BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ಬೆಂಗಳೂರು ಟನಲ್ ರಸ್ತೆಗೆ ಹೆಚ್ಚಿನ ಮೊತ್ತಕ್ಕೆ ಅದಾನಿ ಗ್ರೂಪ್ ಬಿಡ್, ಧರ್ಮ ಸಂಕಟಕ್ಕೆ ಸಿಲುಕಿದ ಸಿದ್ದರಾಮಯ್ಯ ಸರ್ಕಾರ
ರಾಹುಲ್ ಗಾಂಧಿಯಿಂದ ಹಿಡಿದು ಕಾಂಗ್ರೆಸ್ ನಾಯಕರು ಸದಾ ಅದಾನಿ ಕುರಿತು ಟೀಕೆ ಮಾಡುತ್ತಲೇ ಇದ್ದಾರೆ. ಇದೀಗ ಅದೇ ಅದಾನಿ ಕಂಪನಿ ಬೆಂಗಳೂರು ಸುರಂಗ ಮಾರ್ಗ ಟೆಂಡರ್ ನಲ್ಲಿ ಮೇಲುಗೈ ಸಾಧಿಸಿ, ಇತರೆ ಎಲ್ಲಾ ಕಂಪನಿಗಳು ಕೋಟ್ ಮಾಡಿದ್ದಕ್ಕಿಂತ ಕಡಿಮೆ ಮೊತ್ತ ಬಿಡ್ ಮಾಡಿ ಟೆಂಡರ್ ಪಡೆಯುವ ಮುಂಚೂಣಿಯಲ್ಲಿದೆ. ಹೀಗಾಗಿ ರಾಷ್ಟ್ರಮಟ್ಟದಲ್ಲಿ ಅದಾನಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್, ಇದೀಗ ಅದೇ ಅದಾನಿ ಸಮೂಹಕ್ಕೆ ಟೆಂಡರ್ ನೀಡುತ್ತಾ ಎನ್ನುವ ಚರ್ಚೆ ಶುರುವಾಗಿದೆ.
- Kiran Surya
- Updated on: Dec 22, 2025
- 9:51 pm
ಕೋಳಿ ಅಂಕ: ಕಾಂಗ್ರೆಸ್ ಶಾಸಕ ಆಯ್ತು ಈಗ ಬಿಜೆಪಿ ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಸೇರಿ 27 ಜನರ ವಿರುದ್ಧ ಕೇಸ್
ಬಂಟ್ವಾಳದ ವಿಟ್ಲ ಸಮೀಪದ ಕೇಪು ಗ್ರಾಮದ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿ 27 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಶಾಸಕ ಸೇರಿ 17 ಮಂದಿ ವಿರುದ್ಧ ಇದೇ ವಿಚಾರಕ್ಕೆ ಎಫ್ಐಆರ್ ಆಗಿತ್ತು.
- Ashok
- Updated on: Dec 22, 2025
- 7:42 am
ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ಲಕ್ಷ್ಮೀ ಬರ್ತಾಳೆ
ವಿಪಕ್ಷ ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಬರುವ ಶನಿವಾರದೊಳಗೆ 24ನೇ ಕಂತಿನ ದುಡ್ಡು ಫಲಾನುಭವಿಗಳ ಖಾತೆಗೆ ಸೇರಲಿ.ಇದು ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪಂಚ ಗ್ಯಾರಂಟಿಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಗ್ರಹಣ ಹಿಡಿದಿತ್ತು.
- Ramesh B Jawalagera
- Updated on: Dec 21, 2025
- 9:19 pm
ಅಸ್ಸಾಮ್ನಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನೇ ಹೊಣೆ ಮಾಡುವುದೇಕೆ? ಖರ್ಗೆ ಪ್ರಶ್ನೆ
Mallikarjuna Kharge lashes out against PM Modi:ಅಸ್ಸಾಂ ಹಾಗೂ ಈಶಾನ್ಯ ಪ್ರದೇಶಗಳಲ್ಲಿ ನುಸುಳುಕೋರರನ್ನು ಒಳಗೆ ಬಿಟ್ಟು ಅಲ್ಲಿ ಅಭದ್ರತೆಯ ವಾತಾವರಣ ನಿರ್ಮಾಣವಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಮೋದಿ ಮಾಡಿದ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ಕೇಂದ್ರದಲ್ಲಿ ಹಾಗೂ ಅಸ್ಸಾಮ್ನಲ್ಲಿ ಬಿಜೆಪಿ ಸರ್ಕಾರ ಇದೆ. ಆದರೂ ಕೂಡ ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ಸನೇ ಯಾಕೆ ದೂಷಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದಾರೆ.
- Vijaya Sarathy SN
- Updated on: Dec 21, 2025
- 8:47 pm
ನೀವೇ ಎಂಎಲ್ಸಿ ಅಂತ ಗ್ಯಾರಂಟಿ ಏನು? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ನೀವು ಎಂಎಲ್ಸಿ ಎನ್ನುವುದನ್ನು ಏನು ಗ್ಯಾರಂಟಿ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ ಅವರನ್ನು ಟೋಲ್ ಸಿಬ್ಬಂದಿ ಪ್ರಶ್ನಿಸಿದ್ದು, ಬರೋಬ್ಬರಿ 1 ಗಂಟೆಗಳ ಕಾಲ ತಡೆ ನಿಲ್ಲಿಸಿದ್ದಾನೆ. ವಿಜಯಪುರ ಹೊರವಲಯದಲ್ಲಿರುವ ಟೋಲ್ ನಲ್ಲಿ ಈ ಘಟನೆ ನಡೆದಿದೆ. ನಾಳೆ ಕೆಡಿಪಿ ಸಭೆ ಹಿನ್ನೆಲೆಯಲ್ಲಿ ಕೇಶವಪ್ರಸಾದ್ ಅವರು ಇಂದು (ಡಿಸೆಂಬರ್ 21) ವಿಜಯಪುರಕ್ಕೆ ಹೊರಟ್ಟಿದ್ದರು. ಮಾರ್ಗಮಧ್ಯೆ ಟೋಲ್ ಸಿಬ್ಬಂದಿ ಕಾರು ಬಿಡದೇ ನಿಲ್ಲಿಸಿದ್ದಾನೆ.
- Ramesh B Jawalagera
- Updated on: Dec 21, 2025
- 5:05 pm
ಮಹಾರಾಷ್ಟ್ರ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿಗೆ ಅಮೋಘ ಮುನ್ನಡೆ
Maharashtra urban local bodies election results 2025: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದ ಬಿಜೆಪಿ ನೇತೃತ್ವದ ಮಹಾಯುತಿ ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಗೆಲುವು ಪಡೆಯುತ್ತಿದೆ. ಒಟ್ಟು 288 ಸ್ಥಳೀಯ ಸಂಸ್ಥೆಗಳಲ್ಲಿ 214ಯಲ್ಲಿ ಮಹಾಯುತಿ ಮುನ್ನಡೆ ಪಡೆದಿದೆ. 6,859 ಕ್ಷೇತ್ರಗಳಲ್ಲಿ ಮಹಾಯುತಿಗೆ ಹತ್ತಿರಹತ್ತಿರ 4,000 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿದೆ.
- Vijaya Sarathy SN
- Updated on: Dec 21, 2025
- 2:37 pm
ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ
ಕೇಂದ್ರ ಸರ್ಕಾರ ಹಾಗೂ ಕರ್ನಾಟಕದ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಟೀಕಿಸಿದ್ದಾರೆ. ಅಸಮರ್ಥರನ್ನು ಅಸಮರ್ಥ ಎನ್ನದೆ ಜಗದೇಕವೀರ ಎನ್ನಬೇಕೆ? ಎಂದು ಲೇವಡಿಯನ್ನೂ ಮಾಡಿದ್ದಾರೆ. ಬಾಂಗ್ಲಾ ವಲಸಿಗರ ಬಗ್ಗೆ ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುತ್ತಿರುವುದಕ್ಕೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Sushma Chakre
- Updated on: Dec 20, 2025
- 8:49 pm
ಬಿಕ್ಲು ಶಿವ ಕೊಲೆ ಕೇಸ್: ಬೈರತಿ ಬಸವರಾಜ್ಗಾಗಿ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ನಾಪತ್ತೆಯಾಗಿದ್ದಾರೆ. ಸದ್ಯ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್ಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆಯಿದೆ.
- Shivaprasad B
- Updated on: Dec 20, 2025
- 6:53 pm
ಕಲಬುರಗಿ: ಬಿಜೆಪಿ ಕಾರ್ಯಕರ್ತನ ಮನೆಯಲ್ಲೇ ಪಕ್ಷದ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಕಲಬುರಗಿ ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಮನೆಯ ಆವರಣದಲ್ಲೇ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣ ಸಂಬಂಧ ಫರಹತಾಬಾದ್ ಪೊಲೀಸರು ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಘಟನೆಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
- Dattatraya Patil
- Updated on: Dec 20, 2025
- 2:34 pm
ಅದು ನನಗೆ ಗೊತ್ತಿದೆ: ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಅಧಿವೇಶನ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು, 2024ರ ಫೆಬ್ರವರಿ, ಮಾರ್ಚ್ ತಿಂಗಳ ಹಣ ಹಾಕಿಲ್ಲ. ಅದು ನಿಜ ನನಗೆ ಗೊತ್ತಿದೆ. ಆದ್ರೆ ಮಾಹಿತಿ ಕೊರತೆಯಿಂದ ಕಣ್ತಪ್ಪಿನಿಂದ ಸಚಿವರು ಕೊಟ್ಬಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಅದನ್ನ ಸಚಿವರು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸೌಜನ್ಯಯುತವಾಗಿ ಒಪ್ಪಿಕೊಂಡೊದ್ದಾರೆ. ಅದನ್ನು ವಿರೋಧ ಪಕ್ಷದವರು ಅರ್ಥ ಮಾಡಿಕೊಳ್ಳಬೇಕು ಎಂದರು.
- Ramesh B Jawalagera
- Updated on: Dec 19, 2025
- 8:35 pm
ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕ ಕುರಿತ ಚರ್ಚೆ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದರು. ಸದನದಲ್ಲಿ ಯತ್ನಾಳ್ ಮಾತಿನ ದಾಟಿಯ ವಿಡಿಯೋ ಇಲ್ಲಿದೆ.
- Ganapathi Sharma
- Updated on: Dec 19, 2025
- 12:53 pm
ಕರಾವಳಿಗರು ಬೆಂಕಿ ಹಚ್ಚೋರು ಎಂದ ಸಚಿವ ಭೈರತಿ ಸುರೇಶ್ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ಸದಸ್ಯರ ತೀವ್ರ ವಿರೋಧ ಮತ್ತು ಪ್ರತಿಭಟನೆ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಇಂದು ಅಂಗೀಕಾರಗೊಂಡಿತು. ಇದರ ನಡುವೆ ಸಚಿವ ಭೈರತಿ ಸುರೇಶ್ 'ನೀವು ಕರಾವಳಿಯವರು ಬೆಂಕಿ ಹಚ್ಚುವವರು' ಎಂಬ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದು, ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ.
- Ramesh B Jawalagera
- Updated on: Dec 18, 2025
- 10:29 pm