಗಳ ಮೇಲೆ ಗಮನ ಹರಿಸುತ್ತಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ.
- Ravi H Mooki
- Updated on: Jul 12, 2026
- 8:11 pm