
BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ರಮೇಶ್ ಜಾರಕಿಹೊಳಿಗೆ ನಿನ್ನೆಯೇ ಫೋನ್ ಮಾಡಿದ್ದೇನೆ, ಪ್ರತಿಭಟನೆಯಲ್ಲಿ ಭಾಗವಹಿಸಬಹುದು: ವಿಜಯೇಂದ್ರ
ರಮೇಶ್ ಜಾರಕಿಹೊಳಿ ಅವರು ಬಸನಗೌಡ ಪಾಟೀಲ್ ಯತ್ನಾಳ್ ಬಣದವರು, ಮತ್ತು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗಿಳಿಸಬೇಕೆಂದು ಆಗ್ರಹಿಸಿದವರು. ಯತ್ನಾಳ್ ಉಚ್ಚಾಟನೆ ಬಳಿಕ ಅವರ ಮೌನವಾಗಿರೋದು ನಿಜವಾದರೂ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ರಾಜ್ಯದ ಬಿಜೆಪಿ ನಾಯಕರೆಲ್ಲ ನಿನ್ನೆಯಿಂದ ಬೆಳಗಾವಿಯಲ್ಲಿದ್ದಾರೆ, ಅದರೆ ಜಾರಕಿಹೊಳಿ ಮಾತ್ರ ಕಾಣಿಸಿಕೊಂಡಿಲ್ಲ.
- Arun Belly
- Updated on: Apr 16, 2025
- 12:07 pm
ವಿಜಯಪುರದಲ್ಲಿ ಜನಾಕ್ರೋಶ ಯಾತ್ರೆ ಭರ್ಜರಿ ಯಶಸ್ಸಿಗೆ ಬಸನಗೌಡ ಯತ್ನಾಳ್ ವಿರೋಧಿಗಳ ಪ್ಲ್ಯಾನ್!
ವಿಜಯಪುರ ಯತ್ನಾಳ್ ಪ್ರತಿನಿಧಿಸುವ ಕ್ಷೇತ್ರವಾಗಿದೆ, ನಗರದಲ್ಲಿ ಅವರ ಶಕ್ತಿ ಏನೂ ಇಲ್ಲ ಅನ್ನೋದನ್ನು ಸಾಬೀತು ಮಾಡಬೇಕಿದೆ, ವಿಜಯಪುರದಿಂದಲೇ ಕನಿಷ್ಠ ಐದು ಸಾವಿರ ಜನ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ನಿರೀಕ್ಷೆ ಇದೆ, ಆದರೆ ಜಿಲ್ಲೆಯ ಬೇರೆ ಭಾಗಗಳಿಂದಲೂ ಕಾರ್ಯಕರ್ತರನ್ನು ಸೇರಿಸೋಣ ಮತ್ತು ಯಾತ್ರೆಯನ್ನು ಭಾರೀ ಯಶಗೊಳಿಸೋಣ ಎಂದು ಪಟ್ಟಣಶೆಟ್ಟಿ ಕರೆ ನೀಡಿದರು.
- Arun Belly
- Updated on: Apr 16, 2025
- 11:20 am
ನಿಪ್ಪಾಣಿ ಭೀಮ ಹೆಜ್ಜೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಿಗೆ 5 ಪ್ರಶ್ನೆ ಕೇಳಿ ಉತ್ತರ ಬಯಸಿದ ಆರ್ ಅಶೋಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರ ಕೈಬಿಟ್ಟಿದ್ದಾರೆ, ಅವರಿಗೆ ಈಗ ಮುಸಲ್ಮಾನರು ಮಾತ್ರ ಬೇಕು, ಹಾಗಾಗಿ ದಲಿತರು ತಪ್ಪು ಹೆಜ್ಜೆ ಇಡಬಾರದು ಅಂತ ಭೀಮ ಹೆಜ್ಜೆ ಕಾರ್ಯಕ್ರಮದಲ್ಲಿ ಕಳಕಳಿಯಿಂದ ಎಚ್ಚರಿಸುತ್ತೇನೆ, ತಪ್ಪು ಹೆಜ್ಜೆ ಇಟ್ಟರೆ ಅಂಬೇಡ್ಕರ್ ಅವರನ್ನು ಸೋಲಿಸಿದ ಹಾಗೆ ದಲಿತರನ್ನು ಮುಗಿಸುತ್ತಾರೆ ಎಂದು ನಿಪ್ಪಾಣಿಯಲ್ಲಿ ಆರ್ ಅಶೋಕ ಹೇಳಿದರು.
- Arun Belly
- Updated on: Apr 15, 2025
- 8:57 pm
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಇಡಿ ಜಾರಿ ಮಾಡಿರುವ ಸಮನ್ಸ್ ಅನ್ನು "ಬಿಜೆಪಿಯ ರಾಜಕೀಯ ದ್ವೇಷ" ಎಂದು ಕರೆದ ರಾಬರ್ಟ್ ವಾದ್ರಾ ಅವರನ್ನು ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪದ ಮೇಲೆ ವಿಚಾರಣೆಗೆ ಒಳಪಡಿಸಲಾಗಿದೆ. "ಅವರು ತನಿಖಾ ಸಂಸ್ಥೆಗಳ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ನನಗೆ ಯಾವುದೇ ಭಯವಿಲ್ಲ. ನನಗೆ ಮರೆಮಾಡಲು ಏನೂ ಇಲ್ಲ" ಎಂದು 56 ವರ್ಷದ ಉದ್ಯಮಿ ರಾಬರ್ಟ್ ವಾದ್ರಾ ಕಾಂಗ್ರೆಸ್ ಬೆಂಬಲಿಗರ ಜೊತೆ ಮೆರವಣಿಗೆ ನಡೆಸಿದರು.
- Sushma Chakre
- Updated on: Apr 15, 2025
- 4:04 pm
ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಬೀದರ್ನಲ್ಲಿ ಸೋಮವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ಸಚಿವ ಈಶ್ವರ್ ಖಂಡ್ರೆ ಹಾಗೂ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ ನಡೆಸಿದ್ದಾರೆ. ಖಂಡ್ರೆ ಚುನಾವಣಾ ಭಾಷಣ ಮಾಡಿದ್ದಾರೆ ಎಂದು ಬೆಲ್ದಾಳೆ ಆರೋಪಿಸಿದರೆ, ನಂತರ ಮಾತನಾಡಿದ ಖಂಡ್ರೆ, ಇನ್ನೂ ಕೆಲವು ವಿಷಯ ಹೇಳಿದರೆ ಇವರು ವೇದಿಕೆಯಿಂದಲೇ ನಿರ್ಗಮಿಸಬೇಕಾಗುತ್ತದೆ ಎಂದರು.
- Suresh Naik
- Updated on: Apr 15, 2025
- 12:54 pm
ನೀರು ಕೊಡಿಸಿ ಎಂದ ಮಹಿಳೆಯರಿಂದ ವಂದೇ ಮಾತರಂ ಘೋಷಣೆ ಕೂಗಿಸಿದ ಬಿಜೆಪಿ ಶಾಸಕ
ಉತ್ತರಾಖಂಡ್ ಬಿಜೆಪಿ ಶಾಸಕರ ರ್ಯಾಲಿಯಲ್ಲಿ ಮಹಿಳೆಯರು ನೀರಿಗಾಗಿ ಬೇಡಿಕೆ ಇಟ್ಟರು. ಆಗ ಆ ಶಾಸಕ ಅವರಿಂದ "ಭಾರತ್ ಮಾತಾ ಕಿ ಜೈ ಮತ್ತು ವಂದೇ ಮಾತರಂ" ಎಂದು ಘೋಷಣೆಗಳನ್ನು ಕೂಗಿಸಿದ್ದಾರೆ. ಇದು ದೇವಪ್ರಯಾಗ ಕ್ಷೇತ್ರದ ಬಿಜೆಪಿ ಶಾಸಕ ವಿನೋದ್ ಕಂಧಾರಿ ಅವರ ರ್ಯಾಲಿಯಾಗಿತ್ತು. ಶಾಸಕರು ತಮ್ಮ ಭಾಷಣ ಮುಗಿಸಿದ ನಂತರ ದುಃಖಿತ ಮಹಿಳೆಯರ ಗುಂಪಿನೊಂದಿಗೆ ಹಾಜರಿದ್ದರು. ವೀಡಿಯೊದಲ್ಲಿರುವ ಮಹಿಳೆಯರು ತಮ್ಮ ಸಮಸ್ಯೆಗಳನ್ನು ವಿವರಿಸುವುದನ್ನು ಕಾಣಬಹುದು.
- Sushma Chakre
- Updated on: Apr 12, 2025
- 10:14 pm
ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ನೈನಾರ್ ನಾಗೇಂದ್ರನ್ಗೆ ಸಿಹಿ ತಿನ್ನಿಸಿ ಶುಭಾಶಯ ಕೋರಿದ ಅಣ್ಣಾಮಲೈ
ತಮಿಳುನಾಡಿನ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ಈ ಹಿಂದೆ ಎಐಎಡಿಎಂಕೆ ಜೊತೆ ಸಂಬಂಧ ಹೊಂದಿದ್ದರು. ಟಿ. ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದ ಮೊದಲ ಆಕಾಂಕ್ಷಿ ಅವರು. ಅವರನ್ನು ಅವಿರೋಧವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟದ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ನೈನಾರ್ ನಾಗೇಂದ್ರನ್, ಮುಂಬರುವ 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಸೋಲಿಸಲು ಎರಡೂ ಪಕ್ಷಗಳು ಪೂರ್ಣ ಹೃದಯದಿಂದ ಕೆಲಸ ಮಾಡುತ್ತವೆ ಎಂದು ಹೇಳಿದರು.
- Sushma Chakre
- Updated on: Apr 12, 2025
- 9:07 pm
ಜೆಡಿಎಸ್ ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ! ಜೆಡಿಎಸ್ ಕಚೇರಿಗೆ ಲಾರಿ ಕಳಿಸಿ ಅಣುಕು ಪ್ರದರ್ಶನ
ಕರ್ನಾಟಕವನ್ನು ಪ್ರತಿಭಟನೆಗಳ ರಾಜ್ಯವೆಂದು ಕರೆಯಲು ಅಭ್ಯಂತರವಿಲ್ಲ ಎನಿಸುತ್ತದೆ. ರಾಜ್ಯದ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳು ಪ್ರತಿಭಟನೆ ಮಾಡುತ್ತಿವೆ. ಬೆಲೆಯೇರಿಕೆ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ ಈ ಎರಡೂ ಪಕ್ಷಗಳ ವಿರುದ್ಧ ಕಾಂಗ್ರೆಸ್ ಪ್ರದರ್ಶನಗಳನ್ನು ನಡೆಸುತ್ತಿದೆ!
- Arun Belly
- Updated on: Apr 12, 2025
- 2:13 pm
ಅಣ್ಣಾಮಲೈಗೆ ಬಿಜೆಪಿಯ ರಾಷ್ಟ್ರ ರಾಜಕಾರಣದಲ್ಲಿ ಸ್ಥಾನ? ಅಮಿತ್ ಶಾ ಸುಳಿವು
ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನದಿಂದ ಕೆಳಗಿಳಿದಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ, ಅಣ್ಣಾಮಲೈಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಮಟ್ಟದ ಪಾತ್ರ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ. ಇಂದು ಚೆನ್ನೈನಲ್ಲಿ ಮಾತನಾಡಿದ ಅಮಿತ್ ಶಾ ಈ ಬಗ್ಗೆ ಸುಳಿವು ನೀಡಿದ್ದಾರೆ.
- Sushma Chakre
- Updated on: Apr 11, 2025
- 10:04 pm
ತಮಿಳುನಾಡಿನಲ್ಲಿ ಮತ್ತೆ ಬಿಜೆಪಿ-ಎಐಎಡಿಎಂಕೆ ಮೈತ್ರಿ; ಎಡಪ್ಪಾಡಿ ಪಳನಿಸ್ವಾಮಿ ಸಿಎಂ ಅಭ್ಯರ್ಥಿ
2026ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಘೋಷಿಸಿದೆ. ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಈಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
- Sushma Chakre
- Updated on: Apr 11, 2025
- 6:06 pm