BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ಬಿಜೆಪಿಯಲ್ಲಿ ಮತ್ತೆ ಶುರುವಾಯ್ತು ನಾಯಕರ ವಾರ್:ಸುಧಾಕರ್ಗೆ ವಿಶ್ವನಾಥ್ ಬಹಿರಂಗ ಸವಾಲ್
ಲೋಕಸಭೆ ಚುನಾವಣೆ ನಂತರವೂ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸರಿದಾರಿಗೆ ಬರುತ್ತಿಲ್ಲ. ಹೌದು...ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಮತ್ತು ಶಾಸಕ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ ನಡುವಿನ ವಾರ್ ಮತ್ತೆ ತಾರಕಕ್ಕೇರಿದೆ. 2024ರ ಲೋಕಸಭಾ ಎಲೆಕ್ಷನ್ ಸಂದರ್ಭದಲ್ಲಿ ಶುರುವಾದ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗವಾಗಿ ಕಾದಾಟದ ಹಂತಕ್ಕೆ ಬಂದು ತಲುಪಿದೆ.
- Bheemappa Patil
- Updated on: Jun 26, 2026
- 8:21 pm
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡಮತದಾನ ಮಾಡಿರುವುದು ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದನ್ನು ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಎಲ್ಲಾ ಮಾಹಿತಿ ಪಡೆದುಕೊಂಡಿದೆ. ಆದ್ರೆ, ಇತ್ತ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿವೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಕೆಲ ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
- Harish GR
- Updated on: Jun 26, 2026
- 3:07 pm
ನನಗೂ, ಡಿಕೆ ಶಿವಕುಮಾರ್ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ
ವಿಧಾನ ಪರಿಷತ್ ಅಡ್ಡ ಮತದಾನ, ಡಿ.ಕೆ.ಶಿವಕುಮಾರ್ ಜೊತೆಗಿನ ರಾಜಕೀಯ ಹಾಗೂ ವ್ಯವಾಹಾರಿಕ ಸಂಬಂಧದ ಊಹಾಪೋಹಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೆರೆಯರಳೆದಿದ್ದು, ಸ್ಪಷ್ಟನೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೂ ಡಿ.ಕೆ ಶಿವಕುಮಾರ್ಗೂ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
- Pruthviraj
- Updated on: Jun 26, 2026
- 10:41 am
BY Vijayendra visit Dharmasthala: ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ದೆಹಲಿ ಹೈಕಮಾಂಡ್ ಭೇಟಿಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸನ್ನಿಧಿ ವಸತಿ ಗೃಹದಿಂದ ಆಗಮಿಸಿದ ಅವರು, ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇತ್ತೀಚೆಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಡ್ಡ ಮತದಾನದ ವಿಚಾರದಲ್ಲಿ ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಸ್ತಾಪ ಮಾಡಿದ್ದ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
- Pruthviraj
- Updated on: Jun 26, 2026
- 9:12 am
ಸರ್ಕಾರಿ ನಿವಾಸ ಹಂಚಿಕೆ: 3 ವರ್ಷ ಬಳಿಕ ಮನೆ ಕೊಟ್ಟರೂ ಅಶೋಕ್ ಬಯಸಿದ್ದು ಸಿಗಲೇ ಇಲ್ಲ!
Karnataka Political News: ಮೊನ್ನೇ ಅಷ್ಟೇ ಸಚಿವರಿಗೆ ಕಚೇರಿ ಕೊಠಡಿಗಳನ್ನ ಹಂಚಿಕೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಚಿವಾಲಯವು ಸರ್ಕಾರಿ ಸರಕಾರಿ ವಸತಿ ಗೃಹಗಳನ್ನು ಸಹ ಹಂಚಿಕೆ ಮಾಡಿದೆ. ಮೂರು ವರ್ಷಗಳ ಬಳಿಕ ವಿಪಕ್ಷ ನಾಯಕ ಆರ್ ಅಶೋಕ್ ಅವರಿಗೆ ನಿವಾಸ ನೀಡಲಾಗಿದೆ. ಆದ್ರೆ, ಅವರು ಬಯಸಿದ್ದು ಮಾತ್ರ ಸಿಕ್ಕಿಲ್ಲ. ಬದಲಾಗಿ ಬೇರೆ ನಿವಾಸವನ್ನು ನೀಡಲಾಗಿದೆ. ಹಾಗಾದ್ರೆ, ಯಾರು ಯಾವುದು ಕೇಳಿದ್ರು, ಯಾವುದು ಸಿಕ್ಕಿದೆ ಎನ್ನುವ ವಿವರ ಇಲ್ಲಿದೆ.
- Kiran Haniyadka
- Updated on: Jun 25, 2026
- 8:38 pm
ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ: ಕಾಂಗ್ರೆಸ್ ಸಿಎಂಗಳ ಎದುರೇ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು
Tungabhadra Dam New Crest Gates Inauguration:ಕೊಪ್ಪಳದ ಮುನಿರಾಬಾದ್ನಲ್ಲಿ ನಡೆದ ತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ, ಕಾಂಗ್ರೆಸ್ ಸಿಎಂಗಳ ಸಮ್ಮುಖದಲ್ಲೇ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿ ನಿರ್ಧಾರಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಮೂರು ರಾಜ್ಯಗಳ ಸಿಎಂಗಳು ಭಾಗಿಯಾಗಿದ್ದು ವಿಶೇಷವಾಗಿತ್ತು.
- Shivakumar Pattar
- Updated on: Jun 25, 2026
- 4:13 pm
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಬಿಜೆಪಿ ಬಗ್ಗೆ ಬಿಗ್ ಬಾಂಬ್ ಸಿಡಿಸಿದ ಉಚ್ಛಾಟಿತ ಶಾಸಕ ಸೋಮಶೇಖರ್
Political News: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನಕ್ಕೆ ಆಂತರಿಕ ಕಲಹವೇ ಕಾರಣ ಎಂದು ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಆರೋಪಿಸಿದ್ದಾರೆ. ಜೊತೆಗೆ ವಿಪಕ್ಷ ನಾಯಕರ ಆರ್. ಅಶೋಕ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧವೂ ಹೊಸ ಬಾಂಬ್ ಸಿಡಿಸಿರುವ ಅವರು, ತಮ್ಮ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೂ ಕೌಂಟರ್ ಕೊಟ್ಟಿದ್ದಾರೆ.
- Sunil MH
- Updated on: Jun 25, 2026
- 12:27 pm
‘ಕರ್ನಾಟಕದಲ್ಲಿ ಖರ್ಗೆ ಕುಟುಂಬದಿಂದ 100 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಲೂಟಿ’; ಬಿಜೆಪಿಯಿಂದ ಗಂಭೀರ ಆರೋಪ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಮಗನಾದ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಇಂದು ಅತ್ಯಂತ ಗಂಭೀರವಾದ ಭ್ರಷ್ಟಾಚಾರ ಮತ್ತು ಭೂ ಅಕ್ರಮದ ಆರೋಪಗಳನ್ನು ಹೊರಿಸಿದೆ. ಖರ್ಗೆ ಕುಟುಂಬದ ಒಡೆತನದ 'ಸಿದ್ದಾರ್ಥ ವಿಹಾರ್ ಟ್ರಸ್ಟ್' ಮೂಲಕ ಕರ್ನಾಟಕದಲ್ಲಿ ಬಡವರಿಗೆ ಮತ್ತು ಸರ್ಕಾರಕ್ಕೆ ಸೇರಿದ ಸುಮಾರು 100 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಪ್ರಮುಖ ಜಮೀನುಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
- Sushma Chakre
- Updated on: Jun 24, 2026
- 6:07 pm
ಆ ಶಾಸಕರಿಂದಲೇ ಅಡ್ಡಮತದಾನ? ಸತ್ಯಶೋಧನಾ ಸಮಿತಿ ವರದಿ ಬಗ್ಗೆ ಸಿಟಿ ರವಿ ಏನಂದ್ರು ನೋಡಿ
ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಕುರಿತು ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ. ಮೂವರು ಸದಸ್ಯರ ತಂಡ ಮಧ್ಯಂತರ ವರದಿ ಸಿದ್ಧಪಡಿಸಿದೆ. ಇದು ಗೌಪ್ಯವಾಗಿದ್ದು, ರಾಜ್ಯಾಧ್ಯಕ್ಷರು ದೆಹಲಿಯಿಂದ ಮರಳಿದ ನಂತರ ಅವರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ವರದಿಯ ವಿವರಗಳನ್ನು ಸಾರ್ವಜನಿಕವಾಗಿ ಚರ್ಚಿಸಲು ನಿರಾಕರಿಸಿದ್ದಾರೆ.
- Ashwith Mavinaguni
- Updated on: Jun 24, 2026
- 10:13 am
ಕ್ರಾಸ್ ವೋಟಿಂಗ್ ಮಾಹಿತಿ ನೀಡಿದ ಬಿಜೆಪಿ ನಾಯಕರಿಗೆ ಹೈಕಮಾಂಡ್ನಿಂದ ಸಾಲು ಸಾಲು ಪ್ರಶ್ನೆಗಳು!
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನವಾದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಸೂಕ್ತ ಸಮಯದಲ್ಲಿ ಕ್ರಮದ ಸೂಚನೆ ನೀಡಿದೆ. ಸದ್ಯ, ಮೌಖಿಕ ಮಾಹಿತಿ ನೀಡಿರುವ ರಾಜ್ಯ ನಾಯಕರು ಪೂರ್ಣ ಮಾಹಿತಿ ಸಲ್ಲಿಸಲು ಸಮಯ ಕೇಳಿದ್ದಾರೆ. ಇದೇ ವೇಳೆ, ರಾಜ್ಯ ನಾಯಕರಿಗೆ ಹೈಕಮಾಂಡ್ ಅನೇಕ ಪ್ರಶ್ನೆಗಳನ್ನು ಕೇಳಿದೆ. ಅವುಗಳ ಮಾಹಿತಿ ಇಲ್ಲಿದೆ.
- Kiran Haniyadka
- Updated on: Jun 24, 2026
- 7:49 am
ಭೂಮಿ ದುಂಡಗಿದೆ, ಎಲ್ಲರ ಲೆಕ್ಕ ಚುಕ್ತಾ ಆಗುತ್ತದೆ; ವಿಧಾನಸಭೆಯಲ್ಲಿ ಟಿಎಂಸಿ ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
"ದೇಶದ ಇತಿಹಾಸದಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಇಂತಹ ಹೀನಾಯ ಸ್ಥಿತಿ ಬಂದಿರಲಿಲ್ಲ" ಎಂದು ಟಿಎಂಸಿ ಪಕ್ಷವನ್ನು ಉಲ್ಲೇಖಿಸಿ ಲೇವಡಿ ಮಾಡಿದ ಸುವೇಂದು ಅಧಿಕಾರಿ, ಕಾನೂನನ್ನು ಕೈಗೆತ್ತಿಕೊಂಡಿದ್ದ ಮತ್ತು ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದ್ದ ಅಧಿಕಾರಿಗಳು ಹಾಗೂ ನಾಯಕರು ಇನ್ಮುಂದೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ಬಂಗಾಳದಲ್ಲಿ ದಶಕಗಳ ಬಳಿಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ, ಸುವೇಂದು ಅಧಿಕಾರಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
- Sushma Chakre
- Updated on: Jun 23, 2026
- 10:40 pm
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್, ವಿಜಯೇಂದ್ರ
Karnataka Politics News: ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ (Karnataka MLC Poll) ನಡೆದ ಅಡ್ಡಮತದಾನ (cross Voting) ರಾಜ್ಯ ಬಿಜೆಪಿಯಲ್ಲಿ ಸಂಚಲನ ಮುಡಿಸಿದ್ದು, ಅಡ್ಡಮತದಾನ ಮಾಡಿದ ಶಾಸಕರನ್ನು ಪತ್ತೆ ಮಾಡಲು ಇನ್ನಿಲ್ಲಕ ಕಸರತ್ತು ನಡೆದಿದೆ. ಇನ್ನೊಂದೆಡೆ ಹೈಕಮಾಂಡ್ ಸಹ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮಾತುಕತೆ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದು, ಸೂಕ್ತ ಕ್ರಮದ ಬಗ್ಗೆಯೂ ಖಡಕ್ ಆಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
- Mahantesh Kurbet
- Updated on: Jun 23, 2026
- 4:29 pm