AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP

BJP

ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್​​ಎಸ್​ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.​​

ಇನ್ನೂ ಹೆಚ್ಚು ಓದಿ

ಬಿಜೆಪಿ ತೊರೆದು ಹೊಸ ಪಕ್ಷ ಘೋಷಣೆ? ನಾಳೆ ಅಣ್ಣಾಮಲೈ ಮುಂದಿನ ಹೆಜ್ಜೆ ಪ್ರಕಟ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಪಕ್ಷ ತೊರೆಯುತ್ತಿದ್ದಾರೆ ಎಂಬ ಊಹಾಪೋಹಗಳ ನಡುವೆ ಅವರ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದೆ. ತಮ್ಮ ಪೋಸ್ಟ್‌ನಲ್ಲಿ ಅವರು ನಾಳೆ ಒಂದು ಪ್ರಮುಖ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಅಣ್ಣಾಮಲೈ ಅವರು ನಾಳೆ ಬಿಜೆಪಿ ತೊರೆಯುವುದಾಗಿ ಘೋಷಿಸಬಹುದು ಎನ್ನಲಾಗಿದೆ. ಜೂನ್ 3ರಂದು, ಅಣ್ಣಾಮಲೈ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಖುದ್ದಾಗಿ ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗಿತ್ತು. ಅದರ ನಂತರ, ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಸಹ ಭೇಟಿಯಾದರು. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ದೆಹಲಿಗೆ ಹೋಗಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.

ಬಿಜೆಪಿ, ಕಾಂಗ್ರೆಸ್​​ ಪಕ್ಷದ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಭಾರತೀಯ ಜನತಾ ಪಕ್ಷವು (BJP) 2026ರ ರಾಜ್ಯಸಭಾ ಚುನಾವಣೆ ಮತ್ತು ಒಡಿಶಾ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕಾಂಗ್ರೆಸ್ ಕೂಡ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸಂಸತ್ತಿನ ಮೇಲ್ಮನೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಖ್ಯಾಬಲವನ್ನು ಗರಿಷ್ಠಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಈ ಅಭ್ಯರ್ಥಿಗಳಿಗೆ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಅನುಮೋದನೆ ನೀಡಿದೆ. ಇದರೊಂದಿಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆಯನ್ನು ಆಯೋಗ ಪ್ರಕಟಿಸಿದೆ.

ಅವರಿಗೆ ಹೇಳಿ ಪಿಚ್ಚರ್ ಅಭಿ ಬಾಕಿ ಹೈ, ಇದು ಕೇವಲ ಟ್ರೈಲರ್ ಅಷ್ಟೇ: ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ?

ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿಕೆ ಹರಿಪ್ರಸಾದ್ ಅವರು ತುಂಬಿದ್ದು, ಇಂದು (ಜೂನ್ 04) ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು ಪಿಚ್ಚರ್ ಅಭಿ ಬಾಕಿ ಹೈ, ಇದು ಟ್ರೈಲರ್ ಅಷ್ಟೇ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗಾದ್ರೆ, ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ? ಯಾಕಾಗಿ ಈ ಮಾತನ್ನ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಇಂಧನ ಉಳಿಸಲು ಮೋದಿ ಕರೆ; ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ ಕೇಂದ್ರ ಸಚಿವರು

ಸಾಮಾನ್ಯವಾಗಿ ವಿವಿಐಪಿ ಸಂಸ್ಕೃತಿಯಲ್ಲಿ ಪ್ರತಿಯೊಬ್ಬ ಸಚಿವರಿಗೂ ಪ್ರತ್ಯೇಕ ಬೆಂಗಾವಲು ಪಡೆ ಮತ್ತು ಕಾರುಗಳಿರುತ್ತವೆ. ಆದರೆ, ಈ ಸಾಂಪ್ರದಾಯಿಕ ಶೈಲಿಯನ್ನು ಬದಿಗೊತ್ತಿ ಸಚಿವರು ಒಟ್ಟಾಗಿ ಪ್ರಯಾಣಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸಾಮಾನ್ಯ ಜನರಿಗೂ ಇದು ಇಂಧನ ಉಳಿತಾಯದ ನಿಟ್ಟಿನಲ್ಲಿ ಪ್ರೇರಣೆಯಾಗಲಿದೆ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರ ಕರೆಯನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಕೇಂದ್ರ ಸಚಿವರೇ ಖುದ್ದಾಗಿ ಅದನ್ನು ಕಾರ್ಯರೂಪಕ್ಕೆ ತಂದು ಇಂಧನ ಉಳಿತಾಯದ ಜಾಗೃತಿಗೆ ಕರೆ ನೀಡಿದ್ದಾರೆ.

ಸಿಎಂ ಆಗುವ ಮುನ್ನವೇ ಡಿಕೆಶಿ ತಂತ್ರಗಾರಿಕೆ: ರಾಜಕೀಯ ಬದ್ಧವೈರಿಗಳ ಭೇಟಿ ಹಿಂದಿನ ಲೆಕ್ಕಾಚಾರವೇನು?

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಅಧಿಕಾರ ಸ್ವೀಕಾರ ಮುನ್ನ ಡಿಕೆ ಶಿವಕುಮಾರ್ ಅವರು ರಾಜ್ಯದ ಇಬ್ಬರು ಪ್ರಭಾವಿ ಜಾತಿ ಸಮುದಾಯಗಳ ಪ್ರಶ್ನಾತೀತ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ಮೂಲಕ ಇಡೀ ರಾಜ್ಯಕ್ಕೆ ಅತ್ಯಂತ ಸ್ಪಷ್ಟ ಹಾಗೂ ಪ್ರಬಲ ಸಂದೇಶ ರವಾನಿಸಿದ್ದಾರೆ. ಜೊತೆಗೆ ಇಬ್ಬರು ನಾಯಕರಿಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

  • Sunil MH
  • Updated on: Jun 3, 2026
  • 2:59 pm

ಟಿಎಂಸಿ ವಲಸಿಗರಿಗೆ ಮುಚ್ಚಿತು ಬಿಜೆಪಿ ಬಾಗಿಲು; ತೃಣಮೂಲೀಕರಣ ತಡೆಯಲು ಬಂಗಾಳದ ಬಿಜೆಪಿ ಶಪಥ

ಅಧಿಕಾರದ ಆಸೆಯಿಂದ ಪಕ್ಷಾಂತರ ಮಾಡುವ ಟಿಎಂಸಿ ನಾಯಕರಿಗೆ ಪಶ್ಚಿಮ ಬಂಗಾಳದ ಬಿಜೆಪಿ ಈ ಬಾರಿ ರೆಡ್ ಸಿಗ್ನಲ್ ತೋರಿಸಿದೆ. "ನಮಗೆ ಸಿದ್ಧಾಂತ ಮುಖ್ಯವೇ ಹೊರತು, ಬೇರೆ ಪಕ್ಷದಿಂದ ಬರುವ ವಲಸಿಗರಲ್ಲ" ಎಂಬ ಸಂದೇಶ ರವಾನಿಸುವ ಮೂಲಕ ಪಶ್ಚಿಮ ಬಂಗಾಳದ ಬಿಜೆಪಿ ತನ್ನ ಆಂತರಿಕ ಶಕ್ತಿಯನ್ನು ಬಲಪಡಿಸಿಕೊಳ್ಳಲು ಮುಂದಾಗಿದೆ. ಬಂಗಾಳದ ಟಿಎಂಸಿಯಲ್ಲಿ ಈಗಾಗಲೇ ಬಿರುಕು ಮೂಡಿದ್ದು, ಇಂದು ಮಾಜಿ ಸಿಎಂ ಮಮತಾ ಬ್ಯಾನರ್ಜಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಕೂಡ ಬೆರಳೆಣಿಕೆಯಷ್ಟು ನಾಯಕರು ಪಾಲ್ಗೊಂಡು ದೀದಿಗೆ ಮುಖಭಂಗವಾಗುವಂತೆ ಮಾಡಿದ್ದರು.

ಅಮಿತ್ ಶಾ ಜೊತೆ ಅಣ್ಣಾಮಲೈ ಮಾತುಕತೆ; ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಕಸರತ್ತು

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಹೊಸ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ಅವರ ರಾಜಕೀಯ ಭವಿಷ್ಯದ ಕುರಿತಾದ ಚರ್ಚೆಗಳನ್ನು ಮತ್ತಷ್ಟು ತೀವ್ರಗೊಳಿಸಿದೆ. ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಇದುವರೆಗೂ ಅಣ್ಣಾಮಲೈ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ, ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿಯಲು ಅಣ್ಣಾಮಲೈ ಅವರ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.

ಶಾಸಕ ವಿಶ್ವನಾಥ್​​ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್​​ಗೆ ಸ್ವಪಕ್ಷಿಗರಿಂದಲೇ ತರಾಟೆ

ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಡಾ. ಕೆ. ಸುಧಾಕರ್‌ರನ್ನು ಬಿಜೆಪಿ ಕಾರ್ಯಕರ್ತರೇ ತರಾಟೆಗೆ ತಗೆದುಕೊಂಡಿರುವ ಘಟನೆ ನಡೆದಿದೆ. ಯಲಹಂಕದಲ್ಲಿ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರ ಮಧ್ಯಪ್ರವೇಶದ ಬಳಿಕ ಪರಿಸ್ಥಿತಿ ತಿಳಿಗೊಂಡಿದೆ. ಕಳೆದ ಲೋಕಸಭಾ ಚುನಾವಣೆಯಿಂದಲೂ ಶಾಸಕರು ಮತ್ತು ಸಂಸದರ ನಡುವೆ ಮುನಿಸು ಮುಂದುವರಿದುಕೊಂಡು ಬಂದಿದ್ದು, ಅದೀಗ ಮತ್ತೊಂದು ಹಂತ ತಲುಪಿದೆ.

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್: ರಾಜ್ಯಪಾಲರ ಮೊರೆ ಹೋದ ಬಿಜೆಪಿ ನಿಯೋಗ

ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸಂಬಂಧ ಮುಸ್ಲಿಮರ ವಿರುದ್ಧ ದಾಖಲಾದ 13 ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಕೈಗೊಂಡ ತೀರ್ಮಾನವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯ ಬಿಜೆಪಿ ಆಯೋಗವು ರಾಜ್ಯಪಾಲರ ಮೊರೆ ಹೋಗಿದ್ದು, ಕೇಸ್ ವಾಪಸ್ ಪಡೆದ ನಿರ್ಣಯ ರದ್ದುಪಡಿಸಲು ಸೂಚಿಸಬೇಕೆಂದು ಮನವಿ ಮಾಡಿದೆ.

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ

ತಮಿಳುನಾಡು ರಾಜಕಾರಣ ಕಳೆದ ಒಂದು ತಿಂಗಳಿನಿಂದ ದೇಶದ ಗಮನ ಸೆಳೆಯುತ್ತಿದೆ. ಟಿವಿಕೆ ನಾಯಕ ಜೋಸೆಫ್ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿದ ಬೆನ್ನಲ್ಲೇ ತಮಿಳುನಾಡು ಬಿಜೆಪಿಯ ಫೈರ್‌ಬ್ರಾಂಡ್ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ದಿಢೀರನೆ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಕ್ಷೇತ್ರ ತ್ಯಾಗಕ್ಕೆ ಸುಮಲತಾಗೆ ಸಿಗುತ್ತಾ ಪ್ರತಿಫಲ? ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ಕರ್ನಾಟದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಎದುರಾಗಿದ್ದು, ಇದೇ ಜೂನ್ 18ರಂದು ಚುನಾವಣೆ ನಡೆಯಲಿದೆ. ಆದ್ರೆ, ಈ ನಾಲ್ಕು ಸ್ಥಾನಗಳ ಪೈಕಿ 3 ಕಾಂಗ್ರೆಸ್ ಇನ್ನುಳಿದ ಒಂದು ಸ್ಥಾನಕ್ಕೆ ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ನಡೆವೆ ತೀವ್ರ ಪೈಪೋಟಿ ಶುರುವಾಗಿದ್ದು, ಮಾಜಿ ಪ್ರಧಾನಿ ಎಚ್​​​ಡಿ ದೇವೇಗೌಡರನ್ನೇ ಮುಂದುವರಿಸಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದೆ. ಇನ್ನೊಂದೆಡೆ ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಬೇರೆದೊಂದು ಹೆಸರು ಶಿಫಾರಸ್ಸು ಮಾಡಿದೆ. ಈ ಎಲ್ಲಾ ಬೆಳವಣಿಗಳ ನಡುವೆ ಸುಮಲತಾ ಅಂಬರೀಶ್ ಅವರ ಹೆಸರು ಮುನ್ನಲೆಗೆ ಬಂದಿದೆ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ, ಮತದಾನ, ರಿಸಲ್ಟ್ ಯಾವಾಗ? ಇಲ್ಲಿದೆ ವಿವರ

Karnataka MLC Elections 2026: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್‌ ನ 7 ಸದಸ್ಯ ಸ್ಥಾನಕ್ಕೆ ನಡೆಯುವ ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಿಧಾನಪರಿಷತ್‌ ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಅಧಿಸೂಚನೆ ಪ್ರಕಟಿಸಿದ್ದು, ಇಂದಿನಿಂದ ಜೂನ್ 8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು