BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ
ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತದಲ್ಲಿ ಇಂಧನ ದರ ಏರಿಕೆ (+3.2%) ವಿಶ್ವದಲ್ಲೇ ಅತ್ಯಂತ ಕನಿಷ್ಠವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿಕೊಂಡಿದ್ದಾರೆ. ಅಮೆರಿಕ, ಯುಕೆಗಿಂತ ಭಾರತದಲ್ಲಿ ಕಡಿಮೆ ದರ ಹೆಚ್ಚಳವಾಗಿದ್ದು, ಯಾವುದೇ ಜಾಗತಿಕ ಒತ್ತಡವಿಲ್ಲದಿದ್ದ ಸಂದರ್ಭದಲ್ಲೂ ಈ ಹಿಂದೆ ಕರ್ನಾಟಕದಲ್ಲಿ ಇಂಧನ ತೆರಿಗೆ ಹೆಚ್ಚಿಸಿದ್ದರ ಬಗ್ಗೆ ಗಮನ ಸೆಳೆದಿದ್ದಾರೆ.
- Ganapathi Sharma
- Updated on: May 16, 2026
- 9:15 am
ಕರ್ನಾಟಕದಲ್ಲಿ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ, ಯಾವುವು-ಏಕೆ?
ಕರ್ನಾಟಕದಲ್ಲಿ ಕಳೆದ ತಿಂಗಳು ಅಷ್ಟೇ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಚನಾವಣೆ ನಡೆದಿದ್ದು, ಎರಡೂ ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆದ್ದು ಬೀಗಿದೆ. ಇದರ ಮಧ್ಯೆ ಇದೀಗ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದ್ದು, ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಹಾಗಾದ್ರೆ, ಬೈ ಎಲೆಕ್ಷನ್ ನಡೆಯುವ ಆ ಎರಡು ಕ್ಷೇತ್ರಗಳಾವುವು? ಯಾರಿಂದ ತೆರವಾಗಿವೆ ಎನ್ನುವ ಮಾಹಿತಿ ಇಲ್ಲಿದೆ.
- Ramesh B Jawalagera
- Updated on: May 14, 2026
- 8:50 pm
ಕೇಂದ್ರೀಯ ವಿದ್ಯಾಲಯಗಳ ವಸ್ತ್ರಸಂಹಿತೆ ವಿರೋಧಿಸಬೇಕಲ್ವಾ? ಹಿಜಾಬ್ ವಿರೋಧಿಸಿದ ಬಿಜೆಪಿಗರಿಗೆ ಸಿಎಂ ತಿರುಗೇಟು
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಅನುಮತಿ ನೀಡಿದೆ. ಇದು ವಿಪಕ್ಷ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆಕ್ರೊಶಕ್ಕೆ ಕಾರಣವಾಗಿದೆ. ಇದರಿಂದ ರಾಜ್ಯ ಸರ್ಕಾರ ಗಾಯವನ್ನು ಕೆರೆದು ಹುಣ್ಣು ಮಾಡಿಕೊಂಡಿದ್ದು, ಸಾಮಾಜಿಕ ಸಾಮರಸ್ಯಕ್ಕೆ ಕೊಳ್ಳಿಯಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
- Ramesh B Jawalagera
- Updated on: May 14, 2026
- 7:13 pm
ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟಿದೆ. ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ಪ್ರಕರಣ ಬಾಕಿ ಇರುವಾಗಲೇ ನಿಷೇಧ ವಾಪಸ್ ಪಡೆದಿರುವುದು ನ್ಯಾಯಾಂಗಕ್ಕೆ ಅವಮಾನ. ಸಮವಸ್ತ್ರ ಸಂಹಿತೆಯ ಉದ್ದೇಶ ಸಮಾನತೆ ಕಾಪಾಡುವುದು, ಆದರೆ ಸರ್ಕಾರ ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತಿದೆ. ಈ ವಿಭಜಕ ನೀತಿಯಿಂದ ಶೈಕ್ಷಣಿಕ ವಾತಾವರಣ ಹಾಳಾಗುತ್ತಿದ್ದು, ಶಾಲಾ ಶಿಸ್ತಿಗೆ ಧಕ್ಕೆ ತರುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ.
- Gangadhar Saboji
- Updated on: May 14, 2026
- 6:03 pm
ಆದಾಯ 11 ಕೋಟಿ, ಖರ್ಚು 60 ಕೋಟಿ ರೂ; ರಾಹುಲ್ ಗಾಂಧಿ ವಿದೇಶೀ ಪ್ರವಾಸಗಳಿಗೆ ಫಂಡಿಂಗ್ ಯಾರದು? ಬಿಜೆಪಿ ಪ್ರಶ್ನೆ
Rahul Gandhi Foreign Trips: ಬಿಜೆಪಿ ಸಂಸದ ಸಂಬಿತ್ ಪಾತ್ರ ಅವರು ರಾಹುಲ್ ಗಾಂಧಿ ಅವರ ವಿದೇಶಿ ಪ್ರವಾಸಗಳ ವೆಚ್ಚ ಮತ್ತು ಘೋಷಿತ ಆದಾಯದ ನಡುವೆ ಭಾರಿ ವ್ಯತ್ಯಾಸವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 2004-2026ರ ಅವಧಿಯಲ್ಲಿ 54 ವಿದೇಶಿ ಪ್ರವಾಸಗಳಿಗೆ ಸುಮಾರು ₹60 ಕೋಟಿ ವೆಚ್ಚವಾಗಿದ್ದು, ಅವರ ಘೋಷಿತ ಆದಾಯ ಕೇವಲ ₹11 ಕೋಟಿ ಎಂದು ಬಿಜೆಪಿ ವಕ್ತಾರರು ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. FCRA ನಿಯಮ ಉಲ್ಲಂಘನೆ ಮತ್ತು ಅಘೋಷಿತ ಪ್ರವಾಸಗಳ ಬಗ್ಗೆಯೂ ಪ್ರಶ್ನಿಸಿದ್ದಾರೆ.
- Vijaya Sarathy SN
- Updated on: May 14, 2026
- 1:02 pm
ಸಮವಸ್ತ್ರ ಸಮರ: ವಿಪಕ್ಷದ ವಿರೋಧದ ನಡುವೆಯೂ ಸರ್ಕಾರದ ನಡೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ
ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಸೇರಿದಂತೆ ಧಾರ್ಮಿಕ ವಸ್ತ್ರಗಳಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಇದು ರಾಜ್ಯದಲ್ಲಿ ಮತ್ತೊಂದು ಸುತ್ತಿನ ಸಮವಸ್ತ್ರ ಸಮರಕ್ಕೆ ಕಾರಣವಾಗಿದೆ. ವಿಪಕ್ಷಗಳು ಸರ್ಕಾರದ ಕ್ರಮವನ್ನು ನ್ಯಾಯಾಲಯದ ಆದೇಶಕ್ಕೆ ವಿರುದ್ಧ ಎಂದು ಟೀಕಿಸಿದರೆ, ಸಿಎಂ ಸಿದ್ದರಾಮಯ್ಯ ಹಿಜಾಬ್ ಮಾತ್ರವಲ್ಲದೆ ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.
- Prasanna Hegde
- Updated on: May 14, 2026
- 12:56 pm
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್ ಲೀಡರ್ ಎಂದ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ
ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಪ್ರಧಾನಿ ನರೇಂದ್ರ ಮೋದಿಯನ್ನು ಮಾಸ್ ಲೀಡರ್ ಎಂದು ಕರೆದಿದ್ದಾರೆ. ಇಂದಿರಾ ಗಾಂಧಿ ಅವರ ಬಳಿಕ ಮೋದಿಯವರೇ ಜನಪ್ರಿಯ ನಾಯಕ. ನಾನೇನು ಅವರನ್ನು ಹೊಗಳುತ್ತಿಲ್ಲ ಇರುವ ವಾಸ್ತವಾಂಶವನ್ನು ಹೇಳುತ್ತಿದ್ದೇನೆ ಎಂದವರು ತಿಳಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿ ಸಿಎಂ ಕುರ್ಚಿ ಕಿತ್ತಾಟ ಬಗ್ಗೆ ಮೋದಿ ಹೇಳಿಕೆ ಸಂಬಂಧವೂ ಅವರು ಕಿಡಿ ಕಾರಿದ್ದಾರೆ.
- Jagadisha B
- Updated on: May 14, 2026
- 11:33 am
ಕರ್ನಾಟಕದಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ: ಸರ್ಕಾರದ ನಡೆಗೆ ಸಿಡಿದೆದ್ದ ವಿಪಕ್ಷ ಬಿಜೆಪಿ
2022ರಲ್ಲಿ ಬಿಜೆಪಿ ಸರ್ಕಾರದ ಆದೇಶವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆದುಕೊಂಡಿದ್ದು, ಶಾಲಾ-ಕಾಲೇಜುಗಳಲ್ಲಿ ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್, ಪೇಟ ಸೇರಿದಂತೆ ನಿಗದಿತ ಸಮವಸ್ತ್ರದೊಂದಿಗೆ ಧಾರ್ಮಿಕ ವಸ್ತ್ರಗಳನ್ನು ಧರಿಸಲು ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ. ಇದರಿಂದ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಸಿಡಿಮಿಡಿಗೊಂಡಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಬಿದ್ದಿದ್ದಾರೆ.
- Ramesh B Jawalagera
- Updated on: May 13, 2026
- 10:56 pm
ಹಿಜಾಬ್ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಮಧುಬಂಗಾರಪ್ಪ ಹೇಳಿದ್ದೇನು ಗೊತ್ತಾ?
ಕರ್ನಾಟಕ ಸರ್ಕಾರವು 2022ರ ಹಿಜಾಬ್ ನಿಷೇಧ ಆದೇಶವನ್ನು ಅಧಿಕೃತವಾಗಿ ಹಿಂಪಡೆದಿದೆ. ಹೊಸ ಮಾರ್ಗಸೂಚಿಯ ಅನ್ವಯ, ವಿದ್ಯಾರ್ಥಿನಿಯರು ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ನೀಡಲಾಗಿದ್ದು, ಈ ನಿಯಮವು ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಅನ್ವಯವಾಗಲಿದೆ. ಇಂದು (ಮೇ 13) ಹೊಸ ವಸ್ತ್ರಸಂಹಿತೆ ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದ್ರೆ, ಸರ್ಕಾರದ ಆದೇಶದಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇದೆಯೋ, ಇಲ್ಲವೋ ಎಂದು ಸ್ಪಷ್ಟತೆ ಇಲ್ಲ. ಹೀಗಾಗಿ ಗೊಂದಲವಾಗಿದ್ದು, ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
- Ramesh B Jawalagera
- Updated on: May 13, 2026
- 9:32 pm
ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ
ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿರುವ ಸುವೇಂದು ಅಧಿಕಾರಿ 2 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಎರಡೂ ಕಡೆ ಅವರು ಗೆಲುವು ಸಾಧಿಸಿದ್ದರು. ಇದೀಗ ಒಂದು ಕ್ಷೇತ್ರವನ್ನು ಅವರು ಬಿಡಬೇಕಾಗಿರುವುದರಿಂದಾಗಿ ಭವಾನಿಪುರ ಸ್ಥಾನವನ್ನು ಉಳಿಸಿಕೊಳ್ಳಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನಂದಿಗ್ರಾಮದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಿ ತಮ್ಮ ಭವಾನಿಪುರ ಭದ್ರಕೋಟೆಯಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸುವೇಂದು ಅಧಿಕಾರಿ 15,105 ಮತಗಳ ಅಂತರದಿಂದ ಸೋಲಿಸಿದ್ದರು.
- Sushma Chakre
- Updated on: May 13, 2026
- 3:25 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: 45 ಮಂದಿ ವಶಕ್ಕೆ ಪಡೆದು ವಿಚಾರಣೆ ಹಾಗೂ ಈ ಹೊತ್ತಿನ ಪ್ರಮುಖ ಸುದ್ದಿಗಳು
ನೀಟ್ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 45 ಮಂದಿಯನ್ನು ರಾಜಸ್ಥಾನ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ತನಿಖೆಯ ಹೊಣೆ ಸಿಬಿಐಗೆ ವಹಿಸಲಾಗುತ್ತಿದೆ. ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರೆ, ತಮಿಳುನಾಡು ಸಿಎಂ ವಿಜಯ್ 717 ಮದ್ಯದ ಅಂಗಡಿಗಳ ಬಂದ್ಗೆ ಆದೇಶಿಸಿದ್ದಾರೆ. ಈ ಹೊತ್ತಿನ ಪ್ರಮುಖ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
- Ganapathi Sharma
- Updated on: May 12, 2026
- 2:43 pm
ಆಡಳಿತ ವೈಫಲ್ಯ: ಪ್ರಧಾನಿ ಮೋದಿಯ ಟೀಕಿಸಿದ ಸಿಎಂ ಸಿದ್ದರಾಮಯ್ಯಗೆ ಅಂಕಿಅಂಶ ಸಮೇತ ತಿರುಗೇಟು ಕೊಟ್ಟ ಪ್ರಲ್ಹಾದ್ ಜೋಶಿ
ಪ್ರಧಾನಿ ಮೋದಿ ಅವರ ಬೆಂಗಳೂರು ಭಾಷಣವನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಠಿಣ ಶಬ್ದಗಳಲ್ಲಿ ತಿರುಗೇಟು ನೀಡಿದ್ದಾರೆ. ಕರ್ನಾಟಕವನ್ನು ಸಾಲದ ಕೂಪಕ್ಕೆ ತಳ್ಳಿರುವ ಕಾಂಗ್ರೆಸ್ ಸರ್ಕಾರ, ಬೆಲೆ ಏರಿಕೆಯ ಮೂಲಕ ಜನರಿಗೆ ದ್ರೋಹ ಮಾಡುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ.
- Ganapathi Sharma
- Updated on: May 12, 2026
- 1:09 pm