BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ: ಬಿಜೆಪಿ ಕಡೆಗೇ ಬಾಣ ತಿರುಗಿಸಿದ ಸಿಎಂ ಸಿದ್ದರಾಮಯ್ಯ!
ಉಪಲೋಕಾಯುಕ್ತರ 63% ಭ್ರಷ್ಟಾಚಾರ ಹೇಳಿಕೆ ಆಧರಿಸಿ ಬಿಜೆಪಿ ಕಾಂಗ್ರೆಸ್ಗೆ ಸಿಬಿಐ ತನಿಖೆಯ ಸವಾಲು ಹಾಕಿತ್ತು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿ.ವೀರಪ್ಪ ಹೇಳಿಕೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಆಡಳಿತದ ಅವಧಿಗೇ ಸೇರಿದ್ದು ಎಂದಿದ್ದಾರೆ. 40% ಕಮಿಷನ್, ಪಿಎಸ್ಐ ಹಗರಣ ಸೇರಿ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಉಲ್ಲೇಖಿಸಿ, ತಮ್ಮ ಸರ್ಕಾರ ಪಾರದರ್ಶಕತೆಗಾಗಿ ಶ್ರಮಿಸುತ್ತಿದೆ ಎಂದಿದ್ದಾರೆ.
- Ganapathi Sharma
- Updated on: Dec 5, 2025
- 7:42 am
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ಲ್ಯಾಪ್ಟಾಪ್ನಲ್ಲಿ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್
ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಳದ ಬಗ್ಗೆ ಉಪಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಮುಗಿಬಿದ್ದಿದೆ. ಈ ಹಿಂದೆ ಇದ್ದ ತಮ್ಮ ಸರ್ಕಾರದ ಮೇಲೆ ಶೇ.40 ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ಗೆ ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಆರ್ ಅಶೋಕ್ ಅವರು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವುದನ್ನು ಲ್ಯಾಪ್ಟಾಲ್ನಲ್ಲಿ ತೋರಿಸಿದರು.
- Ramesh B Jawalagera
- Updated on: Dec 4, 2025
- 5:27 pm
ಕರ್ನಾಟಕದಲ್ಲಿ ಭ್ರಷ್ಟಾಚಾರ: ನಿಮಗೆ ಧೈರ್ಯ ಇದ್ರೆ ಸಿಬಿಐ ತನಿಖೆ ಮಾಡಿಸಿ; ಆರ್ ಅಶೋಕ್ ಸವಾಲು
ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರವಿದೆ ಎಂಬ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹೇಳಿಕೆಯನ್ನೇ ಬಿಜೆಪಿ ಅಸ್ತ್ರಮಾಡಿಕೊಂಡಿದ್ದು, ಸರ್ಕಾರದ ಮೇಲೆ ಮುಗಿಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಅಶೋಕ್, ಪೇ ಸಿಎಂ ಅಂತಾ ರೋಡ್ನಲ್ಲಿ ಪೋಸ್ಟರ್ ಅಂಟಿಸಿದ್ರಲ್ಲಾ, ಅದನ್ನ ಈಗ ನಿಮ್ಮ ಮುಖದ ಮೇಲೆ ಅಂಟಿಸಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.
- Kiran Haniyadka
- Updated on: Dec 4, 2025
- 4:46 pm
ಪುತ್ರನ ವಿರುದ್ಧ ಮಸಲತ್ತು ನಡೆಯುತ್ತಿದ್ದಂತೆಯೇ ದೆಹಲಿಗೆ ಹಾರಿದ ಯಡಿಯೂರಪ್ಪ
ಕಾಂಗ್ರೆಸ್ ಮಾತ್ರವಲ್ಲ ಬಿಜೆಪಿಯಲ್ಲೂ ಬಣ ರಾಜಕಾರಣ ಗರಿಗೆದರಿದೆ. ಕಮಲ ಪಡೆಯ ಒಂದು ತಂಡ ದೆಹಲಿಯಲ್ಲಿ ಮೊಕ್ಕಾಂ ಹೂಡಿ, ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿದೆ. ಈ ನಡುವೆ ಬಿ.ಎಸ್. ಯಡಿಯೂರಪ್ಪ ಕೂಡ ದೆಹಲಿಗೆ ಹಾರಿರೋದು ಕುತೂಹಲ ಮೂಡಿಸಿದೆ. ಹೌದು.. ಭಿನ್ನಮತದ ಬೇಗುದಿ ಬಿಜೆಪಿ ಮನೆಯಲ್ಲಿ ಬೇಯುತ್ತಿದೆ. ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ದೆಹಲಿ ಕದ ತಟ್ಟಿತ್ತೋ, ಹಾಗೆಯೇ ಬಿಜೆಪಿಯ ಬದಲಾವಣೆಯ ಬಿರುಗಾಳಿಯೂ ಬಿಜೆಪಿ ವರಿಷ್ಠರ ಅಂಗಳಕ್ಕೆ ಬಿದ್ದಿದೆ. ತಂಡೋಪತಂಡವಾಗಿ ದೆಹಲಿಗೆ ತೆರಳಿದ್ದ ರೆಬೆಲ್ಸ್ ನಾಯಕರನ್ನ ಭೇಟಿ ಮಾಡುವಲ್ಲಿ ಸಕ್ಸಸ್ ಆಗಿದ್ದಾರೆ. ಇಷ್ಟು ಮಾತ್ರವಲ್ಲ ತಮಗೆ ಯಾರ ವಿರುದ್ಧ ಅಸಮಾಧಾನ ಇದ್ಯೋ ಅಂತವರ ವಿರುದ್ಧ ಸರಣಿ ದೂರು ಕೊಟ್ಟು, ತಕ್ಕ ಶಾಸ್ತಿ ಮಾಡುವಂತೆ ಮನವಿ ಮಾಡಿದೆ.
- Ramesh B Jawalagera
- Updated on: Dec 4, 2025
- 2:49 pm
ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಮುಗಿಬಿದ್ದ ಬಿಜೆಪಿ
ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಳದ ಬಗ್ಗೆ ಉಪಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಮುಗಿಬಿದ್ದಿದೆ. ಈ ಹಿಂದೆ ಇದ್ದ ತಮ್ಮ ಸರ್ಕಾರದ ಮೇಲೆ ಶೇ.40 ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ಗೆ ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.
- Prasanna Hegde
- Updated on: Dec 4, 2025
- 12:35 pm
ಬಿಜೆಪಿ ಪ್ರತ್ಯೇಕ ಬಣಕ್ಕೆ ದೆಹಲೀಲಿ ಅಮಿತ್ ಶಾ ಹೇಳಿದ್ದೇನು? ಕುಮಾರ್ ಬಂಗಾರಪ್ಪ ಏನಂದ್ರು ನೋಡಿ
ಬಿಜೆಪಿ ಪ್ರತ್ಯೇಕ ಬಣ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಆ ಬಗ್ಗೆ ಕುಮಾರ್ ಬಂಗಾರಪ್ಪ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ಬಿಜೆಪಿಗೆ ಅಮಿತ್ ಶಾ ಅವರ ಸೂಚನೆ ಏನಿತ್ತು ಎಂಬುದನ್ನು ತಿಳಿಸಿದ್ದಾರೆ. ಈ ಮಧ್ಯೆ, ರಾಜ್ಯಾಧ್ಯಕ್ಷರ ಬದಲಾವಣೆಗೂ ಭಿನ್ನರ ಬಣ ಹೈಕಮಾಂಡ್ಗೆ ದೂರು ನೀಡಿದೆ ಎಂದು ಮೂಲಗಳು ತಿಳಿಸಿವೆ.
- Mahesha E
- Updated on: Dec 4, 2025
- 11:48 am
ಬೆಳಗಾವಿ ಅಧಿವೇಶನಕ್ಕೆ ಸುವರ್ಣಸೌಧ ಸಜ್ಜು: 12 ಸಾವಿರ ಸಿಬ್ಬಂದಿ, 3 ಸಾವಿರ ರೂಮ್ಗಳು ಬುಕ್
ಡಿಸೆಂಬರ್ 8ರಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿರಲಿದ್ದು, ಅಚ್ಚುಕಟ್ಟಾಗಿ ಅಧಿವೇಶನ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ದೆಹಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ.
- Sahadev Mane
- Updated on: Dec 4, 2025
- 6:23 am
ಡಿ.8ರ ಸಭೆ ಬರಲಾಗಲ್ಲ: ಕಾರಣ ಸಮೇತ ಸಿದ್ದರಾಮಯ್ಯಗೆ ಮರುಪತ್ರ ಬರೆದ ಸಚಿವ ಜೋಶಿ
ಕರ್ನಾಟಕದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಲೆಂದು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಡಿಸೆಂಬರ್ 8ರಂದು ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಸಭೆ ಕರೆದಿದ್ದರು. ಆದ್ರೆ, ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಸಭೆಗೆ ಬರಲಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿಎಂಗೆ ಮರುಪತ್ರ ಬರೆದಿದ್ದಾರೆ. ಹಾಗಾದ್ರೆ, ಪತ್ರದಲ್ಲೇನಿದೆ ಎನ್ನುವ ವಿವರ ಈ ಕೆಳಗಿನಂತಿದೆ.
- Ramesh B Jawalagera
- Updated on: Dec 3, 2025
- 10:13 pm
ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತದ ಹೊಗೆ , ದೆಹಲಿಯಲ್ಲಿ ಮಹತ್ವದ ಬೆಳವಣಿಗೆ
ಕರ್ನಾಟಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸೃಷ್ಟಿಸಿದ್ದ ಕುರ್ಚಿ ಕಾಳಗ ಸದ್ಯಕ್ಕೆ ಶಾಂತವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪರಸ್ಪರ ಅವರ ಮನೆಗೆ ಇವರು, ಇವರ ಮನೆಗೆ ಅವರು ಹೋಗಿ ತಿಂಡಿ ತಿಂದು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಹೀಗಾಗಿ ಕೈ ಬಿಕ್ಕಟ್ಟು ಶಾಂತವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಇಷ್ಟು ದಿನ ಬೂದಿ ಮುಚ್ಚಿದ ಕೆಂಡದಂತಿದ್ದ ಭಿನ್ನಮತ ಮತ್ತೆ ಹೊಗೆಯಾಡಲು ಶುರುವಾಗಿದೆ.
- Ramesh B Jawalagera
- Updated on: Dec 2, 2025
- 10:50 pm
ಕರ್ನಾಟಕಕ್ಕೆ 6862 ಎಲೆಕ್ಟ್ರಿಕ್ ಬಸ್: ಪರಿಸರ ಸ್ನೇಹಿ ವಾತಾವರಣಕ್ಕೆ ಮೋದಿ ಸರ್ಕಾರ ಬದ್ಧ ಎಂದ ತೇಜಸ್ವಿ ಸೂರ್ಯ
ಫೇಮ್ (FAME) ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ಬಸ್ಗಳ ನಿಯೋಜನೆ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರು ಸದನದಲ್ಲಿ ಧ್ವನಿ ಎತ್ತಿದ್ದು, ಇದಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ರಾಜ್ಯ ಖಾತೆ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ಅವರು ಉತ್ತರ ನೀಡಿದ್ದಾರೆ. ಹಾಗಾದ್ರೆ, ಫೇಮ್-2 ಯೋಜನೆಯಡಿ ಕರ್ನಾಟಕಕ್ಕೆ ಎಷ್ಟು ಎಲೆಕ್ಟ್ರಿಕ್ ಬಸ್ಗಳನ್ನು ನಿಯೋಜಿಸಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ.
- Ramesh B Jawalagera
- Updated on: Dec 2, 2025
- 10:26 pm