
BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ರಾಜ್ಯಪಾಲರಿಂದ ಡಿಕೆ ಶಿವಕುಮಾರ್ಗೆ ಮತ್ತೊಂದು ಶಾಕ್ ಕೊಡಿಸಲು ಬಿಜೆಪಿ ಪ್ಲ್ಯಾನ್..!
ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಸೇರ್ಪಡೆಗೆ ಕೇಂದ್ರ ಸರ್ಕಾರ ರೆಡ್ ಸಿಗ್ನಲ್ ತೋರಿಸಿದೆ. ಇದರಿಂದ ಸರ್ಕಾರಕ್ಕೆ ಮೊದಲ ಹಂತದಲ್ಲಿ ಹಿನ್ನಡೆಯಾಗಿದೆ. ಅದರಲ್ಲೂ ಈ ವಿಚಾರದಲ್ಲಿ ಮಹತ್ವದ ಆಸಕ್ತಿ ತೋರಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಹಿನ್ನಡೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್ಗೆ ಮತ್ತೊಂದು ಶಾಕ್ ಕೊಡಲು ಬಿಜೆಪಿ ನಾಯಕರು ಭರ್ಜರಿ ಪ್ಲ್ಯಾನ್ ಮಾಡಿದ್ದಾರೆ.
- Ramesh B Jawalagera
- Updated on: Mar 19, 2025
- 8:52 pm
RSSನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ ಎಂದ ಸಿದ್ದರಾಮಯ್ಯ ವಿರುದ್ಧ ಕೋರ್ಟ್ನಲ್ಲಿ ಖಾಸಗಿ ದೂರು
‘ಆರ್ಎಸ್ಎಸ್ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಆರ್ಎಸ್ಎಸ್ನವರ ದ್ವೇಷ ರಾಜಕಾರಣ, ಹಿಂಸಾ ರಾಜಕಾರಣವೇ ಗಲಭೆ ಹಾಗೂ ಅಪರಾಧಗಳಿಗೆ ಕಾರಣ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮೇಲಿನ ಚರ್ಚೆ ವೇಳೆ ಸದನದೊಳಗೆ ಗಂಭೀರ ಆರೋಪ ಮಾಡಿದ್ದರು. ಇದೀಗ ಇದು ಅವರಿಗೆ ಸಂಕಷ್ಟ ತಂದಿಟ್ಟಿದೆ.
- Ramesha M
- Updated on: Mar 19, 2025
- 7:21 pm
7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಯುವ ಮುಖಂಡ ಅರೆಸ್ಟ್
ಬಿಜೆಪಿ ಯುವ ಮುಖಂಡನ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಜಿಲ್ಲಾ ಪಂಚಾಯಿತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮುಖಂಡನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
- Vinayak Badiger
- Updated on: Mar 19, 2025
- 3:08 pm
ಡಿಕೆ ಶಿವಕುಮಾರ್ಗೆ ಹಿನ್ನಡೆ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ
ಕರ್ನಾಟಕ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಪ್ರಸ್ತಾವಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒತ್ತಾಯಿಸಿದ್ದರು. ಕೇಂದ್ರದ ನಿರ್ಧಾರದಿಂದ ಅವರಿಗೆ ಹಿನ್ನಡೆಯಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
- Harish GR
- Updated on: Mar 19, 2025
- 1:37 pm
‘ನನ್ನ ಕೊಲೆಗೆ ಡಿಕೆಶಿ ಸಹೋದರರು ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
ತಮ್ಮನ್ನು ಕೊಲೆ ಮಾಡಲು ಸಂಚು ಹೂಡಲಾಗಿದೆ ಎಂದು ಬಿಜೆಪಿ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಹಾಗೂ ಇನ್ನಿಬ್ಬರ ವಿರುದ್ಧ ಅವರು ಆರೋಪ ಮಾಡಿದ್ದಾರೆ. ತಾವು ಮಾಡಿರುವ ಆರೋಪದ ಬಗ್ಗೆ ಅವರು ಟಿವಿ9 ಜೊತೆ ಮಾತುಕತೆ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ.
- Web contact
- Updated on: Mar 19, 2025
- 9:38 am
ಅಕ್ರಮ ಚಿನ್ನ ಸಾಗಾಟ ಕೇಸ್: ರನ್ಯಾ ತಂಟೆಗೆ ಹೋದ ಯತ್ನಾಳ್ ವಿರುದ್ಧ ಎಫ್ಐಆರ್
ಐದು ವರ್ಷ.. 90 ಬಾರಿ ಓಡಾಟ.. ನಟಿ ರನ್ಯಾ ರಾವ್ ಚಿನ್ನದ ಜಾಲ ಬಗೆದಷ್ಟು ಬಯಲಾಗುತ್ತಿದೆ. ಹೋಗುವಾಗ ಒಂದು ಡ್ರೆಸ್, ಬರುವಾಗ ಇನ್ನೊಂದು ಡ್ರೆಸ್. 24 ಗಂಟೆಯೊಳಗೆ ಟ್ರಾವೆಲ್ ಮುಗಿಸಿ ಚಿನ್ನದಾಟ ಆಡಿಬಿಡುತ್ತಿದ್ದಳು. ಈಕೆ ಚಿನ್ನ ಸಾಗಾಟದಿಂದಾಗಿ ಮಲತಂದೆಗೂ ಸಂಕಷ್ಟ ಎದುರಾಗಿದೆ. ಮತ್ತೊಂದೆಡೆ ರನ್ಯಾ ತಂಟೆಗೆ ಹೋದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ.
- Web contact
- Updated on: Mar 18, 2025
- 11:04 pm
ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ
ಬಿಜೆಪಿ ನಾಯಕ ಆ ಅಶೋಕ್ ವಿರುದ್ಧದ ಬಗರ್ಹುಕುಂ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಅಶೋಕ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಇದೀಗ ಸುಪ್ರೀಂ, ಲೋಕಾಯುಕ್ತಕ್ಕೆ ಮಹತ್ವದ ಸೂಚನೆ ನೀಡಿದೆ. ಪ್ರಕರಣ ಸಂಪೂರ್ಣ ವಿವರ ಇಲ್ಲಿದೆ.
- Harish GR
- Updated on: Mar 18, 2025
- 9:27 pm
ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ಮಂಡನೆ, ವಿಧೇಯಕದಲ್ಲೇನಿದೆ?
ಕರ್ನಾಟಕ ಸರ್ಕಾರದ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲು ನೀಡಲು ಸಿದ್ದರಾಮ್ಯಯ ಸರ್ಕಾರ ತೀರ್ಮಾನಿಸಿದ್ದು, 2025ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದಂತೆ ಇಂದು (ಮಾರ್ಚ್ 18) ಹಲವರ ವಿರೋಧಗಳ ನಡುವೆಯೇ ವಿಧಾನಸಭೆಯಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕ ಮಂಡಿಸಲಾಯ್ತು. ಇನ್ನು ಈ ವಿಧೇಯದಲ್ಲೇನಿದೆ? ಕಾನೂನು ಸಚಿವರು ಹೇಳಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Ramesh B Jawalagera
- Updated on: Mar 18, 2025
- 4:33 pm
ಮುಸ್ಲಿಮರಿಗೆ ಶೇ 4 ಮೀಸಲಾತಿ: ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗ್ತಿದೆ ಎಂದ ಬೊಮ್ಮಾಯಿ
ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4 ರಷ್ಟು ಮೀಸಲಾತಿ ನೀಡುವ ವಿಚಾರ ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿದೆ. ಅಲ್ಲದೆ, ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವುದಾಗಿ ಕೂಡ ಹೇಳಿದೆ. ಈ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಇಲ್ಲಿದೆ.
- Ganapathi Sharma
- Updated on: Mar 18, 2025
- 1:49 pm
ಗ್ಯಾರಂಟಿಗಳಿಗೆ ಎಸ್ಸಿಪಿ, ಟಿಎಸ್ಪಿ ಹಣ ನೀಡೋದಕ್ಕೆ ವಿರೋಧ: ಸಚಿವ ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರ ಸಭೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಮೀಸಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ ಇದೀಗ ಆ ಬಗ್ಗೆ ಚರ್ಚಿಸಲು ಕಾಂಗ್ರೆಸ್ನ ದಲಿತ ನಾಯಕರು ಸಭೆ ಸೇರಿದ್ದು, ಗ್ಯಾರಂಟಿಗಳಿಗೆ ಹಣ ಬಳಸದಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಒಳ ಮೀಸಲಾತಿ ಮತ್ತು ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ನಿಯೋಗ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
- Pramod Shastri G
- Updated on: Mar 18, 2025
- 9:12 am