BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ಇನ್ನೂ ಹೆಚ್ಚು ಓದಿನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ? ವಿಜಯೇಂದ್ರ ಹೇಳಿದ್ದೇನು?
ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕೆಂದು ವಿಪಕ್ಷ ಬಿಜೆಪಿ ಆಗ್ರಹಿಸುತ್ತಿದ್ದು, ಈ ಸಂಬಂಧ ರಾಜೀನಾಮೆಗೆ ಒತ್ತಾಯಿ ಈಗಾಲಗೇ ಅಧಿವೇಶನದಲ್ಲೂ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ಮಾಡಿ ಗಮನಸೆಳೆದಿದ್ದು, ಇದೀಗ ರಾಯಚೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ಮಾಡಲು ತೀರ್ಮಾನಿಸಿದೆ. ಇದೇ ಸೆಪ್ಟೆಂಬರ್ 1ರಂದು ರಾಯಚೂರಿನ ಲಿಂಗಸ್ಗೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಯಲಿದೆ. ಇದರ ಮಧ್ಯೆ ಇತ್ತ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ನಾಗೇಂದ್ರ ರಾಜೀನಾಮೆ ನೀಡಿದರೆ ಬಿಜೆಪಿ ಪಾದಾಯತ್ರೆ ಕಥೆ ಏನು ಎನ್ನುವ ಪ್ರಶ್ನೆ ಎದುರಾಗಿದ್ದು, ಇದೀಗ ಇದಕ್ಕೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉತ್ತರಿಸಿದ್ದಾರೆ.
- Kiran Haniyadka
- Updated on: Aug 26, 2026
- 2:57 pm
ಕರ್ನಾಟಕದಲ್ಲಿ RSS ವಿರುದ್ಧ ಯಾವುದೇ ಕೇಸ್ ಇಲ್ಲ: ಗೃಹ ಸಚಿವ ಖರ್ಗೆ ಸ್ಪಷ್ಟನೆ
ಆರ್ ಎಸ್ ಎಸ್ ಸಂಘಟನೆಯ ನೋಂದಣಿ ಹಾಗೂ ಕಾನೂನು ಮಾನ್ಯತೆಯ ಕುರಿತಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರಂತರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದಾರೆ. ಈ ಹಿಂದೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿದ್ದಾಗಲೂ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಇದೀಗ ರಾಜ್ಯದ ಗೃಹ ಸಚಿವರಾಗಿದ್ದು, ಸಂಘದ ನೋಂದಣಿ ವಿಚಾರವಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಸದ್ಯ ಇದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುಚರ್ಚಿತ ವಿಚಾರವಾಗಿದೆ. ಇದರ ಮಧ್ಯೆ ಕರ್ನಾಟಕದಲ್ಲಿ ಆರ್ಎಸ್ಎಸ್ ವಿರುದ್ಧದ ಒಂದೇ ಒಂದು ಕೇಸು ಇಲ್ಲ ಎನ್ನುವುದು ಬಹಿರಂಗವಾಗಿದೆ.
- Ramesh B Jawalagera
- Updated on: Aug 25, 2026
- 8:14 pm
ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟಕ್ಕೆ ಮುಹೂರ್ತ ನಿಗದಿ: ಎಲ್ಲಿಂದ? ಎಲ್ಲಿಯವರೆಗೆ ಪಾದಯಾತ್ರೆ?
ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಬೃಹತ್ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ನವರು ಸಹ ಬೆಂಬಲ ನೀಡಲಿದ್ದಾರೆ ಎಂದವರು ತಿಳಿಸಿದ್ದಾರೆ.
- Kiran Haniyadka
- Updated on: Aug 25, 2026
- 6:37 pm
ಕರ್ನಾಟಕ ಉದ್ಯಾನವನ ವಿಧೇಯಕ ವಾಪಸ್ ಕಳಿಸಲು ರಾಜ್ಯಪಾಲರಿಗೆ ತೇಜಸ್ವಿ ಸೂರ್ಯ ಮನವಿ
ಕರ್ನಾಟಕ ಉದ್ಯಾನವನಗಳ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. ಪಾರ್ಕ್ನ ಶೇ 5ರಷ್ಟು ಭೂಮಿ ಪರಭಾರೆ ಮಾಡಲು ಅವಕಾಶ ನೀಡುವ ಈ ವಿಧೇಯಕವನ್ನು ಸರ್ಕಾರಕ್ಕೆ ಮರುಪರಿಶೀಲನೆಗಾಗಿ ಹಿಂದಿರುಗಿಸುವಂತೆ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ವಿಪಕ್ಷಗಳು ಕೂಡ ಈ ವಿಧೇಯಕವನ್ನು ತೀವ್ರವಾಗಿ ವಿರೋಧಿಸುತ್ತಿವೆ.
- Ganapathi Sharma
- Updated on: Aug 25, 2026
- 2:49 pm
ಪಾರ್ಕ್ಗಳ ಶೇ.5ರಷ್ಟು ಭೂಮಿ ಪರಭಾರೆಗೆ ಅವಕಾಶ ಮಾಡಿಕೊಡುವ ವಿಧೇಯಕ ಅಂಗೀಕಾರ: ಮರುಪರಿಶೀಲನೆಗೆ ಸೂಚಿಸುವಂತೆ ರಾಜ್ಯಪಾಲರಿಗೆ ಸೂರ್ಯ ಪತ್ರ
ವಿಧಾನಮಂಡಲದಲ್ಲಿ ಕರ್ನಾಟಕ ಉದ್ಯಾನವನಗಳ (ತಿದ್ದುಪಡಿ) ವಿಧೇಯಕ ಅಂಗೀಕಾರಗೊಂಡಿದ್ದು, ಉದ್ಯಾನವನಗಳ ಶೇ. 5ರಷ್ಟು ಭೂಮಿಯನ್ನು ಇತರ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸಿದೆ. ಆದರೆ ಸಂಸದ ತೇಜಸ್ವಿ ಸೂರ್ಯ ರಾಜ್ಯಪಾಲರಿಗೆ ಪತ್ರ ಬರೆದು ವಿಧೇಯಕವನ್ನು ಮರುಪರಿಶೀಲಿಸುವಂತೆ ಕೋರಿದ್ದಾರೆ. ಹಸಿರು ಪ್ರದೇಶಗಳ ರಕ್ಷಣೆ ನಮ್ಮ ಹೋರಾಟವಾಗಿದೆ.
- Kiran Haniyadka
- Updated on: Aug 24, 2026
- 10:53 pm
‘ತೆಲಂಗಾಣಕ್ಕೆ ಮಾಡಿದ ಅವಮಾನ’; ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಿಸಿದ ಮೋದಿ ಸರ್ಕಾರದ ವಿರುದ್ಧ ಸಿಎಂ ರೇವಂತ್ ರೆಡ್ಡಿ ಆಕ್ರೋಶ
ಇಂಗ್ಲೆಂಡ್ ಮತ್ತು ಅಮೆರಿಕ ಪ್ರವಾಸಕ್ಕೆ ಹೊರಟಿದ್ದ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಅಧಿಕೃತ ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು. ಹೀಗಾಗಿ, ಇಂಗ್ಲೆಂಡ್ ಪ್ರವಾಸ ಮುಗಿಸಿ ರೇವಂತ್ ರೆಡ್ಡಿ ಹೈದರಾಬಾದ್ಗೆ ವಾಪಾಸ್ ಬಂದಿದ್ದರು. ತಮ್ಮ ಅಮೆರಿಕ ಪ್ರವಾಸಕ್ಕೆ ರಾಜಕೀಯ ಅನುಮತಿ ನಿರಾಕರಿಸಲ್ಪಟ್ಟ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು "ತೆಲಂಗಾಣಕ್ಕೆ ಮಾಡಿದ ಅವಮಾನ" ಎಂದು ಆಕ್ರೋಶ ಹೊರಹಾಕಿದ್ದಾರೆ.
- Sushma Chakre
- Updated on: Aug 24, 2026
- 10:47 pm
ಮೂರು ದಿನ ಮೊದಲೇ ವಿಧಾನಮಂಡಲ ಅಧಿವೇಶನಕ್ಕೆ ತೆರೆ: ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆ ನಡುವೆಯೇ, ಕರ್ನಾಟಕ ವಿಧಾನಮಂಡಲದ ಮಳೆಗಾಲದ ಅಧಿವೇಶನವನ್ನು ನಿಗದಿತ ಸಮಯಕ್ಕಿಂತ 3 ದಿನ ಮುಂಚಿತವಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದು, 20-30 ವರ್ಷಗಳಲ್ಲಿ ಮೊದಲ ಬಾರಿ ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ ಎಂದಿದ್ದಾರೆ.
- Kiran Haniyadka
- Updated on: Aug 24, 2026
- 7:22 pm
ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ಆರೋಪ: ವಿಧಾನಸಭೆ ಸ್ಪೀಕರ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ
ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ವಿಪಕ್ಷ ನಾಯಕರು ಹಾಗೂ ಶಾಸಕರ ಹೇಳಿಕೆ, ವೀಡಿಯೋಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡದೆ ವಾರ್ತಾ ಇಲಾಖೆ ತಾರತಮ್ಯ ಮಾಡುತ್ತಿದೆ ಎಂದು ಆರ್. ಅಶೋಕ್ ಆರೋಪಿಸಿದ್ದು, ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಸ್ಪೀಕರ್ಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ವಾರ್ತಾ ಇಲಾಖೆಗೆ ನಿರ್ದೇಶನ ನೀಡಿ ಎಂದವರು ಆಗ್ರಹಿಸಿದ್ದಾರೆ.
- Kiran HV
- Updated on: Aug 24, 2026
- 1:01 pm
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ: ಬಿಜೆಪಿ ಸದಸ್ಯರಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಭಾಪತಿ ಸಲೀಂ ಅಹ್ಮದ್
ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಈ ವೇಳೆ ಸಭಾಪತಿ ಸಲೀಂ ಅಹ್ಮದ್ ಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಸದಸ್ಯರಿಗೆ ಹಾಗೂ ತಡವಾಗಿ ಬರುವ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.
- Prasanna Gaonkar
- Updated on: Aug 24, 2026
- 12:12 pm
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ವಿಕಾಸಸೌಧದ ಗೇಟ್ ಬಳಿ ಭಾರಿ ಹೈಡ್ರಾಮಾ
BJP Protest: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದೆ. ಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಮುತ್ತಿಗೆ ಯತ್ನ ನಡೆದಿದ್ದು, ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆದಿದೆ.
- Kiran Haniyadka
- Updated on: Aug 24, 2026
- 11:31 am
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸಂಗ್ರಾಮ: 3 ದಿಕ್ಕಿನಲ್ಲೂ ವಿಧಾನಸೌಧ ಮುತ್ತಿಗೆಗೆ ಪ್ಲಾನ್
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ನಡೆಯುತ್ತಿರುವ ಈ ಹೋರಾಟ ನಿರ್ಣಾಯಕ ಹಂತ ತಲುಪಿದೆ. ಇಂದು ಫ್ರೀಡಂ ಪಾರ್ಕ್ನಿಂದ ವಿಧಾನಸೌಧಕ್ಕೆ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಬಿಜೆಪಿ ಯೋಜಿಸಿದೆ. ಈ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿದೆ.
- Ganapathi Sharma
- Updated on: Aug 24, 2026
- 9:11 am
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ದೆಹಲಿಯ ಐಟಿಓ ಪ್ರದೇಶದಲ್ಲಿ ಭಾನುವಾರ ರಾತ್ರಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತಕ್ಕೀಡಾಗಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಮತ್ತು ಆಪ್ ಶಾಸಕ ಅನಿಲ್ ಝಾ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಡಿವೈಡರ್ಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡ ಸ್ವಿಫ್ಟ್ ಕಾರು ಇನ್ನೋವಾಗೆ ಡಿಕ್ಕಿ ಹೊಡೆದಿತ್ತು.
- Ganapathi Sharma
- Updated on: Aug 24, 2026
- 8:26 am