BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ಕರ್ನಾಟಕ ಎಂಎಲ್ಸಿ ಚುನಾವಣೆ: ಪರಿಷತ್ ಕದನದಲ್ಲಿ ಜೆಡಿಎಸ್ಗೆ ಡಬಲ್ ಟೆನ್ಷನ್
ಕರ್ನಾಟಕ ವಿಧಾನ ಪರಿಷತ್ ಚುನಾವಣಾ ರಣಕಣ ರಂಗೇರಿದೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಹೆಚ್.ಡಿ. ಕುಮಾರಸ್ವಾಮಿಯವರಿಗೆ ಪ್ರತಿಷ್ಠೆಯ ಸವಾಲಾಗಿ ಪರಿಣಮಿಸಿದೆ. ಎನ್ಡಿಎ ಅಭ್ಯರ್ಥಿಗೆ ನಾಲ್ಕರಿಂದ ಐದು ಮತಗಳ ಕೊರತೆಯಿದ್ದು, ಕಾಂಗ್ರೆಸ್ನಿಂದ ಮತ ಸೆಳೆಯುವ ಅನಿವಾರ್ಯತೆ ಇದೆ. ಅಲ್ಲದೆ, ಜೆಡಿಎಸ್ ಶಾಸಕರಾದ ಜಿ.ಟಿ. ದೇವೇಗೌಡ ಮತ್ತು ಹನೂರು ಮಂಜುನಾಥ್ ಅವರಿಂದ ಅಡ್ಡ ಮತದಾನದ ಭೀತಿ ಎದುರಾಗಿದೆ.
- Sunil MH
- Updated on: Jun 11, 2026
- 11:16 am
TV9 Kannada Live: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ
Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್ ಇಲ್ಲಿವೆ.
- Prasanna Hegde
- Updated on: Jun 11, 2026
- 12:01 pm
ಬೆಂಗಳೂರು ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್
ಇಡೀ ಬೆಂಗಳೂರೇ ಬೆಚ್ಚಿಬೀಳೋ ದೊಡ್ಡ ಹಗರಣದ ದಾಖಲೆಯನ್ನ ವಿಪಕ್ಷ ನಾಯಕ ಆರ್.ಅಶೋಕ್ ರಿಲೀಸ್ ಮಾಡಿದ್ದಾರೆ. ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ರೂ. ಲೂಟಿ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದ್ದು, ಈ ಸಂಬಂಧ ಬಿಜೆಪಿ, ಸಿಬಿಐ ತನಿಖೆ ಆಗಬೇಕೆಂದು ರಾಜ್ಯಪಾಲ ಹಾಗೂ ಲೋಕಾಯುಕ್ತಕ್ಕೂ ದೂರು ನೀಡಿದೆ. ಇನ್ನು ಈ ಆರೋಪಕ್ಕೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಖಡಕ್ ಸ್ಪಷ್ಟನೆ ನೀಡಿದ್ದಾರೆ.
- Ramesh B Jawalagera
- Updated on: Jun 10, 2026
- 10:09 pm
ಇಷ್ಟು ದೂರ ಬರುತ್ತೇನೆಂದು ಕನಸಲ್ಲೂ ಅಂದುಕೊಂಡಿರಲಿಲ್ಲ; ಎನ್ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ
ಕೇಂದ್ರದ ಆಡಳಿತಾರೂಢ ಮೈತ್ರಿಕೂಟವು ಅಧಿಕಾರದಲ್ಲಿ 12 ವರ್ಷಗಳನ್ನು ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಚುನಾಯಿತರಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ಸಂದರ್ಭವನ್ನು ಆಚರಿಸಲು ಇಂದು ರಾಷ್ಟ್ರ ರಾಜಧಾನಿಯ 'ಭಾರತ್ ಮಂಟಪ'ದಲ್ಲಿ ಎನ್ಡಿಎ ಪಾಲುದಾರ ಪಕ್ಷಗಳ ಬೃಹತ್ ಸಮಾವೇಶ ನಡೆಯಿತು. ಈ ನಿರ್ಣಾಯಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿಯ ಹಿರಿಯ ನಾಯಕರು ಮತ್ತು ಎನ್ಡಿಎ ಮೈತ್ರಿಕೂಟದ ಎಲ್ಲಾ ಪಾಲುದಾರ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
- Sushma Chakre
- Updated on: Jun 10, 2026
- 9:09 pm
36 ಸಾವಿರ ಕೋಟಿ ರೂ. ಲೂಟಿ ಆರೋಪ: ರಾಜ್ಯಪಾಲರಾಯ್ತು ಈಗ ಲೋಕಾಯುಕ್ತಕ್ಕೂ ಬಿಜೆಪಿ ದೂರು
ಬೆಂಗಳೂರಿನ ಕಸದ ಟೆಂಡರ್ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ.
- Ramesh B Jawalagera
- Updated on: Jun 10, 2026
- 5:42 pm
ತನ್ನ ಅಭ್ಯರ್ಥಿಯ ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ಈ ಪ್ರಕರಣದ ಹಿನ್ನೆಲೆಯನ್ನು ವಿವರವಾಗಿ ಪ್ರಸ್ತಾಪಿಸಿದ ಸುಧಾಂಶು ತ್ರಿವೇದಿ, "ಅದು ತೆಲಂಗಾಣದ ಒಬ್ಬ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೇ ತನ್ನದೇ ರಾಜ್ಯದ ಮತ್ತೊಬ್ಬ ಕಾಂಗ್ರೆಸ್ ನಾಯಕನ ವಿರುದ್ಧ ಲೈಂಗಿಕ ಶೋಷಣೆ ಮತ್ತು ಅನುಚಿತ ವರ್ತನೆಯ ಆರೋಪ ಹೊರಿಸಿ ದಾಖಲಿಸಿದ್ದ ಪ್ರಕರಣವಾಗಿತ್ತು. ಆಕೆ ನೀಡಿದ್ದ ದೂರಿನಲ್ಲಿ ಆ ಸಮಯದಲ್ಲಿ ಉಸ್ತುವಾರಿಯಾಗಿದ್ದ ಮೀನಾಕ್ಷಿ ನಟರಾಜನ್ ಹೆಸರನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಿದ್ದರು. ಕಾಂಗ್ರೆಸ್ ತನ್ನದೇ ಪಕ್ಷದ ಕಾರ್ಯಕರ್ತೆಯ ಮೇಲಾದ ದೌರ್ಜನ್ಯವನ್ನು ಮುಚ್ಚಿಟ್ಟಿತ್ತು" ಎಂದು ಟೀಕಿಸಿದ್ದಾರೆ.
- Sushma Chakre
- Updated on: Jun 10, 2026
- 6:27 pm
ಏನಿದು ಕಸದಿಂದ ಕಾಸು? ಬಹುದೊಡ್ಡ ಹಗರಣವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಬೆಂಗಳೂರಿನಲ್ಲಿ ಕಸದ ಟೆಂಡರ್ನಲ್ಲಿ ಬಾರೀ ಅಕ್ರಮ ನಡೆದಿದೆ ಎಂದು ವಿಪಕ್ಷ ಬಿಜೆಪಿ ಗಂಭೀರ ಆರೋಪ ಮಾಡಿದ್ದು, ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ರಾಜ್ಯಪಾಲರಿಗೆ ದೂರು ನೀಡಿದೆ. ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ ಇಂದು (ಜೂನ್ 10) ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದು, ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. 36 ಸಾವಿರ ಕೋಟಿ ರೂಪಾಯಿ ಕಸದ ಟೆಂಡರ್ ನಲ್ಲಿ 10 ಸಾವಿರ ಕೋಟಿ ರೂ. ಕಿಕ್ಬ್ಯಾಕ್ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ.
- Harish GR
- Updated on: Jun 10, 2026
- 3:04 pm
ಕಸದ ಟೆಂಡರ್ನಲ್ಲಿ ಅಕ್ರಮ ಆರೋಪ: ರಾಜ್ಯಪಾಲ ಗೆಹ್ಲೋಟ್ಗೆ ಬಿಜೆಪಿ ನಿಯೋಗದಿಂದ ದೂರು
ಬೆಂಗಳೂರಿನ ಕಸದ ಟೆಂಡರ್ನಲ್ಲಿ 36 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ಗೆ ದೂರು ನೀಡಿದ್ದು, ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿದೆ. ಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ ಮಾಡಲಾಗಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ಇಬ್ಬರ ಕೈವಾಡವೂ ಇದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
- Harish GR
- Updated on: Jun 10, 2026
- 2:36 pm
ದೀರ್ಘಾವಧಿ ಪ್ರಧಾನಿ ದಾಖಲೆ: ಕೈಯಲ್ಲಿ ‘ಮೋದಿ’ ಮೆಹಂದಿ ಹಾಕಿಕೊಂಡು ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ಬರ್ತ್ಡೇ ಆಚರಣೆ
ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲೇ ಅತ್ಯಂತ ಸುದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ದಾಖಲೆ ಬರೆದ ಹಿನ್ನೆಲೆಯಲ್ಲಿ, ಗಾಲಿ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ತಮ್ಮ ಹುಟ್ಟುಹಬ್ಬದಂದು ಕೈಯಲ್ಲಿ ಮೋದಿಯವರ ಭಾವಚಿತ್ರದ ಮೆಹಂದಿ ಬಿಡಿಸಿಕೊಂಡು ಸಂಭ್ರಮಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮೋದಿಯವರ ದೀರ್ಘಾಯುಷ್ಯಕ್ಕೆ ಶುಭ ಹಾರೈಸಿದ್ದಾರೆ.
- Ganapathi Sharma
- Updated on: Jun 10, 2026
- 2:13 pm
ರಾಜ್ಯಸಭಾ ಟಿಕೆಟ್ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು: ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದ ಹೆಚ್ಡಿಡಿ
ರಾಜ್ಯಸಭಾ ಟಿಕೆಟ್ ಕೈತಪ್ಪಿದ ಬಳಿಕ ಮೌನ ಮುರಿದ ಹೆಚ್.ಡಿ. ದೇವೇಗೌಡರು, ಪಿಎಂ ಮೋದಿ ಮತ್ತು ತಮ್ಮ ನಡುವಿನ ಸಂಬಂಧ ಒಂದು ಸೀಟಿಗೆ ಸೀಮಿತವಲ್ಲ ಎಂದಿದ್ದಾರೆ. ಯಾರ ಹಂಗಿಲ್ಲದೆ ದೇಶದ ವಿಚಾರವಾಗಿ ಮಾತನಾಡುತ್ತೇನೆ. ಜೆಡಿಎಸ್ ಪಕ್ಷದ ಬೆಳವಣಿಗೆಗೂ ಶಕ್ತಿ ಮೀರಿ ಕೆಲಸ ಮಾಡ್ತೇನೆ. ರಾಜ್ಯ ಸಭಾ ಸದಸ್ಯ ಸ್ಥಾನ ಇಲ್ಲ ಅಂದರೂ ಮೋದಿಯವರ ಜೊತೆ ನನ್ನ ಪತ್ರ ವ್ಯವಹಾರ ಇರುತ್ತದೆ ಎಂದವರು ತಿಳಿಸಿದ್ದಾರೆ.
- Sunil MH
- Updated on: Jun 10, 2026
- 1:54 pm
ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 12 ವರ್ಷಗಳ ಪ್ರಧಾನಿ ಅವಧಿಯ ಮೈಲಿಗಲ್ಲಿನ ಸಂದರ್ಭದಲ್ಲಿ ಉತ್ತಮ ಆಡಳಿತ ಮತ್ತು ಜನಸೇವೆ ಕುರಿತು ಸಂದೇಶ ನೀಡಿದ್ದಾರೆ. ವಿನಮ್ರತೆ, ಸಮರ್ಪಣಾ ಭಾವನೆ ಹಾಗೂ ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡುವವರು ಮಾತ್ರ ಜನರ ವಿಶ್ವಾಸ ಗಳಿಸುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ ಎಂದು ಮೋದಿ ಒತ್ತಿಹೇಳಿದ್ದಾರೆ.
- Prasanna Hegde
- Updated on: Jun 10, 2026
- 12:12 pm
ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್
ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಪಕ್ಷ ನಾಯಕ ಅಶೋಕ್, ಶಾಸಕ ಚನ್ನಬಸಪ್ಪ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ನೆಹರು ಅವರ ದಾಖಲೆ ಮುರಿದ ಮೋದಿಗಾಗಿ ನಡೆದ ಈ ಪ್ರಾರ್ಥನೆಯಲ್ಲಿ ಮೋದಿ ಅವರ ಭಾವಚಿತ್ರವನ್ನು ಇರಿಸಿ ನರೇಂದ್ರ ಮೋದಿ ಅವರಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಲಾಯಿತು.
- Pramod Shastri G
- Updated on: Jun 10, 2026
- 11:57 am